Homeಅಂಕಣಗಳುದೊರೆಸ್ವಾಮಿ ಸನ್ಹೇಕ್ಕೋಗಿ ಕ್ಷಮೆ ಕೇಳಲೆ - ಯತ್ನಾಳ್‌ ಜೊತೆ ಯಾಹೂ ಮಾತುಕತೆ

ದೊರೆಸ್ವಾಮಿ ಸನ್ಹೇಕ್ಕೋಗಿ ಕ್ಷಮೆ ಕೇಳಲೆ – ಯತ್ನಾಳ್‌ ಜೊತೆ ಯಾಹೂ ಮಾತುಕತೆ

- Advertisement -
- Advertisement -

ಸ್ವಾತಂತ್ರ್ಯ ಹೋರಾಟದ ಸಂಕೇತದಂತಿರುವ ದೊರೆಸ್ವಾಮಿಯವರ ಬಗ್ಗೆ ಅತ್ಯಂತ ಪ್ರೀತ್ಯಾಧರಗಳಿಂದ ಮಾತನಾಡಿರುವ ಬಿಜಾಪುರದ ಬಸನಗೌಡ ಪಾಟೀಲ ಯತ್ನಾಳ್ ಎಂಬ ಧೀಮಂತ ನಾಯಕನನ್ನು ಮಾತನಾಡಿಸಿ, ದೊರೆಸ್ವಾಮಿಯವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು ಅನ್ನಿಸಿತಲ್ಲಾ. ಆ ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: “ನಮಸ್ತೇ ಸದಾವತ್ಸಲೇ ಮಾತೃಭೂಮಿ….” “ಹಲೋ ಯಾರ್ರಿ”
“ನಾನಲೆ ಎಫ್.ಜೆ.ತಳವಾರ.”
“ಯಾರಂತ ಗೊತ್ತಾಗಲಿಲ್ರಿ.”
“ನಿಮ ತಂದಿ ಗೆಳಯ ಕಣೋ, ಯತ್ನಾಳ.”
“ಏನಾಗಬೇಕಿತ್ರಿ.”
“ಏನಿಲ್ಲಪ. ನಿನಕಡಿಂದ ನನಗ ಆಗಬೇಕಾದ್ದೇನಿಲ್ಲ. ನಿನ್ನ ಆರೋಗ್ಯ ಹೆಂಗದಾ.”
“ಯದುಕ್ರಿ ಹಾಂಗ ಕೇಳಕತ್ತಿರಿ.”
“ಯದಕಪ್ಪ ಅಂದ್ರಾ, ಇಲ್ಲಿ ದರವೊಬ್ಬರೂ ನಿನ್ನ ತೆಲಿ ಶುದ್ದಿಲ್ಲಂತ ಮಾತಾಡಕತ್ಯಾರ. ಅದಕ ನನಿಗ ಗಾಬರಿಯಾತು. ಆರಡಿ ಎತ್ತರಕ ವೀರಸಿಂಧೂರ ಲಕ್ಷ್ಮಣನಂಗಿದ್ದ. ಮುಂಜಾಲೆದ್ದು ಮೂರು ಎಮ್ಮಿ ಹಾಲಿಂಡತಿದ್ದ ನನ್ನ ಗೆಳೆಯನ ಮಗ ಇವುಗೇನಾತಪ ಅಂತ ಗಾಬರಾತಲೇ ಮಗನ.”
“ಯಾರೊ ಸುಳ್ಳು ಹೇಳ್ಯಾರ್ರಿ, ನನ್ನ ತಲಿಗೇನಾಗಿಲ್ಲ.”
“ಅಂದ್ರ ಮಿದುಳಿಗೇನೋ ಆಗೇತಿ ಅದಕ 23 ಕೇಸು ತೆಲಿ ಮೇಲದಾವು.”
“ಇಲ್ರಿ ಅವು ಸುಳ್ಳು ಕೇಸು. ಪ್ರಕೃತಿ ನೆಟ್ಟಗೈತಿ. ಅರಾಮದಿನಿ.”
“ಇರವಲ್ಯಾಕ, ಆದ್ರ ಸ್ವಾತಂತ್ರ ಹೋರಾಟಗಾರ ಶತಾಯುಷಿ ದೊರೆಸ್ವಾಮಿಗಳನ್ನ ಯದುಕ್ಕಲೆ ಬೈಯಕತ್ತಿಯಂತೆ.”
“ಬೋದಿಲ್ರೀ. ಅವ ಡೋಂಗಿ ಸ್ವಾತಂತ್ರ ಹೋರಾಟಗಾರ ಅಂದೀನಿ ಅಷ್ಟ.”
