Homeಕರ್ನಾಟಕಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

ಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯಂತೆಯೇ ದಕ್ಷಿಣ ಕನ್ನಡದ ಮಳಲಿ ಮಸೀದಿ ಸಮೀಕ್ಷೆ ನಡೆಸುವಂತೆ ಕೋರಿ ಹಿಂದೂ ದಾವೆದಾರರು ಹೂಡಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳೂರು ನ್ಯಾಯಾಲಯ ಫೆಬ್ರವರಿ 17ಕ್ಕೆ ಮುಂದೂಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಮಸೀದಿ ವಕ್ಫ್‌ ಆಸ್ತಿ ಎಂಬುದಕ್ಕೆ ಸಂಬಂಧಿಸಿದ ದಾವೆ ಕರ್ನಾಟಕ ಹೈಕೋರ್ಟ್‌ನಲ್ಲಿದ್ದು, ಈ ಕುರಿತು ಯಾವುದೇ ಆದೇಶವನ್ನು ಹೈಕೋರ್ಟ್‌ ನೀಡಿಲ್ಲ. ಹೀಗಾಗಿ ಆದೇಶ ದೊರೆತ ನಂತರವಷ್ಟೇ ಮಸೀದಿಯ ಸಮೀಕ್ಷೆ ಕುರಿತಂತೆ ವಾದ ಮಂಡಿಸಲು ಸಾಧ್ಯ ಎಂದು ಮಳಲಿಪೇಟೆ ಜುಮ್ಮಾ ಮಸೀದಿಯನ್ನು ಪ್ರತಿನಿಧಿಸುತ್ತಿರುವ ವಕೀಲ ಎಂ ಪಿ ಶೆಣೈ ಅವರು ವಾದ ಮಂಡಿಸಿದರು.

ಈ ಹಿನ್ನೆಲೆಯಲ್ಲಿ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ ನಿಖಿತಾ ಅಕ್ಕಿ ಅವರು ಪ್ರಕರಣವನ್ನು ಮುಂದೂಡಿದ್ದಾರೆ ಎಂದು ವರದಿ ತಿಳಿಸಿದೆ.

ಹಿಂದೂ ಪಕ್ಷಕಾರರ ಪರ ವಾದ ಮಂಡಿಸಿದ ವಕೀಲ ಚಿದಾನಂದ ಎಂ ಕೆದಿಲಾಯ ಅವರು ಮಸೀದಿ ಸಮೀಕ್ಷೆ ನಡೆಸುವ ಸಂಬಂಧ ನ್ಯಾಯಾಲಯ ಅಡ್ವೊಕೇಟ್‌ ಕಮಿಷನರ್‌ ಅವರನ್ನು ನೇಮಿಸಬೇಕು ಎಂದು ಕೋರಿದ್ದಾರೆ. ಅಲ್ಲದೆ ಮಸೀದಿ ಇರುವ ಸ್ಥಳದ ಉತ್ಖನನ ಕಾರ್ಯ ನಡೆಯಬೇಕು. ಕೇವಲ ಮೌಖಿಕ ವಾದ ಸಾಲದು. ವರದಿ ದೊರೆತರಷ್ಟೇ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ದೈವಗಳ ಕುರುಹುಗಳಿವೆಯೇ ಎಂದು ನ್ಯಾಯಾಲಯಕ್ಕೆ ಮಾಹಿತಿ ತಿಳಿಯುತ್ತದೆ ಎಂದಿದ್ದಾರೆ.

ಜ್ಞಾನವಾಪಿಯಂತೆ ಮಳಲಿಪೇಟೆ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಡ್ವೋಕೇಟ್ ಕಮಿಷನರ್‌ ನೇಮಕ ಮಾಡುವಂತೆ ಹಿಂದೂಗಳ ಪರವಾಗಿ ಧನಂಜಯ್‌ ಹಾಗೂ ಇನ್ನಿತರರು ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ :

ಮಳಲಿ ಮಸೀದಿಯ ಹಳೆಯ ಕಟ್ಟಡ ಕೆಡವಿ ಹೊಸದಾಗಿ ನಿರ್ಮಿಸಲು 2022ರಲ್ಲಿ ಮಸೀದಿ ಸಮಿತಿ ಮುಂದಾಗಿತ್ತು. ದ್ರಾವಿಡ ಶೈಲಿಯ ಹಳೆಯ ಕಡ್ಡದ ಸುತ್ತಲು ಕೆಡವಿ ಮಧ್ಯದ ಭಾಗ ಹಾಗೆಯೇ ಬಿಟ್ಟಿತ್ತು. ಮಸೀದಿಯ ಮೇಲ್ಚಾವಣಿ ದೇಗುಲ ಶೈಲಿಯಲ್ಲಿರುವುದನ್ನು ಕಂಡ ಹಿಂದುತ್ವ ಸಂಘಟನೆ ಮುಖಂಡರು ಮಸೀದಿಯ ಒಳಗೆ ಶಿವನ ಸನ್ನಿಧಾನ ಇರುವುದರಿಂದ ದುರಸ್ತಿ ಕಾಮಗಾರಿ ಸ್ಥಗಿತಗೊಳಿಸಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಆದರೆ, ಮಳಲಿ ಮಸೀದಿ ವಕ್ಫ್‌ ಮಂಡಳಿಗೆ ಸೇರಿದ ಆಸ್ತಿಯಾಗಿದೆ ಎಂದು ಮಸೀದಿ ಸಮಿತಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ವಾದ ಆಲಿಸಿದ್ದ ಹೈಕೋರ್ಟ್‌, ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವೇ ವಿಚಾರಣೆ ನಡೆಸಬೇಕೆಂದು ಜ. 31ರಂದು ಸೂಚಿಸಿತ್ತು.

ಇದನ್ನೂ ಓದಿ : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಆರೋಪ: ಸಿಐಡಿ ತನಿಖೆಗೆ ಸಿಎಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...