Homeಅಂಕಣಗಳುದೊರೆಸ್ವಾಮಿ ಸನ್ಹೇಕ್ಕೋಗಿ ಕ್ಷಮೆ ಕೇಳಲೆ - ಯತ್ನಾಳ್‌ ಜೊತೆ ಯಾಹೂ ಮಾತುಕತೆ

ದೊರೆಸ್ವಾಮಿ ಸನ್ಹೇಕ್ಕೋಗಿ ಕ್ಷಮೆ ಕೇಳಲೆ – ಯತ್ನಾಳ್‌ ಜೊತೆ ಯಾಹೂ ಮಾತುಕತೆ

- Advertisement -
- Advertisement -

ಸ್ವಾತಂತ್ರ್ಯ ಹೋರಾಟದ ಸಂಕೇತದಂತಿರುವ ದೊರೆಸ್ವಾಮಿಯವರ ಬಗ್ಗೆ ಅತ್ಯಂತ ಪ್ರೀತ್ಯಾಧರಗಳಿಂದ ಮಾತನಾಡಿರುವ ಬಿಜಾಪುರದ ಬಸನಗೌಡ ಪಾಟೀಲ ಯತ್ನಾಳ್ ಎಂಬ ಧೀಮಂತ ನಾಯಕನನ್ನು ಮಾತನಾಡಿಸಿ, ದೊರೆಸ್ವಾಮಿಯವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು ಅನ್ನಿಸಿತಲ್ಲಾ. ಆ ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: “ನಮಸ್ತೇ ಸದಾವತ್ಸಲೇ ಮಾತೃಭೂಮಿ….” “ಹಲೋ ಯಾರ್ರಿ”
“ನಾನಲೆ ಎಫ್.ಜೆ.ತಳವಾರ.”
“ಯಾರಂತ ಗೊತ್ತಾಗಲಿಲ್ರಿ.”
“ನಿಮ ತಂದಿ ಗೆಳಯ ಕಣೋ, ಯತ್ನಾಳ.”
“ಏನಾಗಬೇಕಿತ್ರಿ.”
“ಏನಿಲ್ಲಪ. ನಿನಕಡಿಂದ ನನಗ ಆಗಬೇಕಾದ್ದೇನಿಲ್ಲ. ನಿನ್ನ ಆರೋಗ್ಯ ಹೆಂಗದಾ.”
“ಯದುಕ್ರಿ ಹಾಂಗ ಕೇಳಕತ್ತಿರಿ.”
“ಯದಕಪ್ಪ ಅಂದ್ರಾ, ಇಲ್ಲಿ ದರವೊಬ್ಬರೂ ನಿನ್ನ ತೆಲಿ ಶುದ್ದಿಲ್ಲಂತ ಮಾತಾಡಕತ್ಯಾರ. ಅದಕ ನನಿಗ ಗಾಬರಿಯಾತು. ಆರಡಿ ಎತ್ತರಕ ವೀರಸಿಂಧೂರ ಲಕ್ಷ್ಮಣನಂಗಿದ್ದ. ಮುಂಜಾಲೆದ್ದು ಮೂರು ಎಮ್ಮಿ ಹಾಲಿಂಡತಿದ್ದ ನನ್ನ ಗೆಳೆಯನ ಮಗ ಇವುಗೇನಾತಪ ಅಂತ ಗಾಬರಾತಲೇ ಮಗನ.”
“ಯಾರೊ ಸುಳ್ಳು ಹೇಳ್ಯಾರ್ರಿ, ನನ್ನ ತಲಿಗೇನಾಗಿಲ್ಲ.”
“ಅಂದ್ರ ಮಿದುಳಿಗೇನೋ ಆಗೇತಿ ಅದಕ 23 ಕೇಸು ತೆಲಿ ಮೇಲದಾವು.”
“ಇಲ್ರಿ ಅವು ಸುಳ್ಳು ಕೇಸು. ಪ್ರಕೃತಿ ನೆಟ್ಟಗೈತಿ. ಅರಾಮದಿನಿ.”
“ಇರವಲ್ಯಾಕ, ಆದ್ರ ಸ್ವಾತಂತ್ರ ಹೋರಾಟಗಾರ ಶತಾಯುಷಿ ದೊರೆಸ್ವಾಮಿಗಳನ್ನ ಯದುಕ್ಕಲೆ ಬೈಯಕತ್ತಿಯಂತೆ.”
“ಬೋದಿಲ್ರೀ. ಅವ ಡೋಂಗಿ ಸ್ವಾತಂತ್ರ ಹೋರಾಟಗಾರ ಅಂದೀನಿ ಅಷ್ಟ.”
