Homeಮುಖಪುಟ‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

8.5 ವರ್ಷಗಳಲ್ಲಿ ಭಾರತವನ್ನು ಈ ಕತ್ತಲೆಯ ಯುಗಕ್ಕೆ ತಂದಿರುವ ಜವಾಬ್ದಾರಿಯನ್ನು ಬಿಜೆಪಿ ಸರಕಾರವೇ ಹೊರಬೇಕು ಎಂದು ಸಿಪಿಐಎಂ ನಾಯಕ ಸೀತಾರಾಮ್ ಯೆಚೂರಿ ಹೇಳಿದ್ದಾರೆ

- Advertisement -
- Advertisement -

2022 ರಲ್ಲಿ ಭಾರತವು ಜಾಗತಿಕ ಹಸಿವು ಸೂಚ್ಯಂಕ(GHI)ದ 121 ದೇಶಗಳ ಪಟ್ಟಿಯಲ್ಲಿ 107 ನೇ ಸ್ಥಾನಕ್ಕೆ ಕುಸಿದಿದೆ. ದೇಶದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ 19.3% ದಷ್ಟಿದೆ ಎಂದು ವರದಿ ಹೇಳಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ತಿಳಿಸಿದೆ. 2021 ರಲ್ಲಿ ದೇಶವು ಈ ಸೂಚ್ಯಂಕದ ಪಟ್ಟಿಯಲ್ಲಿ 101 ನೇ ಸ್ಥಾನದಲ್ಲಿತ್ತು.

ಜಾಗತಿಕ ಹಸಿವು ಸೂಚ್ಯಂಕವು ಜಾಗತಿಕವಾಗಿ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಸಿವನ್ನು ಸಮಗ್ರವಾಗಿ ಅಳೆಯುವ ಮತ್ತು ಟ್ರ್ಯಾಕ್ ಮಾಡುವ ಸಾಧನವಾಗಿದೆ. ಹಸಿವಿನ ಪ್ರಮಾಣದಲ್ಲಿ ಭಾರತಕ್ಕೆ 29.1 ಅಂಕಗಳನ್ನು ನೀಡಲಾಗಿದ್ದು, ದೇಶದ ಹಸಿವಿನ ಮಟ್ಟವು ‘ಗಂಭೀರ’ವಾಗಿದೆ ಎಂದು ವರದಿಯು ಸೂಚಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿರುವ ಅಫ್ಘಾನಿಸ್ತಾನವು ಭಾರತದ ನಂತರದ ಸ್ಥಾನದಲ್ಲಿ ಇರುವ ಏಷ್ಯಾದ ಏಕೈಕ ದೇಶವಾಗಿದೆ. ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ (99), ಬಾಂಗ್ಲಾದೇಶ (84), ನೇಪಾಳ (81) ಮತ್ತು ಶ್ರೀಲಂಕಾ (64) ಭಾರತಕ್ಕಿಂತ ಉತ್ತಮ ಸಾಧನೆ ಮಾಡಿದೆ. 2021 ರಲ್ಲಿ ಭಾರತವು 116 ದೇಶಗಳಲ್ಲಿ 101 ನೇ ಸ್ಥಾನದಲ್ಲಿದ್ದರೆ, 2020 ರಲ್ಲಿ 94 ನೇ ಸ್ಥಾನದಲ್ಲಿತ್ತು.

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ವಿಶ್ವದ ಅತಿ ಹೆಚ್ಚು ಹಸಿವಿನ ಮಟ್ಟವನ್ನು ಹೊಂದಿರುವ ಪ್ರದೇಶವಾಗಿ ದಕ್ಷಿಣ ಏಷ್ಯಾವು ಹೊರಹೊಮ್ಮಿದೆ. ಇಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ ಕೂಡಾ ಅತೀ ಹೆಚ್ಚು ಇದ್ದು, ವಿಶ್ವದಲ್ಲೇ ಅತಿ ಹೆಚ್ಚು ಮಕ್ಕಳ ಕ್ಷೀಣತೆಯ ಪ್ರಮಾಣವನ್ನು ಹೊಂದಿದೆ ಎಂದು ವರದಿ ಹೇಳಿದೆ.

“ಭಾರತದ ಮಕ್ಕಳ ಕ್ಷೀಣಿಸುವಿಕೆಯ ಪ್ರಮಾಣವು ಶೇಕಡಾ 19.3 ರಷ್ಟಿದೆ, ಇದು ವಿಶ್ವದ ಯಾವುದೇ ದೇಶಕ್ಕಿಂತ ಅತ್ಯಧಿಕವಾಗಿದೆ” ಎಂದು ವರದಿ ಹೇಳಿದೆ.

