Homeಅಂತರಾಷ್ಟ್ರೀಯ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ - ಆಶಾ ಕಾರ್ಯರ್ತರಿಗೆ ವಿಶ್ವಸಂಸ್ಥೆ ಪ್ರಶಸ್ತಿ

‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ – ಆಶಾ ಕಾರ್ಯರ್ತರಿಗೆ ವಿಶ್ವಸಂಸ್ಥೆ ಪ್ರಶಸ್ತಿ

- Advertisement -
- Advertisement -

ದೇಶದ ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಹತ್ತು ಲಕ್ಷ ಆಶಾ ಕಾರ್ಯಕರ್ತರನ್ನು ವಿಶ್ವ ಸಂಸ್ಥೆ ಗೌರವಿಸಿದೆ. ವಿಶ್ವ ಆರೋಗ್ಯ ಸಂಸ್ಥೆ(WHO)ಯ 75 ನೇ ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ಭಾರತದ ಆಶಾ ಕಾರ್ಯಕರ್ತರು ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ ಗೆ ಪಾತ್ರರಾಗಿದ್ದಾರೆ.

“ಕೊರೊನಾ ಸಾಂಕ್ರಾಮಿಕ ರೋಗದ ಉದ್ದಕ್ಕೂ ಕಂಡಿರುವಂತೆ ಗ್ರಾಮೀಣ ಭಾಗದ ಬಡತನದಲ್ಲಿ ವಾಸಿಸುವವರು ಕೂಡಾ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಪಡೆಯಬಹುದೆಂದು ಖಚಿತಪಡಿಸಿಕೊಳ್ಳಲು ಸಮುದಾಯವನ್ನು ಆರೋಗ್ಯ ವ್ಯವಸ್ಥೆಯೊಂದಿಗೆ ಸಂಪರ್ಕಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಕ್ಕಾಗಿ ಭಾರತದ ಹತ್ತು ಲಕ್ಷಕ್ಕೂ ಹೆಚ್ಚು ‘ಆಶಾ’ (ಹಿಂದಿಯಲ್ಲಿ ‘ಭರವಸೆ’ ಎಂದರ್ಥ) ಮಹಿಳಾ ಸ್ವಯಂಸೇವಕರನ್ನು ಗೌರವಿಸಲಾಗಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಬಿಡುಗಡೆ ಮಾಡಿರುವ ಹೇಳಿಕೆ ತಿಳಿಸಿದೆ.

ವಿಶ್ವ ಸಂಸ್ಥೆಯು ‘ಗ್ಲೋಬಲ್ ಹೆಲ್ತ್ ಲೀಡರ್ಸ್ ಅವಾರ್ಡ್-2022’ ಅನ್ನು ಆರು ಮಂದಿಗೆ ನೀಡಿದ್ದು, ಅದರಲ್ಲಿ ದೇಶದ ಆಶಾ ಕಾರ್ಯಕರ್ತರೂ ಒಬ್ಬರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, “ಜಗತ್ತು ಅಸಮಾನತೆ, ಸಂಘರ್ಷ, ಆಹಾರ ಅಭದ್ರತೆ, ಹವಾಮಾನ ಬಿಕ್ಕಟ್ಟು ಮತ್ತು ಸಾಂಕ್ರಾಮಿಕ ರೋಗಗಳ ಹಿಂದೆಂದೂ ಕಂಡಿಲ್ಲ ಒಮ್ಮುಖವನ್ನು ಎದುರಿಸುತ್ತಿರುವ ಸಮಯದಲ್ಲಿ, ಅದರಿಂದ ರಕ್ಷಿಸಲು ಅತ್ಯುತ್ತಮ ಕೊಡುಗೆ ನೀಡಿದವರನ್ನು ಈ ಪ್ರಶಸ್ತಿಯು ಗುರುತಿಸುತ್ತದೆ” ಎಂದು ಹೇಳಿದ್ದರೆ.

ಇದನ್ನೂ ಓದಿ: ವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ಆಶಾ ಕಾರ್ಯಕರ್ತರನ್ನು ವಿಶ್ವಸಂಸ್ಥೆಯು ಗೌರವಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, “ಆಶಾ ಕಾರ್ಯಕರ್ತೆಯರ ಇಡೀ ತಂಡಕ್ಕೆ ಡಬ್ಲ್ಯುಎಚ್‌ಒ ಮಹಾನಿರ್ದೇಶಕರ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿಯನ್ನು ನೀಡಿರುವುದು ಸಂತಸ ತಂದಿದೆ. ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆಗಳು. ಆರೋಗ್ಯಕರ ಭಾರತವನ್ನು ಖಚಿತಪಡಿಸಿಕೊಳ್ಳುವಲ್ಲಿ ಅವರು ಮುಂಚೂಣಿಯಲ್ಲಿದ್ದಾರೆ. ಅವರ ಸಮರ್ಪಣೆ ಮತ್ತು ದೃಢತೆ ಮೆಚ್ಚುವಂತದ್ದು” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಆಶಾ ಕಾರ್ಯಕರ್ತ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, “ನಾವು ಯಾವ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಜಗತ್ತೇ ಗುರುತಿಸಿದೆ. ಈ ಗೌರವಕ್ಕೆ ಪಾತ್ರರಾಗಿರುವುದಕ್ಕೆ ಪ್ರಧಾನಿ ಮೋದಿ ಕೂಡಾ ಅಭಿನಂದಿಸಿದ್ದಾರೆ. ಮಹತ್ವವಾದ ಕೆಲಸವನ್ನು ಚೆನ್ನಾಗಿ ಮಾಡತ್ತಿದ್ದೇವೆ ಮತ್ತು ಎಲ್ಲರೂ ಗುರುತಿಸುವಂತಹದ್ದು ಸಂತೋಷ ಮತ್ತು ಗೌರವದ ಸಂಗತಿ” ಎಂದು ಅವರು ತಿಳಿಸಿದ್ದಾರೆ.

