Homeಮುಖಪುಟಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

ಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಇರುವ ಕಾರಂಜಿ ಎನ್ನಲಾಗಿರುವ ರಚನೆಯನ್ನು ‘ಶಿವಲಿಂಗ’ ಎಂದು ಪ್ರತಿಪಾದಿಸಿ ಅದರ ಕಾರ್ಬನ್ ಡೇಟಿಂಗ್ ಮಾಡುವಂತೆ ಕೋರಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ.

ವಾರಣಾಸಿ ಸ್ಥಳೀಯ ನ್ಯಾಯಾಲಯದ ಆದೇಶದ ಪ್ರಕಾರ ನಡೆದ ವೀಡಿಯೊಗ್ರಫಿ ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಕಂಡುಬಂದಿದೆ ಎಂದು ಹೇಳಲಾದ ‘ಶಿವಲಿಂಗ’ದ ಕಾರ್ಬನ್-ಡೇಟಿಂಗ್ ಅನ್ನು ಐವರು ಅರ್ಜಿದಾರರ ಪೈಕಿ ನಾಲ್ವರು ಕೋರಿದ್ದರು. ಮಸೀದಿಯ ಸಂಕೀರ್ಣದ ಒಳಗೆ ವರ್ಷಪೂರ್ತಿ ಪ್ರಾರ್ಥನೆಗೆ ಅವಕಾಶವನ್ನು ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಆ ಪ್ರಕರಣ ಇನ್ನೂ ವಿಚಾರಣೆಯಲ್ಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಬನ್ ಡೇಟಿಂಗ್‌ನಂತಹ ಯಾವುದೇ ಸಮೀಕ್ಷೆಯು ಮಸೀದಿಯೊಳಗಿನ “ಶಿವಲಿಂಗ” ಸ್ಥಳವನ್ನು ಸೀಲ್ ಮಾಡಲು ಹೇಳಿರುವ ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗುತ್ತದೆ ಎಂದು ವಾರಣಾಸಿ ನ್ಯಾಯಾಲಯ ಹೇಳಿದೆ. ಆಪಾದಿತ ರಚನೆಗೆ ಮಾಡಲಾಗುವ ಯಾವುದೇ ಹಾನಿಯು ‘ಶಿವಲಿಂಗ’ವನ್ನು ರಕ್ಷಿಸುವಂತೆ ಕೇಳಿರುವ ಸುಪ್ರೀಂಕೋರ್ಟ್ ಆದೇಶಗಳನ್ನು ಉಲ್ಲಂಘಿಸುತ್ತದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

‘ಶಿವಲಿಂಗ’ಕ್ಕೆ ಯಾವುದೇ ಹಾನಿಯು ಧಾರ್ಮಿಕ ಭಾವನೆಗಳಿಗೆ ಹಾನಿ ಮಾಡುತ್ತದೆ ಮತ್ತು ವಿವಾದದ ಕಾನೂನು ಪರಿಹಾರದ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಮಸೀದಿ ಸಮಿತಿಯು ಇಂತಹ ತನಿಖೆಯನ್ನು ಆಕ್ಷೇಪಿಸಿದ್ದು, ಪ್ರಕರಣವು ಮಸೀದಿಯೊಳಗಿನ ದೇಗುಲದಲ್ಲಿ ಪೂಜೆ ಮಾಡುವ ಬಗ್ಗೆ ಮತ್ತು ಅದರ ಆಪಾದಿತ ರಚನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿತ್ತು. ‘ಶಿವಲಿಂಗ’ ಎಂದು ಆಪಾದಿಸಲಾಗಿರುವ ವಸ್ತುವು ವಾಸ್ತವವಾಗಿ ‘ಕಾರಂಜಿ’ ಆಗಿದೆ ಎಂದು ನ್ಯಾಯಾಲಯದಲ್ಲಿ ವಾದಿಸಿತ್ತು.

ಸೆಪ್ಟೆಂಬರ್ 12 ರಂದು, ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಐವರು ಮಹಿಳೆಯರ ಪ್ರಕರಣಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ ಎಂದು ವಾದಿಸಿದ ಮಸೀದಿ ಸಮಿತಿಯ ಅರ್ಜಿಯನ್ನು ವಜಾಗೊಳಿಸಿ, ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಗೊಳಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಈ ವರ್ಷದ ಆರಂಭದಲ್ಲಿ, ವಾರಣಾಸಿಯ ಕೆಳ ನ್ಯಾಯಾಲಯವು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಶತಮಾನಗಳಷ್ಟು ಹಳೆಯದಾದ ಮಸೀದಿಯ ಚಿತ್ರೀಕರಣಕ್ಕೆ ಆದೇಶ ನೀಡಿತ್ತು. ಈ ವೇಳೆ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡು ಬಂದಿದೆ ಎಂದು ಆರೋಪಿಸಿ ಸಮೀಕ್ಷೆಯ ವಿಡಿಯೊ ಸೋರಿಕೆ ಮಾಡಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯು ದೇವಾಲಯಗಳ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ಬಲಪಂಥೀಯ ಹಿಂದೂಗಳು ಆರೋಪಿಸುತ್ತಿದ್ದಾರೆ. 1980- 90 ರ ದಶಕದಲ್ಲಿ ಬಿಜೆಪಿ ಬೆಳೆಸಿದ ಅಯೋಧ್ಯೆ ಮತ್ತು ಮಥುರಾ ಜೊತೆಗೆ ಇರುವ ಮಸೀದಿಗಳಲ್ಲಿ ಈ ಮಸೀದಿಯು ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...