Homeಅಂತರಾಷ್ಟ್ರೀಯ"ನಿಮ್ಮ ಬಂಕರ್‌ಗೆ ಹಿಂತಿರುಗಿ": ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

“ನಿಮ್ಮ ಬಂಕರ್‌ಗೆ ಹಿಂತಿರುಗಿ”: ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

- Advertisement -
- Advertisement -

ಪಶ್ಚಿಮ ಅಮೆರಿಕದ ಸಿಯಾಟಿಲ್‌‌ನ ಪೊಲೀಸ್ ಮುಕ್ತ ಸ್ವಾಯತ್ತ ವಲಯವನ್ನು ಪ್ರತಿಭಟನೆಯ ವಿಷಯದಲ್ಲಿ ಮಧ್ಯಪ್ರವೇಶಿಸುವುದಾಗಿ ಹೇಳಿದ ಟ್ರಂಪ್‌‌ಗೆ “ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಸಿಯಾಟಲ್‌ನ ಮೇಯರ್ ಜೆನ್ನಿ ಡರ್ಕನ್ ಎಚ್ಚರಿಕೆ ನೀಡಿದ್ದಾರೆ.

ಜಾರ್ಜ್ ಫ್ಲಾಯ್ಡ್ ಅವರ ಸಾವಿನಿಂದ ಉಂಟಾದ ವರ್ಣಭೇದ ನೀತಿ ಮತ್ತು ಪೋಲಿಸ್ ಕ್ರೌರ್ಯದ ವಿರುದ್ಧದ ಬೃಹತ್‌ ಪ್ರತಿಭಟನಾ ಪ್ರದರ್ಶನಗಳು ಅಧ್ಯಕ್ಷರ ನಿವಾಸವನ್ನು ತಲುಪಿದ್ದಾಗ ಟ್ರಂಪ್ ಅವರು ಶ್ವೇತಭವನದ ಸುರಕ್ಷಿತ ಪ್ರದೇಶ “ಬಂಕರ್‌”ನಲ್ಲಿ ಅಡಗಿ ಕೂತಿದ್ದರು ಎಂದು ಕಳೆದ ವಾರ ಮಾಧ್ಯಮಗಳು ವರದಿ ಮಾಡಿದ್ದವು.


ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್


ಸಿಯಾಟಲ್‌ನಲ್ಲಿ “ಕ್ಯಾಪಿಟಲ್ ಹಿಲ್ ಸ್ವಾಯತ್ತ ವಲಯ” ಅಥವಾ CHAZ ಎಂದು ಕರೆಯಲ್ಪಡುವ ನೆರೆಹೊರೆಯಲ್ಲಿ ಪ್ರತಿಭಟನೆಗಳನ್ನು ನಡೆಸಲು ಪ್ರತಿಭಟನಾಕಾರರು ಮತ್ತು ನಗರದ ಪೊಲೀಸ್ ಇಲಾಖೆ ಒಪ್ಪಿಕೊಂಡಿದೆ. ಇಂತಹ ಪ್ರದೇಶಕ್ಕೆ ಮಧ್ಯಪ್ರವೇಶಿಸುವುದಾಗಿ ಟ್ರಂಪ್‌ ಹೇಳಿದಾಗಿನಿಂದ ವಿವಾದ ಭುಗಿಲೆದ್ದಿದೆ.

ಕ್ರಾಂತಿಕಾರಿ ಎಡಪಂಥೀಯರು ಗವರ್ನರ್ ಜೇಇನ್ಸ್ಲೀ ಮತ್ತು ಸಿಯಾಟಲ್ ಮೇಯರ್ ಅವರನ್ನು ನಮ್ಮ ಮಹಾನ್ ದೇಶ ಹಿಂದೆಂದೂ ನೋಡಿರದ ಮಟ್ಟದಲ್ಲಿ ನಿಂದಿಸುತ್ತಿದ್ದಾರೆ. ಇದೀಗ ನಿಮ್ಮ ನಗರವನ್ನು ಹಿಂತಿಗೆದುಕೊಳ್ಳಿ. ನೀವು ಅದನ್ನು ಮಾಡದಿದ್ದರೆ, ನಾನು ಮಾಡುತ್ತೇನೆ. ಇದು ಆಟವಲ್ಲ. ಈ ಕೊಳಕು ಅರಾಜಕತಾವಾದಿಗಳನ್ನು ತಕ್ಷಣವೇ ನಿಲ್ಲಿಸಬೇಕು. ವೇಗವಾಗಿ ಸರಿಸಿ! ಎಂದು ಡೋನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಇದಕ್ಕೆ ಮೇಯರ್ ಜೆನ್ನಿ ಡರ್ಕನ್ ಉತ್ತರಿಸುತ್ತಾ, “ನಮ್ಮೆಲ್ಲರನ್ನೂ ಸುರಕ್ಷಿತರನ್ನಾಗಿ ಮಾಡಿ, ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಅಪಹಾಸ್ಯ ಮಾಡಿದ್ದಾರೆ. ಇನ್ನು ಸಿಯಾಟಲ್‌ ಗವರ್ನರ್‌ ಜೇಇನ್ಸ್ಲೀ ಸಹ ಟ್ರಂಪ್‌ಗೆ ತಿರುಗೇಟು ನೀಡಿದ್ದು, “ಆಡಳಿತದಲ್ಲಿ ಸಂಪೂರ್ಣವಾಗಿ ಅಸಮರ್ಥನಾದ ವ್ಯಕ್ತಿ ವಾಷಿಂಗ್ಟನ್‌ನಿಂದ ಹೊರತಾದ ರಾಜ್ಯದ ವ್ಯವಹಾರದಿಂದ ಹೊರಗುಳಿಯಬೇಕು. ಟ್ವೀಟ್‌ ಮಾಡುವುದನ್ನು ನಿಲ್ಲಿಸಿ” ಎಂದು ಇನ್ಸ್ಲೀ ಬರೆದಿದ್ದಾರೆ.

