Homeಮುಖಪುಟಜಾಗತಿಕ ಹೂಡಿಕೆದಾರರ ಸಮಾವೇಶ: ರಾಜ್ಯ ಸರ್ಕಾರದ ಹಸಿಹಸಿ ಸುಳ್ಳುಗಳು ಮತ್ತು ವಾಸ್ತವಗಳು- ಶಿವಸುಂದರ್‌ ವಿಶ್ಲೇಷಣೆ

ಜಾಗತಿಕ ಹೂಡಿಕೆದಾರರ ಸಮಾವೇಶ: ರಾಜ್ಯ ಸರ್ಕಾರದ ಹಸಿಹಸಿ ಸುಳ್ಳುಗಳು ಮತ್ತು ವಾಸ್ತವಗಳು- ಶಿವಸುಂದರ್‌ ವಿಶ್ಲೇಷಣೆ

ಕರ್ನಾಟಕ ಪಡೆದ ಹೂಡಿಕೆ ಭರವಸೆ 10 ಲಕ್ಷ ಕೋಟಿ ರೂ.ಗಳೋ? ಕೇವಲ 1.5 ಲಕ್ಷ ಕೋಟಿ ರೂ.ಗಳೋ?

- Advertisement -
- Advertisement -
  1. GIM- ಜಾಗತಿಕ ಹೂಡಿಕೆದಾರರ ಸಮ್ಮೇಳನದಿಂದ- ಕರ್ನಾಟಕ ಪಡೆದ ಹೂಡಿಕೆ ಭರವಸೆ 10 ಲಕ್ಷ ಕೋಟಿ ರೂ.ಗಳೋ? ಅಥವಾ ಕೇವಲ 1.5 ಲಕ್ಷ ಕೋಟಿ ರೂ.ಗಳೋ?
  2. GIMನಿಂದ ಸೃಷ್ಟಿಯಾಗುವ ಉದ್ಯೋಗಗಳು 6 ಲಕ್ಷವೋ? ಅಥವಾ ಕೆಲವೇ ಕೆಲ ಸಾವಿರವೋ? GIM ಭರವಸೆಗಳು ವಾಸ್ತವವಾಗಿ ಬದಲಾಗುವುದು ಶೇ. 80 ರಷ್ಟೋ ಅಥವಾ ಶೇ. 10ರಷ್ಟೊ?

ನಿನ್ನೆ ತಾನೇ ಮುಕ್ತಾಯವಾದ GIM (ಜಾಗತಿಕ ಹೂಡಿಕೆದಾರರ ಸಮ್ಮೇಳನ)ದಲ್ಲಿ ಹೂಡಿಕೆದಾರರು ಕರ್ನಾಟಕದಲ್ಲಿ 10 ಲಕ್ಷ ಕೋಟಿ ಹೂಡಿಕೆಯ ಭರವಸೆಯನ್ನು ನೀಡಿದ್ದಾರೆ ಎಂದು ಘೋಷಿಸಿಕೊಂಡಿದೆ. ಈ ಭರವಸೆಗಳಲ್ಲಿ ಶೇ. 80ರಷ್ಟು ವಾಸ್ತವವಾಗುತ್ತದೆ ಎಂದೂ ಇದರಿಂದಾಗಿ 5 ಲಕ್ಷ ಉದ್ಯೋಗಗಳ ಬದಲಿಗೆ 6 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿವೆ ಎಂದು ಬಿಜೆಪಿ ಹೇಳುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದನ್ನೇ ಕಿಂಚಿತ್ತೂ ಪರಿಶೀಲಿಸದೆ ಮಾಧ್ಯಮಗಳು ಪ್ರಕಟಿಸುತ್ತಿವೆ. ಆದರೆ ಅಂಕಿ ಸಂಖ್ಯೆಗಳನ್ನು ಮತ್ತು ಭಾರತ ಹಾಗೂ ಜಗತ್ತಿನಲ್ಲಿರುವ ಹೂಡಿಕೆಯ ವಾತಾವರಣವನ್ನು ಗಮನಿಸಿದರೆ ಅವೆಲ್ಲಾ ಎಷ್ಟು ಸುಳ್ಳು ಎಂಬುದು ಗೊತ್ತಾಗುತ್ತದೆ.