ಭಾರತದಲ್ಲಿ ಅಪೌಷ್ಟಿಕತೆಯ ಪ್ರಮಾಣವು 2018-2020 ರಲ್ಲಿ 14.6% ದಿಂದ 2019-2021 ರಲ್ಲಿ 16.3% ಕ್ಕೆ ಏರಿದೆ. ಜಾಗತಿಕವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಒಟ್ಟು 82.8 ಕೋಟಿ ಜನರಲ್ಲಿ 22.43 ಕೋಟಿ ಜನರು ಭಾರತದಲ್ಲಿ ಇದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಮಾನವ ಚರಿತ್ರೆಯಲ್ಲಿ ಬಂಡವಾಳವಾದ ಹಸಿವು ಎಂಬ ಜಾತಿಗೆಟ್ಟ ಪ್ರತಿಮೆ

ಸಂಘರ್ಷ, ಹವಾಮಾನ ಬಿಕ್ಕಟ್ಟು ಮತ್ತು ಕೊರೊನಾ ಸಾಂಕ್ರಾಮಿಕದ ಆರ್ಥಿಕ ಪರಿಣಾಮಗಳೊಂದಿಗೆ ಹಸಿವನ್ನು ಕೊನೆಗೊಳಿಸುವ ಜಗತ್ತಿನ ಪ್ರಯತ್ನಕ್ಕೆ ಗಂಭೀರ ಹಿನ್ನಡೆ ಮಾಡುತ್ತಿದೆ ಎಂದು GHI ವರದಿ ಹೇಳಿದೆ. ಜಾಗತಿಕ ಬಿಕ್ಕಟ್ಟುಗಳು ಅತಿಕ್ರಮಿಸುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ನಿರೀಕ್ಷೆಯಿದೆ ಎಂದು ವರದಿ ಎಚ್ಚರಿಸಿದೆ.

ಭಾರತವು ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಕುಸಿದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷಗಳು, ಆಡಳಿತರೂಢ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. “8.5 ವರ್ಷಗಳಲ್ಲಿ ಭಾರತವನ್ನು ಈ ಕತ್ತಲೆಯ ಯುಗಕ್ಕೆ ತಂದಿರುವ ಈ ಅವಧಿಯ ಜವಾಬ್ದಾರಿಯನ್ನು ಸರಕಾರವೇ ಹೊರಬೇಕು” ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

“2014 ರಿಂದ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಅಪಾಯಕಾರಿಯಾಗಿ ತೀವ್ರ ಕುಸಿತ ಕಂಡಿದೆ. ಮೋದಿ ಸರ್ಕಾರವು ಭಾರತಕ್ಕೆ ವಿನಾಶಕಾರಿಯಾಗಿದೆ. ಕಡಿಮೆ ಆಹಾರ ದಾಸ್ತಾನುಗಳು, ಕನಿಷ್ಠ ಬಫರ್ ಜೊತೆಗೆ ಏರುತ್ತಿರುವ ಬೆಲೆಗಳು. 8.5 ವರ್ಷಗಳಲ್ಲಿ ಭಾರತವನ್ನು ಕತ್ತಲೆಯ ಯುಗಕ್ಕೆ ತಂದಿರುವ ಈ ಯುಗದ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು ಪ್ರಚಾರ, ತಿರುಚುವಿಕೆ ಮತ್ತು ಸುಳ್ಳುಗಳು ಸಾಕು” ಎಂದು ಯೆಚೂರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜಾಗತಿಕ ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತ ಹಿಂದೆಯಿರುವ ಭಾರತ

ಕಾಂಗ್ರೆಸ್ ನಾಯಕ ಪಿ ಚಿದಂಬರಂ, “ಗೌರವಾನ್ವಿತ ಪ್ರಧಾನಿಯವರು ಅಪೌಷ್ಟಿಕತೆ, ಹಸಿವು, ಮಕ್ಕಳ ಬೆಳವಣಿಗೆ ಕುಂಠಿತವಾಗುವುದು ಮತ್ತು ಪೌಷ್ಟಿಕಾಂಶದಂತಹ ನೈಜ ಸಮಸ್ಯೆಗಳನ್ನು ಯಾವಾಗ ಪರಿಹರಿಸುತ್ತಾರೆ? ಭಾರತದಲ್ಲಿ 22.4 ಕೋಟಿ ಜನರನ್ನು ಅಪೌಷ್ಟಿಕತೆ ಎಂದು ಪರಿಗಣಿಸಲಾಗಿದೆ” ಎಂದು ಹೇಳಿದ್ದಾರೆ.

“ಮೋದಿ ಸರ್ಕಾರದ 8 ವರ್ಷಗಳಲ್ಲಿ 2014 ರಿಂದ ಹಸಿವಿನ ಸೂಚ್ಯಂಕಗಳು ಹದಗೆಟ್ಟಿದೆ. ಒಟ್ಟು ಭಾರತೀಯರಲ್ಲಿ 16.3% ರಷ್ಟು ಜನರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಅಂದರೆ ಅವರಿಗೆ ಸಾಕಷ್ಟು ಆಹಾರವಿಲ್ಲ” ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...