Homeಮುಖಪುಟಧೈರ್ಯವಿದ್ದರೆ CAA, NRC ಜಾರಿಗೊಳಿಸಿ: ಅಮಿತ್ ಶಾಗೆ ಪ್ರಶಾಂತ್‌ ಕಿಶೋರ್‌ ಸವಾಲು

ಧೈರ್ಯವಿದ್ದರೆ CAA, NRC ಜಾರಿಗೊಳಿಸಿ: ಅಮಿತ್ ಶಾಗೆ ಪ್ರಶಾಂತ್‌ ಕಿಶೋರ್‌ ಸವಾಲು

ಲಕ್ನೋದಲ್ಲಿ ನಡೆದ ರ್‍ಯಾಲಿಯಲ್ಲಿ ಅಮಿತ್‌ ಶಾರವರು, "ನೀವು ಎಷ್ಟು ಬೇಕಾದರೂ ಪ್ರತಿಭಟಿಸಿ, ಯಾವುದೇ ಕಾರಣಕ್ಕೂ ಸಿಎಎ ಹಿಂತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದರು

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಯನ್ನು ಧೈರ್ಯವಿದ್ದರೆ “ಕಾರ್ಯಗತಗೊಳಿಸಲು ಪ್ರಯತ್ನಿಸಿ ಎಂದು ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಹಾಕಿದ್ದಾರೆ.

“ನಾಗರಿಕರ ಭಿನ್ನಾಭಿಪ್ರಾಯವನ್ನು ಹೊಸಕಿಹಾಕುವುದು ಯಾವುದೇ ಸರ್ಕಾರದ ಬಲದ ಸಂಕೇತವಲ್ಲ. ಅಮಿತ್‌ ಶಾರವರೆ ನೀವು #CAA_NRC ವಿರುದ್ಧ ಹೋರಾಟವನ್ನು ನಿರ್ಲಕ್ಷಿಸುವುದಾದರೆ, ನೀವೇ ಘೋಷಿಸಿದ ಕ್ರೊನಾಲಜಿ ಪ್ರಕಾರ CAA & NRC ಅನುಷ್ಠಾನಗೊಳಿಸಲು ಏಕೆ ಮುಂದಾಗುತ್ತಿಲ್ಲ? ಎಂದು ಪ್ರಶಾಂತ್‌ ಕಿಶೋರ್‌ ಟ್ವೀಟ್‌ ಮಾಡಿದ್ದಾರೆ.

ಲಕ್ನೋದಲ್ಲಿ ನಡೆದ ರ್‍ಯಾಲಿಯಲ್ಲಿ ಅಮಿತ್‌ ಶಾರವರು, “ನೀವು ಎಷ್ಟು ಬೇಕಾದರೂ ಪ್ರತಿಭಟಿಸಿ, ಯಾವುದೇ ಕಾರಣಕ್ಕೂ ಸಿಎಎ ಹಿಂತೆಗೆದುಕೊಳ್ಳಲಾಗುವುದಿಲ್ಲ ಎಂದು ಪುನರುಚ್ಚರಿಸಿದ ನಂತರ ರಾಜಕೀಯ ಚುತುರ ಪ್ರಶಾಂತ್‌ ಕಿಶೋರ್‌ ಸವಾಲು ಹಾಕಿದ್ದಾರೆ.

“ನಾವು ಪ್ರತಿಭಟನೆಗಳಿಗೆ ಹೆದರುವುದಿಲ್ಲ. ವಾಸ್ತವವಾಗಿ ನಾವು ಜನಿಸಿದ್ದು ಪ್ರತಿಭಟನೆಗಳ ಮಧ್ಯೆಯೇ, ಅಲ್ಲಿಯೇ ಬೆಳೆದಿದ್ದೇನೆ. ನಾವು ಪ್ರತಿಪಕ್ಷದಲ್ಲೂ ಇದೇ ಮಾತನ್ನು ಹೇಳಿದ್ದೆವು ಮತ್ತು ಅಧಿಕಾರದಲ್ಲಿದ್ದಾಗ ನಾವು ಈಗ ಅದೇ ಮಾತನ್ನು ಹೇಳುತ್ತಿದ್ದೇವೆ” ಎಂದ ಅವರು ಈ ಕುರಿತು ಯಾರಾದರೂ ಬಹಿರಂಗ ಚರ್ಚೆಗೆ ಬರಬಹುದು ಎಂದು ಕರೆ ನೀಡಿದ್ದರು.

ಪ್ರಶಾಂತ್‌ ಕಿಶೋರ್ ಆರಂಭದಿಂದಲೂ ಸಿಎಎ, ಎನ್‌ಆರ್‌ಸಿ ವಿರುದ್ಧ ದನಿಯೆತ್ತಿದ್ದರು. ಅಲ್ಲದೇ ತಮ್ಮ ಜೆಡಿಯು ಪಕ್ಷವೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸುವಂತೆ ಒತ್ತಡ ತಂದಿದ್ದರು. ತಮ್ಮ ಪಕ್ಷದೊಳಗೆ ತಿದ್ದುಪಡಿ ಮಾಡಿದ ಪೌರತ್ವ ಕಾನೂನು ಮತ್ತು ಎನ್‌ಆರ್‌ಸಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೊನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಸಿಎಎ ಎನ್‌ಆರ್‌ಸಿ ವಿರುದ್ಧ ನಿಲುವು ತೆಗೆದುಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Mr. Prashant Kishore, so called intelligent strategist, try to support the government for all the constructive work/approach. Try to come out of the illusion that you are the only intelligent in the world. Be informed that you are going to meet your ‘WATERLOO’.

  2. ಸಿಎಎ, ಎನ್.ಆರ್.ಸಿ. ಎಲ್ಲೆಡೆಯೂ ವಿರೋಧ ಹೆಚ್ಚುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ.

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...