ಸುಳ್ಳು- 1

ಹೇಳಿಕೆ – GIMನಲ್ಲಿ ನೀಡಲಾಗಿರುವ ಹೂಡಿಕೆಯ ಭರವಸೆ 10 ಲಕ್ಷ ಕೋಟಿ ರೂ.

ವಾಸ್ತವ- GIMನಲ್ಲಿ ನೀಡಲಾಗಿರುವ ಹೂಡಿಕೆಯ ಭರವಸೆ ಕೇವಲ 1.5 ಲಕ್ಷ ಕೋಟಿ ರೂ.

ಮಂತ್ರಿ ಮುರುಗೇಶ್ ನಿರಾಣಿಯವರೇ ನೀಡಿರುವ ಹೇಳಿಕೆಯ ಪ್ರಕಾರ 10 ಲಕ್ಷ ಕೋಟಿ ಭರವಸೆ ಬಂದಿರುವುದು GIM -ಜಾಗತಿಕ ಹೂಡಿಕೆದಾರರ ಸಮ್ಮೇಳನದಿಂದ ಅಲ್ಲ.

ಬದಲಿಗೆ GIMಗೆ ಮುಂಚೆ ಈ ವರ್ಷದ ಜನವರಿಯಿಂದ GIMವರೆಗೆ ಹೂಡಿಕೆದಾರರು ಕರ್ನಾಟಕದಲ್ಲಿ ಹೂಡಿಕೆ ಮಾಡುವುದಾಗಿ ನೀಡಿರುವ ಭರವಸೆ 8,24,784 ಕೋಟಿ ರೂ.ಗಳು. GIM ಸಮ್ಮೇಳನದಲ್ಲಿ ನೀಡಲಾದ ಭರವಸೆ ಕೇವಲ 1,57,000 ಕೋಟಿ ರೂ.ಹಾಗೂ GIMನಲ್ಲಿ ಹೊಸದಾಗಿ ಎರಡೇ ಎರಡು ಹೊಸ ಭರವಸೆಗಳನ್ನು ಮಾತ್ರ ನೀಡಲಾಗಿದೆ.

ಹಳೆಯ ಹಾಗೂ ಹೊಸ ಭರವಸೆಗಳೆನ್ನೆಲ್ಲಾ ಒಟ್ಟು ಸೇರಿಸಿ ಬಿಜೆಪಿ ಸರ್ಕಾರ GIMನಿಂದ 9.81 ಲಕ್ಷ ಕೋಟಿ ರೂ. ಬಂಡವಾಳದ ಭರವಸೆ ಹರಿದು ಬಂದಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಿದೆ. ಮಾಧ್ಯಮಗಳು ಕಣ್ಣು ಮುಚ್ಚಿಕೊಂಡು ಅದನ್ನೇ ಪ್ರಕಟಿಸುತ್ತಿವೆ.

ಸರ್ಕಾರದ ಅಂಕಿಅಂಶಗಳ ವಿವರಗಳಿಗೆ ‘ದಿ ಹಿಂದೂ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಈ ಕೋಷ್ಟಕವನ್ನು ನೋಡಿ: (ಲಿಂಕ್‌ ‘ಕ್ಲಿಕ್’ ಮಾಡಿ)

