Homeಕರ್ನಾಟಕಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

ಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಮೋದಿಯವರಿಂದ ಕರ್ನಾಟಕದ ಜನತೆ ನಿರೀಕ್ಷಿಸಿದ್ದ ಮಾತುಗಳು

ಹೆಚ್ಚುತ್ತಿರುವ ನಿರುದ್ಯೋಗಕ್ಕೆ ಪರಿಹಾರ
ರೈತರ ಆತ್ಮಹತ್ಯೆಗಳ ತಡೆ
ನೆರೆ ಪರಿಹಾರ
ಹಣದುಬ್ಬರದ ತಡೆ
ಜಿಡಿಪಿ ಬೆಳವಣಿಗೆಯನ್ನು
ಮಹಿಳೆಯರ ಸುರಕ್ಷತೆ
ಸಿಎಎ, ಎನ್‌ಆರ್‌ಸಿ ವಾಪಸ್‌ ತೆಗೆದುಕೊಳ್ಳುವುದು

ಆದರೆ ಮೋದಿ ಹೇಳಿದ್ದು. “ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ನಿಮ್ಮ ದನಿ ಎತ್ತಿ….”

ಇದು ಇಂದು ಟ್ವಿಟ್ಟರ್‌ನಲ್ಲಿ ವೈರಲ್‌ ಆದ ಒಂದು ಟ್ವೀಟ್‌.. ಇಂದು ಕರ್ನಾಟಕದ ತುಮಕೂರಿಗೆ ಪ್ರಧಾನಿ ಮೋದಿ ಬಂದಿದ್ದಾರೆ. ಬೆಳಿಗ್ಗೆಯಿಂದ ಎಲ್ಲಾ ವಾಹಿನಿಗಳಲ್ಲಿಯೂ ಅವರ ಆಗಮನ, ಅದಕ್ಕೆ ನಡೆದ ತಯಾರಿಗಳ ಸಭೆ ವರಿಯಾಗುತ್ತಿದ್ದವು. ಆದರೆ ಯಾವಾಗ ಮೋದಿಯವರು ಮತ್ತೆ ಪಾಕಿಸ್ತಾನದ ವಿರುದ್ಧ ಭಾಷಣ ಮಾಡಿದರೋ ಒಮ್ಮೆಗೆ ಟ್ವಿಟ್ಟರ್‌ನಲ್ಲಿ ಗೋ ಬ್ಯಾಕ್‌ ಮೋದಿ ಹ್ಯಾಸ್‌ಟ್ಯಾಗ್‌ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿದೆ.

ನೂರಾರು ಜನ ಮೋದಿಯವರ ಭಾಷಣಕ್ಕೆ ಅಪಸ್ವರ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಕೆಲ ಆಯ್ದ ಟ್ವೀಟ್‌ಗಳು ಇಲ್ಲಿವೆ..

ಶಿವಕುಮಾರ ಸ್ವಾಮಿಗಳು ನಿಧನರಾದಾಗ, ಪ್ರವಾಹ ಬಂದು ಜನ ಸಂಕಷ್ಟದಲ್ಲಿದ್ದಾಗ, ಜನರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಬಯಸಿದಾಗ ಬಾರದಿದ್ದ ಪ್ರಧಾನಿ ಮೋದಿಯವರು ಈಗ ಬಂದು ಕೆಲಸಕ್ಕೆ ಬಾರದ ಭಾಷಣ ಮಾಡಿದ್ದಾರೆ. ಅವರನ್ನು ತಿರಸ್ಕರಿಸಿ ಎಂದು ಆದರ್ಶ ಕುಮಾರ್‌ ಎಚ್‌.ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಸಿದ್ದಗಂಗ ಸ್ವಾಮೀಜಿಗಳಿಗೆ ಗೌರವ ಕೊಟು ಅವರ ಅಂತ್ಯಕ್ರಿಯೆಗೂ ಸಹ ಭೇಟಿ ನೀಡದ ಮೋದಿ, ಇಂದು ಅವರದೇ ಆಶ್ರಮದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ!

ಕರ್ನಾಟಕದಲ್ಲಿ ಈ ರೀತಿಯ ರಾಜಕೀಯಕ್ಕೆ ಧಾರ್ಮಿಕ ಆಶ್ರಮವನ್ನು ಎಂದಿಗೂ ಬಳಸಲಾಗಿಲ್ಲ. ಎಂತಹ ನಾಚಿಕೆಯಿಲ್ಲದ ವ್ಯಕ್ತಿ ನಮ್ಮ ಪ್ರಧಾನಿ? ಎಂದು ಶ್ರೀವತ್ಸ ಎನ್ನುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ಹೋರಾಡಿ ಎಂದು ಮೋದಿ ಹೇಳಿರುವುದು ಶುದ್ಧ ಅಸಂಬದ್ಧ. ಆತ್ಮೀಯ ಪ್ರಧಾನಿ, ಪಾಕಿಸ್ತಾನ ನಮ್ಮ ಸಮಸ್ಯೆಯಲ್ಲ. ನಾವು ದೇಶದೊಳಗಿನ ಸಮಸ್ಯೆಗಳ ವಿರುದ್ಧ ಹೋರಾಡುತ್ತೇವೆ. ಪ್ರತಿಭಟನೆ ನಡೆಸಬೇಡಿ ಎಂದು ಹೇಳಲು ನಿಮಗೆ ಯಾವುದೇ ಹಕ್ಕಿಲ್ಲ. ಚುನಾಯಿತ ಸರ್ಕಾರವು ಬಾಹ್ಯ ವ್ಯವಹಾರಗಳನ್ನು ನಿರ್ವಹಿಸಬೇಕೇ ಹೊರತು ಪ್ರಜೆಗಳಲ್ಲ. ಕಾಮನ್ಸೆನ್ಸ್ ಇಲ್ಲದ ಯಾರಾದರೂ ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿದಾಗ ಇದು ಸಂಭವಿಸುತ್ತದೆ! ಎಂದು ಕುಂಟಾಡಿ ನಿತೇಶ್‌ ರವರು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸುಳ್ಳನ್ನು ಇಲ್ಲಿ ಹರಡಬೇಡಿ ಮತ್ತು ದ್ವೇಷಿಸಬೇಡಿ. ಕರ್ನಾಟಕವು ಎಲ್ಲರನ್ನೂ ಒಳಗೊಂಡ ರಾಜ್ಯವಾಗಿದೆ. ನಾವು ಯಾರನ್ನೂ ಹೊರಗಿಡುವ ಅಗತ್ಯವಿಲ್ಲ. ಕರ್ನಾಟಕದ ಪುಷ್ಪಗುಚ್ಛದಲ್ಲಿ ಎಲ್ಲಾ ರೀತಿಯ ಹೂವುಗಳಿವೆ! ನಿಮ್ಮ ಸಿಎಎ ಧಿಕ್ಕಾರ, ಗೋ ಬ್ಯಾಕ್‌ ಮೋದಿ ಎಂದು ಕೆ.ಪಿ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...