“ಮಗ ಸತ್ತಲೆ ನೀನು. ದೊರೆಸ್ವಾಮಿ ಅಂದ್ರೇನು. ನೀ ಅಂದ್ರೇನು. ಅವರ ಚಪ್ಪಲಿ ಬಿಡೋ ಜಾಗದಾಗ ನಿಂದ್ರಕ್ಕೆ ಲಾಯಕ್ಕಿಲ್ಲದ ಮನುಶ್ಯದಿ ನೀನು. ಯದುಕಲೆ ಅಂಗಂದಿ.”
“ಆತ ಕಾಂಗ್ರೆಸ್ಸಿನ ಪರ ಮಾತಾಡತಾರ.”
“ಸಿದ್ದರಾಮಯ್ಯನ ಸರಕಾರಿದ್ದಾಗ ಅವರ ಸರಕಾರನೂ ಟೀಕಿ ಮಾಡಿದರಲ್ಲಾ. ಆಗ ನಿನ್ನ ಕಿವಿಗೇನು ಗೂಟಬಡಿಕೊಂಡಿದ್ದೇನು.”
“ಆ ಟೀಕಿನೂ ಡೋಂಗಿರಿ. ಅವುರು ಕಾಂಗ್ರೆಸಿಗರ ಪರ”
“ಅವರ ಪರ ಅಲ್ಲಲೇ, ಯಾರು ಜನಕ್ಕೆ ಒಳ್ಳೇದು ಮಾಡ್ತರೋ ಅವುರ ಪರ ಇರತರ. ತಲಿಕೆಟ್ಟ ಹಲಕಟ್ಟವುರ ಪರ ಇರೂದಿಲ್ಲವುರು ತಿಳಿತಿಲ್ಲಾ.”
“ಅವುರು ಪಾಕೀಸ್ತಾನದ ಪರ ಅವುರ.”
“ಪಾಕಿಸ್ತಾನದ ಪರ ಯದಕ್ಕಿರತರಲೇ. ನೀವು ಏನದೀರಲ್ಲಾ, ಅಂದ್ರ ಬಿಜೆಪಿಗಳು ನಿಮಗಿರುವಷ್ಟು ಪಾಕಿಸ್ತಾನದ ಪ್ರೀತಿ ನಮ ದೇಶದಾಗ ಯಾರಿಗೂ ಇಲ್ಲ ನೋಡು. ಅಲ್ಲಲೆ ದಿನ ಬೆಳಗಾತು ಅಂದ್ರ ಪಾಕಿಸ್ತಾನ ಪಾಕಿಸ್ತಾನ ಅನ್ನಕತ್ತೀರಲ್ಲಾ, ಆ ದೇಶ ಕಂಡ್ರ ಅದೇನು ಪ್ರೀತಿಲೆ ನಿಮಗೆ.”
“ಪ್ರೀತಿಯಲ್ಲ ದ್ವೇಷ.”
“ದ್ವೇಷ ಅಲ್ಲಲೆ ಪ್ರೀತಿ. ನಿಮ್ಮ ಪ್ರಧಾನಿ ಏನದಾನಲ್ಲ ಮೋದಿ, ಆತ ಚೊಣಬಿ ಹೊಕ್ಕಂಗ ದೌಡು ಪಾಕಿಸ್ತಾನಕ್ಕೋಗಿ ಲಗೂನು ಬಂದನಲ್ಲ ಯದಕ್ಕೋಗಿದ್ದಾ. ದ್ವೇಷ ಇದ್ರೋತಿದ್ನೇನವ. ಪಾಪ ಆ ದೇಶದ ಪ್ರಧಾನಿ ಮಗಳ ಲಗ್ನಕ್ಕೋಗಿ ಬಿರಿಯಾನಿ ತಿಂದ. ಇನ್ನ ಮುಂದೆ ಹಿಂಗೇ ಇರೂನು ಅಂತೇಳಿ ಬಂದ. ಅದಕ್ಕೂ ಮೊದ್ಲು ವಾಜಪೇಯಿ, ನಿಮ್ಮ ವಿಜಯ ಸಂಕೇಶ್ವರನಂಗೆ ಬಸ್ ಓಡಿಸಿದ್ದ. ಈ ಕಡಿ ಬಸ್ ಹೋತು, ಆಕಂಡಿದ ಪಾಕಿಸ್ತಾನದ ಸೈನಿಕರು ಒಳಬಂದ್ರು. ಐದು ನೂರು ಮಂದಿ ನಮ್ಮ ಸೈನಿಕರು ತೀರಿಕೊಂಡ್ರು. ಮಕ್ಕಳಾ, ವಿಜಯೋತ್ಸವ ಮಾಡ್ತೀರಿ, ಇತಿಹಾಸಗೊತ್ತೇನಲೆ ನಿನಗ.”
“ಗೊತ್ತೈತಿ.”
