Homeಕರ್ನಾಟಕಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

ಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಮೋದಿಯವರಿಂದ ಕರ್ನಾಟಕದ ಜನತೆ ನಿರೀಕ್ಷಿಸಿದ್ದ ಮಾತುಗಳು

ಹೆಚ್ಚುತ್ತಿರುವ ನಿರುದ್ಯೋಗಕ್ಕೆ ಪರಿಹಾರ
ರೈತರ ಆತ್ಮಹತ್ಯೆಗಳ ತಡೆ
ನೆರೆ ಪರಿಹಾರ
ಹಣದುಬ್ಬರದ ತಡೆ
ಜಿಡಿಪಿ ಬೆಳವಣಿಗೆಯನ್ನು
ಮಹಿಳೆಯರ ಸುರಕ್ಷತೆ
ಸಿಎಎ, ಎನ್‌ಆರ್‌ಸಿ ವಾಪಸ್‌ ತೆಗೆದುಕೊಳ್ಳುವುದು

ಆದರೆ ಮೋದಿ ಹೇಳಿದ್ದು. “ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ನಿಮ್ಮ ದನಿ ಎತ್ತಿ….”

ಇದು ಇಂದು ಟ್ವಿಟ್ಟರ್‌ನಲ್ಲಿ ವೈರಲ್‌ ಆದ ಒಂದು ಟ್ವೀಟ್‌.. ಇಂದು ಕರ್ನಾಟಕದ ತುಮಕೂರಿಗೆ ಪ್ರಧಾನಿ ಮೋದಿ ಬಂದಿದ್ದಾರೆ. ಬೆಳಿಗ್ಗೆಯಿಂದ ಎಲ್ಲಾ ವಾಹಿನಿಗಳಲ್ಲಿಯೂ ಅವರ ಆಗಮನ, ಅದಕ್ಕೆ ನಡೆದ ತಯಾರಿಗಳ ಸಭೆ ವರಿಯಾಗುತ್ತಿದ್ದವು. ಆದರೆ ಯಾವಾಗ ಮೋದಿಯವರು ಮತ್ತೆ ಪಾಕಿಸ್ತಾನದ ವಿರುದ್ಧ ಭಾಷಣ ಮಾಡಿದರೋ ಒಮ್ಮೆಗೆ ಟ್ವಿಟ್ಟರ್‌ನಲ್ಲಿ ಗೋ ಬ್ಯಾಕ್‌ ಮೋದಿ ಹ್ಯಾಸ್‌ಟ್ಯಾಗ್‌ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿದೆ.

ನೂರಾರು ಜನ ಮೋದಿಯವರ ಭಾಷಣಕ್ಕೆ ಅಪಸ್ವರ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಕೆಲ ಆಯ್ದ ಟ್ವೀಟ್‌ಗಳು ಇಲ್ಲಿವೆ..

ಶಿವಕುಮಾರ ಸ್ವಾಮಿಗಳು ನಿಧನರಾದಾಗ, ಪ್ರವಾಹ ಬಂದು ಜನ ಸಂಕಷ್ಟದಲ್ಲಿದ್ದಾಗ, ಜನರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಬಯಸಿದಾಗ ಬಾರದಿದ್ದ ಪ್ರಧಾನಿ ಮೋದಿಯವರು ಈಗ ಬಂದು ಕೆಲಸಕ್ಕೆ ಬಾರದ ಭಾಷಣ ಮಾಡಿದ್ದಾರೆ. ಅವರನ್ನು ತಿರಸ್ಕರಿಸಿ ಎಂದು ಆದರ್ಶ ಕುಮಾರ್‌ ಎಚ್‌.ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಸಿದ್ದಗಂಗ ಸ್ವಾಮೀಜಿಗಳಿಗೆ ಗೌರವ ಕೊಟು ಅವರ ಅಂತ್ಯಕ್ರಿಯೆಗೂ ಸಹ ಭೇಟಿ ನೀಡದ ಮೋದಿ, ಇಂದು ಅವರದೇ ಆಶ್ರಮದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ!

ಕರ್ನಾಟಕದಲ್ಲಿ ಈ ರೀತಿಯ ರಾಜಕೀಯಕ್ಕೆ ಧಾರ್ಮಿಕ ಆಶ್ರಮವನ್ನು ಎಂದಿಗೂ ಬಳಸಲಾಗಿಲ್ಲ. ಎಂತಹ ನಾಚಿಕೆಯಿಲ್ಲದ ವ್ಯಕ್ತಿ ನಮ್ಮ ಪ್ರಧಾನಿ? ಎಂದು ಶ್ರೀವತ್ಸ ಎನ್ನುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ಹೋರಾಡಿ ಎಂದು ಮೋದಿ ಹೇಳಿರುವುದು ಶುದ್ಧ ಅಸಂಬದ್ಧ. ಆತ್ಮೀಯ ಪ್ರಧಾನಿ, ಪಾಕಿಸ್ತಾನ ನಮ್ಮ ಸಮಸ್ಯೆಯಲ್ಲ. ನಾವು ದೇಶದೊಳಗಿನ ಸಮಸ್ಯೆಗಳ ವಿರುದ್ಧ ಹೋರಾಡುತ್ತೇವೆ. ಪ್ರತಿಭಟನೆ ನಡೆಸಬೇಡಿ ಎಂದು ಹೇಳಲು ನಿಮಗೆ ಯಾವುದೇ ಹಕ್ಕಿಲ್ಲ. ಚುನಾಯಿತ ಸರ್ಕಾರವು ಬಾಹ್ಯ ವ್ಯವಹಾರಗಳನ್ನು ನಿರ್ವಹಿಸಬೇಕೇ ಹೊರತು ಪ್ರಜೆಗಳಲ್ಲ. ಕಾಮನ್ಸೆನ್ಸ್ ಇಲ್ಲದ ಯಾರಾದರೂ ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿದಾಗ ಇದು ಸಂಭವಿಸುತ್ತದೆ! ಎಂದು ಕುಂಟಾಡಿ ನಿತೇಶ್‌ ರವರು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸುಳ್ಳನ್ನು ಇಲ್ಲಿ ಹರಡಬೇಡಿ ಮತ್ತು ದ್ವೇಷಿಸಬೇಡಿ. ಕರ್ನಾಟಕವು ಎಲ್ಲರನ್ನೂ ಒಳಗೊಂಡ ರಾಜ್ಯವಾಗಿದೆ. ನಾವು ಯಾರನ್ನೂ ಹೊರಗಿಡುವ ಅಗತ್ಯವಿಲ್ಲ. ಕರ್ನಾಟಕದ ಪುಷ್ಪಗುಚ್ಛದಲ್ಲಿ ಎಲ್ಲಾ ರೀತಿಯ ಹೂವುಗಳಿವೆ! ನಿಮ್ಮ ಸಿಎಎ ಧಿಕ್ಕಾರ, ಗೋ ಬ್ಯಾಕ್‌ ಮೋದಿ ಎಂದು ಕೆ.ಪಿ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...