Homeಕರ್ನಾಟಕಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

ಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯಂತೆಯೇ ದಕ್ಷಿಣ ಕನ್ನಡದ ಮಳಲಿ ಮಸೀದಿ ಸಮೀಕ್ಷೆ ನಡೆಸುವಂತೆ ಕೋರಿ ಹಿಂದೂ ದಾವೆದಾರರು ಹೂಡಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳೂರು ನ್ಯಾಯಾಲಯ ಫೆಬ್ರವರಿ 17ಕ್ಕೆ ಮುಂದೂಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಮಸೀದಿ ವಕ್ಫ್‌ ಆಸ್ತಿ ಎಂಬುದಕ್ಕೆ ಸಂಬಂಧಿಸಿದ ದಾವೆ ಕರ್ನಾಟಕ ಹೈಕೋರ್ಟ್‌ನಲ್ಲಿದ್ದು, ಈ ಕುರಿತು ಯಾವುದೇ ಆದೇಶವನ್ನು ಹೈಕೋರ್ಟ್‌ ನೀಡಿಲ್ಲ. ಹೀಗಾಗಿ ಆದೇಶ ದೊರೆತ ನಂತರವಷ್ಟೇ ಮಸೀದಿಯ ಸಮೀಕ್ಷೆ ಕುರಿತಂತೆ ವಾದ ಮಂಡಿಸಲು ಸಾಧ್ಯ ಎಂದು ಮಳಲಿಪೇಟೆ ಜುಮ್ಮಾ ಮಸೀದಿಯನ್ನು ಪ್ರತಿನಿಧಿಸುತ್ತಿರುವ ವಕೀಲ ಎಂ ಪಿ ಶೆಣೈ ಅವರು ವಾದ ಮಂಡಿಸಿದರು.

ಈ ಹಿನ್ನೆಲೆಯಲ್ಲಿ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ ನಿಖಿತಾ ಅಕ್ಕಿ ಅವರು ಪ್ರಕರಣವನ್ನು ಮುಂದೂಡಿದ್ದಾರೆ ಎಂದು ವರದಿ ತಿಳಿಸಿದೆ.

ಹಿಂದೂ ಪಕ್ಷಕಾರರ ಪರ ವಾದ ಮಂಡಿಸಿದ ವಕೀಲ ಚಿದಾನಂದ ಎಂ ಕೆದಿಲಾಯ ಅವರು ಮಸೀದಿ ಸಮೀಕ್ಷೆ ನಡೆಸುವ ಸಂಬಂಧ ನ್ಯಾಯಾಲಯ ಅಡ್ವೊಕೇಟ್‌ ಕಮಿಷನರ್‌ ಅವರನ್ನು ನೇಮಿಸಬೇಕು ಎಂದು ಕೋರಿದ್ದಾರೆ. ಅಲ್ಲದೆ ಮಸೀದಿ ಇರುವ ಸ್ಥಳದ ಉತ್ಖನನ ಕಾರ್ಯ ನಡೆಯಬೇಕು. ಕೇವಲ ಮೌಖಿಕ ವಾದ ಸಾಲದು. ವರದಿ ದೊರೆತರಷ್ಟೇ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ದೈವಗಳ ಕುರುಹುಗಳಿವೆಯೇ ಎಂದು ನ್ಯಾಯಾಲಯಕ್ಕೆ ಮಾಹಿತಿ ತಿಳಿಯುತ್ತದೆ ಎಂದಿದ್ದಾರೆ.

ಜ್ಞಾನವಾಪಿಯಂತೆ ಮಳಲಿಪೇಟೆ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಡ್ವೋಕೇಟ್ ಕಮಿಷನರ್‌ ನೇಮಕ ಮಾಡುವಂತೆ ಹಿಂದೂಗಳ ಪರವಾಗಿ ಧನಂಜಯ್‌ ಹಾಗೂ ಇನ್ನಿತರರು ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ :

ಮಳಲಿ ಮಸೀದಿಯ ಹಳೆಯ ಕಟ್ಟಡ ಕೆಡವಿ ಹೊಸದಾಗಿ ನಿರ್ಮಿಸಲು 2022ರಲ್ಲಿ ಮಸೀದಿ ಸಮಿತಿ ಮುಂದಾಗಿತ್ತು. ದ್ರಾವಿಡ ಶೈಲಿಯ ಹಳೆಯ ಕಡ್ಡದ ಸುತ್ತಲು ಕೆಡವಿ ಮಧ್ಯದ ಭಾಗ ಹಾಗೆಯೇ ಬಿಟ್ಟಿತ್ತು. ಮಸೀದಿಯ ಮೇಲ್ಚಾವಣಿ ದೇಗುಲ ಶೈಲಿಯಲ್ಲಿರುವುದನ್ನು ಕಂಡ ಹಿಂದುತ್ವ ಸಂಘಟನೆ ಮುಖಂಡರು ಮಸೀದಿಯ ಒಳಗೆ ಶಿವನ ಸನ್ನಿಧಾನ ಇರುವುದರಿಂದ ದುರಸ್ತಿ ಕಾಮಗಾರಿ ಸ್ಥಗಿತಗೊಳಿಸಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಆದರೆ, ಮಳಲಿ ಮಸೀದಿ ವಕ್ಫ್‌ ಮಂಡಳಿಗೆ ಸೇರಿದ ಆಸ್ತಿಯಾಗಿದೆ ಎಂದು ಮಸೀದಿ ಸಮಿತಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ವಾದ ಆಲಿಸಿದ್ದ ಹೈಕೋರ್ಟ್‌, ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವೇ ವಿಚಾರಣೆ ನಡೆಸಬೇಕೆಂದು ಜ. 31ರಂದು ಸೂಚಿಸಿತ್ತು.

ಇದನ್ನೂ ಓದಿ : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಆರೋಪ: ಸಿಐಡಿ ತನಿಖೆಗೆ ಸಿಎಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...