“ಗೊತ್ತಿದ್ರ ದೊರೆಸ್ವಾಮಿ ಹೋರಾಟವ ಡೋಂಗಿ ಅಂತಿರಲಿಲ್ಲ ನೀನು. ಕ್ವಿಟ್ ಇಂಡಿಯಾ ಚಳುವಳೀಲಿ ನೀ ಹುಟ್ಟಿದ್ದೇನಲೇ? ಆಗಲೇ ದೊರೆಸ್ವಾಮಿ ಜೈಲಿಗೋಗಿದ್ರು.”
“ಆ ಚಳುವಳಿ ಇಲ್ದಿದ್ರೆ ಅವುರು ಜೈಲಿಗೋತಿರಲಿಲ್ಲ.”
“ತೆಲಿಯಾಗೇನು ಮೆದುಳೈತೋ ಎಮ್ಮಿ ಸಗಣಿ ಐತೋ ನಿನಗ. ಅಲ್ಲಪ್ಪ ಜೈಲಿಗೋಗದಿದ್ರೆ ಚಳುವಳಿ ಮಾಡತಿದ್ರು ಗೊತ್ತೇನು.”
“ಅವರ ಚಳುವಳಿನೆ ಡೋಂಗಿ.”
“ಇನ್ಯಾರದು ಖರೆ ಐತಿ ಹೇಳು ನೋಡೊನು.”
“ವೀರ ಸಾವರ್ಕರ ಚಳುವಳಿ.”
“ಲೇ ಮಂಗ್ಯನ ಮಗನ. ಆ ಸಾವರಕರ ಯಾರು ಗೊತ್ತೇನಲೆ. ಅಂಡಮಾನ್ ಜೈಲಾಗೆ ಇರಕ್ಕಾಗುದಿಲ್ಲಂತ ಹೇಳಿ ಬ್ರಿಟಿಷರಿಗೆ ಮೂರು ಬಾರಿ ಕ್ಷಮಾಪಣೆ ಪತ್ರ ಬರದು, ಬಿಡುಗಡೆಯಾಗಿ ನಾಗಪುರಕ್ಕೆ ಬಂದು ಖೋಲಿ ಹಿಡುದು ಕುಂತವ. ಹಿಂದೂಮಹಾಸಭಾ, ವಿಶ್ವಹಿಂದೂ ಪರಿಷತ್ ಮಾಡಿ ಇವತ್ತು ನಿನ್ನಂತವರ ತೆಲಿಕೆಟ್ಟು ಮಸರಗಡಿಗಿಯಾಗಂಗೆ ಮಾಡಿ ಹೋದವ. ನೀ ಮದುಲು ಹಿಂಗರಲಿಲ್ಲ, ಭಾಳ ಸಂಭಾವಿತಿದ್ದಿ. ಯಾವಾಗ ನಾಗಪುರಕ್ಕೆ ಕೇಳಂಗೆ ಮಾತಾಡಕತ್ತಿದ್ಯೋ ಆಗ ಹಿಂಗಾದಿ. ಒಂದು ತಿಳಕೊ ಮಗನ.”
“ಏನೇಳ್ರಿ.”
“ನೀ ಏಟೇ ವದರಿದ್ರು ಮಂತ್ರಿಯಾಗೂದಿಲ್ಲಲೆ.”
“ಯದಕ್ರಿ.”
“ದೊರೆಸ್ವಾಮಿ ಶಾಪ ಕಣಲೆ. ಅದಕ್ಕೂ ಮೊದ್ಲು ಶೋಭಾ ಕರಂದ್ಲಾಜೆ ಶಾಪ ಕೊಟ್ಟಿದ್ಲು.”
“ಹೌದೇನ್ರೀ.”
“ಹೌದಲೇ, ನೀ ಎಡೂರಪ್ಪ ಶೋಭಾ ಕರಂದ್ಲಾಜೆ ತೆಕ್ಕಿಬಡಕೊಂಡಿದ್ರು ನಾನೇ ನೋಡಿದೆ ಅಂತ ಚಿಕ್ಕಮಗಳೂರಾಗ ಹೇಳಿ ಹೋದಿ. ಅದು, ಶೋಬನ ಕಿವಿತಲುಪ್ತು, ಅದು ಎಡೂರಪ್ಪನ ಕಿವಿ ಕೂಡ ಆಗಿತ್ತು.”
“ಯಾರೊ ಚಾಡಿ ಹೇಳ್ಯಾರ್ರಿ.”
“ಇಲ್ಲಿ ಕೇಳಿಸಿಕೊಂಡಿದ್ದ ಅಲ್ಲೇಳಿದ್ರ ಚಾಡಿ ಯಂಗಲೆ ಆತದೆ. ಸುಳ್ಳು ಹೇಳಿದ್ರೆ ಅದು ಚಾಡಿಯಾಕ್ಯತಿ- ತಿಳಿತೇನಲೇ. ಅಂತೂ ನೀ ಎಡೂರಪ್ಪನ ಸಂಪುಟ ಸೇರೋದು ಸುಳ್ಳಾತು.”
