Homeಅಂತರಾಷ್ಟ್ರೀಯ"ನಿಮ್ಮ ಬಂಕರ್‌ಗೆ ಹಿಂತಿರುಗಿ": ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

“ನಿಮ್ಮ ಬಂಕರ್‌ಗೆ ಹಿಂತಿರುಗಿ”: ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

- Advertisement -
- Advertisement -

ಪಶ್ಚಿಮ ಅಮೆರಿಕದ ಸಿಯಾಟಿಲ್‌‌ನ ಪೊಲೀಸ್ ಮುಕ್ತ ಸ್ವಾಯತ್ತ ವಲಯವನ್ನು ಪ್ರತಿಭಟನೆಯ ವಿಷಯದಲ್ಲಿ ಮಧ್ಯಪ್ರವೇಶಿಸುವುದಾಗಿ ಹೇಳಿದ ಟ್ರಂಪ್‌‌ಗೆ “ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಸಿಯಾಟಲ್‌ನ ಮೇಯರ್ ಜೆನ್ನಿ ಡರ್ಕನ್ ಎಚ್ಚರಿಕೆ ನೀಡಿದ್ದಾರೆ.

ಜಾರ್ಜ್ ಫ್ಲಾಯ್ಡ್ ಅವರ ಸಾವಿನಿಂದ ಉಂಟಾದ ವರ್ಣಭೇದ ನೀತಿ ಮತ್ತು ಪೋಲಿಸ್ ಕ್ರೌರ್ಯದ ವಿರುದ್ಧದ ಬೃಹತ್‌ ಪ್ರತಿಭಟನಾ ಪ್ರದರ್ಶನಗಳು ಅಧ್ಯಕ್ಷರ ನಿವಾಸವನ್ನು ತಲುಪಿದ್ದಾಗ ಟ್ರಂಪ್ ಅವರು ಶ್ವೇತಭವನದ ಸುರಕ್ಷಿತ ಪ್ರದೇಶ “ಬಂಕರ್‌”ನಲ್ಲಿ ಅಡಗಿ ಕೂತಿದ್ದರು ಎಂದು ಕಳೆದ ವಾರ ಮಾಧ್ಯಮಗಳು ವರದಿ ಮಾಡಿದ್ದವು.


ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್


ಸಿಯಾಟಲ್‌ನಲ್ಲಿ “ಕ್ಯಾಪಿಟಲ್ ಹಿಲ್ ಸ್ವಾಯತ್ತ ವಲಯ” ಅಥವಾ CHAZ ಎಂದು ಕರೆಯಲ್ಪಡುವ ನೆರೆಹೊರೆಯಲ್ಲಿ ಪ್ರತಿಭಟನೆಗಳನ್ನು ನಡೆಸಲು ಪ್ರತಿಭಟನಾಕಾರರು ಮತ್ತು ನಗರದ ಪೊಲೀಸ್ ಇಲಾಖೆ ಒಪ್ಪಿಕೊಂಡಿದೆ. ಇಂತಹ ಪ್ರದೇಶಕ್ಕೆ ಮಧ್ಯಪ್ರವೇಶಿಸುವುದಾಗಿ ಟ್ರಂಪ್‌ ಹೇಳಿದಾಗಿನಿಂದ ವಿವಾದ ಭುಗಿಲೆದ್ದಿದೆ.

ಕ್ರಾಂತಿಕಾರಿ ಎಡಪಂಥೀಯರು ಗವರ್ನರ್ ಜೇಇನ್ಸ್ಲೀ ಮತ್ತು ಸಿಯಾಟಲ್ ಮೇಯರ್ ಅವರನ್ನು ನಮ್ಮ ಮಹಾನ್ ದೇಶ ಹಿಂದೆಂದೂ ನೋಡಿರದ ಮಟ್ಟದಲ್ಲಿ ನಿಂದಿಸುತ್ತಿದ್ದಾರೆ. ಇದೀಗ ನಿಮ್ಮ ನಗರವನ್ನು ಹಿಂತಿಗೆದುಕೊಳ್ಳಿ. ನೀವು ಅದನ್ನು ಮಾಡದಿದ್ದರೆ, ನಾನು ಮಾಡುತ್ತೇನೆ. ಇದು ಆಟವಲ್ಲ. ಈ ಕೊಳಕು ಅರಾಜಕತಾವಾದಿಗಳನ್ನು ತಕ್ಷಣವೇ ನಿಲ್ಲಿಸಬೇಕು. ವೇಗವಾಗಿ ಸರಿಸಿ! ಎಂದು ಡೋನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಇದಕ್ಕೆ ಮೇಯರ್ ಜೆನ್ನಿ ಡರ್ಕನ್ ಉತ್ತರಿಸುತ್ತಾ, “ನಮ್ಮೆಲ್ಲರನ್ನೂ ಸುರಕ್ಷಿತರನ್ನಾಗಿ ಮಾಡಿ, ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಅಪಹಾಸ್ಯ ಮಾಡಿದ್ದಾರೆ. ಇನ್ನು ಸಿಯಾಟಲ್‌ ಗವರ್ನರ್‌ ಜೇಇನ್ಸ್ಲೀ ಸಹ ಟ್ರಂಪ್‌ಗೆ ತಿರುಗೇಟು ನೀಡಿದ್ದು, “ಆಡಳಿತದಲ್ಲಿ ಸಂಪೂರ್ಣವಾಗಿ ಅಸಮರ್ಥನಾದ ವ್ಯಕ್ತಿ ವಾಷಿಂಗ್ಟನ್‌ನಿಂದ ಹೊರತಾದ ರಾಜ್ಯದ ವ್ಯವಹಾರದಿಂದ ಹೊರಗುಳಿಯಬೇಕು. ಟ್ವೀಟ್‌ ಮಾಡುವುದನ್ನು ನಿಲ್ಲಿಸಿ” ಎಂದು ಇನ್ಸ್ಲೀ ಬರೆದಿದ್ದಾರೆ.

