Homeಅಂತರಾಷ್ಟ್ರೀಯ"ನಿಮ್ಮ ಬಂಕರ್‌ಗೆ ಹಿಂತಿರುಗಿ": ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

“ನಿಮ್ಮ ಬಂಕರ್‌ಗೆ ಹಿಂತಿರುಗಿ”: ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

- Advertisement -
- Advertisement -

ಪಶ್ಚಿಮ ಅಮೆರಿಕದ ಸಿಯಾಟಿಲ್‌‌ನ ಪೊಲೀಸ್ ಮುಕ್ತ ಸ್ವಾಯತ್ತ ವಲಯವನ್ನು ಪ್ರತಿಭಟನೆಯ ವಿಷಯದಲ್ಲಿ ಮಧ್ಯಪ್ರವೇಶಿಸುವುದಾಗಿ ಹೇಳಿದ ಟ್ರಂಪ್‌‌ಗೆ “ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಸಿಯಾಟಲ್‌ನ ಮೇಯರ್ ಜೆನ್ನಿ ಡರ್ಕನ್ ಎಚ್ಚರಿಕೆ ನೀಡಿದ್ದಾರೆ.

ಜಾರ್ಜ್ ಫ್ಲಾಯ್ಡ್ ಅವರ ಸಾವಿನಿಂದ ಉಂಟಾದ ವರ್ಣಭೇದ ನೀತಿ ಮತ್ತು ಪೋಲಿಸ್ ಕ್ರೌರ್ಯದ ವಿರುದ್ಧದ ಬೃಹತ್‌ ಪ್ರತಿಭಟನಾ ಪ್ರದರ್ಶನಗಳು ಅಧ್ಯಕ್ಷರ ನಿವಾಸವನ್ನು ತಲುಪಿದ್ದಾಗ ಟ್ರಂಪ್ ಅವರು ಶ್ವೇತಭವನದ ಸುರಕ್ಷಿತ ಪ್ರದೇಶ “ಬಂಕರ್‌”ನಲ್ಲಿ ಅಡಗಿ ಕೂತಿದ್ದರು ಎಂದು ಕಳೆದ ವಾರ ಮಾಧ್ಯಮಗಳು ವರದಿ ಮಾಡಿದ್ದವು.


ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್


ಸಿಯಾಟಲ್‌ನಲ್ಲಿ “ಕ್ಯಾಪಿಟಲ್ ಹಿಲ್ ಸ್ವಾಯತ್ತ ವಲಯ” ಅಥವಾ CHAZ ಎಂದು ಕರೆಯಲ್ಪಡುವ ನೆರೆಹೊರೆಯಲ್ಲಿ ಪ್ರತಿಭಟನೆಗಳನ್ನು ನಡೆಸಲು ಪ್ರತಿಭಟನಾಕಾರರು ಮತ್ತು ನಗರದ ಪೊಲೀಸ್ ಇಲಾಖೆ ಒಪ್ಪಿಕೊಂಡಿದೆ. ಇಂತಹ ಪ್ರದೇಶಕ್ಕೆ ಮಧ್ಯಪ್ರವೇಶಿಸುವುದಾಗಿ ಟ್ರಂಪ್‌ ಹೇಳಿದಾಗಿನಿಂದ ವಿವಾದ ಭುಗಿಲೆದ್ದಿದೆ.

ಕ್ರಾಂತಿಕಾರಿ ಎಡಪಂಥೀಯರು ಗವರ್ನರ್ ಜೇಇನ್ಸ್ಲೀ ಮತ್ತು ಸಿಯಾಟಲ್ ಮೇಯರ್ ಅವರನ್ನು ನಮ್ಮ ಮಹಾನ್ ದೇಶ ಹಿಂದೆಂದೂ ನೋಡಿರದ ಮಟ್ಟದಲ್ಲಿ ನಿಂದಿಸುತ್ತಿದ್ದಾರೆ. ಇದೀಗ ನಿಮ್ಮ ನಗರವನ್ನು ಹಿಂತಿಗೆದುಕೊಳ್ಳಿ. ನೀವು ಅದನ್ನು ಮಾಡದಿದ್ದರೆ, ನಾನು ಮಾಡುತ್ತೇನೆ. ಇದು ಆಟವಲ್ಲ. ಈ ಕೊಳಕು ಅರಾಜಕತಾವಾದಿಗಳನ್ನು ತಕ್ಷಣವೇ ನಿಲ್ಲಿಸಬೇಕು. ವೇಗವಾಗಿ ಸರಿಸಿ! ಎಂದು ಡೋನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಇದಕ್ಕೆ ಮೇಯರ್ ಜೆನ್ನಿ ಡರ್ಕನ್ ಉತ್ತರಿಸುತ್ತಾ, “ನಮ್ಮೆಲ್ಲರನ್ನೂ ಸುರಕ್ಷಿತರನ್ನಾಗಿ ಮಾಡಿ, ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಅಪಹಾಸ್ಯ ಮಾಡಿದ್ದಾರೆ. ಇನ್ನು ಸಿಯಾಟಲ್‌ ಗವರ್ನರ್‌ ಜೇಇನ್ಸ್ಲೀ ಸಹ ಟ್ರಂಪ್‌ಗೆ ತಿರುಗೇಟು ನೀಡಿದ್ದು, “ಆಡಳಿತದಲ್ಲಿ ಸಂಪೂರ್ಣವಾಗಿ ಅಸಮರ್ಥನಾದ ವ್ಯಕ್ತಿ ವಾಷಿಂಗ್ಟನ್‌ನಿಂದ ಹೊರತಾದ ರಾಜ್ಯದ ವ್ಯವಹಾರದಿಂದ ಹೊರಗುಳಿಯಬೇಕು. ಟ್ವೀಟ್‌ ಮಾಡುವುದನ್ನು ನಿಲ್ಲಿಸಿ” ಎಂದು ಇನ್ಸ್ಲೀ ಬರೆದಿದ್ದಾರೆ.

