Homeಮುಖಪುಟ‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

8.5 ವರ್ಷಗಳಲ್ಲಿ ಭಾರತವನ್ನು ಈ ಕತ್ತಲೆಯ ಯುಗಕ್ಕೆ ತಂದಿರುವ ಜವಾಬ್ದಾರಿಯನ್ನು ಬಿಜೆಪಿ ಸರಕಾರವೇ ಹೊರಬೇಕು ಎಂದು ಸಿಪಿಐಎಂ ನಾಯಕ ಸೀತಾರಾಮ್ ಯೆಚೂರಿ ಹೇಳಿದ್ದಾರೆ

- Advertisement -
- Advertisement -

2022 ರಲ್ಲಿ ಭಾರತವು ಜಾಗತಿಕ ಹಸಿವು ಸೂಚ್ಯಂಕ(GHI)ದ 121 ದೇಶಗಳ ಪಟ್ಟಿಯಲ್ಲಿ 107 ನೇ ಸ್ಥಾನಕ್ಕೆ ಕುಸಿದಿದೆ. ದೇಶದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ 19.3% ದಷ್ಟಿದೆ ಎಂದು ವರದಿ ಹೇಳಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ತಿಳಿಸಿದೆ. 2021 ರಲ್ಲಿ ದೇಶವು ಈ ಸೂಚ್ಯಂಕದ ಪಟ್ಟಿಯಲ್ಲಿ 101 ನೇ ಸ್ಥಾನದಲ್ಲಿತ್ತು.

ಜಾಗತಿಕ ಹಸಿವು ಸೂಚ್ಯಂಕವು ಜಾಗತಿಕವಾಗಿ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಸಿವನ್ನು ಸಮಗ್ರವಾಗಿ ಅಳೆಯುವ ಮತ್ತು ಟ್ರ್ಯಾಕ್ ಮಾಡುವ ಸಾಧನವಾಗಿದೆ. ಹಸಿವಿನ ಪ್ರಮಾಣದಲ್ಲಿ ಭಾರತಕ್ಕೆ 29.1 ಅಂಕಗಳನ್ನು ನೀಡಲಾಗಿದ್ದು, ದೇಶದ ಹಸಿವಿನ ಮಟ್ಟವು ‘ಗಂಭೀರ’ವಾಗಿದೆ ಎಂದು ವರದಿಯು ಸೂಚಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿರುವ ಅಫ್ಘಾನಿಸ್ತಾನವು ಭಾರತದ ನಂತರದ ಸ್ಥಾನದಲ್ಲಿ ಇರುವ ಏಷ್ಯಾದ ಏಕೈಕ ದೇಶವಾಗಿದೆ. ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ (99), ಬಾಂಗ್ಲಾದೇಶ (84), ನೇಪಾಳ (81) ಮತ್ತು ಶ್ರೀಲಂಕಾ (64) ಭಾರತಕ್ಕಿಂತ ಉತ್ತಮ ಸಾಧನೆ ಮಾಡಿದೆ. 2021 ರಲ್ಲಿ ಭಾರತವು 116 ದೇಶಗಳಲ್ಲಿ 101 ನೇ ಸ್ಥಾನದಲ್ಲಿದ್ದರೆ, 2020 ರಲ್ಲಿ 94 ನೇ ಸ್ಥಾನದಲ್ಲಿತ್ತು.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ವಿಶ್ವದ ಅತಿ ಹೆಚ್ಚು ಹಸಿವಿನ ಮಟ್ಟವನ್ನು ಹೊಂದಿರುವ ಪ್ರದೇಶವಾಗಿ ದಕ್ಷಿಣ ಏಷ್ಯಾವು ಹೊರಹೊಮ್ಮಿದೆ. ಇಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ ಕೂಡಾ ಅತೀ ಹೆಚ್ಚು ಇದ್ದು, ವಿಶ್ವದಲ್ಲೇ ಅತಿ ಹೆಚ್ಚು ಮಕ್ಕಳ ಕ್ಷೀಣತೆಯ ಪ್ರಮಾಣವನ್ನು ಹೊಂದಿದೆ ಎಂದು ವರದಿ ಹೇಳಿದೆ.

“ಭಾರತದ ಮಕ್ಕಳ ಕ್ಷೀಣಿಸುವಿಕೆಯ ಪ್ರಮಾಣವು ಶೇಕಡಾ 19.3 ರಷ್ಟಿದೆ, ಇದು ವಿಶ್ವದ ಯಾವುದೇ ದೇಶಕ್ಕಿಂತ ಅತ್ಯಧಿಕವಾಗಿದೆ” ಎಂದು ವರದಿ ಹೇಳಿದೆ.

