Homeಕರ್ನಾಟಕಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

ಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯಂತೆಯೇ ದಕ್ಷಿಣ ಕನ್ನಡದ ಮಳಲಿ ಮಸೀದಿ ಸಮೀಕ್ಷೆ ನಡೆಸುವಂತೆ ಕೋರಿ ಹಿಂದೂ ದಾವೆದಾರರು ಹೂಡಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳೂರು ನ್ಯಾಯಾಲಯ ಫೆಬ್ರವರಿ 17ಕ್ಕೆ ಮುಂದೂಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಮಸೀದಿ ವಕ್ಫ್‌ ಆಸ್ತಿ ಎಂಬುದಕ್ಕೆ ಸಂಬಂಧಿಸಿದ ದಾವೆ ಕರ್ನಾಟಕ ಹೈಕೋರ್ಟ್‌ನಲ್ಲಿದ್ದು, ಈ ಕುರಿತು ಯಾವುದೇ ಆದೇಶವನ್ನು ಹೈಕೋರ್ಟ್‌ ನೀಡಿಲ್ಲ. ಹೀಗಾಗಿ ಆದೇಶ ದೊರೆತ ನಂತರವಷ್ಟೇ ಮಸೀದಿಯ ಸಮೀಕ್ಷೆ ಕುರಿತಂತೆ ವಾದ ಮಂಡಿಸಲು ಸಾಧ್ಯ ಎಂದು ಮಳಲಿಪೇಟೆ ಜುಮ್ಮಾ ಮಸೀದಿಯನ್ನು ಪ್ರತಿನಿಧಿಸುತ್ತಿರುವ ವಕೀಲ ಎಂ ಪಿ ಶೆಣೈ ಅವರು ವಾದ ಮಂಡಿಸಿದರು.

ಈ ಹಿನ್ನೆಲೆಯಲ್ಲಿ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ ನಿಖಿತಾ ಅಕ್ಕಿ ಅವರು ಪ್ರಕರಣವನ್ನು ಮುಂದೂಡಿದ್ದಾರೆ ಎಂದು ವರದಿ ತಿಳಿಸಿದೆ.

ಹಿಂದೂ ಪಕ್ಷಕಾರರ ಪರ ವಾದ ಮಂಡಿಸಿದ ವಕೀಲ ಚಿದಾನಂದ ಎಂ ಕೆದಿಲಾಯ ಅವರು ಮಸೀದಿ ಸಮೀಕ್ಷೆ ನಡೆಸುವ ಸಂಬಂಧ ನ್ಯಾಯಾಲಯ ಅಡ್ವೊಕೇಟ್‌ ಕಮಿಷನರ್‌ ಅವರನ್ನು ನೇಮಿಸಬೇಕು ಎಂದು ಕೋರಿದ್ದಾರೆ. ಅಲ್ಲದೆ ಮಸೀದಿ ಇರುವ ಸ್ಥಳದ ಉತ್ಖನನ ಕಾರ್ಯ ನಡೆಯಬೇಕು. ಕೇವಲ ಮೌಖಿಕ ವಾದ ಸಾಲದು. ವರದಿ ದೊರೆತರಷ್ಟೇ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ದೈವಗಳ ಕುರುಹುಗಳಿವೆಯೇ ಎಂದು ನ್ಯಾಯಾಲಯಕ್ಕೆ ಮಾಹಿತಿ ತಿಳಿಯುತ್ತದೆ ಎಂದಿದ್ದಾರೆ.

ಜ್ಞಾನವಾಪಿಯಂತೆ ಮಳಲಿಪೇಟೆ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಡ್ವೋಕೇಟ್ ಕಮಿಷನರ್‌ ನೇಮಕ ಮಾಡುವಂತೆ ಹಿಂದೂಗಳ ಪರವಾಗಿ ಧನಂಜಯ್‌ ಹಾಗೂ ಇನ್ನಿತರರು ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ :

ಮಳಲಿ ಮಸೀದಿಯ ಹಳೆಯ ಕಟ್ಟಡ ಕೆಡವಿ ಹೊಸದಾಗಿ ನಿರ್ಮಿಸಲು 2022ರಲ್ಲಿ ಮಸೀದಿ ಸಮಿತಿ ಮುಂದಾಗಿತ್ತು. ದ್ರಾವಿಡ ಶೈಲಿಯ ಹಳೆಯ ಕಡ್ಡದ ಸುತ್ತಲು ಕೆಡವಿ ಮಧ್ಯದ ಭಾಗ ಹಾಗೆಯೇ ಬಿಟ್ಟಿತ್ತು. ಮಸೀದಿಯ ಮೇಲ್ಚಾವಣಿ ದೇಗುಲ ಶೈಲಿಯಲ್ಲಿರುವುದನ್ನು ಕಂಡ ಹಿಂದುತ್ವ ಸಂಘಟನೆ ಮುಖಂಡರು ಮಸೀದಿಯ ಒಳಗೆ ಶಿವನ ಸನ್ನಿಧಾನ ಇರುವುದರಿಂದ ದುರಸ್ತಿ ಕಾಮಗಾರಿ ಸ್ಥಗಿತಗೊಳಿಸಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಆದರೆ, ಮಳಲಿ ಮಸೀದಿ ವಕ್ಫ್‌ ಮಂಡಳಿಗೆ ಸೇರಿದ ಆಸ್ತಿಯಾಗಿದೆ ಎಂದು ಮಸೀದಿ ಸಮಿತಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ವಾದ ಆಲಿಸಿದ್ದ ಹೈಕೋರ್ಟ್‌, ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವೇ ವಿಚಾರಣೆ ನಡೆಸಬೇಕೆಂದು ಜ. 31ರಂದು ಸೂಚಿಸಿತ್ತು.

ಇದನ್ನೂ ಓದಿ : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಆರೋಪ: ಸಿಐಡಿ ತನಿಖೆಗೆ ಸಿಎಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...