Homeಕರ್ನಾಟಕಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

ಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಮೋದಿಯವರಿಂದ ಕರ್ನಾಟಕದ ಜನತೆ ನಿರೀಕ್ಷಿಸಿದ್ದ ಮಾತುಗಳು

ಹೆಚ್ಚುತ್ತಿರುವ ನಿರುದ್ಯೋಗಕ್ಕೆ ಪರಿಹಾರ
ರೈತರ ಆತ್ಮಹತ್ಯೆಗಳ ತಡೆ
ನೆರೆ ಪರಿಹಾರ
ಹಣದುಬ್ಬರದ ತಡೆ
ಜಿಡಿಪಿ ಬೆಳವಣಿಗೆಯನ್ನು
ಮಹಿಳೆಯರ ಸುರಕ್ಷತೆ
ಸಿಎಎ, ಎನ್‌ಆರ್‌ಸಿ ವಾಪಸ್‌ ತೆಗೆದುಕೊಳ್ಳುವುದು

ಆದರೆ ಮೋದಿ ಹೇಳಿದ್ದು. “ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ನಿಮ್ಮ ದನಿ ಎತ್ತಿ….”

ಇದು ಇಂದು ಟ್ವಿಟ್ಟರ್‌ನಲ್ಲಿ ವೈರಲ್‌ ಆದ ಒಂದು ಟ್ವೀಟ್‌.. ಇಂದು ಕರ್ನಾಟಕದ ತುಮಕೂರಿಗೆ ಪ್ರಧಾನಿ ಮೋದಿ ಬಂದಿದ್ದಾರೆ. ಬೆಳಿಗ್ಗೆಯಿಂದ ಎಲ್ಲಾ ವಾಹಿನಿಗಳಲ್ಲಿಯೂ ಅವರ ಆಗಮನ, ಅದಕ್ಕೆ ನಡೆದ ತಯಾರಿಗಳ ಸಭೆ ವರಿಯಾಗುತ್ತಿದ್ದವು. ಆದರೆ ಯಾವಾಗ ಮೋದಿಯವರು ಮತ್ತೆ ಪಾಕಿಸ್ತಾನದ ವಿರುದ್ಧ ಭಾಷಣ ಮಾಡಿದರೋ ಒಮ್ಮೆಗೆ ಟ್ವಿಟ್ಟರ್‌ನಲ್ಲಿ ಗೋ ಬ್ಯಾಕ್‌ ಮೋದಿ ಹ್ಯಾಸ್‌ಟ್ಯಾಗ್‌ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿದೆ.

ನೂರಾರು ಜನ ಮೋದಿಯವರ ಭಾಷಣಕ್ಕೆ ಅಪಸ್ವರ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಕೆಲ ಆಯ್ದ ಟ್ವೀಟ್‌ಗಳು ಇಲ್ಲಿವೆ..

ಶಿವಕುಮಾರ ಸ್ವಾಮಿಗಳು ನಿಧನರಾದಾಗ, ಪ್ರವಾಹ ಬಂದು ಜನ ಸಂಕಷ್ಟದಲ್ಲಿದ್ದಾಗ, ಜನರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಬಯಸಿದಾಗ ಬಾರದಿದ್ದ ಪ್ರಧಾನಿ ಮೋದಿಯವರು ಈಗ ಬಂದು ಕೆಲಸಕ್ಕೆ ಬಾರದ ಭಾಷಣ ಮಾಡಿದ್ದಾರೆ. ಅವರನ್ನು ತಿರಸ್ಕರಿಸಿ ಎಂದು ಆದರ್ಶ ಕುಮಾರ್‌ ಎಚ್‌.ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಸಿದ್ದಗಂಗ ಸ್ವಾಮೀಜಿಗಳಿಗೆ ಗೌರವ ಕೊಟು ಅವರ ಅಂತ್ಯಕ್ರಿಯೆಗೂ ಸಹ ಭೇಟಿ ನೀಡದ ಮೋದಿ, ಇಂದು ಅವರದೇ ಆಶ್ರಮದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ!

ಕರ್ನಾಟಕದಲ್ಲಿ ಈ ರೀತಿಯ ರಾಜಕೀಯಕ್ಕೆ ಧಾರ್ಮಿಕ ಆಶ್ರಮವನ್ನು ಎಂದಿಗೂ ಬಳಸಲಾಗಿಲ್ಲ. ಎಂತಹ ನಾಚಿಕೆಯಿಲ್ಲದ ವ್ಯಕ್ತಿ ನಮ್ಮ ಪ್ರಧಾನಿ? ಎಂದು ಶ್ರೀವತ್ಸ ಎನ್ನುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ಹೋರಾಡಿ ಎಂದು ಮೋದಿ ಹೇಳಿರುವುದು ಶುದ್ಧ ಅಸಂಬದ್ಧ. ಆತ್ಮೀಯ ಪ್ರಧಾನಿ, ಪಾಕಿಸ್ತಾನ ನಮ್ಮ ಸಮಸ್ಯೆಯಲ್ಲ. ನಾವು ದೇಶದೊಳಗಿನ ಸಮಸ್ಯೆಗಳ ವಿರುದ್ಧ ಹೋರಾಡುತ್ತೇವೆ. ಪ್ರತಿಭಟನೆ ನಡೆಸಬೇಡಿ ಎಂದು ಹೇಳಲು ನಿಮಗೆ ಯಾವುದೇ ಹಕ್ಕಿಲ್ಲ. ಚುನಾಯಿತ ಸರ್ಕಾರವು ಬಾಹ್ಯ ವ್ಯವಹಾರಗಳನ್ನು ನಿರ್ವಹಿಸಬೇಕೇ ಹೊರತು ಪ್ರಜೆಗಳಲ್ಲ. ಕಾಮನ್ಸೆನ್ಸ್ ಇಲ್ಲದ ಯಾರಾದರೂ ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿದಾಗ ಇದು ಸಂಭವಿಸುತ್ತದೆ! ಎಂದು ಕುಂಟಾಡಿ ನಿತೇಶ್‌ ರವರು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸುಳ್ಳನ್ನು ಇಲ್ಲಿ ಹರಡಬೇಡಿ ಮತ್ತು ದ್ವೇಷಿಸಬೇಡಿ. ಕರ್ನಾಟಕವು ಎಲ್ಲರನ್ನೂ ಒಳಗೊಂಡ ರಾಜ್ಯವಾಗಿದೆ. ನಾವು ಯಾರನ್ನೂ ಹೊರಗಿಡುವ ಅಗತ್ಯವಿಲ್ಲ. ಕರ್ನಾಟಕದ ಪುಷ್ಪಗುಚ್ಛದಲ್ಲಿ ಎಲ್ಲಾ ರೀತಿಯ ಹೂವುಗಳಿವೆ! ನಿಮ್ಮ ಸಿಎಎ ಧಿಕ್ಕಾರ, ಗೋ ಬ್ಯಾಕ್‌ ಮೋದಿ ಎಂದು ಕೆ.ಪಿ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...