ಆದರೆ ಬಿಜೆಪಿ ಸರ್ಕಾರ GIM ನಿಂದಲೇ 5 ಲಕ್ಷ ಕೋಟಿ ಹೆಚ್ಚುವರಿ ಬಂಡವಾಳ ನಿರೀಕ್ಷಿಸಿತ್ತು. ಅಂದರೆ ಅವರ ನಿರೀಕ್ಷೆಯ ಶೇ. 25 ರಷ್ಟು ಭರವಸೆಗಳು ಕೂಡ GIMನಿಂದ ಬಂದಿಲ್ಲ. ಹಾಗಿದ್ದಲ್ಲಿ ಇದೊಂದು ಯಶಸ್ವಿ ಸಮ್ಮೇಳನ ಎಂದು ಬಿಜೆಪಿ ಹೇಳುವುದು, ಅದನ್ನೇ ಮಾಧ್ಯಮಗಳು ಬರೆಯುವುದು ಎಷ್ಟು ಹಾಸ್ಯಾಸ್ಪದವಾಗಿದೆಯಲ್ಲವೇ?

ಸುಳ್ಳು-2

ಹೇಳಿಕೆ- GIMನಲ್ಲಿ ಹೂಡಿಕೆದಾರರು ನೀಡುವ ಭರವಸೆಗಳಲ್ಲಿ ಈ ಬಾರಿ ಶೇ. 80 conversion ಆಗಿ ವಾಸ್ತವಕ್ಕೆ ಬರಲಿದೆ.

ವಾಸ್ತವ: ಈ ಬಾರಿಯ GIMನಲ್ಲಿ ನೀಡಲಾದ ಭರವಸೆಗಳಲ್ಲಿ ಶೇ. 10 ರಷ್ಟು conversion ಆದರೆ ಹೆಚ್ಚು.

ಉದಾಹರಣೆಗೆ ಸರ್ಕಾರವೇ ನೀಡಿರುವ ಅಂಕಿಅಂಶಗಳ ಪ್ರಕಾರ:

– 2010ರಲ್ಲಿ ಯಡಿಯೂರಪ್ಪನವರ ಕಾಲದಲ್ಲಿ 3.94 ಲಕ್ಷ ಕೋಟಿಗೆ MoU ಆಯಿತೆಂದು ಬಿಜೆಪಿ ಕೊಚ್ಚಿಕೊಂಡರೂ ವಾಸ್ತವಕ್ಕೆ ಬಂದದ್ದು ಶೇ. 14 ಕ್ಕಿಂತ ಕಡಿಮೆ. ಅವೂ ಜಿಮ್‌ ಇಂದ ಬಂದವಲ್ಲ.

-2012ರಲ್ಲಿ ನಡೆದ GIMನಲ್ಲಿ 6.77 ಲಕ್ಷ ಕೋಟಿ MoUಗಳಾದರೂ ವಾಸ್ತವಕ್ಕೆ ಬಂದದ್ದು ಶೇ. 8ಕ್ಕಿಂತ ಕಡಿಮೆ

– 2016 ರಲ್ಲಿ 3.05 ಲಕ್ಷ ಕೋಟಿಗೆ MoU ಆದರೂ ವಾಸ್ತವಕ್ಕೆ ಬಂದದ್ದು ಶೇ. 15 ಕ್ಕಿಂತ ಕಡಿಮೆ.

