Homeಅಂಕಣಗಳುದೊರೆಸ್ವಾಮಿ ಸನ್ಹೇಕ್ಕೋಗಿ ಕ್ಷಮೆ ಕೇಳಲೆ - ಯತ್ನಾಳ್‌ ಜೊತೆ ಯಾಹೂ ಮಾತುಕತೆ

ದೊರೆಸ್ವಾಮಿ ಸನ್ಹೇಕ್ಕೋಗಿ ಕ್ಷಮೆ ಕೇಳಲೆ – ಯತ್ನಾಳ್‌ ಜೊತೆ ಯಾಹೂ ಮಾತುಕತೆ

- Advertisement -
- Advertisement -

ಸ್ವಾತಂತ್ರ್ಯ ಹೋರಾಟದ ಸಂಕೇತದಂತಿರುವ ದೊರೆಸ್ವಾಮಿಯವರ ಬಗ್ಗೆ ಅತ್ಯಂತ ಪ್ರೀತ್ಯಾಧರಗಳಿಂದ ಮಾತನಾಡಿರುವ ಬಿಜಾಪುರದ ಬಸನಗೌಡ ಪಾಟೀಲ ಯತ್ನಾಳ್ ಎಂಬ ಧೀಮಂತ ನಾಯಕನನ್ನು ಮಾತನಾಡಿಸಿ, ದೊರೆಸ್ವಾಮಿಯವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು ಅನ್ನಿಸಿತಲ್ಲಾ. ಆ ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: “ನಮಸ್ತೇ ಸದಾವತ್ಸಲೇ ಮಾತೃಭೂಮಿ….” “ಹಲೋ ಯಾರ್ರಿ”
“ನಾನಲೆ ಎಫ್.ಜೆ.ತಳವಾರ.”
“ಯಾರಂತ ಗೊತ್ತಾಗಲಿಲ್ರಿ.”
“ನಿಮ ತಂದಿ ಗೆಳಯ ಕಣೋ, ಯತ್ನಾಳ.”
“ಏನಾಗಬೇಕಿತ್ರಿ.”
“ಏನಿಲ್ಲಪ. ನಿನಕಡಿಂದ ನನಗ ಆಗಬೇಕಾದ್ದೇನಿಲ್ಲ. ನಿನ್ನ ಆರೋಗ್ಯ ಹೆಂಗದಾ.”
“ಯದುಕ್ರಿ ಹಾಂಗ ಕೇಳಕತ್ತಿರಿ.”
“ಯದಕಪ್ಪ ಅಂದ್ರಾ, ಇಲ್ಲಿ ದರವೊಬ್ಬರೂ ನಿನ್ನ ತೆಲಿ ಶುದ್ದಿಲ್ಲಂತ ಮಾತಾಡಕತ್ಯಾರ. ಅದಕ ನನಿಗ ಗಾಬರಿಯಾತು. ಆರಡಿ ಎತ್ತರಕ ವೀರಸಿಂಧೂರ ಲಕ್ಷ್ಮಣನಂಗಿದ್ದ. ಮುಂಜಾಲೆದ್ದು ಮೂರು ಎಮ್ಮಿ ಹಾಲಿಂಡತಿದ್ದ ನನ್ನ ಗೆಳೆಯನ ಮಗ ಇವುಗೇನಾತಪ ಅಂತ ಗಾಬರಾತಲೇ ಮಗನ.”
“ಯಾರೊ ಸುಳ್ಳು ಹೇಳ್ಯಾರ್ರಿ, ನನ್ನ ತಲಿಗೇನಾಗಿಲ್ಲ.”
“ಅಂದ್ರ ಮಿದುಳಿಗೇನೋ ಆಗೇತಿ ಅದಕ 23 ಕೇಸು ತೆಲಿ ಮೇಲದಾವು.”
“ಇಲ್ರಿ ಅವು ಸುಳ್ಳು ಕೇಸು. ಪ್ರಕೃತಿ ನೆಟ್ಟಗೈತಿ. ಅರಾಮದಿನಿ.”
“ಇರವಲ್ಯಾಕ, ಆದ್ರ ಸ್ವಾತಂತ್ರ ಹೋರಾಟಗಾರ ಶತಾಯುಷಿ ದೊರೆಸ್ವಾಮಿಗಳನ್ನ ಯದುಕ್ಕಲೆ ಬೈಯಕತ್ತಿಯಂತೆ.”
“ಬೋದಿಲ್ರೀ. ಅವ ಡೋಂಗಿ ಸ್ವಾತಂತ್ರ ಹೋರಾಟಗಾರ ಅಂದೀನಿ ಅಷ್ಟ.”
