Homeರಾಷ್ಟ್ರೀಯಜ್ಞಾನವಾಪಿ: ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದ ಅಲಹಾಬಾದ್ ಹೈಕೋರ್ಟ್

ಜ್ಞಾನವಾಪಿ: ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಇರುವ ‘ಶಿವಲಿಂಗ’ ಎನ್ನಲಾದ ಕಾರಂಜಿಯ ಕುರಿತು ವೈಜ್ಞಾನಿಕ ತನಿಖೆ ನಡೆಸುವಂತೆ ಹಿಂದೂ ಕಕ್ಷಿದಾರರು ಸಲ್ಲಿಸಿರುವ ಮನವಿಯನ್ನು ವಾರಣಾಸಿ ನ್ಯಾಯಾಲಯ ಅಕ್ಟೋಬರ್‌ 14 ರಂದ ತಿರಸ್ಕರಿಸಿತ್ತು. ಇದೀಗ ವಾರಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಮೇಲೆ ಅಲಹಾಬಾದ್ ಹೈಕೋರ್ಟ್ ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.

ಕಳೆದ ತಿಂಗಳು, ವಾರಣಾಸಿ ನ್ಯಾಯಾಲಯವು ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿದೆ ಎನ್ನಲಾಗಿರುವ ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆಯನ್ನು ಕೋರಿ ಹಿಂದೂ ಕಕ್ಷಿದಾರರ ಮನವಿಯನ್ನು ತಿರಸ್ಕರಿಸಿತ್ತು. ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ಸಮಯದಲ್ಲಿ “ಶಿವಲಿಂಗ” ಪತ್ತೆಯಾಗಿದೆ ಎಂದು ಹೇಳಲಾದ ಸ್ಥಳವನ್ನು ರಕ್ಷಿಸಲು ಸುಪ್ರೀಂ ಕೋರ್ಟ್‌ನ ಆದೇಶವನ್ನು ಪರಿಗಣಿಸಿ ಮನವಿಯನ್ನು ತಿರಸ್ಕರಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾರಣಾಸಿ ಸ್ಥಳೀಯ ನ್ಯಾಯಾಲಯದ ಆದೇಶದ ಪ್ರಕಾರ ನಡೆದ ವೀಡಿಯೊಗ್ರಫಿ ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಕಂಡುಬಂದಿದೆ ಎಂದು ಹೇಳಲಾದ ‘ಶಿವಲಿಂಗ’ದ ಕಾರ್ಬನ್-ಡೇಟಿಂಗ್ ಅನ್ನು ಐವರು ಅರ್ಜಿದಾರರ ಪೈಕಿ ನಾಲ್ವರು ಕೋರಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

ಮಸೀದಿಯ ಸಂಕೀರ್ಣದ ಒಳಗೆ ವರ್ಷಪೂರ್ತಿ ಪ್ರಾರ್ಥನೆಗೆ ಅವಕಾಶವನ್ನು ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಆ ಪ್ರಕರಣ ಇನ್ನೂ ವಿಚಾರಣೆಯಲ್ಲಿದೆ.

ಕಾರ್ಬನ್ ಡೇಟಿಂಗ್‌ನಂತಹ ಯಾವುದೇ ಸಮೀಕ್ಷೆಯು ಮಸೀದಿಯೊಳಗಿನ “ಶಿವಲಿಂಗ” ಸ್ಥಳವನ್ನು ಸೀಲ್ ಮಾಡಲು ಹೇಳಿರುವ ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗುತ್ತದೆ. ಆಪಾದಿತ ರಚನೆಗೆ ಮಾಡಲಾಗುವ ಯಾವುದೇ ಹಾನಿಯು ‘ಶಿವಲಿಂಗ’ವನ್ನು ರಕ್ಷಿಸುವಂತೆ ಕೇಳಿರುವ ಸುಪ್ರೀಂಕೋರ್ಟ್ ಆದೇಶಗಳನ್ನು ಉಲ್ಲಂಘಿಸುತ್ತದೆ ಎಂದು ಎಂದು ವಾರಣಾಸಿ ನ್ಯಾಯಾಲಯ ಅಕ್ಟೋಬರ್‌ 14 ರ ತೀರ್ಪಿನಲ್ಲಿ ಹೇಳಿತ್ತು.

‘ಶಿವಲಿಂಗ’ಕ್ಕೆ ಯಾವುದೇ ಹಾನಿಯು ಧಾರ್ಮಿಕ ಭಾವನೆಗಳಿಗೆ ಹಾನಿ ಮಾಡುತ್ತದೆ ಮತ್ತು ವಿವಾದದ ಕಾನೂನು ಪರಿಹಾರದ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ ಎಂದು ನ್ಯಾಯಾಲಯ ತಿಳಿಸಿತ್ತು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

ಮಸೀದಿ ಸಮಿತಿಯು ಇಂತಹ ತನಿಖೆಯನ್ನು ಆಕ್ಷೇಪಿಸಿದ್ದು, ಪ್ರಕರಣವು ಮಸೀದಿಯೊಳಗಿನ ದೇಗುಲದಲ್ಲಿ ಪೂಜೆ ಮಾಡುವ ಬಗ್ಗೆ ಮತ್ತು ಅದರ ಆಪಾದಿತ ರಚನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿತ್ತು. ‘ಶಿವಲಿಂಗ’ ಎಂದು ಆಪಾದಿಸಲಾಗಿರುವ ವಸ್ತುವು ವಾಸ್ತವವಾಗಿ ‘ಕಾರಂಜಿ’ ಆಗಿದೆ ಎಂದು ನ್ಯಾಯಾಲಯದಲ್ಲಿ ವಾದಿಸಿತ್ತು.

ಸೆಪ್ಟೆಂಬರ್ 12 ರಂದು, ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಐವರು ಮಹಿಳೆಯರ ಪ್ರಕರಣಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ ಎಂದು ವಾದಿಸಿದ ಮಸೀದಿ ಸಮಿತಿಯ ಅರ್ಜಿಯನ್ನು ವಜಾಗೊಳಿಸಿ, ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಗೊಳಿಸಿತ್ತು.

ಈ ವರ್ಷದ ಆರಂಭದಲ್ಲಿ, ವಾರಣಾಸಿಯ ಕೆಳ ನ್ಯಾಯಾಲಯವು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಶತಮಾನಗಳಷ್ಟು ಹಳೆಯದಾದ ಮಸೀದಿಯ ಚಿತ್ರೀಕರಣಕ್ಕೆ ಆದೇಶ ನೀಡಿತ್ತು. ಈ ವೇಳೆ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡು ಬಂದಿದೆ ಎಂದು ಆರೋಪಿಸಿ ಸಮೀಕ್ಷೆಯ ವಿಡಿಯೊ ಸೋರಿಕೆ ಮಾಡಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯು ದೇವಾಲಯಗಳ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ಬಲಪಂಥೀಯ ಹಿಂದೂಗಳು ಆರೋಪಿಸುತ್ತಿದ್ದಾರೆ. 1980- 90 ರ ದಶಕದಲ್ಲಿ ಬಿಜೆಪಿ ಬೆಳೆಸಿದ ಅಯೋಧ್ಯೆ ಮತ್ತು ಮಥುರಾ ಜೊತೆಗೆ ಇರುವ ಮಸೀದಿಗಳಲ್ಲಿ ಈ ಮಸೀದಿಯು ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...