Homeಕರ್ನಾಟಕಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

ಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಮೋದಿಯವರಿಂದ ಕರ್ನಾಟಕದ ಜನತೆ ನಿರೀಕ್ಷಿಸಿದ್ದ ಮಾತುಗಳು

ಹೆಚ್ಚುತ್ತಿರುವ ನಿರುದ್ಯೋಗಕ್ಕೆ ಪರಿಹಾರ
ರೈತರ ಆತ್ಮಹತ್ಯೆಗಳ ತಡೆ
ನೆರೆ ಪರಿಹಾರ
ಹಣದುಬ್ಬರದ ತಡೆ
ಜಿಡಿಪಿ ಬೆಳವಣಿಗೆಯನ್ನು
ಮಹಿಳೆಯರ ಸುರಕ್ಷತೆ
ಸಿಎಎ, ಎನ್‌ಆರ್‌ಸಿ ವಾಪಸ್‌ ತೆಗೆದುಕೊಳ್ಳುವುದು

ಆದರೆ ಮೋದಿ ಹೇಳಿದ್ದು. “ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ನಿಮ್ಮ ದನಿ ಎತ್ತಿ….”

ಇದು ಇಂದು ಟ್ವಿಟ್ಟರ್‌ನಲ್ಲಿ ವೈರಲ್‌ ಆದ ಒಂದು ಟ್ವೀಟ್‌.. ಇಂದು ಕರ್ನಾಟಕದ ತುಮಕೂರಿಗೆ ಪ್ರಧಾನಿ ಮೋದಿ ಬಂದಿದ್ದಾರೆ. ಬೆಳಿಗ್ಗೆಯಿಂದ ಎಲ್ಲಾ ವಾಹಿನಿಗಳಲ್ಲಿಯೂ ಅವರ ಆಗಮನ, ಅದಕ್ಕೆ ನಡೆದ ತಯಾರಿಗಳ ಸಭೆ ವರಿಯಾಗುತ್ತಿದ್ದವು. ಆದರೆ ಯಾವಾಗ ಮೋದಿಯವರು ಮತ್ತೆ ಪಾಕಿಸ್ತಾನದ ವಿರುದ್ಧ ಭಾಷಣ ಮಾಡಿದರೋ ಒಮ್ಮೆಗೆ ಟ್ವಿಟ್ಟರ್‌ನಲ್ಲಿ ಗೋ ಬ್ಯಾಕ್‌ ಮೋದಿ ಹ್ಯಾಸ್‌ಟ್ಯಾಗ್‌ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿದೆ.

ನೂರಾರು ಜನ ಮೋದಿಯವರ ಭಾಷಣಕ್ಕೆ ಅಪಸ್ವರ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಕೆಲ ಆಯ್ದ ಟ್ವೀಟ್‌ಗಳು ಇಲ್ಲಿವೆ..

ಶಿವಕುಮಾರ ಸ್ವಾಮಿಗಳು ನಿಧನರಾದಾಗ, ಪ್ರವಾಹ ಬಂದು ಜನ ಸಂಕಷ್ಟದಲ್ಲಿದ್ದಾಗ, ಜನರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಬಯಸಿದಾಗ ಬಾರದಿದ್ದ ಪ್ರಧಾನಿ ಮೋದಿಯವರು ಈಗ ಬಂದು ಕೆಲಸಕ್ಕೆ ಬಾರದ ಭಾಷಣ ಮಾಡಿದ್ದಾರೆ. ಅವರನ್ನು ತಿರಸ್ಕರಿಸಿ ಎಂದು ಆದರ್ಶ ಕುಮಾರ್‌ ಎಚ್‌.ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಸಿದ್ದಗಂಗ ಸ್ವಾಮೀಜಿಗಳಿಗೆ ಗೌರವ ಕೊಟು ಅವರ ಅಂತ್ಯಕ್ರಿಯೆಗೂ ಸಹ ಭೇಟಿ ನೀಡದ ಮೋದಿ, ಇಂದು ಅವರದೇ ಆಶ್ರಮದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ!

ಕರ್ನಾಟಕದಲ್ಲಿ ಈ ರೀತಿಯ ರಾಜಕೀಯಕ್ಕೆ ಧಾರ್ಮಿಕ ಆಶ್ರಮವನ್ನು ಎಂದಿಗೂ ಬಳಸಲಾಗಿಲ್ಲ. ಎಂತಹ ನಾಚಿಕೆಯಿಲ್ಲದ ವ್ಯಕ್ತಿ ನಮ್ಮ ಪ್ರಧಾನಿ? ಎಂದು ಶ್ರೀವತ್ಸ ಎನ್ನುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ಹೋರಾಡಿ ಎಂದು ಮೋದಿ ಹೇಳಿರುವುದು ಶುದ್ಧ ಅಸಂಬದ್ಧ. ಆತ್ಮೀಯ ಪ್ರಧಾನಿ, ಪಾಕಿಸ್ತಾನ ನಮ್ಮ ಸಮಸ್ಯೆಯಲ್ಲ. ನಾವು ದೇಶದೊಳಗಿನ ಸಮಸ್ಯೆಗಳ ವಿರುದ್ಧ ಹೋರಾಡುತ್ತೇವೆ. ಪ್ರತಿಭಟನೆ ನಡೆಸಬೇಡಿ ಎಂದು ಹೇಳಲು ನಿಮಗೆ ಯಾವುದೇ ಹಕ್ಕಿಲ್ಲ. ಚುನಾಯಿತ ಸರ್ಕಾರವು ಬಾಹ್ಯ ವ್ಯವಹಾರಗಳನ್ನು ನಿರ್ವಹಿಸಬೇಕೇ ಹೊರತು ಪ್ರಜೆಗಳಲ್ಲ. ಕಾಮನ್ಸೆನ್ಸ್ ಇಲ್ಲದ ಯಾರಾದರೂ ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿದಾಗ ಇದು ಸಂಭವಿಸುತ್ತದೆ! ಎಂದು ಕುಂಟಾಡಿ ನಿತೇಶ್‌ ರವರು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸುಳ್ಳನ್ನು ಇಲ್ಲಿ ಹರಡಬೇಡಿ ಮತ್ತು ದ್ವೇಷಿಸಬೇಡಿ. ಕರ್ನಾಟಕವು ಎಲ್ಲರನ್ನೂ ಒಳಗೊಂಡ ರಾಜ್ಯವಾಗಿದೆ. ನಾವು ಯಾರನ್ನೂ ಹೊರಗಿಡುವ ಅಗತ್ಯವಿಲ್ಲ. ಕರ್ನಾಟಕದ ಪುಷ್ಪಗುಚ್ಛದಲ್ಲಿ ಎಲ್ಲಾ ರೀತಿಯ ಹೂವುಗಳಿವೆ! ನಿಮ್ಮ ಸಿಎಎ ಧಿಕ್ಕಾರ, ಗೋ ಬ್ಯಾಕ್‌ ಮೋದಿ ಎಂದು ಕೆ.ಪಿ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...