Homeಮುಖಪುಟಧೈರ್ಯವಿದ್ದರೆ CAA, NRC ಜಾರಿಗೊಳಿಸಿ: ಅಮಿತ್ ಶಾಗೆ ಪ್ರಶಾಂತ್‌ ಕಿಶೋರ್‌ ಸವಾಲು

ಧೈರ್ಯವಿದ್ದರೆ CAA, NRC ಜಾರಿಗೊಳಿಸಿ: ಅಮಿತ್ ಶಾಗೆ ಪ್ರಶಾಂತ್‌ ಕಿಶೋರ್‌ ಸವಾಲು

ಲಕ್ನೋದಲ್ಲಿ ನಡೆದ ರ್‍ಯಾಲಿಯಲ್ಲಿ ಅಮಿತ್‌ ಶಾರವರು, "ನೀವು ಎಷ್ಟು ಬೇಕಾದರೂ ಪ್ರತಿಭಟಿಸಿ, ಯಾವುದೇ ಕಾರಣಕ್ಕೂ ಸಿಎಎ ಹಿಂತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದರು

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಯನ್ನು ಧೈರ್ಯವಿದ್ದರೆ “ಕಾರ್ಯಗತಗೊಳಿಸಲು ಪ್ರಯತ್ನಿಸಿ ಎಂದು ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಹಾಕಿದ್ದಾರೆ.

“ನಾಗರಿಕರ ಭಿನ್ನಾಭಿಪ್ರಾಯವನ್ನು ಹೊಸಕಿಹಾಕುವುದು ಯಾವುದೇ ಸರ್ಕಾರದ ಬಲದ ಸಂಕೇತವಲ್ಲ. ಅಮಿತ್‌ ಶಾರವರೆ ನೀವು #CAA_NRC ವಿರುದ್ಧ ಹೋರಾಟವನ್ನು ನಿರ್ಲಕ್ಷಿಸುವುದಾದರೆ, ನೀವೇ ಘೋಷಿಸಿದ ಕ್ರೊನಾಲಜಿ ಪ್ರಕಾರ CAA & NRC ಅನುಷ್ಠಾನಗೊಳಿಸಲು ಏಕೆ ಮುಂದಾಗುತ್ತಿಲ್ಲ? ಎಂದು ಪ್ರಶಾಂತ್‌ ಕಿಶೋರ್‌ ಟ್ವೀಟ್‌ ಮಾಡಿದ್ದಾರೆ.

ಲಕ್ನೋದಲ್ಲಿ ನಡೆದ ರ್‍ಯಾಲಿಯಲ್ಲಿ ಅಮಿತ್‌ ಶಾರವರು, “ನೀವು ಎಷ್ಟು ಬೇಕಾದರೂ ಪ್ರತಿಭಟಿಸಿ, ಯಾವುದೇ ಕಾರಣಕ್ಕೂ ಸಿಎಎ ಹಿಂತೆಗೆದುಕೊಳ್ಳಲಾಗುವುದಿಲ್ಲ ಎಂದು ಪುನರುಚ್ಚರಿಸಿದ ನಂತರ ರಾಜಕೀಯ ಚುತುರ ಪ್ರಶಾಂತ್‌ ಕಿಶೋರ್‌ ಸವಾಲು ಹಾಕಿದ್ದಾರೆ.

“ನಾವು ಪ್ರತಿಭಟನೆಗಳಿಗೆ ಹೆದರುವುದಿಲ್ಲ. ವಾಸ್ತವವಾಗಿ ನಾವು ಜನಿಸಿದ್ದು ಪ್ರತಿಭಟನೆಗಳ ಮಧ್ಯೆಯೇ, ಅಲ್ಲಿಯೇ ಬೆಳೆದಿದ್ದೇನೆ. ನಾವು ಪ್ರತಿಪಕ್ಷದಲ್ಲೂ ಇದೇ ಮಾತನ್ನು ಹೇಳಿದ್ದೆವು ಮತ್ತು ಅಧಿಕಾರದಲ್ಲಿದ್ದಾಗ ನಾವು ಈಗ ಅದೇ ಮಾತನ್ನು ಹೇಳುತ್ತಿದ್ದೇವೆ” ಎಂದ ಅವರು ಈ ಕುರಿತು ಯಾರಾದರೂ ಬಹಿರಂಗ ಚರ್ಚೆಗೆ ಬರಬಹುದು ಎಂದು ಕರೆ ನೀಡಿದ್ದರು.

ಪ್ರಶಾಂತ್‌ ಕಿಶೋರ್ ಆರಂಭದಿಂದಲೂ ಸಿಎಎ, ಎನ್‌ಆರ್‌ಸಿ ವಿರುದ್ಧ ದನಿಯೆತ್ತಿದ್ದರು. ಅಲ್ಲದೇ ತಮ್ಮ ಜೆಡಿಯು ಪಕ್ಷವೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸುವಂತೆ ಒತ್ತಡ ತಂದಿದ್ದರು. ತಮ್ಮ ಪಕ್ಷದೊಳಗೆ ತಿದ್ದುಪಡಿ ಮಾಡಿದ ಪೌರತ್ವ ಕಾನೂನು ಮತ್ತು ಎನ್‌ಆರ್‌ಸಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೊನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಸಿಎಎ ಎನ್‌ಆರ್‌ಸಿ ವಿರುದ್ಧ ನಿಲುವು ತೆಗೆದುಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Mr. Prashant Kishore, so called intelligent strategist, try to support the government for all the constructive work/approach. Try to come out of the illusion that you are the only intelligent in the world. Be informed that you are going to meet your ‘WATERLOO’.

  2. ಸಿಎಎ, ಎನ್.ಆರ್.ಸಿ. ಎಲ್ಲೆಡೆಯೂ ವಿರೋಧ ಹೆಚ್ಚುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...