Homeಮುಖಪುಟಧೈರ್ಯವಿದ್ದರೆ CAA, NRC ಜಾರಿಗೊಳಿಸಿ: ಅಮಿತ್ ಶಾಗೆ ಪ್ರಶಾಂತ್‌ ಕಿಶೋರ್‌ ಸವಾಲು

ಧೈರ್ಯವಿದ್ದರೆ CAA, NRC ಜಾರಿಗೊಳಿಸಿ: ಅಮಿತ್ ಶಾಗೆ ಪ್ರಶಾಂತ್‌ ಕಿಶೋರ್‌ ಸವಾಲು

ಲಕ್ನೋದಲ್ಲಿ ನಡೆದ ರ್‍ಯಾಲಿಯಲ್ಲಿ ಅಮಿತ್‌ ಶಾರವರು, "ನೀವು ಎಷ್ಟು ಬೇಕಾದರೂ ಪ್ರತಿಭಟಿಸಿ, ಯಾವುದೇ ಕಾರಣಕ್ಕೂ ಸಿಎಎ ಹಿಂತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದರು

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಯನ್ನು ಧೈರ್ಯವಿದ್ದರೆ “ಕಾರ್ಯಗತಗೊಳಿಸಲು ಪ್ರಯತ್ನಿಸಿ ಎಂದು ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಹಾಕಿದ್ದಾರೆ.

“ನಾಗರಿಕರ ಭಿನ್ನಾಭಿಪ್ರಾಯವನ್ನು ಹೊಸಕಿಹಾಕುವುದು ಯಾವುದೇ ಸರ್ಕಾರದ ಬಲದ ಸಂಕೇತವಲ್ಲ. ಅಮಿತ್‌ ಶಾರವರೆ ನೀವು #CAA_NRC ವಿರುದ್ಧ ಹೋರಾಟವನ್ನು ನಿರ್ಲಕ್ಷಿಸುವುದಾದರೆ, ನೀವೇ ಘೋಷಿಸಿದ ಕ್ರೊನಾಲಜಿ ಪ್ರಕಾರ CAA & NRC ಅನುಷ್ಠಾನಗೊಳಿಸಲು ಏಕೆ ಮುಂದಾಗುತ್ತಿಲ್ಲ? ಎಂದು ಪ್ರಶಾಂತ್‌ ಕಿಶೋರ್‌ ಟ್ವೀಟ್‌ ಮಾಡಿದ್ದಾರೆ.

ಲಕ್ನೋದಲ್ಲಿ ನಡೆದ ರ್‍ಯಾಲಿಯಲ್ಲಿ ಅಮಿತ್‌ ಶಾರವರು, “ನೀವು ಎಷ್ಟು ಬೇಕಾದರೂ ಪ್ರತಿಭಟಿಸಿ, ಯಾವುದೇ ಕಾರಣಕ್ಕೂ ಸಿಎಎ ಹಿಂತೆಗೆದುಕೊಳ್ಳಲಾಗುವುದಿಲ್ಲ ಎಂದು ಪುನರುಚ್ಚರಿಸಿದ ನಂತರ ರಾಜಕೀಯ ಚುತುರ ಪ್ರಶಾಂತ್‌ ಕಿಶೋರ್‌ ಸವಾಲು ಹಾಕಿದ್ದಾರೆ.

“ನಾವು ಪ್ರತಿಭಟನೆಗಳಿಗೆ ಹೆದರುವುದಿಲ್ಲ. ವಾಸ್ತವವಾಗಿ ನಾವು ಜನಿಸಿದ್ದು ಪ್ರತಿಭಟನೆಗಳ ಮಧ್ಯೆಯೇ, ಅಲ್ಲಿಯೇ ಬೆಳೆದಿದ್ದೇನೆ. ನಾವು ಪ್ರತಿಪಕ್ಷದಲ್ಲೂ ಇದೇ ಮಾತನ್ನು ಹೇಳಿದ್ದೆವು ಮತ್ತು ಅಧಿಕಾರದಲ್ಲಿದ್ದಾಗ ನಾವು ಈಗ ಅದೇ ಮಾತನ್ನು ಹೇಳುತ್ತಿದ್ದೇವೆ” ಎಂದ ಅವರು ಈ ಕುರಿತು ಯಾರಾದರೂ ಬಹಿರಂಗ ಚರ್ಚೆಗೆ ಬರಬಹುದು ಎಂದು ಕರೆ ನೀಡಿದ್ದರು.

ಪ್ರಶಾಂತ್‌ ಕಿಶೋರ್ ಆರಂಭದಿಂದಲೂ ಸಿಎಎ, ಎನ್‌ಆರ್‌ಸಿ ವಿರುದ್ಧ ದನಿಯೆತ್ತಿದ್ದರು. ಅಲ್ಲದೇ ತಮ್ಮ ಜೆಡಿಯು ಪಕ್ಷವೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸುವಂತೆ ಒತ್ತಡ ತಂದಿದ್ದರು. ತಮ್ಮ ಪಕ್ಷದೊಳಗೆ ತಿದ್ದುಪಡಿ ಮಾಡಿದ ಪೌರತ್ವ ಕಾನೂನು ಮತ್ತು ಎನ್‌ಆರ್‌ಸಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೊನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಸಿಎಎ ಎನ್‌ಆರ್‌ಸಿ ವಿರುದ್ಧ ನಿಲುವು ತೆಗೆದುಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Mr. Prashant Kishore, so called intelligent strategist, try to support the government for all the constructive work/approach. Try to come out of the illusion that you are the only intelligent in the world. Be informed that you are going to meet your ‘WATERLOO’.

  2. ಸಿಎಎ, ಎನ್.ಆರ್.ಸಿ. ಎಲ್ಲೆಡೆಯೂ ವಿರೋಧ ಹೆಚ್ಚುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ.

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...