ಮೇ 25 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ನಿರಾಯುಧ ಕಪ್ಪು ವ್ಯಕ್ತಿಯಾದ ಫ್ಲಾಯ್ಡ್ ಸಾವಿನ ನಂತರ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ.

ಸಿಯಾಟಲ್‌ನ ಸ್ವಾಯತ್ತ ವಲಯ ಸ್ಥಾಪನೆಯ ಹಿಂದೆ ಎಡಪಂಥೀಯ ಕಾರ್ಯಕರ್ತರು ಇದ್ದಾರೆ ಎಂಬ ವರದಿಗಳನ್ನು ಸಿಯಾಟಲ್‌ನ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನಗರವನ್ನು ಹಿಂದಕ್ಕೆ ತೆಗೆದುಕೊಳ್ಳಿ’ ಎಂದು ಟ್ವೀಟ್ ಮಾಡುವ ಟ್ರಂಪ್ ಮಾತಿನ ಅರ್ಥವೇನು ಎಂದು ಪ್ರತಿಭಟನಾಕಾರರೊಬ್ಬರು ಪ್ರಶ್ನಿಸಿದ್ದಾರೆ. “ಇದು ನಮ್ಮ ನಗರ. ನಾನು ಹುಟ್ಟಿ ಬೆಳೆದದ್ದು ಈ ಡ್ಯಾಮ್ ಸಿಟಿಯಲ್ಲಿ. ಇದನ್ನು ಜನರಿಗೆ, ಸಿಯಾಟಲ್‌ನಲ್ಲಿ ವಾಸಿಸುವ ಮತ್ತು ಇಲ್ಲಿ ಅಭಿವೃದ್ಧಿ ಹೊಂದುತ್ತಿರುವ ಜನರಿಗೆ ನೀಡೋಣ” ಎಂದು ಅವರು ತಿಳಿಸಿದ್ದಾರೆ.

ಆಫ್ರಿಕನ್-ಅಮೇರಿಕನ್ ಪ್ರತಿಭಟನಾಕಾರ ರಿಚ್ ಬ್ರೌನ್ “ಭಾನುವಾರ ಈ ಪ್ರದೇಶವನ್ನು ತೆರವುಗೊಳಿಸುವ ಪ್ರಯತ್ನದಲ್ಲಿ ಪೊಲೀಸರು ಅಶ್ರುವಾಯು ಮತ್ತು ಫ್ಲ್ಯಾಷ್ ಬ್ಯಾಂಗ್ ಗ್ರೆನೇಡ್‌ಗಳನ್ನು ಬಳಸಿದಾಗ ನಾನು ಬಹಳ ಹೆದರಿದ್ದೆ ಎಂದಿದ್ದಾನೆ. ಆದರೆ ಇಂದು ನನಗೆ ಬೆಂಬಲ ಮತ್ತು ಸ್ವಾಗತ ಸಿಕ್ಕಿದೆ. ಈಗ ನಾವು ಬೆದರಿಕೆ ಇಲ್ಲದೆ, ಭಯವಿಲ್ಲದೆ ಮಾತನಾಡಲು ಸಮರ್ಥರಾಗಿದ್ದೇವೆ. ಈ ಸಮಯವನ್ನಲ್ಲವೇ ನಾವು ಬಯಸುತ್ತಿದ್ದುದು?” ಎಂದಿದ್ದಾರೆ.

ಈ ಹಿಂದೆ ಇದೇ ರೀತಿ ಪ್ರತಿಭಟನೆಯ ವಿಷಯವಾಗಿ ಟ್ರಂಪ್‌ ಹೇಳಿಕೆ ನೀಡಿದ್ದಾಗ ಅಮೆರಿಕಾ ಪೊಲೀಸ್‌ ಅಧಿಕಾರಿಯೊಬ್ಬ ಅಧ್ಯಕ್ಷ ಟ್ರಂಪ್‌ಗೆ “ಬಾಯಿಮುಚ್ಚಿಕೊಂಡಿರಿ” ಎಂದು ತಾಕೀತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.


ಮತ್ತಷ್ಟು ಸುದ್ದಿಗಳು

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....