Homeಅಂತರಾಷ್ಟ್ರೀಯ‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

- Advertisement -
- Advertisement -

ಪಾಕಿಸ್ತಾನದ ವಿರೋಧ ಪಕ್ಷದ ನಾಯಕಿ ಮರ್ಯಮ್ ನವಾಜ್ ಷರೀಫ್ ಅವರು ಭಾರತವನ್ನು ಹೊಗಳಿದ್ದಕ್ಕಾಗಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಗೆ ಭಾರತ ಎಂದರೆ ತುಂಬಾ ಇಷ್ಟವಿದ್ದರೆ ಅವರು ಭಾರತಕ್ಕೆ ತೊಲಗಲಿ ಎಂದು ಹೇಳಿದ್ದಾರೆ.

ಇಮ್ರಾನ್‌ ಖಾನ್ ಭಾರತವನ್ನು ‘ಗೌರವ ಪ್ರಜ್ಞೆ ಹೊಂದಿರುವ ರಾಷ್ಟ್ರ’ ಎಂದು ಕರೆದ ನಂತರ ಮರ್ಯಮ್ ಅವರು ಪ್ರಧಾನಿಯನ್ನು ಟೀಕಿಸಿದ್ದಾರೆ. ಮರ್ಯಮ್ ಅವರು ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿಯಾಗಿದ್ದು, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ಉಪಾಧ್ಯಕ್ಷೆಯೂ ಆಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವಿಶ್ವಾಸ ನಿರ್ಣಯದ ಮುನ್ನ ಶುಕ್ರವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಇಮ್ರಾನ್‌, ತಾನು ಭಾರತದ ವಿರುದ್ಧ ಇಲ್ಲ ಮತ್ತು ಭಾರತದಲ್ಲಿ ತನಗೆ ಸಾಕಷ್ಟು ಅನುಯಾಯಿಗಳು ಇದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ: ಪತನದ ಹಾದಿಯಲ್ಲಿರುವ ಇಮ್ರಾನ್‌ ಖಾನ್ ಸರ್ಕಾರ 

“ಯಾವುದೇ ಮಹಾಶಕ್ತಿ ಭಾರತವನ್ನು ತನ್ನ ಹಿತಾಸಕ್ತಿಗೆ ವಿರುದ್ಧವಾಗಿ ಏನು ಮಾಡಲು ಒತ್ತಾಯಿಸುವುದಿಲ್ಲ. ಭಾರತ ನಿರ್ಬಂಧಗಳ ಹೊರತಾಗಿಯೂ ರಷ್ಯಾದಿಂದ ತೈಲವನ್ನು ಖರೀದಿಸುತ್ತಿದೆ. ಯಾರೂ ಭಾರತವನ್ನು ನಿರ್ದೇಶಿಸಲು ಸಾಧ್ಯವಿಲ್ಲ. ಯುರೋಪಿಯನ್ ಒಕ್ಕೂಟದ ರಾಯಭಾರಿಗಳು ಇಲ್ಲಿ ಹೇಳಿರುವುದನ್ನು, ಭಾರತದಲ್ಲಿ ಹೇಳಲು ಸಾಧ್ಯವೆ?” ಎಂದು ಅವರು ಕೇಳಿದ್ದಾರೆ. ಭಾರತವು ಸಾರ್ವಭೌಮ ರಾಷ್ಟ್ರವಾಗಿರುವುದರಿಂದ ಅವರಿಗೆ ಅದು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮರ್ಯಮ್, ಇಮ್ರಾನ್‌ ಖಾನ್‌ಗೆ ಹುಚ್ಚು ಹಿಡಿದಿದೆ ಎಂದು ಹೇಳಿದ್ದಾರೆ. “ನಿಮಗೆ ಭಾರತದ ಮೇಲೆ ತುಂಬಾ ಪ್ರೀತಿಯಿದ್ದರೆ, ಅಲ್ಲಿಗೆ ತೆರಳಿ. ಪಾಕಿಸ್ತಾನದ ಜೀವನವನ್ನು ಬಿಟ್ಟುಬಿಡಿ” ಎಂದು ಮರ್ಯಮ್‌ ಹೇಳಿದ್ದಾರೆ.

