Homeಅಂತರಾಷ್ಟ್ರೀಯ‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

- Advertisement -
- Advertisement -

ಪಾಕಿಸ್ತಾನದ ವಿರೋಧ ಪಕ್ಷದ ನಾಯಕಿ ಮರ್ಯಮ್ ನವಾಜ್ ಷರೀಫ್ ಅವರು ಭಾರತವನ್ನು ಹೊಗಳಿದ್ದಕ್ಕಾಗಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಗೆ ಭಾರತ ಎಂದರೆ ತುಂಬಾ ಇಷ್ಟವಿದ್ದರೆ ಅವರು ಭಾರತಕ್ಕೆ ತೊಲಗಲಿ ಎಂದು ಹೇಳಿದ್ದಾರೆ.

ಇಮ್ರಾನ್‌ ಖಾನ್ ಭಾರತವನ್ನು ‘ಗೌರವ ಪ್ರಜ್ಞೆ ಹೊಂದಿರುವ ರಾಷ್ಟ್ರ’ ಎಂದು ಕರೆದ ನಂತರ ಮರ್ಯಮ್ ಅವರು ಪ್ರಧಾನಿಯನ್ನು ಟೀಕಿಸಿದ್ದಾರೆ. ಮರ್ಯಮ್ ಅವರು ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿಯಾಗಿದ್ದು, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ಉಪಾಧ್ಯಕ್ಷೆಯೂ ಆಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವಿಶ್ವಾಸ ನಿರ್ಣಯದ ಮುನ್ನ ಶುಕ್ರವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಇಮ್ರಾನ್‌, ತಾನು ಭಾರತದ ವಿರುದ್ಧ ಇಲ್ಲ ಮತ್ತು ಭಾರತದಲ್ಲಿ ತನಗೆ ಸಾಕಷ್ಟು ಅನುಯಾಯಿಗಳು ಇದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ: ಪತನದ ಹಾದಿಯಲ್ಲಿರುವ ಇಮ್ರಾನ್‌ ಖಾನ್ ಸರ್ಕಾರ 

“ಯಾವುದೇ ಮಹಾಶಕ್ತಿ ಭಾರತವನ್ನು ತನ್ನ ಹಿತಾಸಕ್ತಿಗೆ ವಿರುದ್ಧವಾಗಿ ಏನು ಮಾಡಲು ಒತ್ತಾಯಿಸುವುದಿಲ್ಲ. ಭಾರತ ನಿರ್ಬಂಧಗಳ ಹೊರತಾಗಿಯೂ ರಷ್ಯಾದಿಂದ ತೈಲವನ್ನು ಖರೀದಿಸುತ್ತಿದೆ. ಯಾರೂ ಭಾರತವನ್ನು ನಿರ್ದೇಶಿಸಲು ಸಾಧ್ಯವಿಲ್ಲ. ಯುರೋಪಿಯನ್ ಒಕ್ಕೂಟದ ರಾಯಭಾರಿಗಳು ಇಲ್ಲಿ ಹೇಳಿರುವುದನ್ನು, ಭಾರತದಲ್ಲಿ ಹೇಳಲು ಸಾಧ್ಯವೆ?” ಎಂದು ಅವರು ಕೇಳಿದ್ದಾರೆ. ಭಾರತವು ಸಾರ್ವಭೌಮ ರಾಷ್ಟ್ರವಾಗಿರುವುದರಿಂದ ಅವರಿಗೆ ಅದು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮರ್ಯಮ್, ಇಮ್ರಾನ್‌ ಖಾನ್‌ಗೆ ಹುಚ್ಚು ಹಿಡಿದಿದೆ ಎಂದು ಹೇಳಿದ್ದಾರೆ. “ನಿಮಗೆ ಭಾರತದ ಮೇಲೆ ತುಂಬಾ ಪ್ರೀತಿಯಿದ್ದರೆ, ಅಲ್ಲಿಗೆ ತೆರಳಿ. ಪಾಕಿಸ್ತಾನದ ಜೀವನವನ್ನು ಬಿಟ್ಟುಬಿಡಿ” ಎಂದು ಮರ್ಯಮ್‌ ಹೇಳಿದ್ದಾರೆ.

