Homeಕರ್ನಾಟಕಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

ಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯಂತೆಯೇ ದಕ್ಷಿಣ ಕನ್ನಡದ ಮಳಲಿ ಮಸೀದಿ ಸಮೀಕ್ಷೆ ನಡೆಸುವಂತೆ ಕೋರಿ ಹಿಂದೂ ದಾವೆದಾರರು ಹೂಡಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳೂರು ನ್ಯಾಯಾಲಯ ಫೆಬ್ರವರಿ 17ಕ್ಕೆ ಮುಂದೂಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಮಸೀದಿ ವಕ್ಫ್‌ ಆಸ್ತಿ ಎಂಬುದಕ್ಕೆ ಸಂಬಂಧಿಸಿದ ದಾವೆ ಕರ್ನಾಟಕ ಹೈಕೋರ್ಟ್‌ನಲ್ಲಿದ್ದು, ಈ ಕುರಿತು ಯಾವುದೇ ಆದೇಶವನ್ನು ಹೈಕೋರ್ಟ್‌ ನೀಡಿಲ್ಲ. ಹೀಗಾಗಿ ಆದೇಶ ದೊರೆತ ನಂತರವಷ್ಟೇ ಮಸೀದಿಯ ಸಮೀಕ್ಷೆ ಕುರಿತಂತೆ ವಾದ ಮಂಡಿಸಲು ಸಾಧ್ಯ ಎಂದು ಮಳಲಿಪೇಟೆ ಜುಮ್ಮಾ ಮಸೀದಿಯನ್ನು ಪ್ರತಿನಿಧಿಸುತ್ತಿರುವ ವಕೀಲ ಎಂ ಪಿ ಶೆಣೈ ಅವರು ವಾದ ಮಂಡಿಸಿದರು.

ಈ ಹಿನ್ನೆಲೆಯಲ್ಲಿ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ ನಿಖಿತಾ ಅಕ್ಕಿ ಅವರು ಪ್ರಕರಣವನ್ನು ಮುಂದೂಡಿದ್ದಾರೆ ಎಂದು ವರದಿ ತಿಳಿಸಿದೆ.

ಹಿಂದೂ ಪಕ್ಷಕಾರರ ಪರ ವಾದ ಮಂಡಿಸಿದ ವಕೀಲ ಚಿದಾನಂದ ಎಂ ಕೆದಿಲಾಯ ಅವರು ಮಸೀದಿ ಸಮೀಕ್ಷೆ ನಡೆಸುವ ಸಂಬಂಧ ನ್ಯಾಯಾಲಯ ಅಡ್ವೊಕೇಟ್‌ ಕಮಿಷನರ್‌ ಅವರನ್ನು ನೇಮಿಸಬೇಕು ಎಂದು ಕೋರಿದ್ದಾರೆ. ಅಲ್ಲದೆ ಮಸೀದಿ ಇರುವ ಸ್ಥಳದ ಉತ್ಖನನ ಕಾರ್ಯ ನಡೆಯಬೇಕು. ಕೇವಲ ಮೌಖಿಕ ವಾದ ಸಾಲದು. ವರದಿ ದೊರೆತರಷ್ಟೇ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ದೈವಗಳ ಕುರುಹುಗಳಿವೆಯೇ ಎಂದು ನ್ಯಾಯಾಲಯಕ್ಕೆ ಮಾಹಿತಿ ತಿಳಿಯುತ್ತದೆ ಎಂದಿದ್ದಾರೆ.

ಜ್ಞಾನವಾಪಿಯಂತೆ ಮಳಲಿಪೇಟೆ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಡ್ವೋಕೇಟ್ ಕಮಿಷನರ್‌ ನೇಮಕ ಮಾಡುವಂತೆ ಹಿಂದೂಗಳ ಪರವಾಗಿ ಧನಂಜಯ್‌ ಹಾಗೂ ಇನ್ನಿತರರು ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ :

ಮಳಲಿ ಮಸೀದಿಯ ಹಳೆಯ ಕಟ್ಟಡ ಕೆಡವಿ ಹೊಸದಾಗಿ ನಿರ್ಮಿಸಲು 2022ರಲ್ಲಿ ಮಸೀದಿ ಸಮಿತಿ ಮುಂದಾಗಿತ್ತು. ದ್ರಾವಿಡ ಶೈಲಿಯ ಹಳೆಯ ಕಡ್ಡದ ಸುತ್ತಲು ಕೆಡವಿ ಮಧ್ಯದ ಭಾಗ ಹಾಗೆಯೇ ಬಿಟ್ಟಿತ್ತು. ಮಸೀದಿಯ ಮೇಲ್ಚಾವಣಿ ದೇಗುಲ ಶೈಲಿಯಲ್ಲಿರುವುದನ್ನು ಕಂಡ ಹಿಂದುತ್ವ ಸಂಘಟನೆ ಮುಖಂಡರು ಮಸೀದಿಯ ಒಳಗೆ ಶಿವನ ಸನ್ನಿಧಾನ ಇರುವುದರಿಂದ ದುರಸ್ತಿ ಕಾಮಗಾರಿ ಸ್ಥಗಿತಗೊಳಿಸಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಆದರೆ, ಮಳಲಿ ಮಸೀದಿ ವಕ್ಫ್‌ ಮಂಡಳಿಗೆ ಸೇರಿದ ಆಸ್ತಿಯಾಗಿದೆ ಎಂದು ಮಸೀದಿ ಸಮಿತಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ವಾದ ಆಲಿಸಿದ್ದ ಹೈಕೋರ್ಟ್‌, ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವೇ ವಿಚಾರಣೆ ನಡೆಸಬೇಕೆಂದು ಜ. 31ರಂದು ಸೂಚಿಸಿತ್ತು.

ಇದನ್ನೂ ಓದಿ : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಆರೋಪ: ಸಿಐಡಿ ತನಿಖೆಗೆ ಸಿಎಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...