ಭಾರತದಲ್ಲಿ ಅಪೌಷ್ಟಿಕತೆಯ ಪ್ರಮಾಣವು 2018-2020 ರಲ್ಲಿ 14.6% ದಿಂದ 2019-2021 ರಲ್ಲಿ 16.3% ಕ್ಕೆ ಏರಿದೆ. ಜಾಗತಿಕವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಒಟ್ಟು 82.8 ಕೋಟಿ ಜನರಲ್ಲಿ 22.43 ಕೋಟಿ ಜನರು ಭಾರತದಲ್ಲಿ ಇದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಮಾನವ ಚರಿತ್ರೆಯಲ್ಲಿ ಬಂಡವಾಳವಾದ ಹಸಿವು ಎಂಬ ಜಾತಿಗೆಟ್ಟ ಪ್ರತಿಮೆ

ಸಂಘರ್ಷ, ಹವಾಮಾನ ಬಿಕ್ಕಟ್ಟು ಮತ್ತು ಕೊರೊನಾ ಸಾಂಕ್ರಾಮಿಕದ ಆರ್ಥಿಕ ಪರಿಣಾಮಗಳೊಂದಿಗೆ ಹಸಿವನ್ನು ಕೊನೆಗೊಳಿಸುವ ಜಗತ್ತಿನ ಪ್ರಯತ್ನಕ್ಕೆ ಗಂಭೀರ ಹಿನ್ನಡೆ ಮಾಡುತ್ತಿದೆ ಎಂದು GHI ವರದಿ ಹೇಳಿದೆ. ಜಾಗತಿಕ ಬಿಕ್ಕಟ್ಟುಗಳು ಅತಿಕ್ರಮಿಸುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ನಿರೀಕ್ಷೆಯಿದೆ ಎಂದು ವರದಿ ಎಚ್ಚರಿಸಿದೆ.

ಭಾರತವು ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಕುಸಿದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷಗಳು, ಆಡಳಿತರೂಢ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. “8.5 ವರ್ಷಗಳಲ್ಲಿ ಭಾರತವನ್ನು ಈ ಕತ್ತಲೆಯ ಯುಗಕ್ಕೆ ತಂದಿರುವ ಈ ಅವಧಿಯ ಜವಾಬ್ದಾರಿಯನ್ನು ಸರಕಾರವೇ ಹೊರಬೇಕು” ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

“2014 ರಿಂದ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಅಪಾಯಕಾರಿಯಾಗಿ ತೀವ್ರ ಕುಸಿತ ಕಂಡಿದೆ. ಮೋದಿ ಸರ್ಕಾರವು ಭಾರತಕ್ಕೆ ವಿನಾಶಕಾರಿಯಾಗಿದೆ. ಕಡಿಮೆ ಆಹಾರ ದಾಸ್ತಾನುಗಳು, ಕನಿಷ್ಠ ಬಫರ್ ಜೊತೆಗೆ ಏರುತ್ತಿರುವ ಬೆಲೆಗಳು. 8.5 ವರ್ಷಗಳಲ್ಲಿ ಭಾರತವನ್ನು ಕತ್ತಲೆಯ ಯುಗಕ್ಕೆ ತಂದಿರುವ ಈ ಯುಗದ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು ಪ್ರಚಾರ, ತಿರುಚುವಿಕೆ ಮತ್ತು ಸುಳ್ಳುಗಳು ಸಾಕು” ಎಂದು ಯೆಚೂರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜಾಗತಿಕ ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತ ಹಿಂದೆಯಿರುವ ಭಾರತ

ಕಾಂಗ್ರೆಸ್ ನಾಯಕ ಪಿ ಚಿದಂಬರಂ, “ಗೌರವಾನ್ವಿತ ಪ್ರಧಾನಿಯವರು ಅಪೌಷ್ಟಿಕತೆ, ಹಸಿವು, ಮಕ್ಕಳ ಬೆಳವಣಿಗೆ ಕುಂಠಿತವಾಗುವುದು ಮತ್ತು ಪೌಷ್ಟಿಕಾಂಶದಂತಹ ನೈಜ ಸಮಸ್ಯೆಗಳನ್ನು ಯಾವಾಗ ಪರಿಹರಿಸುತ್ತಾರೆ? ಭಾರತದಲ್ಲಿ 22.4 ಕೋಟಿ ಜನರನ್ನು ಅಪೌಷ್ಟಿಕತೆ ಎಂದು ಪರಿಗಣಿಸಲಾಗಿದೆ” ಎಂದು ಹೇಳಿದ್ದಾರೆ.

“ಮೋದಿ ಸರ್ಕಾರದ 8 ವರ್ಷಗಳಲ್ಲಿ 2014 ರಿಂದ ಹಸಿವಿನ ಸೂಚ್ಯಂಕಗಳು ಹದಗೆಟ್ಟಿದೆ. ಒಟ್ಟು ಭಾರತೀಯರಲ್ಲಿ 16.3% ರಷ್ಟು ಜನರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಅಂದರೆ ಅವರಿಗೆ ಸಾಕಷ್ಟು ಆಹಾರವಿಲ್ಲ” ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...