Homeಮುಖಪುಟಜಾಗತಿಕ ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತ ಹಿಂದೆಯಿರುವ ಭಾರತ

ಜಾಗತಿಕ ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತ ಹಿಂದೆಯಿರುವ ಭಾರತ

116 ದೇಶಗಳ ಪಟ್ಟಿಯಲ್ಲಿ ಭಾರತ 101 ನೇ ಸ್ಥಾನದಲ್ಲಿದೆ

- Advertisement -
- Advertisement -

ಜಾಗತಿಕ ಹಸಿವು ಸೂಚ್ಯಂಕ (ಜಿಎಚ್‌ಐ)ದಲ್ಲಿ ಭಾರತವು ಕಳೆದ ವರ್ಷಕ್ಕಿಂತ ಈ ವರ್ಷ ಕುಸಿದಿದ್ದು, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನೇಪಾಳಕ್ಕಿಂತ ಕೆಳಗಿನ ಸ್ಥಾನಕ್ಕೆ ಕುಸಿದಿದೆ. 2020 ರಲ್ಲಿ ಭಾರತ 94 ನೇ ಸ್ಥಾನದಲ್ಲಿತ್ತು. ಆದರೆ 2021 ರಲ್ಲಿ 101 ನೇ ಸ್ಥಾನಕ್ಕೆ ದೇಶವು ಇಳಿದಿದೆ.

ಚೀನಾ, ಬ್ರೆಜಿಲ್ ಮತ್ತು ಕುವೈಟ್ ಸೇರಿದಂತೆ ಹದಿನೆಂಟು ದೇಶಗಳ ಜಾಗತಿಕ ಹಸಿವು ಸೂಚ್ಯಂಕದ ಸ್ಕೋರ್‌‌ ಐದಕ್ಕಿಂತ ಕಡಿಮೆ ಇದ್ದು, ಅಗ್ರ ಶ್ರೇಣಿಯಲ್ಲಿವೆ ಎಂದು ಹಸಿವು ಮತ್ತು ಅಪೌಷ್ಟಿಕತೆಯನ್ನು ಪತ್ತೆಹಚ್ಚುವ ಜಾಗತಿಕ ಹಸಿವು ಸೂಚ್ಯಂಕದ ವೆಬ್‌ಸೈಟ್ ಗುರುವಾರ ಹೇಳಿದೆ.

ಇದನ್ನೂ ಓದಿ: ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

ಐರಿಶ್ ನೆರವು ಸಂಸ್ಥೆಯಾದ ಕನ್ಸರ್ನ್ ವರ್ಲ್ಡ್ ವೈಡ್ ಮತ್ತು ಜರ್ಮನ್ ಸಂಸ್ಥೆಯಾದ ವೆಲ್ಟ್ ಹಂಗರ್ ಹಿಲ್ಫೆ ಜಂಟಿಯಾಗಿ ತಯಾರಿಸಿದ ವರದಿಯು ಭಾರತದಲ್ಲಿ ಹಸಿವಿನ ಮಟ್ಟವನ್ನು “ಆತಂಕಕಾರಿ” ಎಂದು ಎಚ್ಚರಿಸಿದೆ. 2020 ರಲ್ಲಿ, 107 ದೇಶಗಳಲ್ಲಿ ಭಾರತವು 94 ನೇ ಸ್ಥಾನದಲ್ಲಿತ್ತು. ಈಗ 116 ದೇಶಗಳು ಪಟ್ಟಿಯಲ್ಲಿದ್ದು, ದೇಶವು 101 ನೇ ಸ್ಥಾನಕ್ಕೆ ಕುಸಿದಿದೆ.

ಭಾರತದಲ್ಲಿ ಕೊರೊನಾ ಮತ್ತು ಸಾಂಕ್ರಾಮಿಕ ಸಂಬಂಧಿತ ನಿರ್ಬಂಧಗಳಿಂದ ಜನರು ತೀವ್ರವಾಗಿ ತೊಂದರೆಗೀಡಾಗಿದ್ದಾರೆ. ವಿಶ್ವದಲ್ಲೇ ಅತಿಹೆಚ್ಚು ಪ್ರಮಾಣದಲ್ಲಿ ಎತ್ತರಕ್ಕೆ ಸಮನಾದ ತೂಕವನ್ನು ಹೊಂದಿರದ ಮಕ್ಕಳು ಭಾರತದಲ್ಲಿದ್ದಾರೆ. 2016-2020ರ ನಡುವೆ ಎತ್ತರಕ್ಕೆ ಸರಿಯಾದ ತೂಕ ಹೊಂದಿರದ ಮಕ್ಕಳ ಪ್ರಮಾಣ ಶೇಕಡಾ 17.3 ಇದ್ದು, 1998-2002ರ ನಡುವೆ ಈ ಪ್ರಮಾಣ ಶೇಕಡಾ 17.1 ಇತ್ತು ಎಂದು ಜಿಎಚ್‌ಐ ವರದಿ ಹೇಳಿದೆ.

ನೆರೆಯ ರಾಷ್ಟ್ರಗಳಾದ ನೇಪಾಳ (76), ಬಾಂಗ್ಲಾದೇಶ (76), ಮ್ಯಾನ್ಮಾರ್ (71) ಮತ್ತು ಪಾಕಿಸ್ತಾನ (92) ಕೂಡ ‘ಆತಂಕಕಾರಿ’ ಹಸಿವಿನ ಹಂತದಲ್ಲಿವೆ. ಆದರೆ ಈ ದೇಶಗಳು ತನ್ನ ನಾಗರಿಕರಿಗೆ ಆಹಾರ ನೀಡುವಲ್ಲಿ ಭಾರತಕ್ಕಿಂತ ಉತ್ತಮ ಸಾಧನೆ ಮಾಡಿದೆ.

ಇದನ್ನೂ ಓದಿ: ಎಲ್ಲರ ಹಸಿವು ನೀಗಿಸಲು ನಮ್ಮ ಮುಂದಿವೆ ಹಲವು ದೇಶಗಳ ಮಾದರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...