Homeಅಂತರಾಷ್ಟ್ರೀಯ"ನಿಮ್ಮ ಬಂಕರ್‌ಗೆ ಹಿಂತಿರುಗಿ": ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

“ನಿಮ್ಮ ಬಂಕರ್‌ಗೆ ಹಿಂತಿರುಗಿ”: ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

- Advertisement -
- Advertisement -

ಪಶ್ಚಿಮ ಅಮೆರಿಕದ ಸಿಯಾಟಿಲ್‌‌ನ ಪೊಲೀಸ್ ಮುಕ್ತ ಸ್ವಾಯತ್ತ ವಲಯವನ್ನು ಪ್ರತಿಭಟನೆಯ ವಿಷಯದಲ್ಲಿ ಮಧ್ಯಪ್ರವೇಶಿಸುವುದಾಗಿ ಹೇಳಿದ ಟ್ರಂಪ್‌‌ಗೆ “ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಸಿಯಾಟಲ್‌ನ ಮೇಯರ್ ಜೆನ್ನಿ ಡರ್ಕನ್ ಎಚ್ಚರಿಕೆ ನೀಡಿದ್ದಾರೆ.

ಜಾರ್ಜ್ ಫ್ಲಾಯ್ಡ್ ಅವರ ಸಾವಿನಿಂದ ಉಂಟಾದ ವರ್ಣಭೇದ ನೀತಿ ಮತ್ತು ಪೋಲಿಸ್ ಕ್ರೌರ್ಯದ ವಿರುದ್ಧದ ಬೃಹತ್‌ ಪ್ರತಿಭಟನಾ ಪ್ರದರ್ಶನಗಳು ಅಧ್ಯಕ್ಷರ ನಿವಾಸವನ್ನು ತಲುಪಿದ್ದಾಗ ಟ್ರಂಪ್ ಅವರು ಶ್ವೇತಭವನದ ಸುರಕ್ಷಿತ ಪ್ರದೇಶ “ಬಂಕರ್‌”ನಲ್ಲಿ ಅಡಗಿ ಕೂತಿದ್ದರು ಎಂದು ಕಳೆದ ವಾರ ಮಾಧ್ಯಮಗಳು ವರದಿ ಮಾಡಿದ್ದವು.


ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್


ಸಿಯಾಟಲ್‌ನಲ್ಲಿ “ಕ್ಯಾಪಿಟಲ್ ಹಿಲ್ ಸ್ವಾಯತ್ತ ವಲಯ” ಅಥವಾ CHAZ ಎಂದು ಕರೆಯಲ್ಪಡುವ ನೆರೆಹೊರೆಯಲ್ಲಿ ಪ್ರತಿಭಟನೆಗಳನ್ನು ನಡೆಸಲು ಪ್ರತಿಭಟನಾಕಾರರು ಮತ್ತು ನಗರದ ಪೊಲೀಸ್ ಇಲಾಖೆ ಒಪ್ಪಿಕೊಂಡಿದೆ. ಇಂತಹ ಪ್ರದೇಶಕ್ಕೆ ಮಧ್ಯಪ್ರವೇಶಿಸುವುದಾಗಿ ಟ್ರಂಪ್‌ ಹೇಳಿದಾಗಿನಿಂದ ವಿವಾದ ಭುಗಿಲೆದ್ದಿದೆ.

ಕ್ರಾಂತಿಕಾರಿ ಎಡಪಂಥೀಯರು ಗವರ್ನರ್ ಜೇಇನ್ಸ್ಲೀ ಮತ್ತು ಸಿಯಾಟಲ್ ಮೇಯರ್ ಅವರನ್ನು ನಮ್ಮ ಮಹಾನ್ ದೇಶ ಹಿಂದೆಂದೂ ನೋಡಿರದ ಮಟ್ಟದಲ್ಲಿ ನಿಂದಿಸುತ್ತಿದ್ದಾರೆ. ಇದೀಗ ನಿಮ್ಮ ನಗರವನ್ನು ಹಿಂತಿಗೆದುಕೊಳ್ಳಿ. ನೀವು ಅದನ್ನು ಮಾಡದಿದ್ದರೆ, ನಾನು ಮಾಡುತ್ತೇನೆ. ಇದು ಆಟವಲ್ಲ. ಈ ಕೊಳಕು ಅರಾಜಕತಾವಾದಿಗಳನ್ನು ತಕ್ಷಣವೇ ನಿಲ್ಲಿಸಬೇಕು. ವೇಗವಾಗಿ ಸರಿಸಿ! ಎಂದು ಡೋನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಇದಕ್ಕೆ ಮೇಯರ್ ಜೆನ್ನಿ ಡರ್ಕನ್ ಉತ್ತರಿಸುತ್ತಾ, “ನಮ್ಮೆಲ್ಲರನ್ನೂ ಸುರಕ್ಷಿತರನ್ನಾಗಿ ಮಾಡಿ, ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಅಪಹಾಸ್ಯ ಮಾಡಿದ್ದಾರೆ. ಇನ್ನು ಸಿಯಾಟಲ್‌ ಗವರ್ನರ್‌ ಜೇಇನ್ಸ್ಲೀ ಸಹ ಟ್ರಂಪ್‌ಗೆ ತಿರುಗೇಟು ನೀಡಿದ್ದು, “ಆಡಳಿತದಲ್ಲಿ ಸಂಪೂರ್ಣವಾಗಿ ಅಸಮರ್ಥನಾದ ವ್ಯಕ್ತಿ ವಾಷಿಂಗ್ಟನ್‌ನಿಂದ ಹೊರತಾದ ರಾಜ್ಯದ ವ್ಯವಹಾರದಿಂದ ಹೊರಗುಳಿಯಬೇಕು. ಟ್ವೀಟ್‌ ಮಾಡುವುದನ್ನು ನಿಲ್ಲಿಸಿ” ಎಂದು ಇನ್ಸ್ಲೀ ಬರೆದಿದ್ದಾರೆ.

