Homeಮುಖಪುಟಜಾಗತಿಕ ಹೂಡಿಕೆದಾರರ ಸಮಾವೇಶ: ರಾಜ್ಯ ಸರ್ಕಾರದ ಹಸಿಹಸಿ ಸುಳ್ಳುಗಳು ಮತ್ತು ವಾಸ್ತವಗಳು- ಶಿವಸುಂದರ್‌ ವಿಶ್ಲೇಷಣೆ

ಜಾಗತಿಕ ಹೂಡಿಕೆದಾರರ ಸಮಾವೇಶ: ರಾಜ್ಯ ಸರ್ಕಾರದ ಹಸಿಹಸಿ ಸುಳ್ಳುಗಳು ಮತ್ತು ವಾಸ್ತವಗಳು- ಶಿವಸುಂದರ್‌ ವಿಶ್ಲೇಷಣೆ

ಕರ್ನಾಟಕ ಪಡೆದ ಹೂಡಿಕೆ ಭರವಸೆ 10 ಲಕ್ಷ ಕೋಟಿ ರೂ.ಗಳೋ? ಕೇವಲ 1.5 ಲಕ್ಷ ಕೋಟಿ ರೂ.ಗಳೋ?

- Advertisement -
- Advertisement -
  1. GIM- ಜಾಗತಿಕ ಹೂಡಿಕೆದಾರರ ಸಮ್ಮೇಳನದಿಂದ- ಕರ್ನಾಟಕ ಪಡೆದ ಹೂಡಿಕೆ ಭರವಸೆ 10 ಲಕ್ಷ ಕೋಟಿ ರೂ.ಗಳೋ? ಅಥವಾ ಕೇವಲ 1.5 ಲಕ್ಷ ಕೋಟಿ ರೂ.ಗಳೋ?
  2. GIMನಿಂದ ಸೃಷ್ಟಿಯಾಗುವ ಉದ್ಯೋಗಗಳು 6 ಲಕ್ಷವೋ? ಅಥವಾ ಕೆಲವೇ ಕೆಲ ಸಾವಿರವೋ? GIM ಭರವಸೆಗಳು ವಾಸ್ತವವಾಗಿ ಬದಲಾಗುವುದು ಶೇ. 80 ರಷ್ಟೋ ಅಥವಾ ಶೇ. 10ರಷ್ಟೊ?

ನಿನ್ನೆ ತಾನೇ ಮುಕ್ತಾಯವಾದ GIM (ಜಾಗತಿಕ ಹೂಡಿಕೆದಾರರ ಸಮ್ಮೇಳನ)ದಲ್ಲಿ ಹೂಡಿಕೆದಾರರು ಕರ್ನಾಟಕದಲ್ಲಿ 10 ಲಕ್ಷ ಕೋಟಿ ಹೂಡಿಕೆಯ ಭರವಸೆಯನ್ನು ನೀಡಿದ್ದಾರೆ ಎಂದು ಘೋಷಿಸಿಕೊಂಡಿದೆ. ಈ ಭರವಸೆಗಳಲ್ಲಿ ಶೇ. 80ರಷ್ಟು ವಾಸ್ತವವಾಗುತ್ತದೆ ಎಂದೂ ಇದರಿಂದಾಗಿ 5 ಲಕ್ಷ ಉದ್ಯೋಗಗಳ ಬದಲಿಗೆ 6 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿವೆ ಎಂದು ಬಿಜೆಪಿ ಹೇಳುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದನ್ನೇ ಕಿಂಚಿತ್ತೂ ಪರಿಶೀಲಿಸದೆ ಮಾಧ್ಯಮಗಳು ಪ್ರಕಟಿಸುತ್ತಿವೆ. ಆದರೆ ಅಂಕಿ ಸಂಖ್ಯೆಗಳನ್ನು ಮತ್ತು ಭಾರತ ಹಾಗೂ ಜಗತ್ತಿನಲ್ಲಿರುವ ಹೂಡಿಕೆಯ ವಾತಾವರಣವನ್ನು ಗಮನಿಸಿದರೆ ಅವೆಲ್ಲಾ ಎಷ್ಟು ಸುಳ್ಳು ಎಂಬುದು ಗೊತ್ತಾಗುತ್ತದೆ.

