Homeಮುಖಪುಟ‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

8.5 ವರ್ಷಗಳಲ್ಲಿ ಭಾರತವನ್ನು ಈ ಕತ್ತಲೆಯ ಯುಗಕ್ಕೆ ತಂದಿರುವ ಜವಾಬ್ದಾರಿಯನ್ನು ಬಿಜೆಪಿ ಸರಕಾರವೇ ಹೊರಬೇಕು ಎಂದು ಸಿಪಿಐಎಂ ನಾಯಕ ಸೀತಾರಾಮ್ ಯೆಚೂರಿ ಹೇಳಿದ್ದಾರೆ

- Advertisement -
- Advertisement -

2022 ರಲ್ಲಿ ಭಾರತವು ಜಾಗತಿಕ ಹಸಿವು ಸೂಚ್ಯಂಕ(GHI)ದ 121 ದೇಶಗಳ ಪಟ್ಟಿಯಲ್ಲಿ 107 ನೇ ಸ್ಥಾನಕ್ಕೆ ಕುಸಿದಿದೆ. ದೇಶದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ 19.3% ದಷ್ಟಿದೆ ಎಂದು ವರದಿ ಹೇಳಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ತಿಳಿಸಿದೆ. 2021 ರಲ್ಲಿ ದೇಶವು ಈ ಸೂಚ್ಯಂಕದ ಪಟ್ಟಿಯಲ್ಲಿ 101 ನೇ ಸ್ಥಾನದಲ್ಲಿತ್ತು.

ಜಾಗತಿಕ ಹಸಿವು ಸೂಚ್ಯಂಕವು ಜಾಗತಿಕವಾಗಿ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಸಿವನ್ನು ಸಮಗ್ರವಾಗಿ ಅಳೆಯುವ ಮತ್ತು ಟ್ರ್ಯಾಕ್ ಮಾಡುವ ಸಾಧನವಾಗಿದೆ. ಹಸಿವಿನ ಪ್ರಮಾಣದಲ್ಲಿ ಭಾರತಕ್ಕೆ 29.1 ಅಂಕಗಳನ್ನು ನೀಡಲಾಗಿದ್ದು, ದೇಶದ ಹಸಿವಿನ ಮಟ್ಟವು ‘ಗಂಭೀರ’ವಾಗಿದೆ ಎಂದು ವರದಿಯು ಸೂಚಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿರುವ ಅಫ್ಘಾನಿಸ್ತಾನವು ಭಾರತದ ನಂತರದ ಸ್ಥಾನದಲ್ಲಿ ಇರುವ ಏಷ್ಯಾದ ಏಕೈಕ ದೇಶವಾಗಿದೆ. ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ (99), ಬಾಂಗ್ಲಾದೇಶ (84), ನೇಪಾಳ (81) ಮತ್ತು ಶ್ರೀಲಂಕಾ (64) ಭಾರತಕ್ಕಿಂತ ಉತ್ತಮ ಸಾಧನೆ ಮಾಡಿದೆ. 2021 ರಲ್ಲಿ ಭಾರತವು 116 ದೇಶಗಳಲ್ಲಿ 101 ನೇ ಸ್ಥಾನದಲ್ಲಿದ್ದರೆ, 2020 ರಲ್ಲಿ 94 ನೇ ಸ್ಥಾನದಲ್ಲಿತ್ತು.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ವಿಶ್ವದ ಅತಿ ಹೆಚ್ಚು ಹಸಿವಿನ ಮಟ್ಟವನ್ನು ಹೊಂದಿರುವ ಪ್ರದೇಶವಾಗಿ ದಕ್ಷಿಣ ಏಷ್ಯಾವು ಹೊರಹೊಮ್ಮಿದೆ. ಇಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ ಕೂಡಾ ಅತೀ ಹೆಚ್ಚು ಇದ್ದು, ವಿಶ್ವದಲ್ಲೇ ಅತಿ ಹೆಚ್ಚು ಮಕ್ಕಳ ಕ್ಷೀಣತೆಯ ಪ್ರಮಾಣವನ್ನು ಹೊಂದಿದೆ ಎಂದು ವರದಿ ಹೇಳಿದೆ.

“ಭಾರತದ ಮಕ್ಕಳ ಕ್ಷೀಣಿಸುವಿಕೆಯ ಪ್ರಮಾಣವು ಶೇಕಡಾ 19.3 ರಷ್ಟಿದೆ, ಇದು ವಿಶ್ವದ ಯಾವುದೇ ದೇಶಕ್ಕಿಂತ ಅತ್ಯಧಿಕವಾಗಿದೆ” ಎಂದು ವರದಿ ಹೇಳಿದೆ.