ಮೇ 25 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ನಿರಾಯುಧ ಕಪ್ಪು ವ್ಯಕ್ತಿಯಾದ ಫ್ಲಾಯ್ಡ್ ಸಾವಿನ ನಂತರ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ.

ಸಿಯಾಟಲ್‌ನ ಸ್ವಾಯತ್ತ ವಲಯ ಸ್ಥಾಪನೆಯ ಹಿಂದೆ ಎಡಪಂಥೀಯ ಕಾರ್ಯಕರ್ತರು ಇದ್ದಾರೆ ಎಂಬ ವರದಿಗಳನ್ನು ಸಿಯಾಟಲ್‌ನ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನಗರವನ್ನು ಹಿಂದಕ್ಕೆ ತೆಗೆದುಕೊಳ್ಳಿ’ ಎಂದು ಟ್ವೀಟ್ ಮಾಡುವ ಟ್ರಂಪ್ ಮಾತಿನ ಅರ್ಥವೇನು ಎಂದು ಪ್ರತಿಭಟನಾಕಾರರೊಬ್ಬರು ಪ್ರಶ್ನಿಸಿದ್ದಾರೆ. “ಇದು ನಮ್ಮ ನಗರ. ನಾನು ಹುಟ್ಟಿ ಬೆಳೆದದ್ದು ಈ ಡ್ಯಾಮ್ ಸಿಟಿಯಲ್ಲಿ. ಇದನ್ನು ಜನರಿಗೆ, ಸಿಯಾಟಲ್‌ನಲ್ಲಿ ವಾಸಿಸುವ ಮತ್ತು ಇಲ್ಲಿ ಅಭಿವೃದ್ಧಿ ಹೊಂದುತ್ತಿರುವ ಜನರಿಗೆ ನೀಡೋಣ” ಎಂದು ಅವರು ತಿಳಿಸಿದ್ದಾರೆ.

ಆಫ್ರಿಕನ್-ಅಮೇರಿಕನ್ ಪ್ರತಿಭಟನಾಕಾರ ರಿಚ್ ಬ್ರೌನ್ “ಭಾನುವಾರ ಈ ಪ್ರದೇಶವನ್ನು ತೆರವುಗೊಳಿಸುವ ಪ್ರಯತ್ನದಲ್ಲಿ ಪೊಲೀಸರು ಅಶ್ರುವಾಯು ಮತ್ತು ಫ್ಲ್ಯಾಷ್ ಬ್ಯಾಂಗ್ ಗ್ರೆನೇಡ್‌ಗಳನ್ನು ಬಳಸಿದಾಗ ನಾನು ಬಹಳ ಹೆದರಿದ್ದೆ ಎಂದಿದ್ದಾನೆ. ಆದರೆ ಇಂದು ನನಗೆ ಬೆಂಬಲ ಮತ್ತು ಸ್ವಾಗತ ಸಿಕ್ಕಿದೆ. ಈಗ ನಾವು ಬೆದರಿಕೆ ಇಲ್ಲದೆ, ಭಯವಿಲ್ಲದೆ ಮಾತನಾಡಲು ಸಮರ್ಥರಾಗಿದ್ದೇವೆ. ಈ ಸಮಯವನ್ನಲ್ಲವೇ ನಾವು ಬಯಸುತ್ತಿದ್ದುದು?” ಎಂದಿದ್ದಾರೆ.

ಈ ಹಿಂದೆ ಇದೇ ರೀತಿ ಪ್ರತಿಭಟನೆಯ ವಿಷಯವಾಗಿ ಟ್ರಂಪ್‌ ಹೇಳಿಕೆ ನೀಡಿದ್ದಾಗ ಅಮೆರಿಕಾ ಪೊಲೀಸ್‌ ಅಧಿಕಾರಿಯೊಬ್ಬ ಅಧ್ಯಕ್ಷ ಟ್ರಂಪ್‌ಗೆ “ಬಾಯಿಮುಚ್ಚಿಕೊಂಡಿರಿ” ಎಂದು ತಾಕೀತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.


ಮತ್ತಷ್ಟು ಸುದ್ದಿಗಳು

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...