ಸುಳ್ಳು- 1

ಹೇಳಿಕೆ – GIMನಲ್ಲಿ ನೀಡಲಾಗಿರುವ ಹೂಡಿಕೆಯ ಭರವಸೆ 10 ಲಕ್ಷ ಕೋಟಿ ರೂ.

ವಾಸ್ತವ- GIMನಲ್ಲಿ ನೀಡಲಾಗಿರುವ ಹೂಡಿಕೆಯ ಭರವಸೆ ಕೇವಲ 1.5 ಲಕ್ಷ ಕೋಟಿ ರೂ.

ಮಂತ್ರಿ ಮುರುಗೇಶ್ ನಿರಾಣಿಯವರೇ ನೀಡಿರುವ ಹೇಳಿಕೆಯ ಪ್ರಕಾರ 10 ಲಕ್ಷ ಕೋಟಿ ಭರವಸೆ ಬಂದಿರುವುದು GIM -ಜಾಗತಿಕ ಹೂಡಿಕೆದಾರರ ಸಮ್ಮೇಳನದಿಂದ ಅಲ್ಲ.

ಬದಲಿಗೆ GIMಗೆ ಮುಂಚೆ ಈ ವರ್ಷದ ಜನವರಿಯಿಂದ GIMವರೆಗೆ ಹೂಡಿಕೆದಾರರು ಕರ್ನಾಟಕದಲ್ಲಿ ಹೂಡಿಕೆ ಮಾಡುವುದಾಗಿ ನೀಡಿರುವ ಭರವಸೆ 8,24,784 ಕೋಟಿ ರೂ.ಗಳು. GIM ಸಮ್ಮೇಳನದಲ್ಲಿ ನೀಡಲಾದ ಭರವಸೆ ಕೇವಲ 1,57,000 ಕೋಟಿ ರೂ.ಹಾಗೂ GIMನಲ್ಲಿ ಹೊಸದಾಗಿ ಎರಡೇ ಎರಡು ಹೊಸ ಭರವಸೆಗಳನ್ನು ಮಾತ್ರ ನೀಡಲಾಗಿದೆ.

ಹಳೆಯ ಹಾಗೂ ಹೊಸ ಭರವಸೆಗಳೆನ್ನೆಲ್ಲಾ ಒಟ್ಟು ಸೇರಿಸಿ ಬಿಜೆಪಿ ಸರ್ಕಾರ GIMನಿಂದ 9.81 ಲಕ್ಷ ಕೋಟಿ ರೂ. ಬಂಡವಾಳದ ಭರವಸೆ ಹರಿದು ಬಂದಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಿದೆ. ಮಾಧ್ಯಮಗಳು ಕಣ್ಣು ಮುಚ್ಚಿಕೊಂಡು ಅದನ್ನೇ ಪ್ರಕಟಿಸುತ್ತಿವೆ.

ಸರ್ಕಾರದ ಅಂಕಿಅಂಶಗಳ ವಿವರಗಳಿಗೆ ‘ದಿ ಹಿಂದೂ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಈ ಕೋಷ್ಟಕವನ್ನು ನೋಡಿ: (ಲಿಂಕ್‌ ‘ಕ್ಲಿಕ್’ ಮಾಡಿ)