ಭಾರತದಲ್ಲಿ ಅಪೌಷ್ಟಿಕತೆಯ ಪ್ರಮಾಣವು 2018-2020 ರಲ್ಲಿ 14.6% ದಿಂದ 2019-2021 ರಲ್ಲಿ 16.3% ಕ್ಕೆ ಏರಿದೆ. ಜಾಗತಿಕವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಒಟ್ಟು 82.8 ಕೋಟಿ ಜನರಲ್ಲಿ 22.43 ಕೋಟಿ ಜನರು ಭಾರತದಲ್ಲಿ ಇದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಮಾನವ ಚರಿತ್ರೆಯಲ್ಲಿ ಬಂಡವಾಳವಾದ ಹಸಿವು ಎಂಬ ಜಾತಿಗೆಟ್ಟ ಪ್ರತಿಮೆ

ಸಂಘರ್ಷ, ಹವಾಮಾನ ಬಿಕ್ಕಟ್ಟು ಮತ್ತು ಕೊರೊನಾ ಸಾಂಕ್ರಾಮಿಕದ ಆರ್ಥಿಕ ಪರಿಣಾಮಗಳೊಂದಿಗೆ ಹಸಿವನ್ನು ಕೊನೆಗೊಳಿಸುವ ಜಗತ್ತಿನ ಪ್ರಯತ್ನಕ್ಕೆ ಗಂಭೀರ ಹಿನ್ನಡೆ ಮಾಡುತ್ತಿದೆ ಎಂದು GHI ವರದಿ ಹೇಳಿದೆ. ಜಾಗತಿಕ ಬಿಕ್ಕಟ್ಟುಗಳು ಅತಿಕ್ರಮಿಸುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ನಿರೀಕ್ಷೆಯಿದೆ ಎಂದು ವರದಿ ಎಚ್ಚರಿಸಿದೆ.

ಭಾರತವು ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಕುಸಿದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷಗಳು, ಆಡಳಿತರೂಢ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. “8.5 ವರ್ಷಗಳಲ್ಲಿ ಭಾರತವನ್ನು ಈ ಕತ್ತಲೆಯ ಯುಗಕ್ಕೆ ತಂದಿರುವ ಈ ಅವಧಿಯ ಜವಾಬ್ದಾರಿಯನ್ನು ಸರಕಾರವೇ ಹೊರಬೇಕು” ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

“2014 ರಿಂದ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಅಪಾಯಕಾರಿಯಾಗಿ ತೀವ್ರ ಕುಸಿತ ಕಂಡಿದೆ. ಮೋದಿ ಸರ್ಕಾರವು ಭಾರತಕ್ಕೆ ವಿನಾಶಕಾರಿಯಾಗಿದೆ. ಕಡಿಮೆ ಆಹಾರ ದಾಸ್ತಾನುಗಳು, ಕನಿಷ್ಠ ಬಫರ್ ಜೊತೆಗೆ ಏರುತ್ತಿರುವ ಬೆಲೆಗಳು. 8.5 ವರ್ಷಗಳಲ್ಲಿ ಭಾರತವನ್ನು ಕತ್ತಲೆಯ ಯುಗಕ್ಕೆ ತಂದಿರುವ ಈ ಯುಗದ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು ಪ್ರಚಾರ, ತಿರುಚುವಿಕೆ ಮತ್ತು ಸುಳ್ಳುಗಳು ಸಾಕು” ಎಂದು ಯೆಚೂರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜಾಗತಿಕ ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತ ಹಿಂದೆಯಿರುವ ಭಾರತ

ಕಾಂಗ್ರೆಸ್ ನಾಯಕ ಪಿ ಚಿದಂಬರಂ, “ಗೌರವಾನ್ವಿತ ಪ್ರಧಾನಿಯವರು ಅಪೌಷ್ಟಿಕತೆ, ಹಸಿವು, ಮಕ್ಕಳ ಬೆಳವಣಿಗೆ ಕುಂಠಿತವಾಗುವುದು ಮತ್ತು ಪೌಷ್ಟಿಕಾಂಶದಂತಹ ನೈಜ ಸಮಸ್ಯೆಗಳನ್ನು ಯಾವಾಗ ಪರಿಹರಿಸುತ್ತಾರೆ? ಭಾರತದಲ್ಲಿ 22.4 ಕೋಟಿ ಜನರನ್ನು ಅಪೌಷ್ಟಿಕತೆ ಎಂದು ಪರಿಗಣಿಸಲಾಗಿದೆ” ಎಂದು ಹೇಳಿದ್ದಾರೆ.

“ಮೋದಿ ಸರ್ಕಾರದ 8 ವರ್ಷಗಳಲ್ಲಿ 2014 ರಿಂದ ಹಸಿವಿನ ಸೂಚ್ಯಂಕಗಳು ಹದಗೆಟ್ಟಿದೆ. ಒಟ್ಟು ಭಾರತೀಯರಲ್ಲಿ 16.3% ರಷ್ಟು ಜನರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಅಂದರೆ ಅವರಿಗೆ ಸಾಕಷ್ಟು ಆಹಾರವಿಲ್ಲ” ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...