GIMಗಳಲ್ಲಿ ಹೂಡಿಕೆದಾರರು ಘೋಷಣೆ ಮಾಡಿದ ಮೇಲೆ ಅದರ ಬಗ್ಗೆ ಸರ್ಕಾರ ಅವರ ಜೊತೆ MoU ಮಾಡಿಕೊಳ್ಳುವುದು ಮೊದಲನೇ ಹಂತ. ಅವುಗಳಿಗೆ ಸರ್ಕಾರದ ಉನ್ನತ ಸಮಿತಿಯು ಕಾನೂನಾತ್ಮಕ ಅನುಮೋದನೆ ಪಡೆಯುವುದು (Approval) ಎರಡನೇ ಹಂತ. ಇವೆರಡು ಹಂತ ದಾಟಲು 5-6 ತಿಂಗಳುಗಳು ಬೇಕು. ಆದರೂ ಇವೆರೆಡೂ ಸರ್ಕಾರಕ್ಕೆ, ಸುಳ್ಳು ಹೇಳುವವರಿಗೆ ಸುಲಭದ ಹಂತಗಳೇ. ಮೂರನೇ ಹಂತ ಜಮೀನು, ಸೈಟು, ರಿಯಾಯತಿ ಒಪ್ಪಂದ. ಅದಾದ ನಂತರ ನಾಲ್ಕನೇ ಹಂತ. ಅಲ್ಲಿ ಹಂತ ಹಂತದ ಹೂಡಿಕೆ, ನಿರ್ಮಾಣ ಮತ್ತು ಉತ್ಪಾದನೆ. ಈ ಕೊನೆ ಎರಡು ಹಂತಗಳ ತನಕ ಶೇ. 80 ರಷ್ಟು MoUಗಳು ಬರುವುದೇ ಇಲ್ಲ. ಏಕೆಂದರೆ, GIMನಲ್ಲಿ ಹೂಡಿಕೆ ಭರವಸೆ ನೀಡುವ ಬಂಡವಾಳಿಗರು ಹೂಡಿಕೆ ಮಾಡುವುದು ಅವರ ಲಾಭ ಖಾತರಿಯಾಗಿದ್ದರೆ ಮತ್ತು ಲಾಭದ ದರ ಹೆಚ್ಚಿದ್ದರೆ ಮಾತ್ರ. ಜಗತ್ತಿನ ಇತರೆಡೆಗಳಲ್ಲಿ ಇದಕ್ಕಿಂತ ಹೆಚ್ಚು ಲಾಭದ ಮತ್ತು ಕಾನೂನಿನ ತೊಡಕುಗಳು ಇಲ್ಲವಾದರೆ ಇಲ್ಲಿ ಹೂಡಿಕೆ ಮಾಡುವ ಭರವಸೆ ನೀಡಿದ್ದರೂ ಬೇರೆಡೆಗೆ ಹಾರುತ್ತವೆ.

ಅದಲ್ಲದೆ, ಇದೀಗ ಕೋವಿಡ್ ನಂತರದಲ್ಲಿ ಜಗತ್ತಿನಾದ್ಯಂತ ಆರ್ಥಿಕ ಹಿಂಜರಿತದ (Recession) ವಾತಾವರಣವಿದೆ. ದೇಶಿಯ ಮಾರುಕಟ್ಟೆಯಲ್ಲೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೇಡಿಕೆಯ ಕುಸಿತವಿದೆ. ಏಕೆಂದರೆ ಜನರಲ್ಲಿ ಕೊಳ್ಳುವ ಶಕ್ತಿಯಿಲ್ಲ.

IMF ನೀಡಿರುವ ಮುನ್ಸೂಚನೆಯ ಪ್ರಕಾರ ಇನ್ನು ಎರಡು ಮೂರು ವರ್ಷಗಳು ಭಾರತವನ್ನೂ ಒಳಗೊಂಡಂತೆ ಎಲ್ಲಾ ದೇಶಗಳಲ್ಲೂ ಬೇಡಿಕೆಯ ಕುಸಿತ ಮತ್ತು ಅದರಿಂದಾಗಿ ಆರ್ಥಿಕ ಅನಾರೋಗ್ಯವಿರುತ್ತದೆ. ಅರ್ಥಾತ್ ಹೂಡಿಕೆಯ ಮೇಲೆ ಲಾಭವು ಖಾತರಿಯಲ್ಲ.

ಹೀಗಾಗಿ ಕೇವಲ ಲಾಭದ ದುರಾಸೆ ಮಾತ್ರ ಇರುವ ಈ ಹೂಡಿಕೆದಾರರು ಎಲ್ಲಿಯೂ ಉತ್ಸಾಹದಿಂದ ಹೂಡಿಕೆ ಮಾಡುತ್ತಿಲ್ಲ. ಭಾರತದಲ್ಲಂತೂ ಮೊನ್ನೆ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಸರ್ಕಾರವು ಎಷ್ಟೆಲ್ಲಾ ಉತ್ತೇಜನ ನೀಡಿದರೂ (PLI- Production Linked Incentives)ನಮ್ಮ ದೇಶದ ಬಂಡವಾಳಿಗರು ಹೂಡಿಕೆ ಮಾಡುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ.