“ಮಗ ಸತ್ತಲೆ ನೀನು. ದೊರೆಸ್ವಾಮಿ ಅಂದ್ರೇನು. ನೀ ಅಂದ್ರೇನು. ಅವರ ಚಪ್ಪಲಿ ಬಿಡೋ ಜಾಗದಾಗ ನಿಂದ್ರಕ್ಕೆ ಲಾಯಕ್ಕಿಲ್ಲದ ಮನುಶ್ಯದಿ ನೀನು. ಯದುಕಲೆ ಅಂಗಂದಿ.”
“ಆತ ಕಾಂಗ್ರೆಸ್ಸಿನ ಪರ ಮಾತಾಡತಾರ.”
“ಸಿದ್ದರಾಮಯ್ಯನ ಸರಕಾರಿದ್ದಾಗ ಅವರ ಸರಕಾರನೂ ಟೀಕಿ ಮಾಡಿದರಲ್ಲಾ. ಆಗ ನಿನ್ನ ಕಿವಿಗೇನು ಗೂಟಬಡಿಕೊಂಡಿದ್ದೇನು.”
“ಆ ಟೀಕಿನೂ ಡೋಂಗಿರಿ. ಅವುರು ಕಾಂಗ್ರೆಸಿಗರ ಪರ”
“ಅವರ ಪರ ಅಲ್ಲಲೇ, ಯಾರು ಜನಕ್ಕೆ ಒಳ್ಳೇದು ಮಾಡ್ತರೋ ಅವುರ ಪರ ಇರತರ. ತಲಿಕೆಟ್ಟ ಹಲಕಟ್ಟವುರ ಪರ ಇರೂದಿಲ್ಲವುರು ತಿಳಿತಿಲ್ಲಾ.”
“ಅವುರು ಪಾಕೀಸ್ತಾನದ ಪರ ಅವುರ.”
“ಪಾಕಿಸ್ತಾನದ ಪರ ಯದಕ್ಕಿರತರಲೇ. ನೀವು ಏನದೀರಲ್ಲಾ, ಅಂದ್ರ ಬಿಜೆಪಿಗಳು ನಿಮಗಿರುವಷ್ಟು ಪಾಕಿಸ್ತಾನದ ಪ್ರೀತಿ ನಮ ದೇಶದಾಗ ಯಾರಿಗೂ ಇಲ್ಲ ನೋಡು. ಅಲ್ಲಲೆ ದಿನ ಬೆಳಗಾತು ಅಂದ್ರ ಪಾಕಿಸ್ತಾನ ಪಾಕಿಸ್ತಾನ ಅನ್ನಕತ್ತೀರಲ್ಲಾ, ಆ ದೇಶ ಕಂಡ್ರ ಅದೇನು ಪ್ರೀತಿಲೆ ನಿಮಗೆ.”
“ಪ್ರೀತಿಯಲ್ಲ ದ್ವೇಷ.”
“ದ್ವೇಷ ಅಲ್ಲಲೆ ಪ್ರೀತಿ. ನಿಮ್ಮ ಪ್ರಧಾನಿ ಏನದಾನಲ್ಲ ಮೋದಿ, ಆತ ಚೊಣಬಿ ಹೊಕ್ಕಂಗ ದೌಡು ಪಾಕಿಸ್ತಾನಕ್ಕೋಗಿ ಲಗೂನು ಬಂದನಲ್ಲ ಯದಕ್ಕೋಗಿದ್ದಾ. ದ್ವೇಷ ಇದ್ರೋತಿದ್ನೇನವ. ಪಾಪ ಆ ದೇಶದ ಪ್ರಧಾನಿ ಮಗಳ ಲಗ್ನಕ್ಕೋಗಿ ಬಿರಿಯಾನಿ ತಿಂದ. ಇನ್ನ ಮುಂದೆ ಹಿಂಗೇ ಇರೂನು ಅಂತೇಳಿ ಬಂದ. ಅದಕ್ಕೂ ಮೊದ್ಲು ವಾಜಪೇಯಿ, ನಿಮ್ಮ ವಿಜಯ ಸಂಕೇಶ್ವರನಂಗೆ ಬಸ್ ಓಡಿಸಿದ್ದ. ಈ ಕಡಿ ಬಸ್ ಹೋತು, ಆಕಂಡಿದ ಪಾಕಿಸ್ತಾನದ ಸೈನಿಕರು ಒಳಬಂದ್ರು. ಐದು ನೂರು ಮಂದಿ ನಮ್ಮ ಸೈನಿಕರು ತೀರಿಕೊಂಡ್ರು. ಮಕ್ಕಳಾ, ವಿಜಯೋತ್ಸವ ಮಾಡ್ತೀರಿ, ಇತಿಹಾಸಗೊತ್ತೇನಲೆ ನಿನಗ.”
“ಗೊತ್ತೈತಿ.”
