Homeಮುಖಪುಟ‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

8.5 ವರ್ಷಗಳಲ್ಲಿ ಭಾರತವನ್ನು ಈ ಕತ್ತಲೆಯ ಯುಗಕ್ಕೆ ತಂದಿರುವ ಜವಾಬ್ದಾರಿಯನ್ನು ಬಿಜೆಪಿ ಸರಕಾರವೇ ಹೊರಬೇಕು ಎಂದು ಸಿಪಿಐಎಂ ನಾಯಕ ಸೀತಾರಾಮ್ ಯೆಚೂರಿ ಹೇಳಿದ್ದಾರೆ

- Advertisement -
- Advertisement -

2022 ರಲ್ಲಿ ಭಾರತವು ಜಾಗತಿಕ ಹಸಿವು ಸೂಚ್ಯಂಕ(GHI)ದ 121 ದೇಶಗಳ ಪಟ್ಟಿಯಲ್ಲಿ 107 ನೇ ಸ್ಥಾನಕ್ಕೆ ಕುಸಿದಿದೆ. ದೇಶದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ 19.3% ದಷ್ಟಿದೆ ಎಂದು ವರದಿ ಹೇಳಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ತಿಳಿಸಿದೆ. 2021 ರಲ್ಲಿ ದೇಶವು ಈ ಸೂಚ್ಯಂಕದ ಪಟ್ಟಿಯಲ್ಲಿ 101 ನೇ ಸ್ಥಾನದಲ್ಲಿತ್ತು.

ಜಾಗತಿಕ ಹಸಿವು ಸೂಚ್ಯಂಕವು ಜಾಗತಿಕವಾಗಿ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಸಿವನ್ನು ಸಮಗ್ರವಾಗಿ ಅಳೆಯುವ ಮತ್ತು ಟ್ರ್ಯಾಕ್ ಮಾಡುವ ಸಾಧನವಾಗಿದೆ. ಹಸಿವಿನ ಪ್ರಮಾಣದಲ್ಲಿ ಭಾರತಕ್ಕೆ 29.1 ಅಂಕಗಳನ್ನು ನೀಡಲಾಗಿದ್ದು, ದೇಶದ ಹಸಿವಿನ ಮಟ್ಟವು ‘ಗಂಭೀರ’ವಾಗಿದೆ ಎಂದು ವರದಿಯು ಸೂಚಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿರುವ ಅಫ್ಘಾನಿಸ್ತಾನವು ಭಾರತದ ನಂತರದ ಸ್ಥಾನದಲ್ಲಿ ಇರುವ ಏಷ್ಯಾದ ಏಕೈಕ ದೇಶವಾಗಿದೆ. ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ (99), ಬಾಂಗ್ಲಾದೇಶ (84), ನೇಪಾಳ (81) ಮತ್ತು ಶ್ರೀಲಂಕಾ (64) ಭಾರತಕ್ಕಿಂತ ಉತ್ತಮ ಸಾಧನೆ ಮಾಡಿದೆ. 2021 ರಲ್ಲಿ ಭಾರತವು 116 ದೇಶಗಳಲ್ಲಿ 101 ನೇ ಸ್ಥಾನದಲ್ಲಿದ್ದರೆ, 2020 ರಲ್ಲಿ 94 ನೇ ಸ್ಥಾನದಲ್ಲಿತ್ತು.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ವಿಶ್ವದ ಅತಿ ಹೆಚ್ಚು ಹಸಿವಿನ ಮಟ್ಟವನ್ನು ಹೊಂದಿರುವ ಪ್ರದೇಶವಾಗಿ ದಕ್ಷಿಣ ಏಷ್ಯಾವು ಹೊರಹೊಮ್ಮಿದೆ. ಇಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ ಕೂಡಾ ಅತೀ ಹೆಚ್ಚು ಇದ್ದು, ವಿಶ್ವದಲ್ಲೇ ಅತಿ ಹೆಚ್ಚು ಮಕ್ಕಳ ಕ್ಷೀಣತೆಯ ಪ್ರಮಾಣವನ್ನು ಹೊಂದಿದೆ ಎಂದು ವರದಿ ಹೇಳಿದೆ.

“ಭಾರತದ ಮಕ್ಕಳ ಕ್ಷೀಣಿಸುವಿಕೆಯ ಪ್ರಮಾಣವು ಶೇಕಡಾ 19.3 ರಷ್ಟಿದೆ, ಇದು ವಿಶ್ವದ ಯಾವುದೇ ದೇಶಕ್ಕಿಂತ ಅತ್ಯಧಿಕವಾಗಿದೆ” ಎಂದು ವರದಿ ಹೇಳಿದೆ.

