Homeಅಂತರಾಷ್ಟ್ರೀಯ"ನಿಮ್ಮ ಬಂಕರ್‌ಗೆ ಹಿಂತಿರುಗಿ": ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

“ನಿಮ್ಮ ಬಂಕರ್‌ಗೆ ಹಿಂತಿರುಗಿ”: ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

- Advertisement -
- Advertisement -

ಪಶ್ಚಿಮ ಅಮೆರಿಕದ ಸಿಯಾಟಿಲ್‌‌ನ ಪೊಲೀಸ್ ಮುಕ್ತ ಸ್ವಾಯತ್ತ ವಲಯವನ್ನು ಪ್ರತಿಭಟನೆಯ ವಿಷಯದಲ್ಲಿ ಮಧ್ಯಪ್ರವೇಶಿಸುವುದಾಗಿ ಹೇಳಿದ ಟ್ರಂಪ್‌‌ಗೆ “ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಸಿಯಾಟಲ್‌ನ ಮೇಯರ್ ಜೆನ್ನಿ ಡರ್ಕನ್ ಎಚ್ಚರಿಕೆ ನೀಡಿದ್ದಾರೆ.

ಜಾರ್ಜ್ ಫ್ಲಾಯ್ಡ್ ಅವರ ಸಾವಿನಿಂದ ಉಂಟಾದ ವರ್ಣಭೇದ ನೀತಿ ಮತ್ತು ಪೋಲಿಸ್ ಕ್ರೌರ್ಯದ ವಿರುದ್ಧದ ಬೃಹತ್‌ ಪ್ರತಿಭಟನಾ ಪ್ರದರ್ಶನಗಳು ಅಧ್ಯಕ್ಷರ ನಿವಾಸವನ್ನು ತಲುಪಿದ್ದಾಗ ಟ್ರಂಪ್ ಅವರು ಶ್ವೇತಭವನದ ಸುರಕ್ಷಿತ ಪ್ರದೇಶ “ಬಂಕರ್‌”ನಲ್ಲಿ ಅಡಗಿ ಕೂತಿದ್ದರು ಎಂದು ಕಳೆದ ವಾರ ಮಾಧ್ಯಮಗಳು ವರದಿ ಮಾಡಿದ್ದವು.


ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್


ಸಿಯಾಟಲ್‌ನಲ್ಲಿ “ಕ್ಯಾಪಿಟಲ್ ಹಿಲ್ ಸ್ವಾಯತ್ತ ವಲಯ” ಅಥವಾ CHAZ ಎಂದು ಕರೆಯಲ್ಪಡುವ ನೆರೆಹೊರೆಯಲ್ಲಿ ಪ್ರತಿಭಟನೆಗಳನ್ನು ನಡೆಸಲು ಪ್ರತಿಭಟನಾಕಾರರು ಮತ್ತು ನಗರದ ಪೊಲೀಸ್ ಇಲಾಖೆ ಒಪ್ಪಿಕೊಂಡಿದೆ. ಇಂತಹ ಪ್ರದೇಶಕ್ಕೆ ಮಧ್ಯಪ್ರವೇಶಿಸುವುದಾಗಿ ಟ್ರಂಪ್‌ ಹೇಳಿದಾಗಿನಿಂದ ವಿವಾದ ಭುಗಿಲೆದ್ದಿದೆ.

ಕ್ರಾಂತಿಕಾರಿ ಎಡಪಂಥೀಯರು ಗವರ್ನರ್ ಜೇಇನ್ಸ್ಲೀ ಮತ್ತು ಸಿಯಾಟಲ್ ಮೇಯರ್ ಅವರನ್ನು ನಮ್ಮ ಮಹಾನ್ ದೇಶ ಹಿಂದೆಂದೂ ನೋಡಿರದ ಮಟ್ಟದಲ್ಲಿ ನಿಂದಿಸುತ್ತಿದ್ದಾರೆ. ಇದೀಗ ನಿಮ್ಮ ನಗರವನ್ನು ಹಿಂತಿಗೆದುಕೊಳ್ಳಿ. ನೀವು ಅದನ್ನು ಮಾಡದಿದ್ದರೆ, ನಾನು ಮಾಡುತ್ತೇನೆ. ಇದು ಆಟವಲ್ಲ. ಈ ಕೊಳಕು ಅರಾಜಕತಾವಾದಿಗಳನ್ನು ತಕ್ಷಣವೇ ನಿಲ್ಲಿಸಬೇಕು. ವೇಗವಾಗಿ ಸರಿಸಿ! ಎಂದು ಡೋನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಇದಕ್ಕೆ ಮೇಯರ್ ಜೆನ್ನಿ ಡರ್ಕನ್ ಉತ್ತರಿಸುತ್ತಾ, “ನಮ್ಮೆಲ್ಲರನ್ನೂ ಸುರಕ್ಷಿತರನ್ನಾಗಿ ಮಾಡಿ, ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಅಪಹಾಸ್ಯ ಮಾಡಿದ್ದಾರೆ. ಇನ್ನು ಸಿಯಾಟಲ್‌ ಗವರ್ನರ್‌ ಜೇಇನ್ಸ್ಲೀ ಸಹ ಟ್ರಂಪ್‌ಗೆ ತಿರುಗೇಟು ನೀಡಿದ್ದು, “ಆಡಳಿತದಲ್ಲಿ ಸಂಪೂರ್ಣವಾಗಿ ಅಸಮರ್ಥನಾದ ವ್ಯಕ್ತಿ ವಾಷಿಂಗ್ಟನ್‌ನಿಂದ ಹೊರತಾದ ರಾಜ್ಯದ ವ್ಯವಹಾರದಿಂದ ಹೊರಗುಳಿಯಬೇಕು. ಟ್ವೀಟ್‌ ಮಾಡುವುದನ್ನು ನಿಲ್ಲಿಸಿ” ಎಂದು ಇನ್ಸ್ಲೀ ಬರೆದಿದ್ದಾರೆ.

