Homeಮುಖಪುಟಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

ಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಇರುವ ಕಾರಂಜಿ ಎನ್ನಲಾಗಿರುವ ರಚನೆಯನ್ನು ‘ಶಿವಲಿಂಗ’ ಎಂದು ಪ್ರತಿಪಾದಿಸಿ ಅದರ ಕಾರ್ಬನ್ ಡೇಟಿಂಗ್ ಮಾಡುವಂತೆ ಕೋರಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ.

ವಾರಣಾಸಿ ಸ್ಥಳೀಯ ನ್ಯಾಯಾಲಯದ ಆದೇಶದ ಪ್ರಕಾರ ನಡೆದ ವೀಡಿಯೊಗ್ರಫಿ ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಕಂಡುಬಂದಿದೆ ಎಂದು ಹೇಳಲಾದ ‘ಶಿವಲಿಂಗ’ದ ಕಾರ್ಬನ್-ಡೇಟಿಂಗ್ ಅನ್ನು ಐವರು ಅರ್ಜಿದಾರರ ಪೈಕಿ ನಾಲ್ವರು ಕೋರಿದ್ದರು. ಮಸೀದಿಯ ಸಂಕೀರ್ಣದ ಒಳಗೆ ವರ್ಷಪೂರ್ತಿ ಪ್ರಾರ್ಥನೆಗೆ ಅವಕಾಶವನ್ನು ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಆ ಪ್ರಕರಣ ಇನ್ನೂ ವಿಚಾರಣೆಯಲ್ಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಬನ್ ಡೇಟಿಂಗ್‌ನಂತಹ ಯಾವುದೇ ಸಮೀಕ್ಷೆಯು ಮಸೀದಿಯೊಳಗಿನ “ಶಿವಲಿಂಗ” ಸ್ಥಳವನ್ನು ಸೀಲ್ ಮಾಡಲು ಹೇಳಿರುವ ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗುತ್ತದೆ ಎಂದು ವಾರಣಾಸಿ ನ್ಯಾಯಾಲಯ ಹೇಳಿದೆ. ಆಪಾದಿತ ರಚನೆಗೆ ಮಾಡಲಾಗುವ ಯಾವುದೇ ಹಾನಿಯು ‘ಶಿವಲಿಂಗ’ವನ್ನು ರಕ್ಷಿಸುವಂತೆ ಕೇಳಿರುವ ಸುಪ್ರೀಂಕೋರ್ಟ್ ಆದೇಶಗಳನ್ನು ಉಲ್ಲಂಘಿಸುತ್ತದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

‘ಶಿವಲಿಂಗ’ಕ್ಕೆ ಯಾವುದೇ ಹಾನಿಯು ಧಾರ್ಮಿಕ ಭಾವನೆಗಳಿಗೆ ಹಾನಿ ಮಾಡುತ್ತದೆ ಮತ್ತು ವಿವಾದದ ಕಾನೂನು ಪರಿಹಾರದ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಮಸೀದಿ ಸಮಿತಿಯು ಇಂತಹ ತನಿಖೆಯನ್ನು ಆಕ್ಷೇಪಿಸಿದ್ದು, ಪ್ರಕರಣವು ಮಸೀದಿಯೊಳಗಿನ ದೇಗುಲದಲ್ಲಿ ಪೂಜೆ ಮಾಡುವ ಬಗ್ಗೆ ಮತ್ತು ಅದರ ಆಪಾದಿತ ರಚನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿತ್ತು. ‘ಶಿವಲಿಂಗ’ ಎಂದು ಆಪಾದಿಸಲಾಗಿರುವ ವಸ್ತುವು ವಾಸ್ತವವಾಗಿ ‘ಕಾರಂಜಿ’ ಆಗಿದೆ ಎಂದು ನ್ಯಾಯಾಲಯದಲ್ಲಿ ವಾದಿಸಿತ್ತು.

ಸೆಪ್ಟೆಂಬರ್ 12 ರಂದು, ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಐವರು ಮಹಿಳೆಯರ ಪ್ರಕರಣಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ ಎಂದು ವಾದಿಸಿದ ಮಸೀದಿ ಸಮಿತಿಯ ಅರ್ಜಿಯನ್ನು ವಜಾಗೊಳಿಸಿ, ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಗೊಳಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಈ ವರ್ಷದ ಆರಂಭದಲ್ಲಿ, ವಾರಣಾಸಿಯ ಕೆಳ ನ್ಯಾಯಾಲಯವು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಶತಮಾನಗಳಷ್ಟು ಹಳೆಯದಾದ ಮಸೀದಿಯ ಚಿತ್ರೀಕರಣಕ್ಕೆ ಆದೇಶ ನೀಡಿತ್ತು. ಈ ವೇಳೆ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡು ಬಂದಿದೆ ಎಂದು ಆರೋಪಿಸಿ ಸಮೀಕ್ಷೆಯ ವಿಡಿಯೊ ಸೋರಿಕೆ ಮಾಡಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯು ದೇವಾಲಯಗಳ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ಬಲಪಂಥೀಯ ಹಿಂದೂಗಳು ಆರೋಪಿಸುತ್ತಿದ್ದಾರೆ. 1980- 90 ರ ದಶಕದಲ್ಲಿ ಬಿಜೆಪಿ ಬೆಳೆಸಿದ ಅಯೋಧ್ಯೆ ಮತ್ತು ಮಥುರಾ ಜೊತೆಗೆ ಇರುವ ಮಸೀದಿಗಳಲ್ಲಿ ಈ ಮಸೀದಿಯು ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...