ಭಾರತದಲ್ಲಿ ಅಪೌಷ್ಟಿಕತೆಯ ಪ್ರಮಾಣವು 2018-2020 ರಲ್ಲಿ 14.6% ದಿಂದ 2019-2021 ರಲ್ಲಿ 16.3% ಕ್ಕೆ ಏರಿದೆ. ಜಾಗತಿಕವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಒಟ್ಟು 82.8 ಕೋಟಿ ಜನರಲ್ಲಿ 22.43 ಕೋಟಿ ಜನರು ಭಾರತದಲ್ಲಿ ಇದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಮಾನವ ಚರಿತ್ರೆಯಲ್ಲಿ ಬಂಡವಾಳವಾದ ಹಸಿವು ಎಂಬ ಜಾತಿಗೆಟ್ಟ ಪ್ರತಿಮೆ

ಸಂಘರ್ಷ, ಹವಾಮಾನ ಬಿಕ್ಕಟ್ಟು ಮತ್ತು ಕೊರೊನಾ ಸಾಂಕ್ರಾಮಿಕದ ಆರ್ಥಿಕ ಪರಿಣಾಮಗಳೊಂದಿಗೆ ಹಸಿವನ್ನು ಕೊನೆಗೊಳಿಸುವ ಜಗತ್ತಿನ ಪ್ರಯತ್ನಕ್ಕೆ ಗಂಭೀರ ಹಿನ್ನಡೆ ಮಾಡುತ್ತಿದೆ ಎಂದು GHI ವರದಿ ಹೇಳಿದೆ. ಜಾಗತಿಕ ಬಿಕ್ಕಟ್ಟುಗಳು ಅತಿಕ್ರಮಿಸುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ನಿರೀಕ್ಷೆಯಿದೆ ಎಂದು ವರದಿ ಎಚ್ಚರಿಸಿದೆ.

ಭಾರತವು ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಕುಸಿದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷಗಳು, ಆಡಳಿತರೂಢ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. “8.5 ವರ್ಷಗಳಲ್ಲಿ ಭಾರತವನ್ನು ಈ ಕತ್ತಲೆಯ ಯುಗಕ್ಕೆ ತಂದಿರುವ ಈ ಅವಧಿಯ ಜವಾಬ್ದಾರಿಯನ್ನು ಸರಕಾರವೇ ಹೊರಬೇಕು” ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

“2014 ರಿಂದ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಅಪಾಯಕಾರಿಯಾಗಿ ತೀವ್ರ ಕುಸಿತ ಕಂಡಿದೆ. ಮೋದಿ ಸರ್ಕಾರವು ಭಾರತಕ್ಕೆ ವಿನಾಶಕಾರಿಯಾಗಿದೆ. ಕಡಿಮೆ ಆಹಾರ ದಾಸ್ತಾನುಗಳು, ಕನಿಷ್ಠ ಬಫರ್ ಜೊತೆಗೆ ಏರುತ್ತಿರುವ ಬೆಲೆಗಳು. 8.5 ವರ್ಷಗಳಲ್ಲಿ ಭಾರತವನ್ನು ಕತ್ತಲೆಯ ಯುಗಕ್ಕೆ ತಂದಿರುವ ಈ ಯುಗದ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು ಪ್ರಚಾರ, ತಿರುಚುವಿಕೆ ಮತ್ತು ಸುಳ್ಳುಗಳು ಸಾಕು” ಎಂದು ಯೆಚೂರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜಾಗತಿಕ ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತ ಹಿಂದೆಯಿರುವ ಭಾರತ

ಕಾಂಗ್ರೆಸ್ ನಾಯಕ ಪಿ ಚಿದಂಬರಂ, “ಗೌರವಾನ್ವಿತ ಪ್ರಧಾನಿಯವರು ಅಪೌಷ್ಟಿಕತೆ, ಹಸಿವು, ಮಕ್ಕಳ ಬೆಳವಣಿಗೆ ಕುಂಠಿತವಾಗುವುದು ಮತ್ತು ಪೌಷ್ಟಿಕಾಂಶದಂತಹ ನೈಜ ಸಮಸ್ಯೆಗಳನ್ನು ಯಾವಾಗ ಪರಿಹರಿಸುತ್ತಾರೆ? ಭಾರತದಲ್ಲಿ 22.4 ಕೋಟಿ ಜನರನ್ನು ಅಪೌಷ್ಟಿಕತೆ ಎಂದು ಪರಿಗಣಿಸಲಾಗಿದೆ” ಎಂದು ಹೇಳಿದ್ದಾರೆ.

“ಮೋದಿ ಸರ್ಕಾರದ 8 ವರ್ಷಗಳಲ್ಲಿ 2014 ರಿಂದ ಹಸಿವಿನ ಸೂಚ್ಯಂಕಗಳು ಹದಗೆಟ್ಟಿದೆ. ಒಟ್ಟು ಭಾರತೀಯರಲ್ಲಿ 16.3% ರಷ್ಟು ಜನರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಅಂದರೆ ಅವರಿಗೆ ಸಾಕಷ್ಟು ಆಹಾರವಿಲ್ಲ” ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...