Homeಅಂತರಾಷ್ಟ್ರೀಯ"ನಿಮ್ಮ ಬಂಕರ್‌ಗೆ ಹಿಂತಿರುಗಿ": ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

“ನಿಮ್ಮ ಬಂಕರ್‌ಗೆ ಹಿಂತಿರುಗಿ”: ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

- Advertisement -
- Advertisement -

ಪಶ್ಚಿಮ ಅಮೆರಿಕದ ಸಿಯಾಟಿಲ್‌‌ನ ಪೊಲೀಸ್ ಮುಕ್ತ ಸ್ವಾಯತ್ತ ವಲಯವನ್ನು ಪ್ರತಿಭಟನೆಯ ವಿಷಯದಲ್ಲಿ ಮಧ್ಯಪ್ರವೇಶಿಸುವುದಾಗಿ ಹೇಳಿದ ಟ್ರಂಪ್‌‌ಗೆ “ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಸಿಯಾಟಲ್‌ನ ಮೇಯರ್ ಜೆನ್ನಿ ಡರ್ಕನ್ ಎಚ್ಚರಿಕೆ ನೀಡಿದ್ದಾರೆ.

ಜಾರ್ಜ್ ಫ್ಲಾಯ್ಡ್ ಅವರ ಸಾವಿನಿಂದ ಉಂಟಾದ ವರ್ಣಭೇದ ನೀತಿ ಮತ್ತು ಪೋಲಿಸ್ ಕ್ರೌರ್ಯದ ವಿರುದ್ಧದ ಬೃಹತ್‌ ಪ್ರತಿಭಟನಾ ಪ್ರದರ್ಶನಗಳು ಅಧ್ಯಕ್ಷರ ನಿವಾಸವನ್ನು ತಲುಪಿದ್ದಾಗ ಟ್ರಂಪ್ ಅವರು ಶ್ವೇತಭವನದ ಸುರಕ್ಷಿತ ಪ್ರದೇಶ “ಬಂಕರ್‌”ನಲ್ಲಿ ಅಡಗಿ ಕೂತಿದ್ದರು ಎಂದು ಕಳೆದ ವಾರ ಮಾಧ್ಯಮಗಳು ವರದಿ ಮಾಡಿದ್ದವು.


ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್


ಸಿಯಾಟಲ್‌ನಲ್ಲಿ “ಕ್ಯಾಪಿಟಲ್ ಹಿಲ್ ಸ್ವಾಯತ್ತ ವಲಯ” ಅಥವಾ CHAZ ಎಂದು ಕರೆಯಲ್ಪಡುವ ನೆರೆಹೊರೆಯಲ್ಲಿ ಪ್ರತಿಭಟನೆಗಳನ್ನು ನಡೆಸಲು ಪ್ರತಿಭಟನಾಕಾರರು ಮತ್ತು ನಗರದ ಪೊಲೀಸ್ ಇಲಾಖೆ ಒಪ್ಪಿಕೊಂಡಿದೆ. ಇಂತಹ ಪ್ರದೇಶಕ್ಕೆ ಮಧ್ಯಪ್ರವೇಶಿಸುವುದಾಗಿ ಟ್ರಂಪ್‌ ಹೇಳಿದಾಗಿನಿಂದ ವಿವಾದ ಭುಗಿಲೆದ್ದಿದೆ.

ಕ್ರಾಂತಿಕಾರಿ ಎಡಪಂಥೀಯರು ಗವರ್ನರ್ ಜೇಇನ್ಸ್ಲೀ ಮತ್ತು ಸಿಯಾಟಲ್ ಮೇಯರ್ ಅವರನ್ನು ನಮ್ಮ ಮಹಾನ್ ದೇಶ ಹಿಂದೆಂದೂ ನೋಡಿರದ ಮಟ್ಟದಲ್ಲಿ ನಿಂದಿಸುತ್ತಿದ್ದಾರೆ. ಇದೀಗ ನಿಮ್ಮ ನಗರವನ್ನು ಹಿಂತಿಗೆದುಕೊಳ್ಳಿ. ನೀವು ಅದನ್ನು ಮಾಡದಿದ್ದರೆ, ನಾನು ಮಾಡುತ್ತೇನೆ. ಇದು ಆಟವಲ್ಲ. ಈ ಕೊಳಕು ಅರಾಜಕತಾವಾದಿಗಳನ್ನು ತಕ್ಷಣವೇ ನಿಲ್ಲಿಸಬೇಕು. ವೇಗವಾಗಿ ಸರಿಸಿ! ಎಂದು ಡೋನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಇದಕ್ಕೆ ಮೇಯರ್ ಜೆನ್ನಿ ಡರ್ಕನ್ ಉತ್ತರಿಸುತ್ತಾ, “ನಮ್ಮೆಲ್ಲರನ್ನೂ ಸುರಕ್ಷಿತರನ್ನಾಗಿ ಮಾಡಿ, ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಅಪಹಾಸ್ಯ ಮಾಡಿದ್ದಾರೆ. ಇನ್ನು ಸಿಯಾಟಲ್‌ ಗವರ್ನರ್‌ ಜೇಇನ್ಸ್ಲೀ ಸಹ ಟ್ರಂಪ್‌ಗೆ ತಿರುಗೇಟು ನೀಡಿದ್ದು, “ಆಡಳಿತದಲ್ಲಿ ಸಂಪೂರ್ಣವಾಗಿ ಅಸಮರ್ಥನಾದ ವ್ಯಕ್ತಿ ವಾಷಿಂಗ್ಟನ್‌ನಿಂದ ಹೊರತಾದ ರಾಜ್ಯದ ವ್ಯವಹಾರದಿಂದ ಹೊರಗುಳಿಯಬೇಕು. ಟ್ವೀಟ್‌ ಮಾಡುವುದನ್ನು ನಿಲ್ಲಿಸಿ” ಎಂದು ಇನ್ಸ್ಲೀ ಬರೆದಿದ್ದಾರೆ.