“ಮಗ ಸತ್ತಲೆ ನೀನು. ದೊರೆಸ್ವಾಮಿ ಅಂದ್ರೇನು. ನೀ ಅಂದ್ರೇನು. ಅವರ ಚಪ್ಪಲಿ ಬಿಡೋ ಜಾಗದಾಗ ನಿಂದ್ರಕ್ಕೆ ಲಾಯಕ್ಕಿಲ್ಲದ ಮನುಶ್ಯದಿ ನೀನು. ಯದುಕಲೆ ಅಂಗಂದಿ.”
“ಆತ ಕಾಂಗ್ರೆಸ್ಸಿನ ಪರ ಮಾತಾಡತಾರ.”
“ಸಿದ್ದರಾಮಯ್ಯನ ಸರಕಾರಿದ್ದಾಗ ಅವರ ಸರಕಾರನೂ ಟೀಕಿ ಮಾಡಿದರಲ್ಲಾ. ಆಗ ನಿನ್ನ ಕಿವಿಗೇನು ಗೂಟಬಡಿಕೊಂಡಿದ್ದೇನು.”
“ಆ ಟೀಕಿನೂ ಡೋಂಗಿರಿ. ಅವುರು ಕಾಂಗ್ರೆಸಿಗರ ಪರ”
“ಅವರ ಪರ ಅಲ್ಲಲೇ, ಯಾರು ಜನಕ್ಕೆ ಒಳ್ಳೇದು ಮಾಡ್ತರೋ ಅವುರ ಪರ ಇರತರ. ತಲಿಕೆಟ್ಟ ಹಲಕಟ್ಟವುರ ಪರ ಇರೂದಿಲ್ಲವುರು ತಿಳಿತಿಲ್ಲಾ.”
“ಅವುರು ಪಾಕೀಸ್ತಾನದ ಪರ ಅವುರ.”
“ಪಾಕಿಸ್ತಾನದ ಪರ ಯದಕ್ಕಿರತರಲೇ. ನೀವು ಏನದೀರಲ್ಲಾ, ಅಂದ್ರ ಬಿಜೆಪಿಗಳು ನಿಮಗಿರುವಷ್ಟು ಪಾಕಿಸ್ತಾನದ ಪ್ರೀತಿ ನಮ ದೇಶದಾಗ ಯಾರಿಗೂ ಇಲ್ಲ ನೋಡು. ಅಲ್ಲಲೆ ದಿನ ಬೆಳಗಾತು ಅಂದ್ರ ಪಾಕಿಸ್ತಾನ ಪಾಕಿಸ್ತಾನ ಅನ್ನಕತ್ತೀರಲ್ಲಾ, ಆ ದೇಶ ಕಂಡ್ರ ಅದೇನು ಪ್ರೀತಿಲೆ ನಿಮಗೆ.”
“ಪ್ರೀತಿಯಲ್ಲ ದ್ವೇಷ.”
“ದ್ವೇಷ ಅಲ್ಲಲೆ ಪ್ರೀತಿ. ನಿಮ್ಮ ಪ್ರಧಾನಿ ಏನದಾನಲ್ಲ ಮೋದಿ, ಆತ ಚೊಣಬಿ ಹೊಕ್ಕಂಗ ದೌಡು ಪಾಕಿಸ್ತಾನಕ್ಕೋಗಿ ಲಗೂನು ಬಂದನಲ್ಲ ಯದಕ್ಕೋಗಿದ್ದಾ. ದ್ವೇಷ ಇದ್ರೋತಿದ್ನೇನವ. ಪಾಪ ಆ ದೇಶದ ಪ್ರಧಾನಿ ಮಗಳ ಲಗ್ನಕ್ಕೋಗಿ ಬಿರಿಯಾನಿ ತಿಂದ. ಇನ್ನ ಮುಂದೆ ಹಿಂಗೇ ಇರೂನು ಅಂತೇಳಿ ಬಂದ. ಅದಕ್ಕೂ ಮೊದ್ಲು ವಾಜಪೇಯಿ, ನಿಮ್ಮ ವಿಜಯ ಸಂಕೇಶ್ವರನಂಗೆ ಬಸ್ ಓಡಿಸಿದ್ದ. ಈ ಕಡಿ ಬಸ್ ಹೋತು, ಆಕಂಡಿದ ಪಾಕಿಸ್ತಾನದ ಸೈನಿಕರು ಒಳಬಂದ್ರು. ಐದು ನೂರು ಮಂದಿ ನಮ್ಮ ಸೈನಿಕರು ತೀರಿಕೊಂಡ್ರು. ಮಕ್ಕಳಾ, ವಿಜಯೋತ್ಸವ ಮಾಡ್ತೀರಿ, ಇತಿಹಾಸಗೊತ್ತೇನಲೆ ನಿನಗ.”
“ಗೊತ್ತೈತಿ.”
