Homeಅಂತರಾಷ್ಟ್ರೀಯ"ನಿಮ್ಮ ಬಂಕರ್‌ಗೆ ಹಿಂತಿರುಗಿ": ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

“ನಿಮ್ಮ ಬಂಕರ್‌ಗೆ ಹಿಂತಿರುಗಿ”: ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

- Advertisement -
- Advertisement -

ಪಶ್ಚಿಮ ಅಮೆರಿಕದ ಸಿಯಾಟಿಲ್‌‌ನ ಪೊಲೀಸ್ ಮುಕ್ತ ಸ್ವಾಯತ್ತ ವಲಯವನ್ನು ಪ್ರತಿಭಟನೆಯ ವಿಷಯದಲ್ಲಿ ಮಧ್ಯಪ್ರವೇಶಿಸುವುದಾಗಿ ಹೇಳಿದ ಟ್ರಂಪ್‌‌ಗೆ “ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಸಿಯಾಟಲ್‌ನ ಮೇಯರ್ ಜೆನ್ನಿ ಡರ್ಕನ್ ಎಚ್ಚರಿಕೆ ನೀಡಿದ್ದಾರೆ.

ಜಾರ್ಜ್ ಫ್ಲಾಯ್ಡ್ ಅವರ ಸಾವಿನಿಂದ ಉಂಟಾದ ವರ್ಣಭೇದ ನೀತಿ ಮತ್ತು ಪೋಲಿಸ್ ಕ್ರೌರ್ಯದ ವಿರುದ್ಧದ ಬೃಹತ್‌ ಪ್ರತಿಭಟನಾ ಪ್ರದರ್ಶನಗಳು ಅಧ್ಯಕ್ಷರ ನಿವಾಸವನ್ನು ತಲುಪಿದ್ದಾಗ ಟ್ರಂಪ್ ಅವರು ಶ್ವೇತಭವನದ ಸುರಕ್ಷಿತ ಪ್ರದೇಶ “ಬಂಕರ್‌”ನಲ್ಲಿ ಅಡಗಿ ಕೂತಿದ್ದರು ಎಂದು ಕಳೆದ ವಾರ ಮಾಧ್ಯಮಗಳು ವರದಿ ಮಾಡಿದ್ದವು.


ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್


ಸಿಯಾಟಲ್‌ನಲ್ಲಿ “ಕ್ಯಾಪಿಟಲ್ ಹಿಲ್ ಸ್ವಾಯತ್ತ ವಲಯ” ಅಥವಾ CHAZ ಎಂದು ಕರೆಯಲ್ಪಡುವ ನೆರೆಹೊರೆಯಲ್ಲಿ ಪ್ರತಿಭಟನೆಗಳನ್ನು ನಡೆಸಲು ಪ್ರತಿಭಟನಾಕಾರರು ಮತ್ತು ನಗರದ ಪೊಲೀಸ್ ಇಲಾಖೆ ಒಪ್ಪಿಕೊಂಡಿದೆ. ಇಂತಹ ಪ್ರದೇಶಕ್ಕೆ ಮಧ್ಯಪ್ರವೇಶಿಸುವುದಾಗಿ ಟ್ರಂಪ್‌ ಹೇಳಿದಾಗಿನಿಂದ ವಿವಾದ ಭುಗಿಲೆದ್ದಿದೆ.

ಕ್ರಾಂತಿಕಾರಿ ಎಡಪಂಥೀಯರು ಗವರ್ನರ್ ಜೇಇನ್ಸ್ಲೀ ಮತ್ತು ಸಿಯಾಟಲ್ ಮೇಯರ್ ಅವರನ್ನು ನಮ್ಮ ಮಹಾನ್ ದೇಶ ಹಿಂದೆಂದೂ ನೋಡಿರದ ಮಟ್ಟದಲ್ಲಿ ನಿಂದಿಸುತ್ತಿದ್ದಾರೆ. ಇದೀಗ ನಿಮ್ಮ ನಗರವನ್ನು ಹಿಂತಿಗೆದುಕೊಳ್ಳಿ. ನೀವು ಅದನ್ನು ಮಾಡದಿದ್ದರೆ, ನಾನು ಮಾಡುತ್ತೇನೆ. ಇದು ಆಟವಲ್ಲ. ಈ ಕೊಳಕು ಅರಾಜಕತಾವಾದಿಗಳನ್ನು ತಕ್ಷಣವೇ ನಿಲ್ಲಿಸಬೇಕು. ವೇಗವಾಗಿ ಸರಿಸಿ! ಎಂದು ಡೋನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಇದಕ್ಕೆ ಮೇಯರ್ ಜೆನ್ನಿ ಡರ್ಕನ್ ಉತ್ತರಿಸುತ್ತಾ, “ನಮ್ಮೆಲ್ಲರನ್ನೂ ಸುರಕ್ಷಿತರನ್ನಾಗಿ ಮಾಡಿ, ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಅಪಹಾಸ್ಯ ಮಾಡಿದ್ದಾರೆ. ಇನ್ನು ಸಿಯಾಟಲ್‌ ಗವರ್ನರ್‌ ಜೇಇನ್ಸ್ಲೀ ಸಹ ಟ್ರಂಪ್‌ಗೆ ತಿರುಗೇಟು ನೀಡಿದ್ದು, “ಆಡಳಿತದಲ್ಲಿ ಸಂಪೂರ್ಣವಾಗಿ ಅಸಮರ್ಥನಾದ ವ್ಯಕ್ತಿ ವಾಷಿಂಗ್ಟನ್‌ನಿಂದ ಹೊರತಾದ ರಾಜ್ಯದ ವ್ಯವಹಾರದಿಂದ ಹೊರಗುಳಿಯಬೇಕು. ಟ್ವೀಟ್‌ ಮಾಡುವುದನ್ನು ನಿಲ್ಲಿಸಿ” ಎಂದು ಇನ್ಸ್ಲೀ ಬರೆದಿದ್ದಾರೆ.