ಮೇ 25 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ನಿರಾಯುಧ ಕಪ್ಪು ವ್ಯಕ್ತಿಯಾದ ಫ್ಲಾಯ್ಡ್ ಸಾವಿನ ನಂತರ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ.

ಸಿಯಾಟಲ್‌ನ ಸ್ವಾಯತ್ತ ವಲಯ ಸ್ಥಾಪನೆಯ ಹಿಂದೆ ಎಡಪಂಥೀಯ ಕಾರ್ಯಕರ್ತರು ಇದ್ದಾರೆ ಎಂಬ ವರದಿಗಳನ್ನು ಸಿಯಾಟಲ್‌ನ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನಗರವನ್ನು ಹಿಂದಕ್ಕೆ ತೆಗೆದುಕೊಳ್ಳಿ’ ಎಂದು ಟ್ವೀಟ್ ಮಾಡುವ ಟ್ರಂಪ್ ಮಾತಿನ ಅರ್ಥವೇನು ಎಂದು ಪ್ರತಿಭಟನಾಕಾರರೊಬ್ಬರು ಪ್ರಶ್ನಿಸಿದ್ದಾರೆ. “ಇದು ನಮ್ಮ ನಗರ. ನಾನು ಹುಟ್ಟಿ ಬೆಳೆದದ್ದು ಈ ಡ್ಯಾಮ್ ಸಿಟಿಯಲ್ಲಿ. ಇದನ್ನು ಜನರಿಗೆ, ಸಿಯಾಟಲ್‌ನಲ್ಲಿ ವಾಸಿಸುವ ಮತ್ತು ಇಲ್ಲಿ ಅಭಿವೃದ್ಧಿ ಹೊಂದುತ್ತಿರುವ ಜನರಿಗೆ ನೀಡೋಣ” ಎಂದು ಅವರು ತಿಳಿಸಿದ್ದಾರೆ.

ಆಫ್ರಿಕನ್-ಅಮೇರಿಕನ್ ಪ್ರತಿಭಟನಾಕಾರ ರಿಚ್ ಬ್ರೌನ್ “ಭಾನುವಾರ ಈ ಪ್ರದೇಶವನ್ನು ತೆರವುಗೊಳಿಸುವ ಪ್ರಯತ್ನದಲ್ಲಿ ಪೊಲೀಸರು ಅಶ್ರುವಾಯು ಮತ್ತು ಫ್ಲ್ಯಾಷ್ ಬ್ಯಾಂಗ್ ಗ್ರೆನೇಡ್‌ಗಳನ್ನು ಬಳಸಿದಾಗ ನಾನು ಬಹಳ ಹೆದರಿದ್ದೆ ಎಂದಿದ್ದಾನೆ. ಆದರೆ ಇಂದು ನನಗೆ ಬೆಂಬಲ ಮತ್ತು ಸ್ವಾಗತ ಸಿಕ್ಕಿದೆ. ಈಗ ನಾವು ಬೆದರಿಕೆ ಇಲ್ಲದೆ, ಭಯವಿಲ್ಲದೆ ಮಾತನಾಡಲು ಸಮರ್ಥರಾಗಿದ್ದೇವೆ. ಈ ಸಮಯವನ್ನಲ್ಲವೇ ನಾವು ಬಯಸುತ್ತಿದ್ದುದು?” ಎಂದಿದ್ದಾರೆ.

ಈ ಹಿಂದೆ ಇದೇ ರೀತಿ ಪ್ರತಿಭಟನೆಯ ವಿಷಯವಾಗಿ ಟ್ರಂಪ್‌ ಹೇಳಿಕೆ ನೀಡಿದ್ದಾಗ ಅಮೆರಿಕಾ ಪೊಲೀಸ್‌ ಅಧಿಕಾರಿಯೊಬ್ಬ ಅಧ್ಯಕ್ಷ ಟ್ರಂಪ್‌ಗೆ “ಬಾಯಿಮುಚ್ಚಿಕೊಂಡಿರಿ” ಎಂದು ತಾಕೀತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.


ಮತ್ತಷ್ಟು ಸುದ್ದಿಗಳು

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...