ಆದರೆ ಬಿಜೆಪಿ ಸರ್ಕಾರ GIM ನಿಂದಲೇ 5 ಲಕ್ಷ ಕೋಟಿ ಹೆಚ್ಚುವರಿ ಬಂಡವಾಳ ನಿರೀಕ್ಷಿಸಿತ್ತು. ಅಂದರೆ ಅವರ ನಿರೀಕ್ಷೆಯ ಶೇ. 25 ರಷ್ಟು ಭರವಸೆಗಳು ಕೂಡ GIMನಿಂದ ಬಂದಿಲ್ಲ. ಹಾಗಿದ್ದಲ್ಲಿ ಇದೊಂದು ಯಶಸ್ವಿ ಸಮ್ಮೇಳನ ಎಂದು ಬಿಜೆಪಿ ಹೇಳುವುದು, ಅದನ್ನೇ ಮಾಧ್ಯಮಗಳು ಬರೆಯುವುದು ಎಷ್ಟು ಹಾಸ್ಯಾಸ್ಪದವಾಗಿದೆಯಲ್ಲವೇ?

ಸುಳ್ಳು-2

ಹೇಳಿಕೆ- GIMನಲ್ಲಿ ಹೂಡಿಕೆದಾರರು ನೀಡುವ ಭರವಸೆಗಳಲ್ಲಿ ಈ ಬಾರಿ ಶೇ. 80 conversion ಆಗಿ ವಾಸ್ತವಕ್ಕೆ ಬರಲಿದೆ.

ವಾಸ್ತವ: ಈ ಬಾರಿಯ GIMನಲ್ಲಿ ನೀಡಲಾದ ಭರವಸೆಗಳಲ್ಲಿ ಶೇ. 10 ರಷ್ಟು conversion ಆದರೆ ಹೆಚ್ಚು.

ಉದಾಹರಣೆಗೆ ಸರ್ಕಾರವೇ ನೀಡಿರುವ ಅಂಕಿಅಂಶಗಳ ಪ್ರಕಾರ:

– 2010ರಲ್ಲಿ ಯಡಿಯೂರಪ್ಪನವರ ಕಾಲದಲ್ಲಿ 3.94 ಲಕ್ಷ ಕೋಟಿಗೆ MoU ಆಯಿತೆಂದು ಬಿಜೆಪಿ ಕೊಚ್ಚಿಕೊಂಡರೂ ವಾಸ್ತವಕ್ಕೆ ಬಂದದ್ದು ಶೇ. 14 ಕ್ಕಿಂತ ಕಡಿಮೆ. ಅವೂ ಜಿಮ್‌ ಇಂದ ಬಂದವಲ್ಲ.

-2012ರಲ್ಲಿ ನಡೆದ GIMನಲ್ಲಿ 6.77 ಲಕ್ಷ ಕೋಟಿ MoUಗಳಾದರೂ ವಾಸ್ತವಕ್ಕೆ ಬಂದದ್ದು ಶೇ. 8ಕ್ಕಿಂತ ಕಡಿಮೆ

– 2016 ರಲ್ಲಿ 3.05 ಲಕ್ಷ ಕೋಟಿಗೆ MoU ಆದರೂ ವಾಸ್ತವಕ್ಕೆ ಬಂದದ್ದು ಶೇ. 15 ಕ್ಕಿಂತ ಕಡಿಮೆ.