ಈ ನಿರುತ್ಸಾಹದ ಛಾಯೆ ಈ ಬಾರಿಯ GIM ಮೇಲೂ ಬಿದ್ದಿರುವುದು ಸ್ಪಷ್ಟ. ಏಕೆಂದರೆ ಕನಿಷ್ಠ ಪಕ್ಷ ಕಳೆದ GIMಗಳಲ್ಲಿ 3 ಲಕ್ಷ ಕೋಟಿ, 7 ಲಕ್ಷ ಕೋಟಿ ಮತ್ತು 4 ಲಕ್ಷ ಕೋಟಿ ರೂ.ಗಳಷ್ಟು ಭರವಸೆಯಾದರೂ ಬಂದಿದ್ದವು.

ಆದರೆ ಈ ಬಾರಿ ಭರವಸೆ ಬಂದಿರುವುದೇ ಅವುಗಳ ಕಾಲು ಭಾಗ- ಕೇವಲ 1.5 ಲಕ್ಷ ಕೋಟಿ ಮಾತ್ರ. ಇದು ಇಂದು ಜಗತ್ತಿನಲ್ಲಿರುವ Investors Confidence – ಹೂಡಿಕೆದಾರರ ವಿಶ್ವಾಸಕ್ಕೆ ಒಂದು ಸಂಕೇತವಾಗಿದ್ದಲ್ಲಿ, ಈ ಬಾರಿಯ GIMನ conversion ದರ ಕೂಡ ಹಿಂದಿನ GIMಗಳ ಕಾಲು ಭಾಗ ಅರ್ಥಾತ್ ಶೇ. 5 ಕ್ಕಿಂತ ಜಾಸ್ತಿ ಆಗಲಾರದು. ಅಂದರೆ ಹೆಚ್ಚೆಂದರೆ 5-10 ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆ! 1. 5 ಲಕ್ಷ ಕೋಟಿ ರೂ.ಗಳಲ್ಲ.

ಸುಳ್ಳು-3

ಹೇಳಿಕೆ – GIM ನಿಂದಾಗಿ 6 ಲಕ್ಷ ಉದ್ಯೋಗಳು ಸೃಷ್ಟಿಯಾಗುತ್ತದೆ.

ವಾಸ್ತವ: 6 ಲಕ್ಷವಿರಲಿ 6 ಸಾವಿರ ಉದ್ಯೋಗವೂ ಸೃಷ್ಟಿಯಾಗದು.

ಸರ್ಕಾರದ ಪ್ರಕಾರ, “GIM ನಿಂದಾಗಿ 5 ಲಕ್ಷ ಕೋಟಿ ಬಂಡವಾಳ ನಿರೀಕ್ಷೆ ಮಾಡಲಾಗಿತ್ತು. ಆದರೆ ಅದು ಈಗ 9.82 ಲಕ್ಷ ಕೋಟಿಯಾಗಿದೆ. ಆದ್ದರಿಂದ ಮೊದಲು ಅಂದುಕೊಂಡಂತೆ GIMನಿಂದ 5 ಲಕ್ಷ ಉದ್ಯೋಗಗಳ ಬದಲಿಗೆ 6 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ.”

ಆದರೆ ಈಗಾಗಲೇ ನೋಡಿದಂತೆ GIMನಲ್ಲಿ ಹೂಡಿಕೆಯ ಭರವಸೆ ಬಂದಿರುವುದು 9.82 ಲಕ್ಷ ಕೋಟಿಯಲ್ಲ. ಕೇವಲ 1. 5 ಲಕ್ಷ ಕೋಟಿ. ಹಾಗೂ ಆರ್ಥಿಕ ಹಿಂದ್ಸರಿತದಿಂದಾಗಿ ಅದರ Conversion ಶೇ. 5-10ನ್ನು ಮೀರುವುದು ಕಷ್ಟ. ಅಂದರೆ ಹೆಚ್ಚೆಂದರೆ 5-10 ಸಾವಿರ ಕೋಟಿ ಹೂಡಿಕೆ.

