Homeಮುಖಪುಟಮತ್ತೆ ಟ್ರೆಂಡಿಂಗ್‌ ಆದ ’ಗೋ ಬ್ಯಾಕ್‌ ಮೋದಿ’ : ದ್ರಾವಿಡರ ನಾಡಿನಲ್ಲಿ ಮೋದಿಗೆ ಮಹಾವಿರೋಧ

ಮತ್ತೆ ಟ್ರೆಂಡಿಂಗ್‌ ಆದ ’ಗೋ ಬ್ಯಾಕ್‌ ಮೋದಿ’ : ದ್ರಾವಿಡರ ನಾಡಿನಲ್ಲಿ ಮೋದಿಗೆ ಮಹಾವಿರೋಧ

- Advertisement -
- Advertisement -

ಇಂದು ಪ್ರಧಾನಿ ಮೋದಿಯವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ರೊಡನೆ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ. ಷಿ ಜಿನ್‌ಪಿಂಗ್‌ರವರು ಚನ್ನೈಗೆ ತೆರಳಿ ಅಲ್ಲಿಂದ ಸಂಜೆ 5ಕ್ಕೆ ಮಾಮಲ್ಲಪುರಂಗೆ ಉಭಯನಾಯಕುರು ಹೋಗುವ ಯೋಜನೆಯಾಗಿದೆ. ಆದರೆ ಈ ಮಹತ್ವದ ಭೇಟಿಗೆ ಸ್ವಾಗತಕ್ಕಿಂತ ವಿರೋಧವೇ ಹೆಚ್ಚಾಗಿದೆ.

ಹೌದು ಪ್ರತಿ ಬಾರಿ ಮೊದಿ ತಮಿಳುನಾಡಿಗೆ ಹೋದಾಗಲೆಲ್ಲಾ ತೀವ್ರ ವಿರೋಧ ವ್ಯಕ್ತವಾಗುತ್ತದೆ. ಟ್ವಿಟ್ಟರ್‌ನಲ್ಲಿ “ಗೋ ಬ್ಯಾಕ್‌ ಮೋದಿ” ಹ್ಯಾಷ್‌ ಟ್ಯಾಗ್‌ ಟ್ರೆಂಡಿಂಗ್‌ ಆಗುತ್ತದೆ. ಅದು ಈ ಬಾರಿಯೂ ಮರುಕಳಿಸಿದ್ದು ಈ ಹ್ಯಾಷ್‌ಟ್ಯಾಗ್‌ ಭಾರತದಲ್ಲಿಯೇ ನಂಬರ್‌ 1 ಸ್ಥಾನಕ್ಕೇರಿದೆ.

ಸಾವಿರಾರು ಪೋಸ್ಟ್‌ರ್‌ಗಳು, ಮೀಮ್ಸ್‌ಗಳು ತಯಾರಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಓಡಾಡಿತ್ತಿವೆ. ಇನ್ನು ತಮಿಳುನಾಡಿನಲ್ಲಿ ಮೋದಿ ವಿರೋಧಕ್ಕಾಗಿ ಕಪ್ಪು ಬಣ್ಣದ ಸಾವಿರಾರು ಬಲೂನ್‌ಗಳು ತಯಾರಾಗಿದ್ದು ಆಕಾಶದಲ್ಲಿ ಹಾರಾಡಿ ಮೋದಿ ಅಭಿಮಾನಿಗಳಿಗೆ ಮುಜಗರ ಉಂಟುಮಾಡಲಿವೆ.

ಹಿಂದಿ ಹೇರಿಕೆ, ಕೇಂದ್ರದಿಂದ ಸಮರ್ಪಕ ಅನುದಾನ ಸಿಗದಿರುವುದು, ಕಾವೇರಿ ನದಿನೀರಿನ ವಿವಾದ ಸೇರಿದಂತೆ ಹಲವು ವಿಚಾರದಲ್ಲಿ ಮೋದಿ ಸರ್ಕಾರ ತಮಿಳುನಾಡಿಗೆ ಅನ್ಯಾಯ ಮಾಡಿದೆ ಎಂಬುದು ಬಹುತೇಕ ತಮಿಳರ ಅಭಿಪ್ರಾಯವಾಗಿದೆ. ಜೊತೆಗೆ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಅಧಿಕಾರವನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂಬುದು ದ್ರಾವಿಡರಿಂದ ಹಿಂದಿನಿಂದಲೂ ಕೇಳಿಬರುತ್ತಿರುವ ಆರೋಪವಾಗಿದೆ.

ಅದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟವಾಗಿ ತೋರಿಸಿತ್ತು. ತಮಿಳುನಾಡಿನಲ್ಲಿರುವ ಒಟ್ಟು 39 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಕೂಟವೂ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲ್ಲುವ ಮೂಲಕ ಹೀನಾಯ ಸೋಲು ಕಂಡಿತ್ತು. ದೇಶಾದ್ಯಂತ ಬಿಜೆಪಿ ಮತ್ತದರ ಮೈತ್ರಿಕೂಟ ಭರ್ಜರಿ ವಿಜಯ ಸಾಧಿಸಿದರೆ ತಮಿಳುನಾಡಿನಲ್ಲಿ ಮಾತ್ರ ಕೆಟ್ಟ ಸೋಲು ಅನುಭವಿಸಿತ್ತು.

ಇನ್ನು ಮೋದಿ ವಿರೋಧಿ ಬಣವಾದ ಡಿಎಂಕೆ ಮತ್ತುಕಾಂಗ್ರೆಸ್‌ ಪಕ್ಷ ಇಲ್ಲಿ ಸದ್ಯಕ್ಕೆ ಪ್ರಬಲವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಕೂಟ 39ರಲ್ಲಿ 38 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ವಿಜಯ ಸಾಧಿಸಿತ್ತು. ಅಲ್ಲಿ 2021ರಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯಲಿದ್ದು ಬಿಜೆಪಿಗೆ ಮತ್ತೆ ಸೋಲಾಗುವ ಸಂಭವವಿದೆ..

ಇನ್ನು ಗೋ ಬ್ಯಾಕ್‌ ಮೋದಿಗೆ ವಿರುದ್ಧವಾಗಿ ವೆಲ್‌ಕಂ ಮೋದಿ ಎಂಬ ಟ್ರೆಂಡಿಂಗ್‌ ಸಹ ಆರಂಭಿಸಿದ್ದರು ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಸದಕ್ಕೆ 83 ಸಾವಿರ ಜನ ಗೋ ಬ್ಯಾಕ್‌ ಮೋದಿ ಟ್ವೀಟ್‌ ಮಾಡಿದರೆ, ವೆಲ್‌ ಕಂ ಮೋದಿ ಎಂದು ಕೇವಲ 16 ಸಾವಿರ ಜನ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಧ್ಯಕ್ಕೆ ತಮಿಳುನಾಡಿನಲ್ಲಾದರೂ ಮನುವಾದಿಗಳಿಗೆ ಪ್ರಭಲ ವಿರೋಧ ಇರುವುದು ಸಮಾಧಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...