GIMಗಳಲ್ಲಿ ಹೂಡಿಕೆದಾರರು ಘೋಷಣೆ ಮಾಡಿದ ಮೇಲೆ ಅದರ ಬಗ್ಗೆ ಸರ್ಕಾರ ಅವರ ಜೊತೆ MoU ಮಾಡಿಕೊಳ್ಳುವುದು ಮೊದಲನೇ ಹಂತ. ಅವುಗಳಿಗೆ ಸರ್ಕಾರದ ಉನ್ನತ ಸಮಿತಿಯು ಕಾನೂನಾತ್ಮಕ ಅನುಮೋದನೆ ಪಡೆಯುವುದು (Approval) ಎರಡನೇ ಹಂತ. ಇವೆರಡು ಹಂತ ದಾಟಲು 5-6 ತಿಂಗಳುಗಳು ಬೇಕು. ಆದರೂ ಇವೆರೆಡೂ ಸರ್ಕಾರಕ್ಕೆ, ಸುಳ್ಳು ಹೇಳುವವರಿಗೆ ಸುಲಭದ ಹಂತಗಳೇ. ಮೂರನೇ ಹಂತ ಜಮೀನು, ಸೈಟು, ರಿಯಾಯತಿ ಒಪ್ಪಂದ. ಅದಾದ ನಂತರ ನಾಲ್ಕನೇ ಹಂತ. ಅಲ್ಲಿ ಹಂತ ಹಂತದ ಹೂಡಿಕೆ, ನಿರ್ಮಾಣ ಮತ್ತು ಉತ್ಪಾದನೆ. ಈ ಕೊನೆ ಎರಡು ಹಂತಗಳ ತನಕ ಶೇ. 80 ರಷ್ಟು MoUಗಳು ಬರುವುದೇ ಇಲ್ಲ. ಏಕೆಂದರೆ, GIMನಲ್ಲಿ ಹೂಡಿಕೆ ಭರವಸೆ ನೀಡುವ ಬಂಡವಾಳಿಗರು ಹೂಡಿಕೆ ಮಾಡುವುದು ಅವರ ಲಾಭ ಖಾತರಿಯಾಗಿದ್ದರೆ ಮತ್ತು ಲಾಭದ ದರ ಹೆಚ್ಚಿದ್ದರೆ ಮಾತ್ರ. ಜಗತ್ತಿನ ಇತರೆಡೆಗಳಲ್ಲಿ ಇದಕ್ಕಿಂತ ಹೆಚ್ಚು ಲಾಭದ ಮತ್ತು ಕಾನೂನಿನ ತೊಡಕುಗಳು ಇಲ್ಲವಾದರೆ ಇಲ್ಲಿ ಹೂಡಿಕೆ ಮಾಡುವ ಭರವಸೆ ನೀಡಿದ್ದರೂ ಬೇರೆಡೆಗೆ ಹಾರುತ್ತವೆ.

ಅದಲ್ಲದೆ, ಇದೀಗ ಕೋವಿಡ್ ನಂತರದಲ್ಲಿ ಜಗತ್ತಿನಾದ್ಯಂತ ಆರ್ಥಿಕ ಹಿಂಜರಿತದ (Recession) ವಾತಾವರಣವಿದೆ. ದೇಶಿಯ ಮಾರುಕಟ್ಟೆಯಲ್ಲೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೇಡಿಕೆಯ ಕುಸಿತವಿದೆ. ಏಕೆಂದರೆ ಜನರಲ್ಲಿ ಕೊಳ್ಳುವ ಶಕ್ತಿಯಿಲ್ಲ.

IMF ನೀಡಿರುವ ಮುನ್ಸೂಚನೆಯ ಪ್ರಕಾರ ಇನ್ನು ಎರಡು ಮೂರು ವರ್ಷಗಳು ಭಾರತವನ್ನೂ ಒಳಗೊಂಡಂತೆ ಎಲ್ಲಾ ದೇಶಗಳಲ್ಲೂ ಬೇಡಿಕೆಯ ಕುಸಿತ ಮತ್ತು ಅದರಿಂದಾಗಿ ಆರ್ಥಿಕ ಅನಾರೋಗ್ಯವಿರುತ್ತದೆ. ಅರ್ಥಾತ್ ಹೂಡಿಕೆಯ ಮೇಲೆ ಲಾಭವು ಖಾತರಿಯಲ್ಲ.

ಹೀಗಾಗಿ ಕೇವಲ ಲಾಭದ ದುರಾಸೆ ಮಾತ್ರ ಇರುವ ಈ ಹೂಡಿಕೆದಾರರು ಎಲ್ಲಿಯೂ ಉತ್ಸಾಹದಿಂದ ಹೂಡಿಕೆ ಮಾಡುತ್ತಿಲ್ಲ. ಭಾರತದಲ್ಲಂತೂ ಮೊನ್ನೆ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಸರ್ಕಾರವು ಎಷ್ಟೆಲ್ಲಾ ಉತ್ತೇಜನ ನೀಡಿದರೂ (PLI- Production Linked Incentives)ನಮ್ಮ ದೇಶದ ಬಂಡವಾಳಿಗರು ಹೂಡಿಕೆ ಮಾಡುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ.

