Homeಮುಖಪುಟಧೈರ್ಯವಿದ್ದರೆ CAA, NRC ಜಾರಿಗೊಳಿಸಿ: ಅಮಿತ್ ಶಾಗೆ ಪ್ರಶಾಂತ್‌ ಕಿಶೋರ್‌ ಸವಾಲು

ಧೈರ್ಯವಿದ್ದರೆ CAA, NRC ಜಾರಿಗೊಳಿಸಿ: ಅಮಿತ್ ಶಾಗೆ ಪ್ರಶಾಂತ್‌ ಕಿಶೋರ್‌ ಸವಾಲು

ಲಕ್ನೋದಲ್ಲಿ ನಡೆದ ರ್‍ಯಾಲಿಯಲ್ಲಿ ಅಮಿತ್‌ ಶಾರವರು, "ನೀವು ಎಷ್ಟು ಬೇಕಾದರೂ ಪ್ರತಿಭಟಿಸಿ, ಯಾವುದೇ ಕಾರಣಕ್ಕೂ ಸಿಎಎ ಹಿಂತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದರು

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಯನ್ನು ಧೈರ್ಯವಿದ್ದರೆ “ಕಾರ್ಯಗತಗೊಳಿಸಲು ಪ್ರಯತ್ನಿಸಿ ಎಂದು ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಹಾಕಿದ್ದಾರೆ.

“ನಾಗರಿಕರ ಭಿನ್ನಾಭಿಪ್ರಾಯವನ್ನು ಹೊಸಕಿಹಾಕುವುದು ಯಾವುದೇ ಸರ್ಕಾರದ ಬಲದ ಸಂಕೇತವಲ್ಲ. ಅಮಿತ್‌ ಶಾರವರೆ ನೀವು #CAA_NRC ವಿರುದ್ಧ ಹೋರಾಟವನ್ನು ನಿರ್ಲಕ್ಷಿಸುವುದಾದರೆ, ನೀವೇ ಘೋಷಿಸಿದ ಕ್ರೊನಾಲಜಿ ಪ್ರಕಾರ CAA & NRC ಅನುಷ್ಠಾನಗೊಳಿಸಲು ಏಕೆ ಮುಂದಾಗುತ್ತಿಲ್ಲ? ಎಂದು ಪ್ರಶಾಂತ್‌ ಕಿಶೋರ್‌ ಟ್ವೀಟ್‌ ಮಾಡಿದ್ದಾರೆ.

ಲಕ್ನೋದಲ್ಲಿ ನಡೆದ ರ್‍ಯಾಲಿಯಲ್ಲಿ ಅಮಿತ್‌ ಶಾರವರು, “ನೀವು ಎಷ್ಟು ಬೇಕಾದರೂ ಪ್ರತಿಭಟಿಸಿ, ಯಾವುದೇ ಕಾರಣಕ್ಕೂ ಸಿಎಎ ಹಿಂತೆಗೆದುಕೊಳ್ಳಲಾಗುವುದಿಲ್ಲ ಎಂದು ಪುನರುಚ್ಚರಿಸಿದ ನಂತರ ರಾಜಕೀಯ ಚುತುರ ಪ್ರಶಾಂತ್‌ ಕಿಶೋರ್‌ ಸವಾಲು ಹಾಕಿದ್ದಾರೆ.

“ನಾವು ಪ್ರತಿಭಟನೆಗಳಿಗೆ ಹೆದರುವುದಿಲ್ಲ. ವಾಸ್ತವವಾಗಿ ನಾವು ಜನಿಸಿದ್ದು ಪ್ರತಿಭಟನೆಗಳ ಮಧ್ಯೆಯೇ, ಅಲ್ಲಿಯೇ ಬೆಳೆದಿದ್ದೇನೆ. ನಾವು ಪ್ರತಿಪಕ್ಷದಲ್ಲೂ ಇದೇ ಮಾತನ್ನು ಹೇಳಿದ್ದೆವು ಮತ್ತು ಅಧಿಕಾರದಲ್ಲಿದ್ದಾಗ ನಾವು ಈಗ ಅದೇ ಮಾತನ್ನು ಹೇಳುತ್ತಿದ್ದೇವೆ” ಎಂದ ಅವರು ಈ ಕುರಿತು ಯಾರಾದರೂ ಬಹಿರಂಗ ಚರ್ಚೆಗೆ ಬರಬಹುದು ಎಂದು ಕರೆ ನೀಡಿದ್ದರು.

ಪ್ರಶಾಂತ್‌ ಕಿಶೋರ್ ಆರಂಭದಿಂದಲೂ ಸಿಎಎ, ಎನ್‌ಆರ್‌ಸಿ ವಿರುದ್ಧ ದನಿಯೆತ್ತಿದ್ದರು. ಅಲ್ಲದೇ ತಮ್ಮ ಜೆಡಿಯು ಪಕ್ಷವೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸುವಂತೆ ಒತ್ತಡ ತಂದಿದ್ದರು. ತಮ್ಮ ಪಕ್ಷದೊಳಗೆ ತಿದ್ದುಪಡಿ ಮಾಡಿದ ಪೌರತ್ವ ಕಾನೂನು ಮತ್ತು ಎನ್‌ಆರ್‌ಸಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೊನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಸಿಎಎ ಎನ್‌ಆರ್‌ಸಿ ವಿರುದ್ಧ ನಿಲುವು ತೆಗೆದುಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Mr. Prashant Kishore, so called intelligent strategist, try to support the government for all the constructive work/approach. Try to come out of the illusion that you are the only intelligent in the world. Be informed that you are going to meet your ‘WATERLOO’.

  2. ಸಿಎಎ, ಎನ್.ಆರ್.ಸಿ. ಎಲ್ಲೆಡೆಯೂ ವಿರೋಧ ಹೆಚ್ಚುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...