ಮೇ 25 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ನಿರಾಯುಧ ಕಪ್ಪು ವ್ಯಕ್ತಿಯಾದ ಫ್ಲಾಯ್ಡ್ ಸಾವಿನ ನಂತರ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ.

ಸಿಯಾಟಲ್‌ನ ಸ್ವಾಯತ್ತ ವಲಯ ಸ್ಥಾಪನೆಯ ಹಿಂದೆ ಎಡಪಂಥೀಯ ಕಾರ್ಯಕರ್ತರು ಇದ್ದಾರೆ ಎಂಬ ವರದಿಗಳನ್ನು ಸಿಯಾಟಲ್‌ನ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನಗರವನ್ನು ಹಿಂದಕ್ಕೆ ತೆಗೆದುಕೊಳ್ಳಿ’ ಎಂದು ಟ್ವೀಟ್ ಮಾಡುವ ಟ್ರಂಪ್ ಮಾತಿನ ಅರ್ಥವೇನು ಎಂದು ಪ್ರತಿಭಟನಾಕಾರರೊಬ್ಬರು ಪ್ರಶ್ನಿಸಿದ್ದಾರೆ. “ಇದು ನಮ್ಮ ನಗರ. ನಾನು ಹುಟ್ಟಿ ಬೆಳೆದದ್ದು ಈ ಡ್ಯಾಮ್ ಸಿಟಿಯಲ್ಲಿ. ಇದನ್ನು ಜನರಿಗೆ, ಸಿಯಾಟಲ್‌ನಲ್ಲಿ ವಾಸಿಸುವ ಮತ್ತು ಇಲ್ಲಿ ಅಭಿವೃದ್ಧಿ ಹೊಂದುತ್ತಿರುವ ಜನರಿಗೆ ನೀಡೋಣ” ಎಂದು ಅವರು ತಿಳಿಸಿದ್ದಾರೆ.

ಆಫ್ರಿಕನ್-ಅಮೇರಿಕನ್ ಪ್ರತಿಭಟನಾಕಾರ ರಿಚ್ ಬ್ರೌನ್ “ಭಾನುವಾರ ಈ ಪ್ರದೇಶವನ್ನು ತೆರವುಗೊಳಿಸುವ ಪ್ರಯತ್ನದಲ್ಲಿ ಪೊಲೀಸರು ಅಶ್ರುವಾಯು ಮತ್ತು ಫ್ಲ್ಯಾಷ್ ಬ್ಯಾಂಗ್ ಗ್ರೆನೇಡ್‌ಗಳನ್ನು ಬಳಸಿದಾಗ ನಾನು ಬಹಳ ಹೆದರಿದ್ದೆ ಎಂದಿದ್ದಾನೆ. ಆದರೆ ಇಂದು ನನಗೆ ಬೆಂಬಲ ಮತ್ತು ಸ್ವಾಗತ ಸಿಕ್ಕಿದೆ. ಈಗ ನಾವು ಬೆದರಿಕೆ ಇಲ್ಲದೆ, ಭಯವಿಲ್ಲದೆ ಮಾತನಾಡಲು ಸಮರ್ಥರಾಗಿದ್ದೇವೆ. ಈ ಸಮಯವನ್ನಲ್ಲವೇ ನಾವು ಬಯಸುತ್ತಿದ್ದುದು?” ಎಂದಿದ್ದಾರೆ.

ಈ ಹಿಂದೆ ಇದೇ ರೀತಿ ಪ್ರತಿಭಟನೆಯ ವಿಷಯವಾಗಿ ಟ್ರಂಪ್‌ ಹೇಳಿಕೆ ನೀಡಿದ್ದಾಗ ಅಮೆರಿಕಾ ಪೊಲೀಸ್‌ ಅಧಿಕಾರಿಯೊಬ್ಬ ಅಧ್ಯಕ್ಷ ಟ್ರಂಪ್‌ಗೆ “ಬಾಯಿಮುಚ್ಚಿಕೊಂಡಿರಿ” ಎಂದು ತಾಕೀತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.


ಮತ್ತಷ್ಟು ಸುದ್ದಿಗಳು

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...