ಈ ನಿರುತ್ಸಾಹದ ಛಾಯೆ ಈ ಬಾರಿಯ GIM ಮೇಲೂ ಬಿದ್ದಿರುವುದು ಸ್ಪಷ್ಟ. ಏಕೆಂದರೆ ಕನಿಷ್ಠ ಪಕ್ಷ ಕಳೆದ GIMಗಳಲ್ಲಿ 3 ಲಕ್ಷ ಕೋಟಿ, 7 ಲಕ್ಷ ಕೋಟಿ ಮತ್ತು 4 ಲಕ್ಷ ಕೋಟಿ ರೂ.ಗಳಷ್ಟು ಭರವಸೆಯಾದರೂ ಬಂದಿದ್ದವು.

ಆದರೆ ಈ ಬಾರಿ ಭರವಸೆ ಬಂದಿರುವುದೇ ಅವುಗಳ ಕಾಲು ಭಾಗ- ಕೇವಲ 1.5 ಲಕ್ಷ ಕೋಟಿ ಮಾತ್ರ. ಇದು ಇಂದು ಜಗತ್ತಿನಲ್ಲಿರುವ Investors Confidence – ಹೂಡಿಕೆದಾರರ ವಿಶ್ವಾಸಕ್ಕೆ ಒಂದು ಸಂಕೇತವಾಗಿದ್ದಲ್ಲಿ, ಈ ಬಾರಿಯ GIMನ conversion ದರ ಕೂಡ ಹಿಂದಿನ GIMಗಳ ಕಾಲು ಭಾಗ ಅರ್ಥಾತ್ ಶೇ. 5 ಕ್ಕಿಂತ ಜಾಸ್ತಿ ಆಗಲಾರದು. ಅಂದರೆ ಹೆಚ್ಚೆಂದರೆ 5-10 ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆ! 1. 5 ಲಕ್ಷ ಕೋಟಿ ರೂ.ಗಳಲ್ಲ.

ಸುಳ್ಳು-3

ಹೇಳಿಕೆ – GIM ನಿಂದಾಗಿ 6 ಲಕ್ಷ ಉದ್ಯೋಗಳು ಸೃಷ್ಟಿಯಾಗುತ್ತದೆ.

ವಾಸ್ತವ: 6 ಲಕ್ಷವಿರಲಿ 6 ಸಾವಿರ ಉದ್ಯೋಗವೂ ಸೃಷ್ಟಿಯಾಗದು.

ಸರ್ಕಾರದ ಪ್ರಕಾರ, “GIM ನಿಂದಾಗಿ 5 ಲಕ್ಷ ಕೋಟಿ ಬಂಡವಾಳ ನಿರೀಕ್ಷೆ ಮಾಡಲಾಗಿತ್ತು. ಆದರೆ ಅದು ಈಗ 9.82 ಲಕ್ಷ ಕೋಟಿಯಾಗಿದೆ. ಆದ್ದರಿಂದ ಮೊದಲು ಅಂದುಕೊಂಡಂತೆ GIMನಿಂದ 5 ಲಕ್ಷ ಉದ್ಯೋಗಗಳ ಬದಲಿಗೆ 6 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ.”

ಆದರೆ ಈಗಾಗಲೇ ನೋಡಿದಂತೆ GIMನಲ್ಲಿ ಹೂಡಿಕೆಯ ಭರವಸೆ ಬಂದಿರುವುದು 9.82 ಲಕ್ಷ ಕೋಟಿಯಲ್ಲ. ಕೇವಲ 1. 5 ಲಕ್ಷ ಕೋಟಿ. ಹಾಗೂ ಆರ್ಥಿಕ ಹಿಂದ್ಸರಿತದಿಂದಾಗಿ ಅದರ Conversion ಶೇ. 5-10ನ್ನು ಮೀರುವುದು ಕಷ್ಟ. ಅಂದರೆ ಹೆಚ್ಚೆಂದರೆ 5-10 ಸಾವಿರ ಕೋಟಿ ಹೂಡಿಕೆ.

