Homeಮುಖಪುಟಮತ್ತೆ ಟ್ರೆಂಡಿಂಗ್‌ ಆದ ’ಗೋ ಬ್ಯಾಕ್‌ ಮೋದಿ’ : ದ್ರಾವಿಡರ ನಾಡಿನಲ್ಲಿ ಮೋದಿಗೆ ಮಹಾವಿರೋಧ

ಮತ್ತೆ ಟ್ರೆಂಡಿಂಗ್‌ ಆದ ’ಗೋ ಬ್ಯಾಕ್‌ ಮೋದಿ’ : ದ್ರಾವಿಡರ ನಾಡಿನಲ್ಲಿ ಮೋದಿಗೆ ಮಹಾವಿರೋಧ

- Advertisement -
- Advertisement -

ಇಂದು ಪ್ರಧಾನಿ ಮೋದಿಯವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ರೊಡನೆ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ. ಷಿ ಜಿನ್‌ಪಿಂಗ್‌ರವರು ಚನ್ನೈಗೆ ತೆರಳಿ ಅಲ್ಲಿಂದ ಸಂಜೆ 5ಕ್ಕೆ ಮಾಮಲ್ಲಪುರಂಗೆ ಉಭಯನಾಯಕುರು ಹೋಗುವ ಯೋಜನೆಯಾಗಿದೆ. ಆದರೆ ಈ ಮಹತ್ವದ ಭೇಟಿಗೆ ಸ್ವಾಗತಕ್ಕಿಂತ ವಿರೋಧವೇ ಹೆಚ್ಚಾಗಿದೆ.

ಹೌದು ಪ್ರತಿ ಬಾರಿ ಮೊದಿ ತಮಿಳುನಾಡಿಗೆ ಹೋದಾಗಲೆಲ್ಲಾ ತೀವ್ರ ವಿರೋಧ ವ್ಯಕ್ತವಾಗುತ್ತದೆ. ಟ್ವಿಟ್ಟರ್‌ನಲ್ಲಿ “ಗೋ ಬ್ಯಾಕ್‌ ಮೋದಿ” ಹ್ಯಾಷ್‌ ಟ್ಯಾಗ್‌ ಟ್ರೆಂಡಿಂಗ್‌ ಆಗುತ್ತದೆ. ಅದು ಈ ಬಾರಿಯೂ ಮರುಕಳಿಸಿದ್ದು ಈ ಹ್ಯಾಷ್‌ಟ್ಯಾಗ್‌ ಭಾರತದಲ್ಲಿಯೇ ನಂಬರ್‌ 1 ಸ್ಥಾನಕ್ಕೇರಿದೆ.

ಸಾವಿರಾರು ಪೋಸ್ಟ್‌ರ್‌ಗಳು, ಮೀಮ್ಸ್‌ಗಳು ತಯಾರಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಓಡಾಡಿತ್ತಿವೆ. ಇನ್ನು ತಮಿಳುನಾಡಿನಲ್ಲಿ ಮೋದಿ ವಿರೋಧಕ್ಕಾಗಿ ಕಪ್ಪು ಬಣ್ಣದ ಸಾವಿರಾರು ಬಲೂನ್‌ಗಳು ತಯಾರಾಗಿದ್ದು ಆಕಾಶದಲ್ಲಿ ಹಾರಾಡಿ ಮೋದಿ ಅಭಿಮಾನಿಗಳಿಗೆ ಮುಜಗರ ಉಂಟುಮಾಡಲಿವೆ.

ಹಿಂದಿ ಹೇರಿಕೆ, ಕೇಂದ್ರದಿಂದ ಸಮರ್ಪಕ ಅನುದಾನ ಸಿಗದಿರುವುದು, ಕಾವೇರಿ ನದಿನೀರಿನ ವಿವಾದ ಸೇರಿದಂತೆ ಹಲವು ವಿಚಾರದಲ್ಲಿ ಮೋದಿ ಸರ್ಕಾರ ತಮಿಳುನಾಡಿಗೆ ಅನ್ಯಾಯ ಮಾಡಿದೆ ಎಂಬುದು ಬಹುತೇಕ ತಮಿಳರ ಅಭಿಪ್ರಾಯವಾಗಿದೆ. ಜೊತೆಗೆ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಅಧಿಕಾರವನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂಬುದು ದ್ರಾವಿಡರಿಂದ ಹಿಂದಿನಿಂದಲೂ ಕೇಳಿಬರುತ್ತಿರುವ ಆರೋಪವಾಗಿದೆ.

ಅದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟವಾಗಿ ತೋರಿಸಿತ್ತು. ತಮಿಳುನಾಡಿನಲ್ಲಿರುವ ಒಟ್ಟು 39 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಕೂಟವೂ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲ್ಲುವ ಮೂಲಕ ಹೀನಾಯ ಸೋಲು ಕಂಡಿತ್ತು. ದೇಶಾದ್ಯಂತ ಬಿಜೆಪಿ ಮತ್ತದರ ಮೈತ್ರಿಕೂಟ ಭರ್ಜರಿ ವಿಜಯ ಸಾಧಿಸಿದರೆ ತಮಿಳುನಾಡಿನಲ್ಲಿ ಮಾತ್ರ ಕೆಟ್ಟ ಸೋಲು ಅನುಭವಿಸಿತ್ತು.

ಇನ್ನು ಮೋದಿ ವಿರೋಧಿ ಬಣವಾದ ಡಿಎಂಕೆ ಮತ್ತುಕಾಂಗ್ರೆಸ್‌ ಪಕ್ಷ ಇಲ್ಲಿ ಸದ್ಯಕ್ಕೆ ಪ್ರಬಲವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಕೂಟ 39ರಲ್ಲಿ 38 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ವಿಜಯ ಸಾಧಿಸಿತ್ತು. ಅಲ್ಲಿ 2021ರಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯಲಿದ್ದು ಬಿಜೆಪಿಗೆ ಮತ್ತೆ ಸೋಲಾಗುವ ಸಂಭವವಿದೆ..

ಇನ್ನು ಗೋ ಬ್ಯಾಕ್‌ ಮೋದಿಗೆ ವಿರುದ್ಧವಾಗಿ ವೆಲ್‌ಕಂ ಮೋದಿ ಎಂಬ ಟ್ರೆಂಡಿಂಗ್‌ ಸಹ ಆರಂಭಿಸಿದ್ದರು ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಸದಕ್ಕೆ 83 ಸಾವಿರ ಜನ ಗೋ ಬ್ಯಾಕ್‌ ಮೋದಿ ಟ್ವೀಟ್‌ ಮಾಡಿದರೆ, ವೆಲ್‌ ಕಂ ಮೋದಿ ಎಂದು ಕೇವಲ 16 ಸಾವಿರ ಜನ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಧ್ಯಕ್ಕೆ ತಮಿಳುನಾಡಿನಲ್ಲಾದರೂ ಮನುವಾದಿಗಳಿಗೆ ಪ್ರಭಲ ವಿರೋಧ ಇರುವುದು ಸಮಾಧಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...