Homeಅಂತರಾಷ್ಟ್ರೀಯ"ನಿಮ್ಮ ಬಂಕರ್‌ಗೆ ಹಿಂತಿರುಗಿ": ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

“ನಿಮ್ಮ ಬಂಕರ್‌ಗೆ ಹಿಂತಿರುಗಿ”: ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

- Advertisement -
- Advertisement -

ಪಶ್ಚಿಮ ಅಮೆರಿಕದ ಸಿಯಾಟಿಲ್‌‌ನ ಪೊಲೀಸ್ ಮುಕ್ತ ಸ್ವಾಯತ್ತ ವಲಯವನ್ನು ಪ್ರತಿಭಟನೆಯ ವಿಷಯದಲ್ಲಿ ಮಧ್ಯಪ್ರವೇಶಿಸುವುದಾಗಿ ಹೇಳಿದ ಟ್ರಂಪ್‌‌ಗೆ “ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಸಿಯಾಟಲ್‌ನ ಮೇಯರ್ ಜೆನ್ನಿ ಡರ್ಕನ್ ಎಚ್ಚರಿಕೆ ನೀಡಿದ್ದಾರೆ.

ಜಾರ್ಜ್ ಫ್ಲಾಯ್ಡ್ ಅವರ ಸಾವಿನಿಂದ ಉಂಟಾದ ವರ್ಣಭೇದ ನೀತಿ ಮತ್ತು ಪೋಲಿಸ್ ಕ್ರೌರ್ಯದ ವಿರುದ್ಧದ ಬೃಹತ್‌ ಪ್ರತಿಭಟನಾ ಪ್ರದರ್ಶನಗಳು ಅಧ್ಯಕ್ಷರ ನಿವಾಸವನ್ನು ತಲುಪಿದ್ದಾಗ ಟ್ರಂಪ್ ಅವರು ಶ್ವೇತಭವನದ ಸುರಕ್ಷಿತ ಪ್ರದೇಶ “ಬಂಕರ್‌”ನಲ್ಲಿ ಅಡಗಿ ಕೂತಿದ್ದರು ಎಂದು ಕಳೆದ ವಾರ ಮಾಧ್ಯಮಗಳು ವರದಿ ಮಾಡಿದ್ದವು.


ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್


ಸಿಯಾಟಲ್‌ನಲ್ಲಿ “ಕ್ಯಾಪಿಟಲ್ ಹಿಲ್ ಸ್ವಾಯತ್ತ ವಲಯ” ಅಥವಾ CHAZ ಎಂದು ಕರೆಯಲ್ಪಡುವ ನೆರೆಹೊರೆಯಲ್ಲಿ ಪ್ರತಿಭಟನೆಗಳನ್ನು ನಡೆಸಲು ಪ್ರತಿಭಟನಾಕಾರರು ಮತ್ತು ನಗರದ ಪೊಲೀಸ್ ಇಲಾಖೆ ಒಪ್ಪಿಕೊಂಡಿದೆ. ಇಂತಹ ಪ್ರದೇಶಕ್ಕೆ ಮಧ್ಯಪ್ರವೇಶಿಸುವುದಾಗಿ ಟ್ರಂಪ್‌ ಹೇಳಿದಾಗಿನಿಂದ ವಿವಾದ ಭುಗಿಲೆದ್ದಿದೆ.

ಕ್ರಾಂತಿಕಾರಿ ಎಡಪಂಥೀಯರು ಗವರ್ನರ್ ಜೇಇನ್ಸ್ಲೀ ಮತ್ತು ಸಿಯಾಟಲ್ ಮೇಯರ್ ಅವರನ್ನು ನಮ್ಮ ಮಹಾನ್ ದೇಶ ಹಿಂದೆಂದೂ ನೋಡಿರದ ಮಟ್ಟದಲ್ಲಿ ನಿಂದಿಸುತ್ತಿದ್ದಾರೆ. ಇದೀಗ ನಿಮ್ಮ ನಗರವನ್ನು ಹಿಂತಿಗೆದುಕೊಳ್ಳಿ. ನೀವು ಅದನ್ನು ಮಾಡದಿದ್ದರೆ, ನಾನು ಮಾಡುತ್ತೇನೆ. ಇದು ಆಟವಲ್ಲ. ಈ ಕೊಳಕು ಅರಾಜಕತಾವಾದಿಗಳನ್ನು ತಕ್ಷಣವೇ ನಿಲ್ಲಿಸಬೇಕು. ವೇಗವಾಗಿ ಸರಿಸಿ! ಎಂದು ಡೋನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಇದಕ್ಕೆ ಮೇಯರ್ ಜೆನ್ನಿ ಡರ್ಕನ್ ಉತ್ತರಿಸುತ್ತಾ, “ನಮ್ಮೆಲ್ಲರನ್ನೂ ಸುರಕ್ಷಿತರನ್ನಾಗಿ ಮಾಡಿ, ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಅಪಹಾಸ್ಯ ಮಾಡಿದ್ದಾರೆ. ಇನ್ನು ಸಿಯಾಟಲ್‌ ಗವರ್ನರ್‌ ಜೇಇನ್ಸ್ಲೀ ಸಹ ಟ್ರಂಪ್‌ಗೆ ತಿರುಗೇಟು ನೀಡಿದ್ದು, “ಆಡಳಿತದಲ್ಲಿ ಸಂಪೂರ್ಣವಾಗಿ ಅಸಮರ್ಥನಾದ ವ್ಯಕ್ತಿ ವಾಷಿಂಗ್ಟನ್‌ನಿಂದ ಹೊರತಾದ ರಾಜ್ಯದ ವ್ಯವಹಾರದಿಂದ ಹೊರಗುಳಿಯಬೇಕು. ಟ್ವೀಟ್‌ ಮಾಡುವುದನ್ನು ನಿಲ್ಲಿಸಿ” ಎಂದು ಇನ್ಸ್ಲೀ ಬರೆದಿದ್ದಾರೆ.