ಪ್ರಧಾನಿ ಇಮ್ರಾನ್‌ ಅವರು ಭಾರತವನ್ನು ಹೊಗಳಿದ್ದು ಇದೇ ಮೊದಲಲ್ಲ. ಕಳೆದ ವಾರ ಅವರು ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಹೊಗಳಿದ್ದರು. “ಭಾರತ ತನ್ನ ಸ್ವತಂತ್ರ ವಿದೇಶಾಂಗ ನೀತಿಯನ್ನು ರಕ್ಷಿಸುತ್ತದೆ ಮತ್ತು ಅದು ಅದರ ಜನರ ಮೇಲೆ ಕೇಂದ್ರೀಕೃತವಾಗಿದೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಹಾರಿ ಬಿದ್ದ ಭಾರತದ ಕ್ಷಿಪಣಿ: ವಿಷಾಧ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ

342 ಸಂಸದರಿರುವ ಪಾಕಿಸ್ತಾನ್‌ ಸಂಸತ್ತಿನಲ್ಲಿ ಇಮ್ರಾನ್‌ ಖಾನ್‌ ತನ್ನ ಬಹುಮತವನ್ನು ಕಳೆದುಕೊಂಡಿದ್ದಾರೆ. ಅವರು ದೇಶದ ಇತಿಹಾಸದಲ್ಲಿ ಅವಿಶ್ವಾಸ ನಿರ್ಣಯದಲ್ಲಿ ಮತ ಚಲಾಯಿಸಲ್ಪಡುವ ಮೊದಲ ಪ್ರಧಾನಿಯಾಗುವ ಸಾಧ್ಯತೆಯನ್ನು ಎದುರಿಸುತ್ತಿದ್ದಾರೆ.

ಪಾಕಿಸ್ತಾನದ ಯಾವೊಬ್ಬ ಪ್ರಧಾನಿಯೂ ಇದುವರೆಗೆ ಪೂರ್ಣ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿಲ್ಲ.

ಈ ಮಧ್ಯೆ, ಪ್ರಧಾನಿ ಇಮ್ರಾನ್‌ ಖಾನ್ ಅವರನ್ನು ಪದಚ್ಯುತಗೊಳಿಸಿದ ನಂತರ ಪ್ರತಿಪಕ್ಷಗಳು ಹೊಸ ಸರ್ಕಾರ ರಚನೆಯ ಆರಂಭಿಕ ಮಾತುಕತೆಗಳನ್ನು ಪೂರ್ಣಗೊಳಿಸಿವೆ. ಅಧ್ಯಕ್ಷ ಅಲ್ವಿ ಪದಚ್ಯುತಿಗೆ ಮತ್ತು ಬ್ರಿಟನ್‌ನಿಂದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ವಾಪಸಾತಿಗೆ ಯೋಜನೆಗಳು ನಡೆಯುತ್ತಿವೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ಶುಕ್ರವಾರ ವರದಿ ಮಾಡಿದೆ.

ನೂತನ ಪ್ರಧಾನಿಯಾಗಿ ವಿರೋಧ ಪಕ್ಷದ ಅಭ್ಯರ್ಥಿಯಾಗಿರುವ 70ರ ಹರೆಯದ ಶೆಹಬಾಜ್ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ತಮ್ಮ ಸಂಭಾವ್ಯ ಸರ್ಕಾರದ ಆದ್ಯತೆಗಳನ್ನು ಪ್ರಕಟಿಸಲಿದ್ದಾರೆ. ಹೊಸ ಸಂಭವನೀಯ ಒಕ್ಕೂಟ ಸರ್ಕಾರದಲ್ಲಿ ಎಲ್ಲಾ ವಿರೋಧ ಪಕ್ಷಗಳಿಗೆ ಪ್ರಮಾಣಾನುಗುಣ ಪ್ರಾತಿನಿಧ್ಯವನ್ನು ನೀಡಲಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...