“ಮಂತ್ರಿನೆ ಆಗಬೇಕು ಅನ್ನದೇನೂ.”
“ಅಲ್ಲಲೆ ಖಬರಗೇಡಿ ಕೇಂದ್ರದಾಗ ಮಂತ್ರಿಯಾಗಿದ್ದವ ರಾಜ್ಯದಾಗೂ ಮಂತ್ರಿಯಾಗಬೇಕಲ್ಲೇನು.”
“ಹೌದ್ರಿ.”
“ಮತ್ತ ಆಗಿಲ್ಲಂದ್ರ ನೀ ಆಯೋಗ್ಯದಿ, ನಾಲಾಯ್ಕದಿ, ಒಟ್ಟ ಶಾಸಕ ಆಗಕ್ಕೂ ಯೋಗ್ಯಲ್ಲ ನೀನು ಅಂದಂಗಾತು.”
“ನನ್ನ ಯೋಗ್ಯತೆ ಬಗ್ಗೆ ಮಾತಾಡಬೇಡಿ.”
“ಇಲ್ಲಪ ನಿನ್ನ ಯೋಗ್ಯತೆ ಬಾಳ ಬೇಷೈತಿ, ಅಲ್ಲಲೆ ಮನ್ನಿ ಇಡೀ ಕರನಾಟಕನೆ ನಿನ್ನ ವಿರುದ್ಧ ಪ್ರತಿಭಟನೆ ಮಾಡ್ತು. ವಿಜಾಪುರದ ಗೌರವನೆ ಹೋತಲ್ಲಲೇ. ಅದಕೂ ಮೊದ್ಲು ಬಿಜಾಪುರಂದ್ರ ಮಂದಿ ಎಷ್ಟು ಬೆಲಿ ಕೊಡತಿದ್ರ ಗೊತ್ತೇನು.”
“ಈಗ ಇನ್ನ ಕೊಡ್ತಾರ. ನಾ ಎಂಪಿಯಾಗಿ, ಮಂತ್ರಿಯಾಗಿ, ಎಮ್ಮೆಲ್ಲೆಯಾಗಿ ಬಿಜಾಪುರಕ್ಕ ಹೆಸರು ತಂದೀನಿ.”
“ತಂದಿ ಬುಡು ಮಗನ. ಅಲ್ಲಲೆ, ಒಮ್ಮೆ ಅಂತಾ ಸಿರಿಗೆರೆ ಶಿವಾಚಾರ್ಯ ಸ್ವಾಮಿ ಬಂದಿದ್ರು. ಅವರ ಕಾರ್ಯಕ್ರಮದ ಮೆರವಣಿಗಿ ಏನಿತ್ತಲ್ಲ ಅದಕ ಮುಸ್ಲಿಂ ಮಹಿಳೆಯರು ಎಷ್ಟು ಮಂದಿ ಬಂದಿದ್ರು ಗುರುತೇನ, ಮೂರು ಸಾವುರ ಮಂದಿ ಬಂದಿದ್ರು. ಆಗ ಗುರುಗಳು ನಮ್ಮ ಬಿಜಾಪುರದ ಧರ್ಮ ಸಾಮರಸ್ಯ ಕೊಂಡಾಡಿ ಹೋದ್ರು. ಇಂಥಾ ಊರಿಗೆ ನೀ ಎಲ್ಲಿಂದ ಬಂದೇ ಹನುಮಂತ. ಮೊದಲು ದಕ್ಷಿಣ ಕನ್ನಡಕ್ಕೋಗು, ಅಲ್ಲಿ ನಿನ್ನಂಥವರು ಭಾಳಮಂದಿ ಅದಾರ.”
“ವಿಜಾಪುರ ಅನಾಥಮಾಡಿ ನಾ ಎಲ್ಯೂ ಹೋಗುದಿಲ್ಲ.”
“ಅನಾಥಲ್ಲಲೇ, ನೀ ಇದ್ರಾ ಮಶಾಣಾಕ್ಯತಿ, ಈಗಾಗಲೇ ನಿಮ್ಮ ಬ್ರದರ್ಸ್ ದೆಹಲಿನ ಮಶಾಣ ಮಾಡಕತ್ಯಾರ, ಅದಿರ್ಲಿ ಮೊದಲು ನಮ್ಮ ದೊರೆಸ್ವಾಮಿ ಸನೇಕ್ಕೋಗಿ ಕ್ಷಮಿಸಿರಿಯಪ್ಪಾ ಅನ್ನು.”
“ನಾ ಅನ್ನುದಿಲ್ರಿ.”
“ಹಾಳಾಗಿ ಹೋಗು.”
“ಅಂಗೇ ಮಾಡ್ತೇನ್ರೀ…”

ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...