Homeಮುಖಪುಟಮತ್ತೆ ಟ್ರೆಂಡಿಂಗ್‌ ಆದ ’ಗೋ ಬ್ಯಾಕ್‌ ಮೋದಿ’ : ದ್ರಾವಿಡರ ನಾಡಿನಲ್ಲಿ ಮೋದಿಗೆ ಮಹಾವಿರೋಧ

ಮತ್ತೆ ಟ್ರೆಂಡಿಂಗ್‌ ಆದ ’ಗೋ ಬ್ಯಾಕ್‌ ಮೋದಿ’ : ದ್ರಾವಿಡರ ನಾಡಿನಲ್ಲಿ ಮೋದಿಗೆ ಮಹಾವಿರೋಧ

- Advertisement -
- Advertisement -

ಇಂದು ಪ್ರಧಾನಿ ಮೋದಿಯವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ರೊಡನೆ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ. ಷಿ ಜಿನ್‌ಪಿಂಗ್‌ರವರು ಚನ್ನೈಗೆ ತೆರಳಿ ಅಲ್ಲಿಂದ ಸಂಜೆ 5ಕ್ಕೆ ಮಾಮಲ್ಲಪುರಂಗೆ ಉಭಯನಾಯಕುರು ಹೋಗುವ ಯೋಜನೆಯಾಗಿದೆ. ಆದರೆ ಈ ಮಹತ್ವದ ಭೇಟಿಗೆ ಸ್ವಾಗತಕ್ಕಿಂತ ವಿರೋಧವೇ ಹೆಚ್ಚಾಗಿದೆ.

ಹೌದು ಪ್ರತಿ ಬಾರಿ ಮೊದಿ ತಮಿಳುನಾಡಿಗೆ ಹೋದಾಗಲೆಲ್ಲಾ ತೀವ್ರ ವಿರೋಧ ವ್ಯಕ್ತವಾಗುತ್ತದೆ. ಟ್ವಿಟ್ಟರ್‌ನಲ್ಲಿ “ಗೋ ಬ್ಯಾಕ್‌ ಮೋದಿ” ಹ್ಯಾಷ್‌ ಟ್ಯಾಗ್‌ ಟ್ರೆಂಡಿಂಗ್‌ ಆಗುತ್ತದೆ. ಅದು ಈ ಬಾರಿಯೂ ಮರುಕಳಿಸಿದ್ದು ಈ ಹ್ಯಾಷ್‌ಟ್ಯಾಗ್‌ ಭಾರತದಲ್ಲಿಯೇ ನಂಬರ್‌ 1 ಸ್ಥಾನಕ್ಕೇರಿದೆ.

ಸಾವಿರಾರು ಪೋಸ್ಟ್‌ರ್‌ಗಳು, ಮೀಮ್ಸ್‌ಗಳು ತಯಾರಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಓಡಾಡಿತ್ತಿವೆ. ಇನ್ನು ತಮಿಳುನಾಡಿನಲ್ಲಿ ಮೋದಿ ವಿರೋಧಕ್ಕಾಗಿ ಕಪ್ಪು ಬಣ್ಣದ ಸಾವಿರಾರು ಬಲೂನ್‌ಗಳು ತಯಾರಾಗಿದ್ದು ಆಕಾಶದಲ್ಲಿ ಹಾರಾಡಿ ಮೋದಿ ಅಭಿಮಾನಿಗಳಿಗೆ ಮುಜಗರ ಉಂಟುಮಾಡಲಿವೆ.

ಹಿಂದಿ ಹೇರಿಕೆ, ಕೇಂದ್ರದಿಂದ ಸಮರ್ಪಕ ಅನುದಾನ ಸಿಗದಿರುವುದು, ಕಾವೇರಿ ನದಿನೀರಿನ ವಿವಾದ ಸೇರಿದಂತೆ ಹಲವು ವಿಚಾರದಲ್ಲಿ ಮೋದಿ ಸರ್ಕಾರ ತಮಿಳುನಾಡಿಗೆ ಅನ್ಯಾಯ ಮಾಡಿದೆ ಎಂಬುದು ಬಹುತೇಕ ತಮಿಳರ ಅಭಿಪ್ರಾಯವಾಗಿದೆ. ಜೊತೆಗೆ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಅಧಿಕಾರವನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂಬುದು ದ್ರಾವಿಡರಿಂದ ಹಿಂದಿನಿಂದಲೂ ಕೇಳಿಬರುತ್ತಿರುವ ಆರೋಪವಾಗಿದೆ.

ಅದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟವಾಗಿ ತೋರಿಸಿತ್ತು. ತಮಿಳುನಾಡಿನಲ್ಲಿರುವ ಒಟ್ಟು 39 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಕೂಟವೂ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲ್ಲುವ ಮೂಲಕ ಹೀನಾಯ ಸೋಲು ಕಂಡಿತ್ತು. ದೇಶಾದ್ಯಂತ ಬಿಜೆಪಿ ಮತ್ತದರ ಮೈತ್ರಿಕೂಟ ಭರ್ಜರಿ ವಿಜಯ ಸಾಧಿಸಿದರೆ ತಮಿಳುನಾಡಿನಲ್ಲಿ ಮಾತ್ರ ಕೆಟ್ಟ ಸೋಲು ಅನುಭವಿಸಿತ್ತು.

ಇನ್ನು ಮೋದಿ ವಿರೋಧಿ ಬಣವಾದ ಡಿಎಂಕೆ ಮತ್ತುಕಾಂಗ್ರೆಸ್‌ ಪಕ್ಷ ಇಲ್ಲಿ ಸದ್ಯಕ್ಕೆ ಪ್ರಬಲವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಕೂಟ 39ರಲ್ಲಿ 38 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ವಿಜಯ ಸಾಧಿಸಿತ್ತು. ಅಲ್ಲಿ 2021ರಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯಲಿದ್ದು ಬಿಜೆಪಿಗೆ ಮತ್ತೆ ಸೋಲಾಗುವ ಸಂಭವವಿದೆ..

ಇನ್ನು ಗೋ ಬ್ಯಾಕ್‌ ಮೋದಿಗೆ ವಿರುದ್ಧವಾಗಿ ವೆಲ್‌ಕಂ ಮೋದಿ ಎಂಬ ಟ್ರೆಂಡಿಂಗ್‌ ಸಹ ಆರಂಭಿಸಿದ್ದರು ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಸದಕ್ಕೆ 83 ಸಾವಿರ ಜನ ಗೋ ಬ್ಯಾಕ್‌ ಮೋದಿ ಟ್ವೀಟ್‌ ಮಾಡಿದರೆ, ವೆಲ್‌ ಕಂ ಮೋದಿ ಎಂದು ಕೇವಲ 16 ಸಾವಿರ ಜನ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಧ್ಯಕ್ಕೆ ತಮಿಳುನಾಡಿನಲ್ಲಾದರೂ ಮನುವಾದಿಗಳಿಗೆ ಪ್ರಭಲ ವಿರೋಧ ಇರುವುದು ಸಮಾಧಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...