Homeಕರ್ನಾಟಕಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

ಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಮೋದಿಯವರಿಂದ ಕರ್ನಾಟಕದ ಜನತೆ ನಿರೀಕ್ಷಿಸಿದ್ದ ಮಾತುಗಳು

ಹೆಚ್ಚುತ್ತಿರುವ ನಿರುದ್ಯೋಗಕ್ಕೆ ಪರಿಹಾರ
ರೈತರ ಆತ್ಮಹತ್ಯೆಗಳ ತಡೆ
ನೆರೆ ಪರಿಹಾರ
ಹಣದುಬ್ಬರದ ತಡೆ
ಜಿಡಿಪಿ ಬೆಳವಣಿಗೆಯನ್ನು
ಮಹಿಳೆಯರ ಸುರಕ್ಷತೆ
ಸಿಎಎ, ಎನ್‌ಆರ್‌ಸಿ ವಾಪಸ್‌ ತೆಗೆದುಕೊಳ್ಳುವುದು

ಆದರೆ ಮೋದಿ ಹೇಳಿದ್ದು. “ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ನಿಮ್ಮ ದನಿ ಎತ್ತಿ….”

ಇದು ಇಂದು ಟ್ವಿಟ್ಟರ್‌ನಲ್ಲಿ ವೈರಲ್‌ ಆದ ಒಂದು ಟ್ವೀಟ್‌.. ಇಂದು ಕರ್ನಾಟಕದ ತುಮಕೂರಿಗೆ ಪ್ರಧಾನಿ ಮೋದಿ ಬಂದಿದ್ದಾರೆ. ಬೆಳಿಗ್ಗೆಯಿಂದ ಎಲ್ಲಾ ವಾಹಿನಿಗಳಲ್ಲಿಯೂ ಅವರ ಆಗಮನ, ಅದಕ್ಕೆ ನಡೆದ ತಯಾರಿಗಳ ಸಭೆ ವರಿಯಾಗುತ್ತಿದ್ದವು. ಆದರೆ ಯಾವಾಗ ಮೋದಿಯವರು ಮತ್ತೆ ಪಾಕಿಸ್ತಾನದ ವಿರುದ್ಧ ಭಾಷಣ ಮಾಡಿದರೋ ಒಮ್ಮೆಗೆ ಟ್ವಿಟ್ಟರ್‌ನಲ್ಲಿ ಗೋ ಬ್ಯಾಕ್‌ ಮೋದಿ ಹ್ಯಾಸ್‌ಟ್ಯಾಗ್‌ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿದೆ.

ನೂರಾರು ಜನ ಮೋದಿಯವರ ಭಾಷಣಕ್ಕೆ ಅಪಸ್ವರ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಕೆಲ ಆಯ್ದ ಟ್ವೀಟ್‌ಗಳು ಇಲ್ಲಿವೆ..

ಶಿವಕುಮಾರ ಸ್ವಾಮಿಗಳು ನಿಧನರಾದಾಗ, ಪ್ರವಾಹ ಬಂದು ಜನ ಸಂಕಷ್ಟದಲ್ಲಿದ್ದಾಗ, ಜನರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಬಯಸಿದಾಗ ಬಾರದಿದ್ದ ಪ್ರಧಾನಿ ಮೋದಿಯವರು ಈಗ ಬಂದು ಕೆಲಸಕ್ಕೆ ಬಾರದ ಭಾಷಣ ಮಾಡಿದ್ದಾರೆ. ಅವರನ್ನು ತಿರಸ್ಕರಿಸಿ ಎಂದು ಆದರ್ಶ ಕುಮಾರ್‌ ಎಚ್‌.ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಸಿದ್ದಗಂಗ ಸ್ವಾಮೀಜಿಗಳಿಗೆ ಗೌರವ ಕೊಟು ಅವರ ಅಂತ್ಯಕ್ರಿಯೆಗೂ ಸಹ ಭೇಟಿ ನೀಡದ ಮೋದಿ, ಇಂದು ಅವರದೇ ಆಶ್ರಮದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ!

ಕರ್ನಾಟಕದಲ್ಲಿ ಈ ರೀತಿಯ ರಾಜಕೀಯಕ್ಕೆ ಧಾರ್ಮಿಕ ಆಶ್ರಮವನ್ನು ಎಂದಿಗೂ ಬಳಸಲಾಗಿಲ್ಲ. ಎಂತಹ ನಾಚಿಕೆಯಿಲ್ಲದ ವ್ಯಕ್ತಿ ನಮ್ಮ ಪ್ರಧಾನಿ? ಎಂದು ಶ್ರೀವತ್ಸ ಎನ್ನುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ಹೋರಾಡಿ ಎಂದು ಮೋದಿ ಹೇಳಿರುವುದು ಶುದ್ಧ ಅಸಂಬದ್ಧ. ಆತ್ಮೀಯ ಪ್ರಧಾನಿ, ಪಾಕಿಸ್ತಾನ ನಮ್ಮ ಸಮಸ್ಯೆಯಲ್ಲ. ನಾವು ದೇಶದೊಳಗಿನ ಸಮಸ್ಯೆಗಳ ವಿರುದ್ಧ ಹೋರಾಡುತ್ತೇವೆ. ಪ್ರತಿಭಟನೆ ನಡೆಸಬೇಡಿ ಎಂದು ಹೇಳಲು ನಿಮಗೆ ಯಾವುದೇ ಹಕ್ಕಿಲ್ಲ. ಚುನಾಯಿತ ಸರ್ಕಾರವು ಬಾಹ್ಯ ವ್ಯವಹಾರಗಳನ್ನು ನಿರ್ವಹಿಸಬೇಕೇ ಹೊರತು ಪ್ರಜೆಗಳಲ್ಲ. ಕಾಮನ್ಸೆನ್ಸ್ ಇಲ್ಲದ ಯಾರಾದರೂ ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿದಾಗ ಇದು ಸಂಭವಿಸುತ್ತದೆ! ಎಂದು ಕುಂಟಾಡಿ ನಿತೇಶ್‌ ರವರು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸುಳ್ಳನ್ನು ಇಲ್ಲಿ ಹರಡಬೇಡಿ ಮತ್ತು ದ್ವೇಷಿಸಬೇಡಿ. ಕರ್ನಾಟಕವು ಎಲ್ಲರನ್ನೂ ಒಳಗೊಂಡ ರಾಜ್ಯವಾಗಿದೆ. ನಾವು ಯಾರನ್ನೂ ಹೊರಗಿಡುವ ಅಗತ್ಯವಿಲ್ಲ. ಕರ್ನಾಟಕದ ಪುಷ್ಪಗುಚ್ಛದಲ್ಲಿ ಎಲ್ಲಾ ರೀತಿಯ ಹೂವುಗಳಿವೆ! ನಿಮ್ಮ ಸಿಎಎ ಧಿಕ್ಕಾರ, ಗೋ ಬ್ಯಾಕ್‌ ಮೋದಿ ಎಂದು ಕೆ.ಪಿ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...