Homeರಾಷ್ಟ್ರೀಯಜ್ಞಾನವಾಪಿ: ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದ ಅಲಹಾಬಾದ್ ಹೈಕೋರ್ಟ್

ಜ್ಞಾನವಾಪಿ: ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಇರುವ ‘ಶಿವಲಿಂಗ’ ಎನ್ನಲಾದ ಕಾರಂಜಿಯ ಕುರಿತು ವೈಜ್ಞಾನಿಕ ತನಿಖೆ ನಡೆಸುವಂತೆ ಹಿಂದೂ ಕಕ್ಷಿದಾರರು ಸಲ್ಲಿಸಿರುವ ಮನವಿಯನ್ನು ವಾರಣಾಸಿ ನ್ಯಾಯಾಲಯ ಅಕ್ಟೋಬರ್‌ 14 ರಂದ ತಿರಸ್ಕರಿಸಿತ್ತು. ಇದೀಗ ವಾರಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಮೇಲೆ ಅಲಹಾಬಾದ್ ಹೈಕೋರ್ಟ್ ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.

ಕಳೆದ ತಿಂಗಳು, ವಾರಣಾಸಿ ನ್ಯಾಯಾಲಯವು ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿದೆ ಎನ್ನಲಾಗಿರುವ ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆಯನ್ನು ಕೋರಿ ಹಿಂದೂ ಕಕ್ಷಿದಾರರ ಮನವಿಯನ್ನು ತಿರಸ್ಕರಿಸಿತ್ತು. ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ಸಮಯದಲ್ಲಿ “ಶಿವಲಿಂಗ” ಪತ್ತೆಯಾಗಿದೆ ಎಂದು ಹೇಳಲಾದ ಸ್ಥಳವನ್ನು ರಕ್ಷಿಸಲು ಸುಪ್ರೀಂ ಕೋರ್ಟ್‌ನ ಆದೇಶವನ್ನು ಪರಿಗಣಿಸಿ ಮನವಿಯನ್ನು ತಿರಸ್ಕರಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾರಣಾಸಿ ಸ್ಥಳೀಯ ನ್ಯಾಯಾಲಯದ ಆದೇಶದ ಪ್ರಕಾರ ನಡೆದ ವೀಡಿಯೊಗ್ರಫಿ ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಕಂಡುಬಂದಿದೆ ಎಂದು ಹೇಳಲಾದ ‘ಶಿವಲಿಂಗ’ದ ಕಾರ್ಬನ್-ಡೇಟಿಂಗ್ ಅನ್ನು ಐವರು ಅರ್ಜಿದಾರರ ಪೈಕಿ ನಾಲ್ವರು ಕೋರಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

ಮಸೀದಿಯ ಸಂಕೀರ್ಣದ ಒಳಗೆ ವರ್ಷಪೂರ್ತಿ ಪ್ರಾರ್ಥನೆಗೆ ಅವಕಾಶವನ್ನು ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಆ ಪ್ರಕರಣ ಇನ್ನೂ ವಿಚಾರಣೆಯಲ್ಲಿದೆ.

ಕಾರ್ಬನ್ ಡೇಟಿಂಗ್‌ನಂತಹ ಯಾವುದೇ ಸಮೀಕ್ಷೆಯು ಮಸೀದಿಯೊಳಗಿನ “ಶಿವಲಿಂಗ” ಸ್ಥಳವನ್ನು ಸೀಲ್ ಮಾಡಲು ಹೇಳಿರುವ ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗುತ್ತದೆ. ಆಪಾದಿತ ರಚನೆಗೆ ಮಾಡಲಾಗುವ ಯಾವುದೇ ಹಾನಿಯು ‘ಶಿವಲಿಂಗ’ವನ್ನು ರಕ್ಷಿಸುವಂತೆ ಕೇಳಿರುವ ಸುಪ್ರೀಂಕೋರ್ಟ್ ಆದೇಶಗಳನ್ನು ಉಲ್ಲಂಘಿಸುತ್ತದೆ ಎಂದು ಎಂದು ವಾರಣಾಸಿ ನ್ಯಾಯಾಲಯ ಅಕ್ಟೋಬರ್‌ 14 ರ ತೀರ್ಪಿನಲ್ಲಿ ಹೇಳಿತ್ತು.

‘ಶಿವಲಿಂಗ’ಕ್ಕೆ ಯಾವುದೇ ಹಾನಿಯು ಧಾರ್ಮಿಕ ಭಾವನೆಗಳಿಗೆ ಹಾನಿ ಮಾಡುತ್ತದೆ ಮತ್ತು ವಿವಾದದ ಕಾನೂನು ಪರಿಹಾರದ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ ಎಂದು ನ್ಯಾಯಾಲಯ ತಿಳಿಸಿತ್ತು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

ಮಸೀದಿ ಸಮಿತಿಯು ಇಂತಹ ತನಿಖೆಯನ್ನು ಆಕ್ಷೇಪಿಸಿದ್ದು, ಪ್ರಕರಣವು ಮಸೀದಿಯೊಳಗಿನ ದೇಗುಲದಲ್ಲಿ ಪೂಜೆ ಮಾಡುವ ಬಗ್ಗೆ ಮತ್ತು ಅದರ ಆಪಾದಿತ ರಚನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿತ್ತು. ‘ಶಿವಲಿಂಗ’ ಎಂದು ಆಪಾದಿಸಲಾಗಿರುವ ವಸ್ತುವು ವಾಸ್ತವವಾಗಿ ‘ಕಾರಂಜಿ’ ಆಗಿದೆ ಎಂದು ನ್ಯಾಯಾಲಯದಲ್ಲಿ ವಾದಿಸಿತ್ತು.

ಸೆಪ್ಟೆಂಬರ್ 12 ರಂದು, ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಐವರು ಮಹಿಳೆಯರ ಪ್ರಕರಣಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ ಎಂದು ವಾದಿಸಿದ ಮಸೀದಿ ಸಮಿತಿಯ ಅರ್ಜಿಯನ್ನು ವಜಾಗೊಳಿಸಿ, ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಗೊಳಿಸಿತ್ತು.

ಈ ವರ್ಷದ ಆರಂಭದಲ್ಲಿ, ವಾರಣಾಸಿಯ ಕೆಳ ನ್ಯಾಯಾಲಯವು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಶತಮಾನಗಳಷ್ಟು ಹಳೆಯದಾದ ಮಸೀದಿಯ ಚಿತ್ರೀಕರಣಕ್ಕೆ ಆದೇಶ ನೀಡಿತ್ತು. ಈ ವೇಳೆ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡು ಬಂದಿದೆ ಎಂದು ಆರೋಪಿಸಿ ಸಮೀಕ್ಷೆಯ ವಿಡಿಯೊ ಸೋರಿಕೆ ಮಾಡಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯು ದೇವಾಲಯಗಳ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ಬಲಪಂಥೀಯ ಹಿಂದೂಗಳು ಆರೋಪಿಸುತ್ತಿದ್ದಾರೆ. 1980- 90 ರ ದಶಕದಲ್ಲಿ ಬಿಜೆಪಿ ಬೆಳೆಸಿದ ಅಯೋಧ್ಯೆ ಮತ್ತು ಮಥುರಾ ಜೊತೆಗೆ ಇರುವ ಮಸೀದಿಗಳಲ್ಲಿ ಈ ಮಸೀದಿಯು ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...