ಪ್ರಧಾನಿ ಇಮ್ರಾನ್‌ ಅವರು ಭಾರತವನ್ನು ಹೊಗಳಿದ್ದು ಇದೇ ಮೊದಲಲ್ಲ. ಕಳೆದ ವಾರ ಅವರು ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಹೊಗಳಿದ್ದರು. “ಭಾರತ ತನ್ನ ಸ್ವತಂತ್ರ ವಿದೇಶಾಂಗ ನೀತಿಯನ್ನು ರಕ್ಷಿಸುತ್ತದೆ ಮತ್ತು ಅದು ಅದರ ಜನರ ಮೇಲೆ ಕೇಂದ್ರೀಕೃತವಾಗಿದೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಹಾರಿ ಬಿದ್ದ ಭಾರತದ ಕ್ಷಿಪಣಿ: ವಿಷಾಧ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ

342 ಸಂಸದರಿರುವ ಪಾಕಿಸ್ತಾನ್‌ ಸಂಸತ್ತಿನಲ್ಲಿ ಇಮ್ರಾನ್‌ ಖಾನ್‌ ತನ್ನ ಬಹುಮತವನ್ನು ಕಳೆದುಕೊಂಡಿದ್ದಾರೆ. ಅವರು ದೇಶದ ಇತಿಹಾಸದಲ್ಲಿ ಅವಿಶ್ವಾಸ ನಿರ್ಣಯದಲ್ಲಿ ಮತ ಚಲಾಯಿಸಲ್ಪಡುವ ಮೊದಲ ಪ್ರಧಾನಿಯಾಗುವ ಸಾಧ್ಯತೆಯನ್ನು ಎದುರಿಸುತ್ತಿದ್ದಾರೆ.

ಪಾಕಿಸ್ತಾನದ ಯಾವೊಬ್ಬ ಪ್ರಧಾನಿಯೂ ಇದುವರೆಗೆ ಪೂರ್ಣ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿಲ್ಲ.

ಈ ಮಧ್ಯೆ, ಪ್ರಧಾನಿ ಇಮ್ರಾನ್‌ ಖಾನ್ ಅವರನ್ನು ಪದಚ್ಯುತಗೊಳಿಸಿದ ನಂತರ ಪ್ರತಿಪಕ್ಷಗಳು ಹೊಸ ಸರ್ಕಾರ ರಚನೆಯ ಆರಂಭಿಕ ಮಾತುಕತೆಗಳನ್ನು ಪೂರ್ಣಗೊಳಿಸಿವೆ. ಅಧ್ಯಕ್ಷ ಅಲ್ವಿ ಪದಚ್ಯುತಿಗೆ ಮತ್ತು ಬ್ರಿಟನ್‌ನಿಂದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ವಾಪಸಾತಿಗೆ ಯೋಜನೆಗಳು ನಡೆಯುತ್ತಿವೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ಶುಕ್ರವಾರ ವರದಿ ಮಾಡಿದೆ.

ನೂತನ ಪ್ರಧಾನಿಯಾಗಿ ವಿರೋಧ ಪಕ್ಷದ ಅಭ್ಯರ್ಥಿಯಾಗಿರುವ 70ರ ಹರೆಯದ ಶೆಹಬಾಜ್ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ತಮ್ಮ ಸಂಭಾವ್ಯ ಸರ್ಕಾರದ ಆದ್ಯತೆಗಳನ್ನು ಪ್ರಕಟಿಸಲಿದ್ದಾರೆ. ಹೊಸ ಸಂಭವನೀಯ ಒಕ್ಕೂಟ ಸರ್ಕಾರದಲ್ಲಿ ಎಲ್ಲಾ ವಿರೋಧ ಪಕ್ಷಗಳಿಗೆ ಪ್ರಮಾಣಾನುಗುಣ ಪ್ರಾತಿನಿಧ್ಯವನ್ನು ನೀಡಲಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...