Homeಕರ್ನಾಟಕಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

ಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಮೋದಿಯವರಿಂದ ಕರ್ನಾಟಕದ ಜನತೆ ನಿರೀಕ್ಷಿಸಿದ್ದ ಮಾತುಗಳು

ಹೆಚ್ಚುತ್ತಿರುವ ನಿರುದ್ಯೋಗಕ್ಕೆ ಪರಿಹಾರ
ರೈತರ ಆತ್ಮಹತ್ಯೆಗಳ ತಡೆ
ನೆರೆ ಪರಿಹಾರ
ಹಣದುಬ್ಬರದ ತಡೆ
ಜಿಡಿಪಿ ಬೆಳವಣಿಗೆಯನ್ನು
ಮಹಿಳೆಯರ ಸುರಕ್ಷತೆ
ಸಿಎಎ, ಎನ್‌ಆರ್‌ಸಿ ವಾಪಸ್‌ ತೆಗೆದುಕೊಳ್ಳುವುದು

ಆದರೆ ಮೋದಿ ಹೇಳಿದ್ದು. “ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ನಿಮ್ಮ ದನಿ ಎತ್ತಿ….”

ಇದು ಇಂದು ಟ್ವಿಟ್ಟರ್‌ನಲ್ಲಿ ವೈರಲ್‌ ಆದ ಒಂದು ಟ್ವೀಟ್‌.. ಇಂದು ಕರ್ನಾಟಕದ ತುಮಕೂರಿಗೆ ಪ್ರಧಾನಿ ಮೋದಿ ಬಂದಿದ್ದಾರೆ. ಬೆಳಿಗ್ಗೆಯಿಂದ ಎಲ್ಲಾ ವಾಹಿನಿಗಳಲ್ಲಿಯೂ ಅವರ ಆಗಮನ, ಅದಕ್ಕೆ ನಡೆದ ತಯಾರಿಗಳ ಸಭೆ ವರಿಯಾಗುತ್ತಿದ್ದವು. ಆದರೆ ಯಾವಾಗ ಮೋದಿಯವರು ಮತ್ತೆ ಪಾಕಿಸ್ತಾನದ ವಿರುದ್ಧ ಭಾಷಣ ಮಾಡಿದರೋ ಒಮ್ಮೆಗೆ ಟ್ವಿಟ್ಟರ್‌ನಲ್ಲಿ ಗೋ ಬ್ಯಾಕ್‌ ಮೋದಿ ಹ್ಯಾಸ್‌ಟ್ಯಾಗ್‌ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿದೆ.

ನೂರಾರು ಜನ ಮೋದಿಯವರ ಭಾಷಣಕ್ಕೆ ಅಪಸ್ವರ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಕೆಲ ಆಯ್ದ ಟ್ವೀಟ್‌ಗಳು ಇಲ್ಲಿವೆ..

ಶಿವಕುಮಾರ ಸ್ವಾಮಿಗಳು ನಿಧನರಾದಾಗ, ಪ್ರವಾಹ ಬಂದು ಜನ ಸಂಕಷ್ಟದಲ್ಲಿದ್ದಾಗ, ಜನರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಬಯಸಿದಾಗ ಬಾರದಿದ್ದ ಪ್ರಧಾನಿ ಮೋದಿಯವರು ಈಗ ಬಂದು ಕೆಲಸಕ್ಕೆ ಬಾರದ ಭಾಷಣ ಮಾಡಿದ್ದಾರೆ. ಅವರನ್ನು ತಿರಸ್ಕರಿಸಿ ಎಂದು ಆದರ್ಶ ಕುಮಾರ್‌ ಎಚ್‌.ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಸಿದ್ದಗಂಗ ಸ್ವಾಮೀಜಿಗಳಿಗೆ ಗೌರವ ಕೊಟು ಅವರ ಅಂತ್ಯಕ್ರಿಯೆಗೂ ಸಹ ಭೇಟಿ ನೀಡದ ಮೋದಿ, ಇಂದು ಅವರದೇ ಆಶ್ರಮದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ!

ಕರ್ನಾಟಕದಲ್ಲಿ ಈ ರೀತಿಯ ರಾಜಕೀಯಕ್ಕೆ ಧಾರ್ಮಿಕ ಆಶ್ರಮವನ್ನು ಎಂದಿಗೂ ಬಳಸಲಾಗಿಲ್ಲ. ಎಂತಹ ನಾಚಿಕೆಯಿಲ್ಲದ ವ್ಯಕ್ತಿ ನಮ್ಮ ಪ್ರಧಾನಿ? ಎಂದು ಶ್ರೀವತ್ಸ ಎನ್ನುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ಹೋರಾಡಿ ಎಂದು ಮೋದಿ ಹೇಳಿರುವುದು ಶುದ್ಧ ಅಸಂಬದ್ಧ. ಆತ್ಮೀಯ ಪ್ರಧಾನಿ, ಪಾಕಿಸ್ತಾನ ನಮ್ಮ ಸಮಸ್ಯೆಯಲ್ಲ. ನಾವು ದೇಶದೊಳಗಿನ ಸಮಸ್ಯೆಗಳ ವಿರುದ್ಧ ಹೋರಾಡುತ್ತೇವೆ. ಪ್ರತಿಭಟನೆ ನಡೆಸಬೇಡಿ ಎಂದು ಹೇಳಲು ನಿಮಗೆ ಯಾವುದೇ ಹಕ್ಕಿಲ್ಲ. ಚುನಾಯಿತ ಸರ್ಕಾರವು ಬಾಹ್ಯ ವ್ಯವಹಾರಗಳನ್ನು ನಿರ್ವಹಿಸಬೇಕೇ ಹೊರತು ಪ್ರಜೆಗಳಲ್ಲ. ಕಾಮನ್ಸೆನ್ಸ್ ಇಲ್ಲದ ಯಾರಾದರೂ ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿದಾಗ ಇದು ಸಂಭವಿಸುತ್ತದೆ! ಎಂದು ಕುಂಟಾಡಿ ನಿತೇಶ್‌ ರವರು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸುಳ್ಳನ್ನು ಇಲ್ಲಿ ಹರಡಬೇಡಿ ಮತ್ತು ದ್ವೇಷಿಸಬೇಡಿ. ಕರ್ನಾಟಕವು ಎಲ್ಲರನ್ನೂ ಒಳಗೊಂಡ ರಾಜ್ಯವಾಗಿದೆ. ನಾವು ಯಾರನ್ನೂ ಹೊರಗಿಡುವ ಅಗತ್ಯವಿಲ್ಲ. ಕರ್ನಾಟಕದ ಪುಷ್ಪಗುಚ್ಛದಲ್ಲಿ ಎಲ್ಲಾ ರೀತಿಯ ಹೂವುಗಳಿವೆ! ನಿಮ್ಮ ಸಿಎಎ ಧಿಕ್ಕಾರ, ಗೋ ಬ್ಯಾಕ್‌ ಮೋದಿ ಎಂದು ಕೆ.ಪಿ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...