ಹೀಗಾಗಿ ಸರಳ ಗಣಿತದ ಪ್ರಕಾರವೂ ಉದ್ಯೋಗ ಸೃಷ್ಟಿಯಾಗುವುದು ಕೆಲವು ಸಾವಿರಗಳನ್ನು ಮೀರುವುದಿಲ್ಲ. ಆದರೆ ಈ ಹೂಡಿಕೆಗಳು ಕೂಡ ಕಾರ್ಮಿಕರನ್ನು ಹೆಚ್ಚಾಗಿ ಕೇಳದ ಕ್ಷೇತ್ರದಲ್ಲಿ ಹೂಡಿಕೆಯಾಗುತ್ತದೆ. ಸರ್ಕಾರವು ಈ ಉದ್ದೇಶಕ್ಕೆ 50,000 ಎಕರೆ ರೈತರ ಜಮೀನನ್ನು ಕಸಿಯುವುದಾಗಿ ಹೇಳಿದೆ. ಇವತ್ತು ಒಂದು ಎಕರೆ ಜಮೀನಿನ ಮೇಲೆ ಆರೆಂಟು ಜನರ ಜೀವನೋಪಾಯ ನಡೆಯುತ್ತದೆ ಎಂದು ಲೆಕ್ಕ ಹಿಡಿದರೂ…

ಇದನ್ನೂ ಓದಿರಿ: 7 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ: BJP 4, RJD, TRS, ಶಿವಸೇನೆ ತಲಾ ಒಂದು ಕ್ಷೇತ್ರಗಳಲ್ಲಿ ಮುನ್ನಡೆ

ಈ ಹೂಡಿಕೆಗಳು 2 ಲಕ್ಷಕ್ಕೂ ಹೆಚ್ಚು ರೈತಾಪಿಯ ಉದ್ಯೋಗ -ಜೀವನ ಕಸಿದು, ಕೆಲವು ಸಾವಿರ ಮೇಲ್ವರ್ಗದ ಸುಶಿಕ್ಷಿತ ತಂತ್ರಜ್ಞರಿಗೆ ಉದ್ಯೋಗ ಸೃಷ್ಟಿಸಬಹುದು. ಹೀಗಾಗಿ ಒಟ್ಟು ಲೆಕ್ಕದಲ್ಲಿ GIMಇಂದ ಉದ್ಯೋಗ ಸೃಷ್ಟಿಯಾಗುವುದಕ್ಕಿಂತ ನಷ್ಟವಾಗುವುದೇ ಹೆಚ್ಚು.

ಒಟ್ಟಾರೆಯಾಗಿ GIM ಎಂಬುದು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವುದಿಲ್ಲ. ಬದಲಿಗೆ ಚುನಾವಣೆಗೆ ಮುನ್ನ ಬಿಜೆಪಿಯು ಜನರಲ್ಲಿ ಪ್ರಗತಿ-ಅಭಿವೃದ್ಧಿಯ ಭ್ರಾಂತಿ ಮೂಡಿಸುತ್ತದೆ. ಆದ್ದರಿಂದ ಈ GIM ಎಂಬುದು ತನ್ನ ಭ್ರಷ್ಟಾಚಾರ ಹಾಗೂ ತಾನು ಮೂಡಿಸಿರುವ ಸಾಮಾಜಿಕ ಅಸ್ಥಿರತೆ, ಆರ್ಥಿಕ ದುಸ್ಥಿತಿ, ನಿರುದ್ಯೋಗ ಇತ್ಯಾದಿಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ಸರ್ಕಾರವು ನಡೆಸಿದ ಒಂದು ಚುನಾವಣಾ GIMMICK ಹೊರತು ಮತ್ತೇನು ಅಲ್ಲ ಎಂಬುದು ಸ್ಪಷ್ಟ, ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...