ಮೇ 25 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ನಿರಾಯುಧ ಕಪ್ಪು ವ್ಯಕ್ತಿಯಾದ ಫ್ಲಾಯ್ಡ್ ಸಾವಿನ ನಂತರ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ.

ಸಿಯಾಟಲ್‌ನ ಸ್ವಾಯತ್ತ ವಲಯ ಸ್ಥಾಪನೆಯ ಹಿಂದೆ ಎಡಪಂಥೀಯ ಕಾರ್ಯಕರ್ತರು ಇದ್ದಾರೆ ಎಂಬ ವರದಿಗಳನ್ನು ಸಿಯಾಟಲ್‌ನ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನಗರವನ್ನು ಹಿಂದಕ್ಕೆ ತೆಗೆದುಕೊಳ್ಳಿ’ ಎಂದು ಟ್ವೀಟ್ ಮಾಡುವ ಟ್ರಂಪ್ ಮಾತಿನ ಅರ್ಥವೇನು ಎಂದು ಪ್ರತಿಭಟನಾಕಾರರೊಬ್ಬರು ಪ್ರಶ್ನಿಸಿದ್ದಾರೆ. “ಇದು ನಮ್ಮ ನಗರ. ನಾನು ಹುಟ್ಟಿ ಬೆಳೆದದ್ದು ಈ ಡ್ಯಾಮ್ ಸಿಟಿಯಲ್ಲಿ. ಇದನ್ನು ಜನರಿಗೆ, ಸಿಯಾಟಲ್‌ನಲ್ಲಿ ವಾಸಿಸುವ ಮತ್ತು ಇಲ್ಲಿ ಅಭಿವೃದ್ಧಿ ಹೊಂದುತ್ತಿರುವ ಜನರಿಗೆ ನೀಡೋಣ” ಎಂದು ಅವರು ತಿಳಿಸಿದ್ದಾರೆ.

ಆಫ್ರಿಕನ್-ಅಮೇರಿಕನ್ ಪ್ರತಿಭಟನಾಕಾರ ರಿಚ್ ಬ್ರೌನ್ “ಭಾನುವಾರ ಈ ಪ್ರದೇಶವನ್ನು ತೆರವುಗೊಳಿಸುವ ಪ್ರಯತ್ನದಲ್ಲಿ ಪೊಲೀಸರು ಅಶ್ರುವಾಯು ಮತ್ತು ಫ್ಲ್ಯಾಷ್ ಬ್ಯಾಂಗ್ ಗ್ರೆನೇಡ್‌ಗಳನ್ನು ಬಳಸಿದಾಗ ನಾನು ಬಹಳ ಹೆದರಿದ್ದೆ ಎಂದಿದ್ದಾನೆ. ಆದರೆ ಇಂದು ನನಗೆ ಬೆಂಬಲ ಮತ್ತು ಸ್ವಾಗತ ಸಿಕ್ಕಿದೆ. ಈಗ ನಾವು ಬೆದರಿಕೆ ಇಲ್ಲದೆ, ಭಯವಿಲ್ಲದೆ ಮಾತನಾಡಲು ಸಮರ್ಥರಾಗಿದ್ದೇವೆ. ಈ ಸಮಯವನ್ನಲ್ಲವೇ ನಾವು ಬಯಸುತ್ತಿದ್ದುದು?” ಎಂದಿದ್ದಾರೆ.

ಈ ಹಿಂದೆ ಇದೇ ರೀತಿ ಪ್ರತಿಭಟನೆಯ ವಿಷಯವಾಗಿ ಟ್ರಂಪ್‌ ಹೇಳಿಕೆ ನೀಡಿದ್ದಾಗ ಅಮೆರಿಕಾ ಪೊಲೀಸ್‌ ಅಧಿಕಾರಿಯೊಬ್ಬ ಅಧ್ಯಕ್ಷ ಟ್ರಂಪ್‌ಗೆ “ಬಾಯಿಮುಚ್ಚಿಕೊಂಡಿರಿ” ಎಂದು ತಾಕೀತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.


ಮತ್ತಷ್ಟು ಸುದ್ದಿಗಳು

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...