Homeಕರ್ನಾಟಕಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

ಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯಂತೆಯೇ ದಕ್ಷಿಣ ಕನ್ನಡದ ಮಳಲಿ ಮಸೀದಿ ಸಮೀಕ್ಷೆ ನಡೆಸುವಂತೆ ಕೋರಿ ಹಿಂದೂ ದಾವೆದಾರರು ಹೂಡಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳೂರು ನ್ಯಾಯಾಲಯ ಫೆಬ್ರವರಿ 17ಕ್ಕೆ ಮುಂದೂಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಮಸೀದಿ ವಕ್ಫ್‌ ಆಸ್ತಿ ಎಂಬುದಕ್ಕೆ ಸಂಬಂಧಿಸಿದ ದಾವೆ ಕರ್ನಾಟಕ ಹೈಕೋರ್ಟ್‌ನಲ್ಲಿದ್ದು, ಈ ಕುರಿತು ಯಾವುದೇ ಆದೇಶವನ್ನು ಹೈಕೋರ್ಟ್‌ ನೀಡಿಲ್ಲ. ಹೀಗಾಗಿ ಆದೇಶ ದೊರೆತ ನಂತರವಷ್ಟೇ ಮಸೀದಿಯ ಸಮೀಕ್ಷೆ ಕುರಿತಂತೆ ವಾದ ಮಂಡಿಸಲು ಸಾಧ್ಯ ಎಂದು ಮಳಲಿಪೇಟೆ ಜುಮ್ಮಾ ಮಸೀದಿಯನ್ನು ಪ್ರತಿನಿಧಿಸುತ್ತಿರುವ ವಕೀಲ ಎಂ ಪಿ ಶೆಣೈ ಅವರು ವಾದ ಮಂಡಿಸಿದರು.

ಈ ಹಿನ್ನೆಲೆಯಲ್ಲಿ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ ನಿಖಿತಾ ಅಕ್ಕಿ ಅವರು ಪ್ರಕರಣವನ್ನು ಮುಂದೂಡಿದ್ದಾರೆ ಎಂದು ವರದಿ ತಿಳಿಸಿದೆ.

ಹಿಂದೂ ಪಕ್ಷಕಾರರ ಪರ ವಾದ ಮಂಡಿಸಿದ ವಕೀಲ ಚಿದಾನಂದ ಎಂ ಕೆದಿಲಾಯ ಅವರು ಮಸೀದಿ ಸಮೀಕ್ಷೆ ನಡೆಸುವ ಸಂಬಂಧ ನ್ಯಾಯಾಲಯ ಅಡ್ವೊಕೇಟ್‌ ಕಮಿಷನರ್‌ ಅವರನ್ನು ನೇಮಿಸಬೇಕು ಎಂದು ಕೋರಿದ್ದಾರೆ. ಅಲ್ಲದೆ ಮಸೀದಿ ಇರುವ ಸ್ಥಳದ ಉತ್ಖನನ ಕಾರ್ಯ ನಡೆಯಬೇಕು. ಕೇವಲ ಮೌಖಿಕ ವಾದ ಸಾಲದು. ವರದಿ ದೊರೆತರಷ್ಟೇ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ದೈವಗಳ ಕುರುಹುಗಳಿವೆಯೇ ಎಂದು ನ್ಯಾಯಾಲಯಕ್ಕೆ ಮಾಹಿತಿ ತಿಳಿಯುತ್ತದೆ ಎಂದಿದ್ದಾರೆ.

ಜ್ಞಾನವಾಪಿಯಂತೆ ಮಳಲಿಪೇಟೆ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಡ್ವೋಕೇಟ್ ಕಮಿಷನರ್‌ ನೇಮಕ ಮಾಡುವಂತೆ ಹಿಂದೂಗಳ ಪರವಾಗಿ ಧನಂಜಯ್‌ ಹಾಗೂ ಇನ್ನಿತರರು ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ :

ಮಳಲಿ ಮಸೀದಿಯ ಹಳೆಯ ಕಟ್ಟಡ ಕೆಡವಿ ಹೊಸದಾಗಿ ನಿರ್ಮಿಸಲು 2022ರಲ್ಲಿ ಮಸೀದಿ ಸಮಿತಿ ಮುಂದಾಗಿತ್ತು. ದ್ರಾವಿಡ ಶೈಲಿಯ ಹಳೆಯ ಕಡ್ಡದ ಸುತ್ತಲು ಕೆಡವಿ ಮಧ್ಯದ ಭಾಗ ಹಾಗೆಯೇ ಬಿಟ್ಟಿತ್ತು. ಮಸೀದಿಯ ಮೇಲ್ಚಾವಣಿ ದೇಗುಲ ಶೈಲಿಯಲ್ಲಿರುವುದನ್ನು ಕಂಡ ಹಿಂದುತ್ವ ಸಂಘಟನೆ ಮುಖಂಡರು ಮಸೀದಿಯ ಒಳಗೆ ಶಿವನ ಸನ್ನಿಧಾನ ಇರುವುದರಿಂದ ದುರಸ್ತಿ ಕಾಮಗಾರಿ ಸ್ಥಗಿತಗೊಳಿಸಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಆದರೆ, ಮಳಲಿ ಮಸೀದಿ ವಕ್ಫ್‌ ಮಂಡಳಿಗೆ ಸೇರಿದ ಆಸ್ತಿಯಾಗಿದೆ ಎಂದು ಮಸೀದಿ ಸಮಿತಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ವಾದ ಆಲಿಸಿದ್ದ ಹೈಕೋರ್ಟ್‌, ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವೇ ವಿಚಾರಣೆ ನಡೆಸಬೇಕೆಂದು ಜ. 31ರಂದು ಸೂಚಿಸಿತ್ತು.

ಇದನ್ನೂ ಓದಿ : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಆರೋಪ: ಸಿಐಡಿ ತನಿಖೆಗೆ ಸಿಎಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...

ಕರ್ನಾಟಕ ಎಸ್‌ಐಆರ್: ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಬೆಂಗಳೂರು ನಗರದಲ್ಲೇ ಭಾರೀ ಬೇಡಿಕೆ: ಕಂದಾಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಡುವೆಯೇ, ಕಂದಾಯ ಇಲಾಖೆಗೆ ಸಲ್ಲಿಕೆಯಾಗುತ್ತಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅರ್ಜಿಗಳ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆಯು...

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....