Homeಮುಖಪುಟಮನೆಗೋಗಿ ಅಡುಗೆ ಮಾಡು: ಸುಪ್ರಿಯಾ ಸುಳೆ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ - ತೀವ್ರ...

ಮನೆಗೋಗಿ ಅಡುಗೆ ಮಾಡು: ಸುಪ್ರಿಯಾ ಸುಳೆ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ – ತೀವ್ರ ಟೀಕೆ

- Advertisement -
- Advertisement -

ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ವಿರುದ್ದ, ‘ರಾಜಕೀಯ ಅರ್ಥವಾಗದಿದ್ದರೆ, ಮನೆಗೋಗಿ ಅಡುಗೆ ಮಾಡು’ ಎಂಬ ಅವಹೇಳನಕಾರಿ, ಮಹಿಳಾ ವಿರೋಧಿ ಹೇಳಿಕೆ ನೀಡಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ್ ವಿರುದ್ಧ ಭಾರೀ ಟೀಕೆ ಕೇಳಿಬಂದಿದೆ.

“ನೀವೇಕೆ ರಾಜಕೀಯದಲ್ಲಿದ್ದೀರಿ? ಮನೆಗೆ ಹೋಗಿ ಅಡುಗೆ ಮಾಡಿ. ದೆಹಲಿಗಾದರೂ ಹೋಗಿ ಅಥವಾ ಸ್ಮಶಾನಕ್ಕೆ ಹೋಗಿ, ಆದರೆ ನಮಗೆ ಒಬಿಸಿ ಕೋಟಾ ಕೊಡಿಸಿ. ಲೋಕಸಭಾ ಸದಸ್ಯರಾಗಿದ್ದರೂ ಒಬ್ಬ ಸಿಎಂ ಅಪಾಯಿಂಟ್ಮೆಂಟ್ ಪಡೆಯುವುದು ಹೇಗೆಂದು ನಿಮಗೆ ತಿಳಿದಿಲ್ಲ” ಎಂದು ಬಿಜೆಪಿ ಅಧ್ಯಕ್ಷ ನಾಲಿಗೆ ಹರಿಯಬಿಟ್ಟಿದ್ದಾರೆ.

ಈ ಮೊದಲು ಸುಪ್ರಿಯಾ ಸುಳೆರವರು, “ಬಿಜೆಪಿ ಆಡಳಿತದ ಮಧ್ಯಪ್ರದೇಶ ಸರ್ಕಾರವು ಸ್ಥಳೀಯ ಚುನಾವಣೆಯಲ್ಲಿ ಒಬಿಸಿ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ಪಡೆದುಕೊಂಡಿದ್ದು ಹೇಗೆ? ಈ ಕುರಿತು ನವದೆಹಲಿಯಲ್ಲಿ ಮಧ್ಯಪ್ರದೇಶದ ಸಿಎಂರವರನ್ನು ಸಂಪರ್ಕಿಸಿದೆವು, ಆದರೆ ಅವರು ಸಿಗಲಿಲ್ಲ” ಎಂದು ಪಕ್ಷದ ಸಭೆಯಲ್ಲಿ ಮಾತನಾಡಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ದೆಹಲಿಗೆ ಬಂದರು ಮತ್ತು ಕೆಲವರನ್ನು ಭೇಟಿಯಾದರು. ಅದಾದ ಎರಡೇ ದಿನದಲ್ಲಿ ಅವರು ಸ್ಥಳೀಯ ಚುನಾವಣೆಗೆ ಒಬಿಸಿ ಮೀಸಲಾತಿ ಪಡೆದುಕೊಂಡರು. ಇದು ಹೇಗೆಂದು ನನಗೆ ತಿಳಿಯಲಿಲ್ಲ ಎಂದು ಸುಪ್ರಿಯಾ ಸುಳೆ ಹೇಳಿದ್ದರು.