“ನಿಜವಾಗಿಯೂ ನಮ್ಮನ್ನು ಅಭಿನಂದಿಸುವುದೇ ಆಗಿದ್ದರೆ ನಮ್ಮ ದುಡಿಮೆಗೆ ತಕ್ಕಂತಹ ಪ್ರತಿಫಲ ನೀಡಬೇಕು. ಅದು ನಮ್ಮನ್ನು ನಿಜವಾಗಿಯೂ ಗೌರವಿಸಿದಂತೆ ಆಗುತ್ತದೆ. ಆದರೆ ನಾವು ದುಡಿದ ಹಣವನ್ನೂ ನೀಡಲು ಕೂಡಾ ಸರ್ಕಾರ ಸತಾಯಿಸುತ್ತದೆ. ಮೊನ್ನೆ ಮೇ 17 ರಂದು ಕೂಡಾ ನಾವು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಿದ್ದೇವೆ. ಆ ಹೋರಾಟದಲ್ಲೂ ನಾವು ಹೇಳಿದ್ದು ನಮ್ಮ ದುಡಿಮೆಯ ಪ್ರತಿಫಲ ಕೊಡಿ ಎಂದಷ್ಟೆ. ಗೌರವಧನದ ಹೆಸರಿನಲ್ಲಿ 5 ಸಾವಿರವನ್ನು ನೀಡಲಾಗುತ್ತದೆ. ಅದನ್ನು ಸರಿಯಾದ ಸಮಯದಲ್ಲಿ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಚರ್ಚೆ: HD ಕುಮಾರಸ್ವಾಮಿ ಭರವಸೆ

“ಮಾಡಿದ ಕೆಲಸಗಳಿಗೆ 50 ರಿಂದ 200 ರೂ ವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಈ ಕೆಲಸಗಳನ್ನು ಪೋರ್ಟಲ್ ಅಲ್ಲಿ ದಾಖಲಾಗಬೇಕಾಗುತ್ತದೆ. ಆದರೆ ಅದನ್ನು ದಾಖಲು ಮಾಡಲು ವ್ಯವಸ್ಥೆಯಿಲ್ಲ. ಆ ಹುದ್ದೆಯನ್ನು ಇನ್ನೂ ಖಾಲಿ ಬಿಡಲಾಗಿದೆ. ಅದನ್ನು ದಾಖಲೆ ಮಾಡುವವರೆಗೂ ನಮಗೆ ಪ್ರೋತ್ಸಾಹ ಧನ ಬರುವುದಿಲ್ಲ. ಇದೂ ಕೂಡಾ ಸರ್ಕಾರ ನಮಗೆ ಮಾಡುವ ಮೋಸ ಅಲ್ಲವೆ” ಎಂದು ಬೇಸರ ವ್ಯಕ್ತಪಡಿಸಿದರು.

“ದೇಶದ ಎಲ್ಲರ ಆರೋಗ್ಯವೂ ಚೆನ್ನಾಗಿ ಇರಬೇಕು ಎಂದು ನಾವು ಹಗಲು-ರಾತ್ರಿ ಕೆಲಸ ಮಾಡುತ್ತೇವೆ. ಆದರೆ ನಮ್ಮ ಆರೋಗ್ಯ ಕೆಟ್ಟರೆ ಅದಕ್ಕೆ ಸರ್ಕಾರ ಸಹಾಯ ಮಾಡುವುದಿಲ್ಲ. ಆರೋಗ್ಯ ವಿಚಾರವಾಗಿ ಒಂದು ತಿಂಗಳು ಕೆಲಸ ಮಾಡಿಲ್ಲ ಅಂದರೆ ಒಂದು ರುಪಾಯಿಯೂ ನಮಗೆ ಬರುವುದಿಲ್ಲ. ಅಷ್ಟೊಂದು ನಿಕೃಷ್ಟವಾಗಿ ನಮ್ಮನ್ನು ನಡೆಸಿಕೊಳ್ಳಲಾಗುತ್ತಿದೆ. ಇದೆಲ್ಲಕ್ಕೆ ಸರ್ಕಾರ ಪರಿಹಾರ ನೀಡಿದರೆ ನಿಜವಾಗಿಯೂ ನಮ್ಮನ್ನು ಗೌರವಿಸಿದ ಹಾಗೆ” ಎಂದು ಅವರು ಹೇಳಿದ್ದಾರೆ.

ಸಾಮಾನ್ಯವಾಗಿ ಕಾರ್ಮಿಕರು ದುಡಿಮೆ ತಕ್ಕಂತೆ ಕೂಲಿ, ಸಂಬಳ ಪಡೆಯುತ್ತಾರೆ. ಆದರೆ ನಿಮ್ಮ ದುಡಿಮೆಗೆ ಪ್ರತಿಫಲವಾಗಿ ‘ಗೌರವಧನ’ ಎಂಬ ಹೆಸರಿಟ್ಟು ನಿಮ್ಮ ಶ್ರಮಕ್ಕೆ ಮೋಸ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,“ವಾಸ್ತವದಲ್ಲಿ ನಾವು ಮಾಡುತ್ತಿರುವ ಕೆಸಲಕ್ಕೆ ಪ್ರತಿಫಲವಾಗಿ ನೀಡುವ ‘ಗೌರವಧನ’ದ ಹೆಸರೂ ಕೂಡಾ ಒಂದು ಮೋಸ. ಹೆಸರು ಇಟ್ಟಕೂಡಲೇ ನಮಗೆ ಗೌರವ ಸಿಕ್ಕಿದ ಹಾಗೆ ಆಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...