Homeಕರ್ನಾಟಕಬೆಂಗಳೂರು ಉತ್ತರದಲ್ಲೂ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಅಭಿಯಾನ

ಬೆಂಗಳೂರು ಉತ್ತರದಲ್ಲೂ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಅಭಿಯಾನ

- Advertisement -
- Advertisement -

ಲೋಕಸಭೆ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿರುವುದಕ್ಕೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿನ್ನೆ (ಮಾ.13) ಸಂಜೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸುತ್ತಿದ್ದಂತೆ ‘ಗೋ ಬ್ಯಾಕ್ ಶೋಭಕ್ಕಾ’ ಎಂಬ ಭಿತ್ತಿ ಪತ್ರಗಳನ್ನು ಹಿಡಿದು ಬೀದಿಗಳಿದ ಬಿಜೆಪಿ ಕಾರ್ಯಕರ್ತರು ಯಾವುದೇ ಕಾರಣಕ್ಕೂ ನಮ್ಮ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಅಭ್ಯರ್ಥಿಯಾಗಿ ಬರೋದು ಬೇಡ ಎಂದಿದ್ದಾರೆ.

ಸ್ಥಳೀಯ ಒಕ್ಕಲಿಗರ ನಾಯಕರಲ್ಲಿ ಯಾರಿಗಾದರು ಟಿಕೆಟ್ ಕೊಡಿ. ಇಲ್ಲಾ ಹಾಲಿ ಸಂಸದ ಸದಾನಂದಗೌಡ ಅವರನ್ನೇ ಮತ್ತೊಮ್ಮೆ ಕಣಕ್ಕಿಳಿಸಿ. ಆದರೆ, ದಯವಿಟ್ಟು ಶೋಭಾ ಕರಂದ್ಲಾಜೆ ಮಾತ್ರ ಬೇಡ ಎಂದು ಹೇಳಿದ್ದಾರೆ.

ಶೋಭಾ ಅವರಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲೇ ಜನರು ಗೋ ಬ್ಯಾಕ್ ಎಂದಿದ್ದಾರೆ. ಅವರು ಅಭಿವೃದ್ದಿ ಮಾಡಿಲ್ಲ ಎಂಬ ಆರೋಪವನ್ನು ಅಲ್ಲಿನ ಕಾರ್ಯಕರ್ತರು ಮಾಡಿದ್ದಾರೆ. ಅಂತವರನ್ನು ಇಲ್ಲಿಗೆ ಕರೆದುಕೊಂಡು ಬಂದರೆ ನಮ್ಮ ಕ್ಷೇತ್ರದ ಪರಿಸ್ಥಿತಿ ಏನು ಎಂದು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ತಕ್ಕ ಉತ್ತರ ಕೊಡ್ತಾರೆ : ಶೋಭಾ ಕರಂದ್ಲಾಜೆ

ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನದ ಕುರಿತು ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ನೆಲಮಂಗಲದಲ್ಲಿ ಯಾರೋ 10-13 ಜನರು ಗೋ ಬ್ಯಾಕ್ ಎಂದಿದ್ದಾರೆ. ಅವರಿಗೂ ಬೆಂಗಳೂರು ಉತ್ತರ ಕ್ಷೇತ್ರಕ್ಕೂ ಸಂಬಂಧವಿಲ್ಲ. ಇದನ್ನೆಲ್ಲ ಯಾರು ಮಾಡಿಸುತ್ತಿದ್ದಾರೆ ಎಂದು ನನಗೆ ಗೊತ್ತಿದೆ. ಇವರಿಗೆಲ್ಲ ನಮ್ಮ ಪಕ್ಷದ ಹೈಕಮಾಂಡ್ ನಾಯಕರು ತಕ್ಕ ಪಾಠ ಕಳಿಸುತ್ತಾರೆ ಎಂದಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಸಚಿವೆಯೂ ಆಗಿರುವ ಶೋಭಾ ಕರಂದ್ಲಾಜೆ ಅವರು ಆ ಕ್ಷೇತ್ರದಲ್ಲಿ ಅಭಿವೃದ್ದಿ ಮಾಡಿಲ್ಲ ಎಂದು ಆರೋಪಿಸಿದ್ದ ಬಿಜೆಪಿ ಕಾರ್ಯಕರ್ತರು, ಇತ್ತೀಚೆಗೆ ಗೋಬ್ಯಾಕ್ ಅಭಿಯಾನ, ಪತ್ರ ಚಳವಳಿ ನಡೆಸಿದ್ದರು.

ಶೋಭಾ ಕ್ಷೇತ್ರ ಬದಲಾವಣೆ :

ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಶೋಭಾ ಅವರ ಕ್ಷೇತ್ರ ಬದಲಿಸಿದ ಬಿಜೆಪಿ ಹೈಕಮಾಂಡ್ ಬೆಂಗಳೂರು ಉತ್ತರದ ಟಿಕೆಟ್ ನೀಡಿದೆ. ಈ ಕ್ಷೇತ್ರದ ಹಾಲಿ ಸಂಸದ ಸದಾನಂದಗೌಡ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿದೆ. ಶೋಭಾ ಅವರ ಬದಲಿಗೆ ಉಡುಪಿ-ಚಿಕ್ಕಮಗಳೂರಿಗೆ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಕಣಕ್ಕಿಳಿಸಲಾಗಿದೆ.

ಇದನ್ನೂ ಓದಿ : ಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಸಿಡಿದೆದ್ದ ಈಶ್ವರಪ್ಪ, ಯಡಿಯೂರಪ್ಪ ವಿರುದ್ದ ವಾಗ್ದಾಳಿ: ಬಂಡಾಯದ ಸುಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...