ಸುಪ್ರಿಯಾ ಸುಳೆ ವಿರುದ್ಧ ಅವಹೇಳನಕಾರಿ, ಮಹಿಳಾ ವಿರೋಧಿ ಹೇಳಿಕೆ ನೀಡಿರುವ ಬಿಜೆಪಿ ಮುಖ್ಯಸ್ಥನ ವಿರುದ್ಧ ಎನ್‌ಸಿಪಿ ಮುಗಿಬಿದ್ದಿದೆ. ಮೊದಲು ನೀವು ಚಪಾಟಿ ಲಟ್ಟಿಸುವುದನ್ನು ಕಲಿಯಿರಿ ಮತ್ತು ನಿಮ್ಮ ಪತ್ನಿಗೆ ಅಡುಗೆ ಮಾಡಲು ಸಹಾಯ ಮಾಡಿ ಎಂದು ತಿರುಗೇಟು ನೀಡಿದೆ.

“ಅವರು ಹಾಗೆ ಮಾತನಾಡಬಾರದಿತ್ತು. ನನ್ನ ಸಹೋದರಿಯ ವಿರುದ್ಧ ಆ ರೀತಿ ಕೆಟ್ಟದಾಗಿ ಮಾತನಾಡುವ ಹಕ್ಕು ಅವರಿಗಿಲ್ಲ” ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.

ಬಿಜೆಪಿಯು ಸ್ತ್ರೀದ್ವೇಷಿ ಪಕ್ಷ ಎಂದು ಸುಪ್ರಿಯಾ ಸುಳೆ ಪತಿ ಸದಾನಂದ್ ಸುಳೆ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಗೃಹಿಣಿ, ತಾಯಿ ಮತ್ತು ಯಶಸ್ವಿ ರಾಜಕಾರಣಿಯಾಗಿರುವ, ಭಾರತದ ಇತರ ಅನೇಕ ಕಠಿಣ ಪರಿಶ್ರಮಿ ಮತ್ತು ಪ್ರತಿಭಾವಂತ ಮಹಿಳೆಯರಲ್ಲಿ ಒಬ್ಬರಾಗಿರುವ ನನ್ನ ಹೆಂಡತಿಯ ಬಗ್ಗೆ ನನಗೆ ಹೆಮ್ಮೆ ಇದೆ… ಆದರೆ ಬಿಜೆಪಿಯು ಸ್ತ್ರೀದ್ವೇಷಿ ಪಕ್ಷವಾಗಿದ್ದು, ಯಾವಾಗಲೂ ಮಹಿಳೆಯನ್ನು ಹೀಯಾಳಿಸುತ್ತದೆ. ಇದು ಎಲ್ಲಾ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶ್ರದ್ಧಾಂಜಲಿ; ದೊರೆಸ್ವಾಮಿ ಎಂಬ ಅತಿ ಸಾಮಾನ್ಯ ಮಹಾನ್ ವ್ಯಕ್ತಿ

ಭಾರತದಲ್ಲಿ ಸರಿ ಸುಮಾರು 50% ನಷ್ಟು ಮಹಿಳೆಯರಿದ್ದಾರೆ. ಅವರು ಎಲ್ಲಾ ಕ್ಷೇತ್ರಗಳಲ್ಲಿಯೂ ಉತ್ತಮ ಸಾಧನೆ ಮಾಡಿದ್ದಾರೆ. ಸಂಸಾರದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಅದರೆ ಮೇಲಿನ ಬಿಜೆಪಿ ಮುಖಂಡನ ಹೇಳಿಕೆ ಮಹಿಳೆಯರನ್ನು ಸಾಮರ್ಥ್ಯವಿಲ್ಲದವರು ಎಂಬ ಪುರಷಾಧಿಪತ್ಯದ ಮನಸ್ಥಿತಿಯಿಂದ ಕೂಡಿದೆ ಎಂಬ ಟೀಕೆಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...