ಮೇ 25 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ನಿರಾಯುಧ ಕಪ್ಪು ವ್ಯಕ್ತಿಯಾದ ಫ್ಲಾಯ್ಡ್ ಸಾವಿನ ನಂತರ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ.

ಸಿಯಾಟಲ್‌ನ ಸ್ವಾಯತ್ತ ವಲಯ ಸ್ಥಾಪನೆಯ ಹಿಂದೆ ಎಡಪಂಥೀಯ ಕಾರ್ಯಕರ್ತರು ಇದ್ದಾರೆ ಎಂಬ ವರದಿಗಳನ್ನು ಸಿಯಾಟಲ್‌ನ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನಗರವನ್ನು ಹಿಂದಕ್ಕೆ ತೆಗೆದುಕೊಳ್ಳಿ’ ಎಂದು ಟ್ವೀಟ್ ಮಾಡುವ ಟ್ರಂಪ್ ಮಾತಿನ ಅರ್ಥವೇನು ಎಂದು ಪ್ರತಿಭಟನಾಕಾರರೊಬ್ಬರು ಪ್ರಶ್ನಿಸಿದ್ದಾರೆ. “ಇದು ನಮ್ಮ ನಗರ. ನಾನು ಹುಟ್ಟಿ ಬೆಳೆದದ್ದು ಈ ಡ್ಯಾಮ್ ಸಿಟಿಯಲ್ಲಿ. ಇದನ್ನು ಜನರಿಗೆ, ಸಿಯಾಟಲ್‌ನಲ್ಲಿ ವಾಸಿಸುವ ಮತ್ತು ಇಲ್ಲಿ ಅಭಿವೃದ್ಧಿ ಹೊಂದುತ್ತಿರುವ ಜನರಿಗೆ ನೀಡೋಣ” ಎಂದು ಅವರು ತಿಳಿಸಿದ್ದಾರೆ.

ಆಫ್ರಿಕನ್-ಅಮೇರಿಕನ್ ಪ್ರತಿಭಟನಾಕಾರ ರಿಚ್ ಬ್ರೌನ್ “ಭಾನುವಾರ ಈ ಪ್ರದೇಶವನ್ನು ತೆರವುಗೊಳಿಸುವ ಪ್ರಯತ್ನದಲ್ಲಿ ಪೊಲೀಸರು ಅಶ್ರುವಾಯು ಮತ್ತು ಫ್ಲ್ಯಾಷ್ ಬ್ಯಾಂಗ್ ಗ್ರೆನೇಡ್‌ಗಳನ್ನು ಬಳಸಿದಾಗ ನಾನು ಬಹಳ ಹೆದರಿದ್ದೆ ಎಂದಿದ್ದಾನೆ. ಆದರೆ ಇಂದು ನನಗೆ ಬೆಂಬಲ ಮತ್ತು ಸ್ವಾಗತ ಸಿಕ್ಕಿದೆ. ಈಗ ನಾವು ಬೆದರಿಕೆ ಇಲ್ಲದೆ, ಭಯವಿಲ್ಲದೆ ಮಾತನಾಡಲು ಸಮರ್ಥರಾಗಿದ್ದೇವೆ. ಈ ಸಮಯವನ್ನಲ್ಲವೇ ನಾವು ಬಯಸುತ್ತಿದ್ದುದು?” ಎಂದಿದ್ದಾರೆ.

ಈ ಹಿಂದೆ ಇದೇ ರೀತಿ ಪ್ರತಿಭಟನೆಯ ವಿಷಯವಾಗಿ ಟ್ರಂಪ್‌ ಹೇಳಿಕೆ ನೀಡಿದ್ದಾಗ ಅಮೆರಿಕಾ ಪೊಲೀಸ್‌ ಅಧಿಕಾರಿಯೊಬ್ಬ ಅಧ್ಯಕ್ಷ ಟ್ರಂಪ್‌ಗೆ “ಬಾಯಿಮುಚ್ಚಿಕೊಂಡಿರಿ” ಎಂದು ತಾಕೀತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.


ಮತ್ತಷ್ಟು ಸುದ್ದಿಗಳು

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...