“ಗೊತ್ತಿದ್ರ ದೊರೆಸ್ವಾಮಿ ಹೋರಾಟವ ಡೋಂಗಿ ಅಂತಿರಲಿಲ್ಲ ನೀನು. ಕ್ವಿಟ್ ಇಂಡಿಯಾ ಚಳುವಳೀಲಿ ನೀ ಹುಟ್ಟಿದ್ದೇನಲೇ? ಆಗಲೇ ದೊರೆಸ್ವಾಮಿ ಜೈಲಿಗೋಗಿದ್ರು.”
“ಆ ಚಳುವಳಿ ಇಲ್ದಿದ್ರೆ ಅವುರು ಜೈಲಿಗೋತಿರಲಿಲ್ಲ.”
“ತೆಲಿಯಾಗೇನು ಮೆದುಳೈತೋ ಎಮ್ಮಿ ಸಗಣಿ ಐತೋ ನಿನಗ. ಅಲ್ಲಪ್ಪ ಜೈಲಿಗೋಗದಿದ್ರೆ ಚಳುವಳಿ ಮಾಡತಿದ್ರು ಗೊತ್ತೇನು.”
“ಅವರ ಚಳುವಳಿನೆ ಡೋಂಗಿ.”
“ಇನ್ಯಾರದು ಖರೆ ಐತಿ ಹೇಳು ನೋಡೊನು.”
“ವೀರ ಸಾವರ್ಕರ ಚಳುವಳಿ.”
“ಲೇ ಮಂಗ್ಯನ ಮಗನ. ಆ ಸಾವರಕರ ಯಾರು ಗೊತ್ತೇನಲೆ. ಅಂಡಮಾನ್ ಜೈಲಾಗೆ ಇರಕ್ಕಾಗುದಿಲ್ಲಂತ ಹೇಳಿ ಬ್ರಿಟಿಷರಿಗೆ ಮೂರು ಬಾರಿ ಕ್ಷಮಾಪಣೆ ಪತ್ರ ಬರದು, ಬಿಡುಗಡೆಯಾಗಿ ನಾಗಪುರಕ್ಕೆ ಬಂದು ಖೋಲಿ ಹಿಡುದು ಕುಂತವ. ಹಿಂದೂಮಹಾಸಭಾ, ವಿಶ್ವಹಿಂದೂ ಪರಿಷತ್ ಮಾಡಿ ಇವತ್ತು ನಿನ್ನಂತವರ ತೆಲಿಕೆಟ್ಟು ಮಸರಗಡಿಗಿಯಾಗಂಗೆ ಮಾಡಿ ಹೋದವ. ನೀ ಮದುಲು ಹಿಂಗರಲಿಲ್ಲ, ಭಾಳ ಸಂಭಾವಿತಿದ್ದಿ. ಯಾವಾಗ ನಾಗಪುರಕ್ಕೆ ಕೇಳಂಗೆ ಮಾತಾಡಕತ್ತಿದ್ಯೋ ಆಗ ಹಿಂಗಾದಿ. ಒಂದು ತಿಳಕೊ ಮಗನ.”
“ಏನೇಳ್ರಿ.”
“ನೀ ಏಟೇ ವದರಿದ್ರು ಮಂತ್ರಿಯಾಗೂದಿಲ್ಲಲೆ.”
“ಯದಕ್ರಿ.”
“ದೊರೆಸ್ವಾಮಿ ಶಾಪ ಕಣಲೆ. ಅದಕ್ಕೂ ಮೊದ್ಲು ಶೋಭಾ ಕರಂದ್ಲಾಜೆ ಶಾಪ ಕೊಟ್ಟಿದ್ಲು.”
“ಹೌದೇನ್ರೀ.”
“ಹೌದಲೇ, ನೀ ಎಡೂರಪ್ಪ ಶೋಭಾ ಕರಂದ್ಲಾಜೆ ತೆಕ್ಕಿಬಡಕೊಂಡಿದ್ರು ನಾನೇ ನೋಡಿದೆ ಅಂತ ಚಿಕ್ಕಮಗಳೂರಾಗ ಹೇಳಿ ಹೋದಿ. ಅದು, ಶೋಬನ ಕಿವಿತಲುಪ್ತು, ಅದು ಎಡೂರಪ್ಪನ ಕಿವಿ ಕೂಡ ಆಗಿತ್ತು.”
“ಯಾರೊ ಚಾಡಿ ಹೇಳ್ಯಾರ್ರಿ.”
“ಇಲ್ಲಿ ಕೇಳಿಸಿಕೊಂಡಿದ್ದ ಅಲ್ಲೇಳಿದ್ರ ಚಾಡಿ ಯಂಗಲೆ ಆತದೆ. ಸುಳ್ಳು ಹೇಳಿದ್ರೆ ಅದು ಚಾಡಿಯಾಕ್ಯತಿ- ತಿಳಿತೇನಲೇ. ಅಂತೂ ನೀ ಎಡೂರಪ್ಪನ ಸಂಪುಟ ಸೇರೋದು ಸುಳ್ಳಾತು.”