ಹೀಗಾಗಿ ಸರಳ ಗಣಿತದ ಪ್ರಕಾರವೂ ಉದ್ಯೋಗ ಸೃಷ್ಟಿಯಾಗುವುದು ಕೆಲವು ಸಾವಿರಗಳನ್ನು ಮೀರುವುದಿಲ್ಲ. ಆದರೆ ಈ ಹೂಡಿಕೆಗಳು ಕೂಡ ಕಾರ್ಮಿಕರನ್ನು ಹೆಚ್ಚಾಗಿ ಕೇಳದ ಕ್ಷೇತ್ರದಲ್ಲಿ ಹೂಡಿಕೆಯಾಗುತ್ತದೆ. ಸರ್ಕಾರವು ಈ ಉದ್ದೇಶಕ್ಕೆ 50,000 ಎಕರೆ ರೈತರ ಜಮೀನನ್ನು ಕಸಿಯುವುದಾಗಿ ಹೇಳಿದೆ. ಇವತ್ತು ಒಂದು ಎಕರೆ ಜಮೀನಿನ ಮೇಲೆ ಆರೆಂಟು ಜನರ ಜೀವನೋಪಾಯ ನಡೆಯುತ್ತದೆ ಎಂದು ಲೆಕ್ಕ ಹಿಡಿದರೂ…

ಇದನ್ನೂ ಓದಿರಿ: 7 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ: BJP 4, RJD, TRS, ಶಿವಸೇನೆ ತಲಾ ಒಂದು ಕ್ಷೇತ್ರಗಳಲ್ಲಿ ಮುನ್ನಡೆ

ಈ ಹೂಡಿಕೆಗಳು 2 ಲಕ್ಷಕ್ಕೂ ಹೆಚ್ಚು ರೈತಾಪಿಯ ಉದ್ಯೋಗ -ಜೀವನ ಕಸಿದು, ಕೆಲವು ಸಾವಿರ ಮೇಲ್ವರ್ಗದ ಸುಶಿಕ್ಷಿತ ತಂತ್ರಜ್ಞರಿಗೆ ಉದ್ಯೋಗ ಸೃಷ್ಟಿಸಬಹುದು. ಹೀಗಾಗಿ ಒಟ್ಟು ಲೆಕ್ಕದಲ್ಲಿ GIMಇಂದ ಉದ್ಯೋಗ ಸೃಷ್ಟಿಯಾಗುವುದಕ್ಕಿಂತ ನಷ್ಟವಾಗುವುದೇ ಹೆಚ್ಚು.

ಒಟ್ಟಾರೆಯಾಗಿ GIM ಎಂಬುದು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವುದಿಲ್ಲ. ಬದಲಿಗೆ ಚುನಾವಣೆಗೆ ಮುನ್ನ ಬಿಜೆಪಿಯು ಜನರಲ್ಲಿ ಪ್ರಗತಿ-ಅಭಿವೃದ್ಧಿಯ ಭ್ರಾಂತಿ ಮೂಡಿಸುತ್ತದೆ. ಆದ್ದರಿಂದ ಈ GIM ಎಂಬುದು ತನ್ನ ಭ್ರಷ್ಟಾಚಾರ ಹಾಗೂ ತಾನು ಮೂಡಿಸಿರುವ ಸಾಮಾಜಿಕ ಅಸ್ಥಿರತೆ, ಆರ್ಥಿಕ ದುಸ್ಥಿತಿ, ನಿರುದ್ಯೋಗ ಇತ್ಯಾದಿಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ಸರ್ಕಾರವು ನಡೆಸಿದ ಒಂದು ಚುನಾವಣಾ GIMMICK ಹೊರತು ಮತ್ತೇನು ಅಲ್ಲ ಎಂಬುದು ಸ್ಪಷ್ಟ, ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...