Homeಕರ್ನಾಟಕಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

ಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯಂತೆಯೇ ದಕ್ಷಿಣ ಕನ್ನಡದ ಮಳಲಿ ಮಸೀದಿ ಸಮೀಕ್ಷೆ ನಡೆಸುವಂತೆ ಕೋರಿ ಹಿಂದೂ ದಾವೆದಾರರು ಹೂಡಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳೂರು ನ್ಯಾಯಾಲಯ ಫೆಬ್ರವರಿ 17ಕ್ಕೆ ಮುಂದೂಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಮಸೀದಿ ವಕ್ಫ್‌ ಆಸ್ತಿ ಎಂಬುದಕ್ಕೆ ಸಂಬಂಧಿಸಿದ ದಾವೆ ಕರ್ನಾಟಕ ಹೈಕೋರ್ಟ್‌ನಲ್ಲಿದ್ದು, ಈ ಕುರಿತು ಯಾವುದೇ ಆದೇಶವನ್ನು ಹೈಕೋರ್ಟ್‌ ನೀಡಿಲ್ಲ. ಹೀಗಾಗಿ ಆದೇಶ ದೊರೆತ ನಂತರವಷ್ಟೇ ಮಸೀದಿಯ ಸಮೀಕ್ಷೆ ಕುರಿತಂತೆ ವಾದ ಮಂಡಿಸಲು ಸಾಧ್ಯ ಎಂದು ಮಳಲಿಪೇಟೆ ಜುಮ್ಮಾ ಮಸೀದಿಯನ್ನು ಪ್ರತಿನಿಧಿಸುತ್ತಿರುವ ವಕೀಲ ಎಂ ಪಿ ಶೆಣೈ ಅವರು ವಾದ ಮಂಡಿಸಿದರು.

ಈ ಹಿನ್ನೆಲೆಯಲ್ಲಿ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ ನಿಖಿತಾ ಅಕ್ಕಿ ಅವರು ಪ್ರಕರಣವನ್ನು ಮುಂದೂಡಿದ್ದಾರೆ ಎಂದು ವರದಿ ತಿಳಿಸಿದೆ.

ಹಿಂದೂ ಪಕ್ಷಕಾರರ ಪರ ವಾದ ಮಂಡಿಸಿದ ವಕೀಲ ಚಿದಾನಂದ ಎಂ ಕೆದಿಲಾಯ ಅವರು ಮಸೀದಿ ಸಮೀಕ್ಷೆ ನಡೆಸುವ ಸಂಬಂಧ ನ್ಯಾಯಾಲಯ ಅಡ್ವೊಕೇಟ್‌ ಕಮಿಷನರ್‌ ಅವರನ್ನು ನೇಮಿಸಬೇಕು ಎಂದು ಕೋರಿದ್ದಾರೆ. ಅಲ್ಲದೆ ಮಸೀದಿ ಇರುವ ಸ್ಥಳದ ಉತ್ಖನನ ಕಾರ್ಯ ನಡೆಯಬೇಕು. ಕೇವಲ ಮೌಖಿಕ ವಾದ ಸಾಲದು. ವರದಿ ದೊರೆತರಷ್ಟೇ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ದೈವಗಳ ಕುರುಹುಗಳಿವೆಯೇ ಎಂದು ನ್ಯಾಯಾಲಯಕ್ಕೆ ಮಾಹಿತಿ ತಿಳಿಯುತ್ತದೆ ಎಂದಿದ್ದಾರೆ.

ಜ್ಞಾನವಾಪಿಯಂತೆ ಮಳಲಿಪೇಟೆ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಡ್ವೋಕೇಟ್ ಕಮಿಷನರ್‌ ನೇಮಕ ಮಾಡುವಂತೆ ಹಿಂದೂಗಳ ಪರವಾಗಿ ಧನಂಜಯ್‌ ಹಾಗೂ ಇನ್ನಿತರರು ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ :

ಮಳಲಿ ಮಸೀದಿಯ ಹಳೆಯ ಕಟ್ಟಡ ಕೆಡವಿ ಹೊಸದಾಗಿ ನಿರ್ಮಿಸಲು 2022ರಲ್ಲಿ ಮಸೀದಿ ಸಮಿತಿ ಮುಂದಾಗಿತ್ತು. ದ್ರಾವಿಡ ಶೈಲಿಯ ಹಳೆಯ ಕಡ್ಡದ ಸುತ್ತಲು ಕೆಡವಿ ಮಧ್ಯದ ಭಾಗ ಹಾಗೆಯೇ ಬಿಟ್ಟಿತ್ತು. ಮಸೀದಿಯ ಮೇಲ್ಚಾವಣಿ ದೇಗುಲ ಶೈಲಿಯಲ್ಲಿರುವುದನ್ನು ಕಂಡ ಹಿಂದುತ್ವ ಸಂಘಟನೆ ಮುಖಂಡರು ಮಸೀದಿಯ ಒಳಗೆ ಶಿವನ ಸನ್ನಿಧಾನ ಇರುವುದರಿಂದ ದುರಸ್ತಿ ಕಾಮಗಾರಿ ಸ್ಥಗಿತಗೊಳಿಸಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಆದರೆ, ಮಳಲಿ ಮಸೀದಿ ವಕ್ಫ್‌ ಮಂಡಳಿಗೆ ಸೇರಿದ ಆಸ್ತಿಯಾಗಿದೆ ಎಂದು ಮಸೀದಿ ಸಮಿತಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ವಾದ ಆಲಿಸಿದ್ದ ಹೈಕೋರ್ಟ್‌, ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವೇ ವಿಚಾರಣೆ ನಡೆಸಬೇಕೆಂದು ಜ. 31ರಂದು ಸೂಚಿಸಿತ್ತು.

ಇದನ್ನೂ ಓದಿ : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಆರೋಪ: ಸಿಐಡಿ ತನಿಖೆಗೆ ಸಿಎಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...

ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...