“ಮಂತ್ರಿನೆ ಆಗಬೇಕು ಅನ್ನದೇನೂ.”
“ಅಲ್ಲಲೆ ಖಬರಗೇಡಿ ಕೇಂದ್ರದಾಗ ಮಂತ್ರಿಯಾಗಿದ್ದವ ರಾಜ್ಯದಾಗೂ ಮಂತ್ರಿಯಾಗಬೇಕಲ್ಲೇನು.”
“ಹೌದ್ರಿ.”
“ಮತ್ತ ಆಗಿಲ್ಲಂದ್ರ ನೀ ಆಯೋಗ್ಯದಿ, ನಾಲಾಯ್ಕದಿ, ಒಟ್ಟ ಶಾಸಕ ಆಗಕ್ಕೂ ಯೋಗ್ಯಲ್ಲ ನೀನು ಅಂದಂಗಾತು.”
“ನನ್ನ ಯೋಗ್ಯತೆ ಬಗ್ಗೆ ಮಾತಾಡಬೇಡಿ.”
“ಇಲ್ಲಪ ನಿನ್ನ ಯೋಗ್ಯತೆ ಬಾಳ ಬೇಷೈತಿ, ಅಲ್ಲಲೆ ಮನ್ನಿ ಇಡೀ ಕರನಾಟಕನೆ ನಿನ್ನ ವಿರುದ್ಧ ಪ್ರತಿಭಟನೆ ಮಾಡ್ತು. ವಿಜಾಪುರದ ಗೌರವನೆ ಹೋತಲ್ಲಲೇ. ಅದಕೂ ಮೊದ್ಲು ಬಿಜಾಪುರಂದ್ರ ಮಂದಿ ಎಷ್ಟು ಬೆಲಿ ಕೊಡತಿದ್ರ ಗೊತ್ತೇನು.”
“ಈಗ ಇನ್ನ ಕೊಡ್ತಾರ. ನಾ ಎಂಪಿಯಾಗಿ, ಮಂತ್ರಿಯಾಗಿ, ಎಮ್ಮೆಲ್ಲೆಯಾಗಿ ಬಿಜಾಪುರಕ್ಕ ಹೆಸರು ತಂದೀನಿ.”
“ತಂದಿ ಬುಡು ಮಗನ. ಅಲ್ಲಲೆ, ಒಮ್ಮೆ ಅಂತಾ ಸಿರಿಗೆರೆ ಶಿವಾಚಾರ್ಯ ಸ್ವಾಮಿ ಬಂದಿದ್ರು. ಅವರ ಕಾರ್ಯಕ್ರಮದ ಮೆರವಣಿಗಿ ಏನಿತ್ತಲ್ಲ ಅದಕ ಮುಸ್ಲಿಂ ಮಹಿಳೆಯರು ಎಷ್ಟು ಮಂದಿ ಬಂದಿದ್ರು ಗುರುತೇನ, ಮೂರು ಸಾವುರ ಮಂದಿ ಬಂದಿದ್ರು. ಆಗ ಗುರುಗಳು ನಮ್ಮ ಬಿಜಾಪುರದ ಧರ್ಮ ಸಾಮರಸ್ಯ ಕೊಂಡಾಡಿ ಹೋದ್ರು. ಇಂಥಾ ಊರಿಗೆ ನೀ ಎಲ್ಲಿಂದ ಬಂದೇ ಹನುಮಂತ. ಮೊದಲು ದಕ್ಷಿಣ ಕನ್ನಡಕ್ಕೋಗು, ಅಲ್ಲಿ ನಿನ್ನಂಥವರು ಭಾಳಮಂದಿ ಅದಾರ.”
“ವಿಜಾಪುರ ಅನಾಥಮಾಡಿ ನಾ ಎಲ್ಯೂ ಹೋಗುದಿಲ್ಲ.”
“ಅನಾಥಲ್ಲಲೇ, ನೀ ಇದ್ರಾ ಮಶಾಣಾಕ್ಯತಿ, ಈಗಾಗಲೇ ನಿಮ್ಮ ಬ್ರದರ್ಸ್ ದೆಹಲಿನ ಮಶಾಣ ಮಾಡಕತ್ಯಾರ, ಅದಿರ್ಲಿ ಮೊದಲು ನಮ್ಮ ದೊರೆಸ್ವಾಮಿ ಸನೇಕ್ಕೋಗಿ ಕ್ಷಮಿಸಿರಿಯಪ್ಪಾ ಅನ್ನು.”
“ನಾ ಅನ್ನುದಿಲ್ರಿ.”
“ಹಾಳಾಗಿ ಹೋಗು.”
“ಅಂಗೇ ಮಾಡ್ತೇನ್ರೀ…”

ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...