“ಗೊತ್ತಿದ್ರ ದೊರೆಸ್ವಾಮಿ ಹೋರಾಟವ ಡೋಂಗಿ ಅಂತಿರಲಿಲ್ಲ ನೀನು. ಕ್ವಿಟ್ ಇಂಡಿಯಾ ಚಳುವಳೀಲಿ ನೀ ಹುಟ್ಟಿದ್ದೇನಲೇ? ಆಗಲೇ ದೊರೆಸ್ವಾಮಿ ಜೈಲಿಗೋಗಿದ್ರು.”
“ಆ ಚಳುವಳಿ ಇಲ್ದಿದ್ರೆ ಅವುರು ಜೈಲಿಗೋತಿರಲಿಲ್ಲ.”
“ತೆಲಿಯಾಗೇನು ಮೆದುಳೈತೋ ಎಮ್ಮಿ ಸಗಣಿ ಐತೋ ನಿನಗ. ಅಲ್ಲಪ್ಪ ಜೈಲಿಗೋಗದಿದ್ರೆ ಚಳುವಳಿ ಮಾಡತಿದ್ರು ಗೊತ್ತೇನು.”
“ಅವರ ಚಳುವಳಿನೆ ಡೋಂಗಿ.”
“ಇನ್ಯಾರದು ಖರೆ ಐತಿ ಹೇಳು ನೋಡೊನು.”
“ವೀರ ಸಾವರ್ಕರ ಚಳುವಳಿ.”
“ಲೇ ಮಂಗ್ಯನ ಮಗನ. ಆ ಸಾವರಕರ ಯಾರು ಗೊತ್ತೇನಲೆ. ಅಂಡಮಾನ್ ಜೈಲಾಗೆ ಇರಕ್ಕಾಗುದಿಲ್ಲಂತ ಹೇಳಿ ಬ್ರಿಟಿಷರಿಗೆ ಮೂರು ಬಾರಿ ಕ್ಷಮಾಪಣೆ ಪತ್ರ ಬರದು, ಬಿಡುಗಡೆಯಾಗಿ ನಾಗಪುರಕ್ಕೆ ಬಂದು ಖೋಲಿ ಹಿಡುದು ಕುಂತವ. ಹಿಂದೂಮಹಾಸಭಾ, ವಿಶ್ವಹಿಂದೂ ಪರಿಷತ್ ಮಾಡಿ ಇವತ್ತು ನಿನ್ನಂತವರ ತೆಲಿಕೆಟ್ಟು ಮಸರಗಡಿಗಿಯಾಗಂಗೆ ಮಾಡಿ ಹೋದವ. ನೀ ಮದುಲು ಹಿಂಗರಲಿಲ್ಲ, ಭಾಳ ಸಂಭಾವಿತಿದ್ದಿ. ಯಾವಾಗ ನಾಗಪುರಕ್ಕೆ ಕೇಳಂಗೆ ಮಾತಾಡಕತ್ತಿದ್ಯೋ ಆಗ ಹಿಂಗಾದಿ. ಒಂದು ತಿಳಕೊ ಮಗನ.”
“ಏನೇಳ್ರಿ.”
“ನೀ ಏಟೇ ವದರಿದ್ರು ಮಂತ್ರಿಯಾಗೂದಿಲ್ಲಲೆ.”
“ಯದಕ್ರಿ.”
“ದೊರೆಸ್ವಾಮಿ ಶಾಪ ಕಣಲೆ. ಅದಕ್ಕೂ ಮೊದ್ಲು ಶೋಭಾ ಕರಂದ್ಲಾಜೆ ಶಾಪ ಕೊಟ್ಟಿದ್ಲು.”
“ಹೌದೇನ್ರೀ.”
“ಹೌದಲೇ, ನೀ ಎಡೂರಪ್ಪ ಶೋಭಾ ಕರಂದ್ಲಾಜೆ ತೆಕ್ಕಿಬಡಕೊಂಡಿದ್ರು ನಾನೇ ನೋಡಿದೆ ಅಂತ ಚಿಕ್ಕಮಗಳೂರಾಗ ಹೇಳಿ ಹೋದಿ. ಅದು, ಶೋಬನ ಕಿವಿತಲುಪ್ತು, ಅದು ಎಡೂರಪ್ಪನ ಕಿವಿ ಕೂಡ ಆಗಿತ್ತು.”
“ಯಾರೊ ಚಾಡಿ ಹೇಳ್ಯಾರ್ರಿ.”
“ಇಲ್ಲಿ ಕೇಳಿಸಿಕೊಂಡಿದ್ದ ಅಲ್ಲೇಳಿದ್ರ ಚಾಡಿ ಯಂಗಲೆ ಆತದೆ. ಸುಳ್ಳು ಹೇಳಿದ್ರೆ ಅದು ಚಾಡಿಯಾಕ್ಯತಿ- ತಿಳಿತೇನಲೇ. ಅಂತೂ ನೀ ಎಡೂರಪ್ಪನ ಸಂಪುಟ ಸೇರೋದು ಸುಳ್ಳಾತು.”