ಮೇ 25 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ನಿರಾಯುಧ ಕಪ್ಪು ವ್ಯಕ್ತಿಯಾದ ಫ್ಲಾಯ್ಡ್ ಸಾವಿನ ನಂತರ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ.

ಸಿಯಾಟಲ್‌ನ ಸ್ವಾಯತ್ತ ವಲಯ ಸ್ಥಾಪನೆಯ ಹಿಂದೆ ಎಡಪಂಥೀಯ ಕಾರ್ಯಕರ್ತರು ಇದ್ದಾರೆ ಎಂಬ ವರದಿಗಳನ್ನು ಸಿಯಾಟಲ್‌ನ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನಗರವನ್ನು ಹಿಂದಕ್ಕೆ ತೆಗೆದುಕೊಳ್ಳಿ’ ಎಂದು ಟ್ವೀಟ್ ಮಾಡುವ ಟ್ರಂಪ್ ಮಾತಿನ ಅರ್ಥವೇನು ಎಂದು ಪ್ರತಿಭಟನಾಕಾರರೊಬ್ಬರು ಪ್ರಶ್ನಿಸಿದ್ದಾರೆ. “ಇದು ನಮ್ಮ ನಗರ. ನಾನು ಹುಟ್ಟಿ ಬೆಳೆದದ್ದು ಈ ಡ್ಯಾಮ್ ಸಿಟಿಯಲ್ಲಿ. ಇದನ್ನು ಜನರಿಗೆ, ಸಿಯಾಟಲ್‌ನಲ್ಲಿ ವಾಸಿಸುವ ಮತ್ತು ಇಲ್ಲಿ ಅಭಿವೃದ್ಧಿ ಹೊಂದುತ್ತಿರುವ ಜನರಿಗೆ ನೀಡೋಣ” ಎಂದು ಅವರು ತಿಳಿಸಿದ್ದಾರೆ.

ಆಫ್ರಿಕನ್-ಅಮೇರಿಕನ್ ಪ್ರತಿಭಟನಾಕಾರ ರಿಚ್ ಬ್ರೌನ್ “ಭಾನುವಾರ ಈ ಪ್ರದೇಶವನ್ನು ತೆರವುಗೊಳಿಸುವ ಪ್ರಯತ್ನದಲ್ಲಿ ಪೊಲೀಸರು ಅಶ್ರುವಾಯು ಮತ್ತು ಫ್ಲ್ಯಾಷ್ ಬ್ಯಾಂಗ್ ಗ್ರೆನೇಡ್‌ಗಳನ್ನು ಬಳಸಿದಾಗ ನಾನು ಬಹಳ ಹೆದರಿದ್ದೆ ಎಂದಿದ್ದಾನೆ. ಆದರೆ ಇಂದು ನನಗೆ ಬೆಂಬಲ ಮತ್ತು ಸ್ವಾಗತ ಸಿಕ್ಕಿದೆ. ಈಗ ನಾವು ಬೆದರಿಕೆ ಇಲ್ಲದೆ, ಭಯವಿಲ್ಲದೆ ಮಾತನಾಡಲು ಸಮರ್ಥರಾಗಿದ್ದೇವೆ. ಈ ಸಮಯವನ್ನಲ್ಲವೇ ನಾವು ಬಯಸುತ್ತಿದ್ದುದು?” ಎಂದಿದ್ದಾರೆ.

ಈ ಹಿಂದೆ ಇದೇ ರೀತಿ ಪ್ರತಿಭಟನೆಯ ವಿಷಯವಾಗಿ ಟ್ರಂಪ್‌ ಹೇಳಿಕೆ ನೀಡಿದ್ದಾಗ ಅಮೆರಿಕಾ ಪೊಲೀಸ್‌ ಅಧಿಕಾರಿಯೊಬ್ಬ ಅಧ್ಯಕ್ಷ ಟ್ರಂಪ್‌ಗೆ “ಬಾಯಿಮುಚ್ಚಿಕೊಂಡಿರಿ” ಎಂದು ತಾಕೀತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.


ಮತ್ತಷ್ಟು ಸುದ್ದಿಗಳು

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...