Homeಕರ್ನಾಟಕಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

ಗೋ ಬ್ಯಾಕ್ ಮೋದಿ_ಮೋದಿ ವಾಪಸ್‌ ಹೋಗು : ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಮೋದಿಯವರಿಂದ ಕರ್ನಾಟಕದ ಜನತೆ ನಿರೀಕ್ಷಿಸಿದ್ದ ಮಾತುಗಳು

ಹೆಚ್ಚುತ್ತಿರುವ ನಿರುದ್ಯೋಗಕ್ಕೆ ಪರಿಹಾರ
ರೈತರ ಆತ್ಮಹತ್ಯೆಗಳ ತಡೆ
ನೆರೆ ಪರಿಹಾರ
ಹಣದುಬ್ಬರದ ತಡೆ
ಜಿಡಿಪಿ ಬೆಳವಣಿಗೆಯನ್ನು
ಮಹಿಳೆಯರ ಸುರಕ್ಷತೆ
ಸಿಎಎ, ಎನ್‌ಆರ್‌ಸಿ ವಾಪಸ್‌ ತೆಗೆದುಕೊಳ್ಳುವುದು

ಆದರೆ ಮೋದಿ ಹೇಳಿದ್ದು. “ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ನಿಮ್ಮ ದನಿ ಎತ್ತಿ….”

ಇದು ಇಂದು ಟ್ವಿಟ್ಟರ್‌ನಲ್ಲಿ ವೈರಲ್‌ ಆದ ಒಂದು ಟ್ವೀಟ್‌.. ಇಂದು ಕರ್ನಾಟಕದ ತುಮಕೂರಿಗೆ ಪ್ರಧಾನಿ ಮೋದಿ ಬಂದಿದ್ದಾರೆ. ಬೆಳಿಗ್ಗೆಯಿಂದ ಎಲ್ಲಾ ವಾಹಿನಿಗಳಲ್ಲಿಯೂ ಅವರ ಆಗಮನ, ಅದಕ್ಕೆ ನಡೆದ ತಯಾರಿಗಳ ಸಭೆ ವರಿಯಾಗುತ್ತಿದ್ದವು. ಆದರೆ ಯಾವಾಗ ಮೋದಿಯವರು ಮತ್ತೆ ಪಾಕಿಸ್ತಾನದ ವಿರುದ್ಧ ಭಾಷಣ ಮಾಡಿದರೋ ಒಮ್ಮೆಗೆ ಟ್ವಿಟ್ಟರ್‌ನಲ್ಲಿ ಗೋ ಬ್ಯಾಕ್‌ ಮೋದಿ ಹ್ಯಾಸ್‌ಟ್ಯಾಗ್‌ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿದೆ.

ನೂರಾರು ಜನ ಮೋದಿಯವರ ಭಾಷಣಕ್ಕೆ ಅಪಸ್ವರ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಕೆಲ ಆಯ್ದ ಟ್ವೀಟ್‌ಗಳು ಇಲ್ಲಿವೆ..

ಶಿವಕುಮಾರ ಸ್ವಾಮಿಗಳು ನಿಧನರಾದಾಗ, ಪ್ರವಾಹ ಬಂದು ಜನ ಸಂಕಷ್ಟದಲ್ಲಿದ್ದಾಗ, ಜನರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಬಯಸಿದಾಗ ಬಾರದಿದ್ದ ಪ್ರಧಾನಿ ಮೋದಿಯವರು ಈಗ ಬಂದು ಕೆಲಸಕ್ಕೆ ಬಾರದ ಭಾಷಣ ಮಾಡಿದ್ದಾರೆ. ಅವರನ್ನು ತಿರಸ್ಕರಿಸಿ ಎಂದು ಆದರ್ಶ ಕುಮಾರ್‌ ಎಚ್‌.ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಸಿದ್ದಗಂಗ ಸ್ವಾಮೀಜಿಗಳಿಗೆ ಗೌರವ ಕೊಟು ಅವರ ಅಂತ್ಯಕ್ರಿಯೆಗೂ ಸಹ ಭೇಟಿ ನೀಡದ ಮೋದಿ, ಇಂದು ಅವರದೇ ಆಶ್ರಮದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ!

ಕರ್ನಾಟಕದಲ್ಲಿ ಈ ರೀತಿಯ ರಾಜಕೀಯಕ್ಕೆ ಧಾರ್ಮಿಕ ಆಶ್ರಮವನ್ನು ಎಂದಿಗೂ ಬಳಸಲಾಗಿಲ್ಲ. ಎಂತಹ ನಾಚಿಕೆಯಿಲ್ಲದ ವ್ಯಕ್ತಿ ನಮ್ಮ ಪ್ರಧಾನಿ? ಎಂದು ಶ್ರೀವತ್ಸ ಎನ್ನುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಹಿಂದಿನ ದೌರ್ಜನ್ಯಗಳ ವಿರುದ್ಧ ಹೋರಾಡಿ ಎಂದು ಮೋದಿ ಹೇಳಿರುವುದು ಶುದ್ಧ ಅಸಂಬದ್ಧ. ಆತ್ಮೀಯ ಪ್ರಧಾನಿ, ಪಾಕಿಸ್ತಾನ ನಮ್ಮ ಸಮಸ್ಯೆಯಲ್ಲ. ನಾವು ದೇಶದೊಳಗಿನ ಸಮಸ್ಯೆಗಳ ವಿರುದ್ಧ ಹೋರಾಡುತ್ತೇವೆ. ಪ್ರತಿಭಟನೆ ನಡೆಸಬೇಡಿ ಎಂದು ಹೇಳಲು ನಿಮಗೆ ಯಾವುದೇ ಹಕ್ಕಿಲ್ಲ. ಚುನಾಯಿತ ಸರ್ಕಾರವು ಬಾಹ್ಯ ವ್ಯವಹಾರಗಳನ್ನು ನಿರ್ವಹಿಸಬೇಕೇ ಹೊರತು ಪ್ರಜೆಗಳಲ್ಲ. ಕಾಮನ್ಸೆನ್ಸ್ ಇಲ್ಲದ ಯಾರಾದರೂ ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿದಾಗ ಇದು ಸಂಭವಿಸುತ್ತದೆ! ಎಂದು ಕುಂಟಾಡಿ ನಿತೇಶ್‌ ರವರು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸುಳ್ಳನ್ನು ಇಲ್ಲಿ ಹರಡಬೇಡಿ ಮತ್ತು ದ್ವೇಷಿಸಬೇಡಿ. ಕರ್ನಾಟಕವು ಎಲ್ಲರನ್ನೂ ಒಳಗೊಂಡ ರಾಜ್ಯವಾಗಿದೆ. ನಾವು ಯಾರನ್ನೂ ಹೊರಗಿಡುವ ಅಗತ್ಯವಿಲ್ಲ. ಕರ್ನಾಟಕದ ಪುಷ್ಪಗುಚ್ಛದಲ್ಲಿ ಎಲ್ಲಾ ರೀತಿಯ ಹೂವುಗಳಿವೆ! ನಿಮ್ಮ ಸಿಎಎ ಧಿಕ್ಕಾರ, ಗೋ ಬ್ಯಾಕ್‌ ಮೋದಿ ಎಂದು ಕೆ.ಪಿ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...