ಮೇ 25 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ನಿರಾಯುಧ ಕಪ್ಪು ವ್ಯಕ್ತಿಯಾದ ಫ್ಲಾಯ್ಡ್ ಸಾವಿನ ನಂತರ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ.

ಸಿಯಾಟಲ್‌ನ ಸ್ವಾಯತ್ತ ವಲಯ ಸ್ಥಾಪನೆಯ ಹಿಂದೆ ಎಡಪಂಥೀಯ ಕಾರ್ಯಕರ್ತರು ಇದ್ದಾರೆ ಎಂಬ ವರದಿಗಳನ್ನು ಸಿಯಾಟಲ್‌ನ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನಗರವನ್ನು ಹಿಂದಕ್ಕೆ ತೆಗೆದುಕೊಳ್ಳಿ’ ಎಂದು ಟ್ವೀಟ್ ಮಾಡುವ ಟ್ರಂಪ್ ಮಾತಿನ ಅರ್ಥವೇನು ಎಂದು ಪ್ರತಿಭಟನಾಕಾರರೊಬ್ಬರು ಪ್ರಶ್ನಿಸಿದ್ದಾರೆ. “ಇದು ನಮ್ಮ ನಗರ. ನಾನು ಹುಟ್ಟಿ ಬೆಳೆದದ್ದು ಈ ಡ್ಯಾಮ್ ಸಿಟಿಯಲ್ಲಿ. ಇದನ್ನು ಜನರಿಗೆ, ಸಿಯಾಟಲ್‌ನಲ್ಲಿ ವಾಸಿಸುವ ಮತ್ತು ಇಲ್ಲಿ ಅಭಿವೃದ್ಧಿ ಹೊಂದುತ್ತಿರುವ ಜನರಿಗೆ ನೀಡೋಣ” ಎಂದು ಅವರು ತಿಳಿಸಿದ್ದಾರೆ.

ಆಫ್ರಿಕನ್-ಅಮೇರಿಕನ್ ಪ್ರತಿಭಟನಾಕಾರ ರಿಚ್ ಬ್ರೌನ್ “ಭಾನುವಾರ ಈ ಪ್ರದೇಶವನ್ನು ತೆರವುಗೊಳಿಸುವ ಪ್ರಯತ್ನದಲ್ಲಿ ಪೊಲೀಸರು ಅಶ್ರುವಾಯು ಮತ್ತು ಫ್ಲ್ಯಾಷ್ ಬ್ಯಾಂಗ್ ಗ್ರೆನೇಡ್‌ಗಳನ್ನು ಬಳಸಿದಾಗ ನಾನು ಬಹಳ ಹೆದರಿದ್ದೆ ಎಂದಿದ್ದಾನೆ. ಆದರೆ ಇಂದು ನನಗೆ ಬೆಂಬಲ ಮತ್ತು ಸ್ವಾಗತ ಸಿಕ್ಕಿದೆ. ಈಗ ನಾವು ಬೆದರಿಕೆ ಇಲ್ಲದೆ, ಭಯವಿಲ್ಲದೆ ಮಾತನಾಡಲು ಸಮರ್ಥರಾಗಿದ್ದೇವೆ. ಈ ಸಮಯವನ್ನಲ್ಲವೇ ನಾವು ಬಯಸುತ್ತಿದ್ದುದು?” ಎಂದಿದ್ದಾರೆ.

ಈ ಹಿಂದೆ ಇದೇ ರೀತಿ ಪ್ರತಿಭಟನೆಯ ವಿಷಯವಾಗಿ ಟ್ರಂಪ್‌ ಹೇಳಿಕೆ ನೀಡಿದ್ದಾಗ ಅಮೆರಿಕಾ ಪೊಲೀಸ್‌ ಅಧಿಕಾರಿಯೊಬ್ಬ ಅಧ್ಯಕ್ಷ ಟ್ರಂಪ್‌ಗೆ “ಬಾಯಿಮುಚ್ಚಿಕೊಂಡಿರಿ” ಎಂದು ತಾಕೀತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.


ಮತ್ತಷ್ಟು ಸುದ್ದಿಗಳು

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...