Homeಮುಖಪುಟಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

ಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಇರುವ ಕಾರಂಜಿ ಎನ್ನಲಾಗಿರುವ ರಚನೆಯನ್ನು ‘ಶಿವಲಿಂಗ’ ಎಂದು ಪ್ರತಿಪಾದಿಸಿ ಅದರ ಕಾರ್ಬನ್ ಡೇಟಿಂಗ್ ಮಾಡುವಂತೆ ಕೋರಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ.

ವಾರಣಾಸಿ ಸ್ಥಳೀಯ ನ್ಯಾಯಾಲಯದ ಆದೇಶದ ಪ್ರಕಾರ ನಡೆದ ವೀಡಿಯೊಗ್ರಫಿ ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಕಂಡುಬಂದಿದೆ ಎಂದು ಹೇಳಲಾದ ‘ಶಿವಲಿಂಗ’ದ ಕಾರ್ಬನ್-ಡೇಟಿಂಗ್ ಅನ್ನು ಐವರು ಅರ್ಜಿದಾರರ ಪೈಕಿ ನಾಲ್ವರು ಕೋರಿದ್ದರು. ಮಸೀದಿಯ ಸಂಕೀರ್ಣದ ಒಳಗೆ ವರ್ಷಪೂರ್ತಿ ಪ್ರಾರ್ಥನೆಗೆ ಅವಕಾಶವನ್ನು ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಆ ಪ್ರಕರಣ ಇನ್ನೂ ವಿಚಾರಣೆಯಲ್ಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಬನ್ ಡೇಟಿಂಗ್‌ನಂತಹ ಯಾವುದೇ ಸಮೀಕ್ಷೆಯು ಮಸೀದಿಯೊಳಗಿನ “ಶಿವಲಿಂಗ” ಸ್ಥಳವನ್ನು ಸೀಲ್ ಮಾಡಲು ಹೇಳಿರುವ ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗುತ್ತದೆ ಎಂದು ವಾರಣಾಸಿ ನ್ಯಾಯಾಲಯ ಹೇಳಿದೆ. ಆಪಾದಿತ ರಚನೆಗೆ ಮಾಡಲಾಗುವ ಯಾವುದೇ ಹಾನಿಯು ‘ಶಿವಲಿಂಗ’ವನ್ನು ರಕ್ಷಿಸುವಂತೆ ಕೇಳಿರುವ ಸುಪ್ರೀಂಕೋರ್ಟ್ ಆದೇಶಗಳನ್ನು ಉಲ್ಲಂಘಿಸುತ್ತದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

‘ಶಿವಲಿಂಗ’ಕ್ಕೆ ಯಾವುದೇ ಹಾನಿಯು ಧಾರ್ಮಿಕ ಭಾವನೆಗಳಿಗೆ ಹಾನಿ ಮಾಡುತ್ತದೆ ಮತ್ತು ವಿವಾದದ ಕಾನೂನು ಪರಿಹಾರದ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಮಸೀದಿ ಸಮಿತಿಯು ಇಂತಹ ತನಿಖೆಯನ್ನು ಆಕ್ಷೇಪಿಸಿದ್ದು, ಪ್ರಕರಣವು ಮಸೀದಿಯೊಳಗಿನ ದೇಗುಲದಲ್ಲಿ ಪೂಜೆ ಮಾಡುವ ಬಗ್ಗೆ ಮತ್ತು ಅದರ ಆಪಾದಿತ ರಚನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿತ್ತು. ‘ಶಿವಲಿಂಗ’ ಎಂದು ಆಪಾದಿಸಲಾಗಿರುವ ವಸ್ತುವು ವಾಸ್ತವವಾಗಿ ‘ಕಾರಂಜಿ’ ಆಗಿದೆ ಎಂದು ನ್ಯಾಯಾಲಯದಲ್ಲಿ ವಾದಿಸಿತ್ತು.

ಸೆಪ್ಟೆಂಬರ್ 12 ರಂದು, ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಐವರು ಮಹಿಳೆಯರ ಪ್ರಕರಣಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ ಎಂದು ವಾದಿಸಿದ ಮಸೀದಿ ಸಮಿತಿಯ ಅರ್ಜಿಯನ್ನು ವಜಾಗೊಳಿಸಿ, ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಗೊಳಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಈ ವರ್ಷದ ಆರಂಭದಲ್ಲಿ, ವಾರಣಾಸಿಯ ಕೆಳ ನ್ಯಾಯಾಲಯವು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಶತಮಾನಗಳಷ್ಟು ಹಳೆಯದಾದ ಮಸೀದಿಯ ಚಿತ್ರೀಕರಣಕ್ಕೆ ಆದೇಶ ನೀಡಿತ್ತು. ಈ ವೇಳೆ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡು ಬಂದಿದೆ ಎಂದು ಆರೋಪಿಸಿ ಸಮೀಕ್ಷೆಯ ವಿಡಿಯೊ ಸೋರಿಕೆ ಮಾಡಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯು ದೇವಾಲಯಗಳ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ಬಲಪಂಥೀಯ ಹಿಂದೂಗಳು ಆರೋಪಿಸುತ್ತಿದ್ದಾರೆ. 1980- 90 ರ ದಶಕದಲ್ಲಿ ಬಿಜೆಪಿ ಬೆಳೆಸಿದ ಅಯೋಧ್ಯೆ ಮತ್ತು ಮಥುರಾ ಜೊತೆಗೆ ಇರುವ ಮಸೀದಿಗಳಲ್ಲಿ ಈ ಮಸೀದಿಯು ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...