“ಮಂತ್ರಿನೆ ಆಗಬೇಕು ಅನ್ನದೇನೂ.”
“ಅಲ್ಲಲೆ ಖಬರಗೇಡಿ ಕೇಂದ್ರದಾಗ ಮಂತ್ರಿಯಾಗಿದ್ದವ ರಾಜ್ಯದಾಗೂ ಮಂತ್ರಿಯಾಗಬೇಕಲ್ಲೇನು.”
“ಹೌದ್ರಿ.”
“ಮತ್ತ ಆಗಿಲ್ಲಂದ್ರ ನೀ ಆಯೋಗ್ಯದಿ, ನಾಲಾಯ್ಕದಿ, ಒಟ್ಟ ಶಾಸಕ ಆಗಕ್ಕೂ ಯೋಗ್ಯಲ್ಲ ನೀನು ಅಂದಂಗಾತು.”
“ನನ್ನ ಯೋಗ್ಯತೆ ಬಗ್ಗೆ ಮಾತಾಡಬೇಡಿ.”
“ಇಲ್ಲಪ ನಿನ್ನ ಯೋಗ್ಯತೆ ಬಾಳ ಬೇಷೈತಿ, ಅಲ್ಲಲೆ ಮನ್ನಿ ಇಡೀ ಕರನಾಟಕನೆ ನಿನ್ನ ವಿರುದ್ಧ ಪ್ರತಿಭಟನೆ ಮಾಡ್ತು. ವಿಜಾಪುರದ ಗೌರವನೆ ಹೋತಲ್ಲಲೇ. ಅದಕೂ ಮೊದ್ಲು ಬಿಜಾಪುರಂದ್ರ ಮಂದಿ ಎಷ್ಟು ಬೆಲಿ ಕೊಡತಿದ್ರ ಗೊತ್ತೇನು.”
“ಈಗ ಇನ್ನ ಕೊಡ್ತಾರ. ನಾ ಎಂಪಿಯಾಗಿ, ಮಂತ್ರಿಯಾಗಿ, ಎಮ್ಮೆಲ್ಲೆಯಾಗಿ ಬಿಜಾಪುರಕ್ಕ ಹೆಸರು ತಂದೀನಿ.”
“ತಂದಿ ಬುಡು ಮಗನ. ಅಲ್ಲಲೆ, ಒಮ್ಮೆ ಅಂತಾ ಸಿರಿಗೆರೆ ಶಿವಾಚಾರ್ಯ ಸ್ವಾಮಿ ಬಂದಿದ್ರು. ಅವರ ಕಾರ್ಯಕ್ರಮದ ಮೆರವಣಿಗಿ ಏನಿತ್ತಲ್ಲ ಅದಕ ಮುಸ್ಲಿಂ ಮಹಿಳೆಯರು ಎಷ್ಟು ಮಂದಿ ಬಂದಿದ್ರು ಗುರುತೇನ, ಮೂರು ಸಾವುರ ಮಂದಿ ಬಂದಿದ್ರು. ಆಗ ಗುರುಗಳು ನಮ್ಮ ಬಿಜಾಪುರದ ಧರ್ಮ ಸಾಮರಸ್ಯ ಕೊಂಡಾಡಿ ಹೋದ್ರು. ಇಂಥಾ ಊರಿಗೆ ನೀ ಎಲ್ಲಿಂದ ಬಂದೇ ಹನುಮಂತ. ಮೊದಲು ದಕ್ಷಿಣ ಕನ್ನಡಕ್ಕೋಗು, ಅಲ್ಲಿ ನಿನ್ನಂಥವರು ಭಾಳಮಂದಿ ಅದಾರ.”
“ವಿಜಾಪುರ ಅನಾಥಮಾಡಿ ನಾ ಎಲ್ಯೂ ಹೋಗುದಿಲ್ಲ.”
“ಅನಾಥಲ್ಲಲೇ, ನೀ ಇದ್ರಾ ಮಶಾಣಾಕ್ಯತಿ, ಈಗಾಗಲೇ ನಿಮ್ಮ ಬ್ರದರ್ಸ್ ದೆಹಲಿನ ಮಶಾಣ ಮಾಡಕತ್ಯಾರ, ಅದಿರ್ಲಿ ಮೊದಲು ನಮ್ಮ ದೊರೆಸ್ವಾಮಿ ಸನೇಕ್ಕೋಗಿ ಕ್ಷಮಿಸಿರಿಯಪ್ಪಾ ಅನ್ನು.”
“ನಾ ಅನ್ನುದಿಲ್ರಿ.”
“ಹಾಳಾಗಿ ಹೋಗು.”
“ಅಂಗೇ ಮಾಡ್ತೇನ್ರೀ…”

ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...