Homeಮುಖಪುಟಜ್ಞಾನವಾಪಿ ಮಸೀದಿ ಪ್ರಕರಣ: ಪೂಜೆಯ ಹಕ್ಕಿಗಾಗಿ ಸಲ್ಲಿಸಿದ್ದ ‘ಅರ್ಜಿ ವಿಚಾರಣೆ’ಗೆ ಅಂಗೀಕರಿಸಿದ ನ್ಯಾಯಾಲಯ

ಜ್ಞಾನವಾಪಿ ಮಸೀದಿ ಪ್ರಕರಣ: ಪೂಜೆಯ ಹಕ್ಕಿಗಾಗಿ ಸಲ್ಲಿಸಿದ್ದ ‘ಅರ್ಜಿ ವಿಚಾರಣೆ’ಗೆ ಅಂಗೀಕರಿಸಿದ ನ್ಯಾಯಾಲಯ

- Advertisement -
- Advertisement -

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಹಿಂದೂ ದೇವತೆಗಳನ್ನು ಪೂಜಿಸಲು ಅನುಮತಿ ಕೋರಿ ಹಿಂದೂ ಮಹಿಳೆಯರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಸೋಮವಾರ ಹೇಳಿದ್ದು, ಮಹಿಳೆಯರ ಅರ್ಜಿಯನ್ನು ಪ್ರಶ್ನಿಸಿ ಅಂಜುಮಾನ್ ಸಮಿತಿಯ ಮನವಿಯನ್ನು ತಿರಸ್ಕರಿಸಿದೆ.

ಜ್ಞಾನವಾಪಿ ಮಸೀದಿ ವಿವಾದ ಪ್ರಕರಣದ ತೀರ್ಪು ನೀಡಿದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರ ಏಕ ಪೀಠವು ಈ ಪ್ರಕರಣವನ್ನು ನಿರ್ವಹಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಮಹಿಳೆಯರು ಜ್ಞಾನವಾಪಿ ಮಸೀದಿಯಲ್ಲಿ ವರ್ಷಪೂರ್ತಿ ಪ್ರವೇಶ ಮತ್ತು  ಪ್ರಾರ್ಥನೆ ಮಾಡಲು ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್‌‌ 22ರಂದು ಮಹಿಳೆಯರ ಅರ್ಜಿ ವಿಚಾರಣೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೀರ್ಪಿನ ಮೊದಲು, ಯಾವುದೇ ರೀತಿಯ ಹಿಂಸಾತ್ಮಕ ಪರಿಸ್ಥಿತಿಯನ್ನು ತಪ್ಪಿಸಲು ಮತ್ತು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ವಾರಣಾಸಿಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಮಸೀದಿಯ ಆಸ್ತಿಯು ವಕ್ಫ್ ಬೋರ್ಡ್‌ಗೆ ಸೇರಿದ್ದು, ಪ್ರಕರಣವನ್ನು ಆಲಿಸಬಾರದು ಎಂದು ಮಸೀದಿ ಸಮಿತಿಯು ವಾದಿಸಿತ್ತು. ಮಸೀದಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಆಲಿಸುವ ಹಕ್ಕು ವಕ್ಫ್ ಮಂಡಳಿಗೆ ಮಾತ್ರ ಇದೆ ಎಂದು ಮಸೀದಿ ಸಮಿತಿ ಹೇಳಿತ್ತು.

ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವ ಒಂದು ತಿಂಗಳ ಮೊದಲು, ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಹಿಂದೂ ದೇವತೆಗಳ ವಿಗ್ರಹಗಳಿವೆ ಎಂದು ಪ್ರತಿಪಾದಿಸುವ ಹಿಂದೂ ಮಹಿಳೆಯರ ಅರ್ಜಿಯ ಆಧಾರದ ಮೇಲೆ ವಾರಣಾಸಿ ಸಿವಿಲ್ ನ್ಯಾಯಾಲಯವು ಜ್ಞಾನವಾಪಿ ಮಸೀದಿಯ ಚಿತ್ರೀಕರಣಕ್ಕೆ ಆದೇಶಿಸಿತ್ತು.

ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಚಾರಣೆ ನಡೆಯುತ್ತಿದ್ದ ಕೆಳ ನ್ಯಾಯಾಲಯದಿಂದ ವಾರಣಾಸಿ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ವರ್ಗಾಯಿಸಿತು.

“ವಿಷಯದ ಸಂಕೀರ್ಣತೆ ಮತ್ತು ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು, ವಾರಣಾಸಿಯ ಸಿವಿಲ್ ನ್ಯಾಯಾಧೀಶರ ಮುಂದೆ ಸಿವಿಲ್ ಮೊಕದ್ದಮೆಯನ್ನು ಯುಪಿ ನ್ಯಾಯಾಂಗ ಸೇವೆಯ ಹಿರಿಯ ಮತ್ತು ಅನುಭವಿ ನ್ಯಾಯಾಂಗ ಅಧಿಕಾರಿಯ ಮುಂದೆ ವಿಚಾರಣೆ ನಡೆಸಬೇಕು” ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

ಮುಸ್ಲಿಮರು ಪ್ರಾರ್ಥನೆಯ ಮೊದಲು ‘ವುಜೂ’ (ಅಂಗಾಗ ಶುದ್ಧೀಕರಣ) ಆಚರಣೆಗಳಿಗೆ ಬಳಸಲಾಗುವ ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ‘ಶಿವಲಿಂಗ’ ಕಂಡುಬಂದಿದೆ ಎಂದು ಬಿಜೆಪಿ ಬೆಂಬಲಿತ ಸಂಘಟನೆಗಳು ಮತ್ತು ಮಾಧ್ಯಮಗಳು ಅಪಪ್ರಚಾರ ಮಾಡಿವೆ. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಕೊಳಕ್ಕೆ ಸೀಲ್‌ ಹಾಕುವಂತೆ ಆದೇಶಿಸಿದ್ದರು.

ಶತಮಾನಗಳಷ್ಟು ಹಳೆಯದಾದ ಮಸೀದಿಯೊಳಗಿನ ಈ ಚಿತ್ರೀಕರಣವನ್ನು ಜ್ಞಾನವಾಪಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. 1947 ಆಗಸ್ಟ್ 15ರಿಂದ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ಥಾನಮಾನವನ್ನು ಕಾಯ್ದುಕೊಳ್ಳುವ 1991 ರ ಪೂಜಾ ಸ್ಥಳಗಳ ಕಾಯಿದೆಗೆ ವಿರುದ್ಧವಾಗಿ ಚಿತ್ರೀಕರಣ ನಡೆಯುತ್ತಿದೆ ಎಂದು ಅರ್ಜಿದಾರರು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...