Homeಮುಖಪುಟಮತ್ತೆ ಟ್ರೆಂಡಿಂಗ್‌ ಆದ ’ಗೋ ಬ್ಯಾಕ್‌ ಮೋದಿ’ : ದ್ರಾವಿಡರ ನಾಡಿನಲ್ಲಿ ಮೋದಿಗೆ ಮಹಾವಿರೋಧ

ಮತ್ತೆ ಟ್ರೆಂಡಿಂಗ್‌ ಆದ ’ಗೋ ಬ್ಯಾಕ್‌ ಮೋದಿ’ : ದ್ರಾವಿಡರ ನಾಡಿನಲ್ಲಿ ಮೋದಿಗೆ ಮಹಾವಿರೋಧ

- Advertisement -
- Advertisement -

ಇಂದು ಪ್ರಧಾನಿ ಮೋದಿಯವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ರೊಡನೆ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ. ಷಿ ಜಿನ್‌ಪಿಂಗ್‌ರವರು ಚನ್ನೈಗೆ ತೆರಳಿ ಅಲ್ಲಿಂದ ಸಂಜೆ 5ಕ್ಕೆ ಮಾಮಲ್ಲಪುರಂಗೆ ಉಭಯನಾಯಕುರು ಹೋಗುವ ಯೋಜನೆಯಾಗಿದೆ. ಆದರೆ ಈ ಮಹತ್ವದ ಭೇಟಿಗೆ ಸ್ವಾಗತಕ್ಕಿಂತ ವಿರೋಧವೇ ಹೆಚ್ಚಾಗಿದೆ.

ಹೌದು ಪ್ರತಿ ಬಾರಿ ಮೊದಿ ತಮಿಳುನಾಡಿಗೆ ಹೋದಾಗಲೆಲ್ಲಾ ತೀವ್ರ ವಿರೋಧ ವ್ಯಕ್ತವಾಗುತ್ತದೆ. ಟ್ವಿಟ್ಟರ್‌ನಲ್ಲಿ “ಗೋ ಬ್ಯಾಕ್‌ ಮೋದಿ” ಹ್ಯಾಷ್‌ ಟ್ಯಾಗ್‌ ಟ್ರೆಂಡಿಂಗ್‌ ಆಗುತ್ತದೆ. ಅದು ಈ ಬಾರಿಯೂ ಮರುಕಳಿಸಿದ್ದು ಈ ಹ್ಯಾಷ್‌ಟ್ಯಾಗ್‌ ಭಾರತದಲ್ಲಿಯೇ ನಂಬರ್‌ 1 ಸ್ಥಾನಕ್ಕೇರಿದೆ.

ಸಾವಿರಾರು ಪೋಸ್ಟ್‌ರ್‌ಗಳು, ಮೀಮ್ಸ್‌ಗಳು ತಯಾರಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಓಡಾಡಿತ್ತಿವೆ. ಇನ್ನು ತಮಿಳುನಾಡಿನಲ್ಲಿ ಮೋದಿ ವಿರೋಧಕ್ಕಾಗಿ ಕಪ್ಪು ಬಣ್ಣದ ಸಾವಿರಾರು ಬಲೂನ್‌ಗಳು ತಯಾರಾಗಿದ್ದು ಆಕಾಶದಲ್ಲಿ ಹಾರಾಡಿ ಮೋದಿ ಅಭಿಮಾನಿಗಳಿಗೆ ಮುಜಗರ ಉಂಟುಮಾಡಲಿವೆ.

ಹಿಂದಿ ಹೇರಿಕೆ, ಕೇಂದ್ರದಿಂದ ಸಮರ್ಪಕ ಅನುದಾನ ಸಿಗದಿರುವುದು, ಕಾವೇರಿ ನದಿನೀರಿನ ವಿವಾದ ಸೇರಿದಂತೆ ಹಲವು ವಿಚಾರದಲ್ಲಿ ಮೋದಿ ಸರ್ಕಾರ ತಮಿಳುನಾಡಿಗೆ ಅನ್ಯಾಯ ಮಾಡಿದೆ ಎಂಬುದು ಬಹುತೇಕ ತಮಿಳರ ಅಭಿಪ್ರಾಯವಾಗಿದೆ. ಜೊತೆಗೆ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಅಧಿಕಾರವನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂಬುದು ದ್ರಾವಿಡರಿಂದ ಹಿಂದಿನಿಂದಲೂ ಕೇಳಿಬರುತ್ತಿರುವ ಆರೋಪವಾಗಿದೆ.

ಅದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟವಾಗಿ ತೋರಿಸಿತ್ತು. ತಮಿಳುನಾಡಿನಲ್ಲಿರುವ ಒಟ್ಟು 39 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಕೂಟವೂ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲ್ಲುವ ಮೂಲಕ ಹೀನಾಯ ಸೋಲು ಕಂಡಿತ್ತು. ದೇಶಾದ್ಯಂತ ಬಿಜೆಪಿ ಮತ್ತದರ ಮೈತ್ರಿಕೂಟ ಭರ್ಜರಿ ವಿಜಯ ಸಾಧಿಸಿದರೆ ತಮಿಳುನಾಡಿನಲ್ಲಿ ಮಾತ್ರ ಕೆಟ್ಟ ಸೋಲು ಅನುಭವಿಸಿತ್ತು.

ಇನ್ನು ಮೋದಿ ವಿರೋಧಿ ಬಣವಾದ ಡಿಎಂಕೆ ಮತ್ತುಕಾಂಗ್ರೆಸ್‌ ಪಕ್ಷ ಇಲ್ಲಿ ಸದ್ಯಕ್ಕೆ ಪ್ರಬಲವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಕೂಟ 39ರಲ್ಲಿ 38 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ವಿಜಯ ಸಾಧಿಸಿತ್ತು. ಅಲ್ಲಿ 2021ರಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯಲಿದ್ದು ಬಿಜೆಪಿಗೆ ಮತ್ತೆ ಸೋಲಾಗುವ ಸಂಭವವಿದೆ..

ಇನ್ನು ಗೋ ಬ್ಯಾಕ್‌ ಮೋದಿಗೆ ವಿರುದ್ಧವಾಗಿ ವೆಲ್‌ಕಂ ಮೋದಿ ಎಂಬ ಟ್ರೆಂಡಿಂಗ್‌ ಸಹ ಆರಂಭಿಸಿದ್ದರು ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಸದಕ್ಕೆ 83 ಸಾವಿರ ಜನ ಗೋ ಬ್ಯಾಕ್‌ ಮೋದಿ ಟ್ವೀಟ್‌ ಮಾಡಿದರೆ, ವೆಲ್‌ ಕಂ ಮೋದಿ ಎಂದು ಕೇವಲ 16 ಸಾವಿರ ಜನ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಧ್ಯಕ್ಕೆ ತಮಿಳುನಾಡಿನಲ್ಲಾದರೂ ಮನುವಾದಿಗಳಿಗೆ ಪ್ರಭಲ ವಿರೋಧ ಇರುವುದು ಸಮಾಧಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...